AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ ವಿಧಾನಸಭಾ ಚುನಾವಣೆಯನ್ನು ಫೆ.20ಕ್ಕೆ ಮುಂದೂಡಿದ ಚುನಾವಣಾ ಆಯೋಗ; ಸಿಎಂ ಛನ್ನಿ, ಬಿಜೆಪಿ ನಾಯಕರ ಮನವಿಗೆ ಸ್ಪಂದನೆ

Punjab Assembly Election 2022: ಪಂಜಾಬ್​​ ಮುಖ್ಯಮಂತ್ರಿ ಚರಣಜಿತ್​ ಸಿಂಗ್​ ಛನ್ನಿ ಮುಖ್ಯ ಚುನಾವಣಾ ಆಯುಕ್ತ ಸುಶೀಲ್​ ಚಂದ್ರರಿಗೆ ಪತ್ರ ಬರೆದು, ಫೆ.16ರಂದು ಗುರು ರವಿದಾಸರ ಜನ್ಮ ದಿನ ಹಿನ್ನೆಲೆಯಲ್ಲಿ ಚುನಾವಣೆಯನ್ನು ಆರು ದಿನಗಳಿಗೆ ಮುಂದೂಡಬೇಕು ಎಂದು ಮನವಿ ಮಾಡಿದ್ದರು. 

ಪಂಜಾಬ್​ ವಿಧಾನಸಭಾ ಚುನಾವಣೆಯನ್ನು ಫೆ.20ಕ್ಕೆ ಮುಂದೂಡಿದ ಚುನಾವಣಾ ಆಯೋಗ; ಸಿಎಂ ಛನ್ನಿ, ಬಿಜೆಪಿ ನಾಯಕರ ಮನವಿಗೆ ಸ್ಪಂದನೆ
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on:Jan 17, 2022 | 2:55 PM

Share

ಫೆಬ್ರವರಿ 14ಕ್ಕೆ ನಡೆಯಬೇಕಿದ್ದ ಪಂಜಾಬ್​ ವಿಧಾನಸಭೆ ಚುನಾವಣೆ(Punjab Assembly Election 2022)ಯನ್ನು  ಚುನಾವಣಾ ಆಯೋಗ ಫೆಬ್ರವರಿ 20ಕ್ಕೆ ಮುಂದೂಡಿದೆ. ಗುರು ರವಿದಾಸ ಜಯಂತಿ (Guru Ravidas Jayanti) ಆಚರಣೆ ಹಿನ್ನೆಲೆಯಲ್ಲಿ ಆರು ದಿನಗಳ ಕಾಲ ಮುಂದೂಡಿ ಆದೇಶ ಹೊರಡಿಸಿದೆ. ಫೆಬ್ರವರಿ 16ರಂದು ಗುರು ರವಿದಾಸ ಜಯಂತಿ ಇರುವ ಹಿನ್ನೆಲೆಯಲ್ಲಿ ಫೆಬ್ರವರಿ 14ರಂದು ಚುನಾವಣೆ ನಡೆಸಬಾರದು.  ಯಾಕೆಂದರೆ ಪಂಜಾಬ್​ನಿಂದ ಅನೇಕ ಭಕ್ತರು ಉತ್ತರಪ್ರದೇಶಕ್ಕೆ ಹೋಗಬೇಕಾಗುತ್ತದೆ. ಸಿಖ್​ ಸಮುದಾಯದ ಭಕ್ತರು ಫೆ.10ರಿಂದಲೇ ವಾರಾಣಸಿಗೆ ಹೋಗಲು ಶುರು ಮಾಡುತ್ತಾರೆ ಎಂದು ಪಂಜಾಬ್​ ಮುಖ್ಯಮಂತ್ರಿ ಚರಣಜಿತ್​ ಸಿಂಗ್​ ಛನ್ನಿ, ಬಿಜೆಪಿ ನಾಯಕರು ಚುನಾವಣಾ ಆಯೋಗಕ್ಕೆ ಮನವರಿಕೆ ಮಾಡಿಕೊಟ್ಟಿದ್ದರು. ಈ ಬಗ್ಗೆ ಚರ್ಚಿಸಲು ಇಂದು ಚುನಾವಣಾ ಆಯೋಗ ಸಭೆ ನಡೆಸಿತ್ತು. 

