Sign In

By signing in or creating an account, you agree with Associated Broadcasting Company's Terms & Conditions and Privacy Policy.

Punjab Elections 2022: ಸಿಧು VS ಚನ್ನಿ; ಪಂಜಾಬ್​ ಚುನಾವಣೆಗೆ ಕಾಂಗ್ರೆಸ್​ನಿಂದ ಇಂದೇ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಸಾಧ್ಯತೆ

Punjab Assembly Polls: ಸಿಎಂ ಚರಣ್​ಜಿತ್ ಸಿಂಗ್ ಚನ್ನಿ ಮತ್ತು ನವಜೋತ್ ಸಿಂಗ್ ಸಿಧು ಇಬ್ಬರಲ್ಲಿ ಯಾರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಹೈಕಮಾಂಡ್ ಘೋಷಿಸಲಿದೆ ಎಂಬ ಬಗ್ಗೆ ಸದ್ಯದಲ್ಲೇ ತೆರೆ ಬೀಳಲಿದೆ.

Punjab Elections 2022: ಸಿಧು VS ಚನ್ನಿ; ಪಂಜಾಬ್​ ಚುನಾವಣೆಗೆ ಕಾಂಗ್ರೆಸ್​ನಿಂದ ಇಂದೇ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಸಾಧ್ಯತೆ
ಚರಣ್​ಜಿತ್ ಸಿಂಗ್ ಚನ್ನಿ ನವಜೋತ್ ಸಿಂಗ್ ಸಿಧು
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Feb 02, 2022 | 6:51 PM

ಅಮೃತಸರ: ಪಂಜಾಬ್​ನಲ್ಲಿ ಇನ್ನೇನು ವಿಧಾನಸಭಾ ಚುನಾವಣೆ (Punjab Assembly Polls) ಸಮೀಪದಲ್ಲಿದೆ. ಆದರೆ, ಕಾಂಗ್ರೆಸ್​ ಹೈಕಮಾಂಡ್ ಮುಖ್ಯಮಂತ್ರಿ ಅಭ್ಯರ್ಥಿಯ ಕುರಿತು ಇನ್ನೂ ಯಾವುದೇ ಘೋಷಣೆ ಮಾಡಿಲ್ಲ. ಇದರಿಂದ ಪಂಜಾಬ್ ಕಾಂಗ್ರೆಸ್​ನಲ್ಲಿ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ. ಇದರ ನಡುವೆ ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹದ ವರದಿಗಳು ತೀವ್ರಗೊಂಡಿರುವುದರಿಂದ ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಕಾಂಗ್ರೆಸ್ (Congress) ಪಕ್ಷದ ಉನ್ನತ ನಾಯಕರು ನಿರ್ಧರಿಸಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಪಂಜಾಬ್ ಚುನಾವಣೆಗೆ ಕಾಂಗ್ರೆಸ್ ತನ್ನ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂಬ ಬಗ್ಗೆ ಇಂದು ಸಂಜೆ ಘೋಷಿಸುವ ಸಾಧ್ಯತೆಯಿದೆ.

ಪಂಜಾಬ್ ಮುಖ್ಯಮಂತ್ರಿ ಚರಣ್​ಜಿತ್ ಸಿಂಗ್ ಚನ್ನಿ ಈ ಕುರಿತ ವರದಿಗಳನ್ನು ತಳ್ಳಿಹಾಕಿದ್ದಾರೆ. ಸಿಎಂ ಅಭ್ಯರ್ಥಿ ಬಗ್ಗೆ ಕಾಂಗ್ರೆಸ್‌ನಲ್ಲಿ ಯಾವುದೇ ಆಂತರಿಕ ಕಚ್ಚಾಟವಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಇಂಡಿಯಾ ಟುಡೆ ವರದಿ ಮಾಡಿದ್ದು, ಸಿಎಂ ಚರಣ್​ಜಿತ್ ಸಿಂಗ್ ಚನ್ನಿ ಮತ್ತು ನವಜೋತ್ ಸಿಂಗ್ ಸಿಧು ಇಬ್ಬರಲ್ಲಿ ಯಾರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಹೈಕಮಾಂಡ್ ಘೋಷಿಸಲಿದೆ ಎಂಬ ಬಗ್ಗೆ ಸದ್ಯದಲ್ಲೇ ತೆರೆ ಬೀಳಲಿದೆ.

ಕಳೆದ ವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುಖ್ಯಮಂತ್ರಿ ಅಭ್ಯರ್ಥಿಯೊಂದಿಗೆ ಕಾಂಗ್ರೆಸ್ ಪಕ್ಷವು ಪಂಜಾಬ್ ವಿಧಾನಸಭಾ ಚುನಾವಣೆಗೆ ಹೋಗಲಿದೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೊಂದಿಗೆ ಸಮಾಲೋಚಿಸಿದ ನಂತರ ಶೀಘ್ರದಲ್ಲೇ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದರು. ಜಲಂಧರ್‌ನಲ್ಲಿ ವರ್ಚುವಲ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಮುಖ್ಯಮಂತ್ರಿ ಚರಣ್​ಜಿತ್ ಸಿಂಗ್ ಚನ್ನಿ ಮತ್ತು ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಪಂಜಾಬ್​ನಲ್ಲಿ ಯಾರನ್ನು ಸಿಎಂ ಆಗಿ ಆಯ್ಕೆ ಮಾಡಿದರೂ ಅವರನ್ನು ಬೆಂಬಲಿಸುವುದಾಗಿ ಭರವಸೆ ನೀಡಿದ್ದಾರೆ.

ಪಂಜಾಬ್​ನಲ್ಲಿ ಅಮರಿಂದರ್ ಸಿಂಗ್ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಚರಣ್​ಜಿತ್ ಸಿಂಗ್ ಚನ್ನಿ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಏರಿಸಿದ ನಂತರವೂ ಕಾಂಗ್ರೆಸ್ ಪಕ್ಷದಲ್ಲಿನ ಭಿನ್ನಾಭಿಪ್ರಾಯಗಳು ಮುಂದುವರಿದಿವೆ. ಪಂಜಾಬ್‌ನಲ್ಲಿ ಕಾಂಗ್ರೆಸ್ ಅನ್ನು ಯಾರು ಮುನ್ನಡೆಸುತ್ತಾರೆ ಎಂಬುದು ದೊಡ್ಡ ಪ್ರಶ್ನೆ ಎಂದು ಚರಣ್​ಜಿತ್ ಸಿಂಗ್ ಚನ್ನಿ ಮತ್ತು ನವಜೋತ್ ಸಿಂಗ್ ಸಿಧು ಇಬ್ಬರೂ ರ್ಯಾಲಿಯಲ್ಲಿ ಹೇಳಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ: ಪಂಜಾಬ್‌ನಲ್ಲಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದಾರೆ ಸಿಎಂ ಚರಣ್​​ಜಿತ್ ಚನ್ನಿ; ನಾನು ಮೊದಲೇ ಹೇಳಿದ್ದೆ ಎಂದು ಕೇಜ್ರಿವಾಲ್ ಟ್ವೀಟ್

ಅಮರಿಂದರ್ ಸಿಂಗ್ ರಾಜೀನಾಮೆ ಬಳಿಕ ನಾನೇ ಸಿಎಂ ಆಗಬೇಕೆಂಬುದು ಶಾಸಕರ ಆಯ್ಕೆಯಾಗಿತ್ತು; ಸುನಿಲ್ ಜಖಾರ್

ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್