ಜನವರಿ 8ರಂದು ಸುದ್ದಿಗೋಷ್ಠಿ ನಡೆಸಿದ್ದ ಚುನಾವಣಾ ಆಯೋಗದ ಅಧಿಕಾರಿಗಳು, ಗೋವಾ, ಪಂಜಾಬ್​, ಉತ್ತರಾಖಂಡ್​, ಉತ್ತರಪ್ರದೇಶ, ಮಣಿಪುರ ರಾಜ್ಯಗಳ ದಿನಾಂಕ ಘೋಷಣೆ ಮಾಡಿದ್ದರು. ಅದರಲ್ಲಿ ಪಂಜಾಬ್​, ಗೋವಾ, ಉತ್ತರಾಖಂಡ್​ಗಳಲ್ಲಿ ಫೆ.14ರಂದು ಮತದಾನ ನಡೆಯಲಿದೆ ಎಂದು ಹೇಳಿದ್ದರು. ಆದರೆ ಪಂಜಾಬ್​​ ಮುಖ್ಯಮಂತ್ರಿ ಚರಣಜಿತ್​ ಸಿಂಗ್​ ಛನ್ನಿ ಮುಖ್ಯ ಚುನಾವಣಾ ಆಯುಕ್ತ ಸುಶೀಲ್​ ಚಂದ್ರರಿಗೆ ಪತ್ರ ಬರೆದು, ಫೆ.16ರಂದು ಗುರು ರವಿದಾಸರ ಜನ್ಮ ದಿನ ಹಿನ್ನೆಲೆಯಲ್ಲಿ ಚುನಾವಣೆಯನ್ನು ಆರು ದಿನಗಳಿಗೆ ಮುಂದೂಡಬೇಕು ಎಂದು ಮನವಿ ಮಾಡಿದ್ದರು.  ಫೆ. 16ರಂದು ಗುರು ರವಿದಾಸ ಜಯಂತಿ ಹಿನ್ನೆಲೆಯಲ್ಲಿ ಪಂಜಾಬ್​ನ ಎಸ್​ಸಿ ಸಮುದಾಯ ಸುಮಾರು 20 ಲಕ್ಷ ಭಕ್ತರು ಉತ್ತರಪ್ರದೇಶದ ಬನಾರಸ್​ಗೆ ಭೇಟಿ ಕೊಡುತ್ತಾರೆ. ಬಹುತೇಕವಾಗಿ ಫೆ.10ರಿಂದಲೇ ಅಲ್ಲಿಗೆ ಹೋಗಲು ಶುರು ಮಾಡುತ್ತಾರೆ. ಹೀಗಾಗಿ ಫೆ.14ರಂದು ಚುನಾವಣೆ ನಡೆದರೆ ಅನೇಕರಿಗೆ ಮತದಾನ ಮಾಡಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದರು. ಇದಕ್ಕೆ ಬಿಜೆಪಿ ಕೂಡ ಸಾಥ್​ ನೀಡಿತ್ತು.

ಗುರು ರವಿದಾಸರು 15-16ನೇ ಶತಮಾನದ ಸಂತರು. ಅತಿ ಮುಖ್ಯವಾಗಿ ಭಕ್ತಿ ಚಳವಳಿಯಲ್ಲಿ ಗುರುತಿಸಿಕೊಂಡಿದ್ದವರು. ಈ ಬಾರಿ ಫೆಬ್ರವರಿ 16ರಂದು ಅವರ 645ನೇ ಜನ್ಮ ವಾರ್ಷಿಕೋತ್ಸವ ನಡೆಯಲಿದೆ. ಇವರು ಬರೆದ ಸುಮಾರು 40 ಪದ್ಯಗಳು, ಸಿಖ್ಖರ ಪವಿತ್ರ ಧರ್ಮಗ್ರಂಥ ಆದಿ ಗ್ರಂಥದಲ್ಲಿ ಸೇರಿಸಲ್ಪಟ್ಟಿವೆ. ಜಾತೀಯತೆ, ತಾರತಮ್ಯವನ್ನು ಹೋಗಲಾಡಿಸಲು ಅವರು ತುಂಬ ಹೋರಾಡಿದ್ದರು ಎಂದು ಹೇಳಲಾಗುತ್ತದೆ. ಅವರ ಜಯಂತಿಯಂದು ಭಕ್ತರು ಪವಿತ್ರ ನದಿಗಳಲ್ಲಿ ಪುಣ್ಯಸ್ನಾನವನ್ನೂ ಮಾಡುತ್ತಾರೆ.

ಇದನ್ನೂ ಓದಿ: Lata Mangeshkar: ಲತಾ ಮಂಗೇಶ್ಕರ್ ಆರೋಗ್ಯ ಸುಧಾರಣೆಗೆ ಕುಟುಂಬವರಿಂದ ವಿಶೇಷ ಪೂಜೆ; ಸಹೋದರಿ ಆಶಾ ಬೋಸ್ಲೆ ಮಾಹಿತಿ

Published On - 2:37 pm, Mon, 17 January 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?