AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ ವಿಧಾನಸಭಾ ಚುನಾವಣೆಯನ್ನು ಫೆ.20ಕ್ಕೆ ಮುಂದೂಡಿದ ಚುನಾವಣಾ ಆಯೋಗ; ಸಿಎಂ ಛನ್ನಿ, ಬಿಜೆಪಿ ನಾಯಕರ ಮನವಿಗೆ ಸ್ಪಂದನೆ

Punjab Assembly Election 2022: ಪಂಜಾಬ್​​ ಮುಖ್ಯಮಂತ್ರಿ ಚರಣಜಿತ್​ ಸಿಂಗ್​ ಛನ್ನಿ ಮುಖ್ಯ ಚುನಾವಣಾ ಆಯುಕ್ತ ಸುಶೀಲ್​ ಚಂದ್ರರಿಗೆ ಪತ್ರ ಬರೆದು, ಫೆ.16ರಂದು ಗುರು ರವಿದಾಸರ ಜನ್ಮ ದಿನ ಹಿನ್ನೆಲೆಯಲ್ಲಿ ಚುನಾವಣೆಯನ್ನು ಆರು ದಿನಗಳಿಗೆ ಮುಂದೂಡಬೇಕು ಎಂದು ಮನವಿ ಮಾಡಿದ್ದರು. 

ಪಂಜಾಬ್​ ವಿಧಾನಸಭಾ ಚುನಾವಣೆಯನ್ನು ಫೆ.20ಕ್ಕೆ ಮುಂದೂಡಿದ ಚುನಾವಣಾ ಆಯೋಗ; ಸಿಎಂ ಛನ್ನಿ, ಬಿಜೆಪಿ ನಾಯಕರ ಮನವಿಗೆ ಸ್ಪಂದನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jan 17, 2022 | 2:55 PM

Share

ಫೆಬ್ರವರಿ 14ಕ್ಕೆ ನಡೆಯಬೇಕಿದ್ದ ಪಂಜಾಬ್​ ವಿಧಾನಸಭೆ ಚುನಾವಣೆ(Punjab Assembly Election 2022)ಯನ್ನು  ಚುನಾವಣಾ ಆಯೋಗ ಫೆಬ್ರವರಿ 20ಕ್ಕೆ ಮುಂದೂಡಿದೆ. ಗುರು ರವಿದಾಸ ಜಯಂತಿ (Guru Ravidas Jayanti) ಆಚರಣೆ ಹಿನ್ನೆಲೆಯಲ್ಲಿ ಆರು ದಿನಗಳ ಕಾಲ ಮುಂದೂಡಿ ಆದೇಶ ಹೊರಡಿಸಿದೆ. ಫೆಬ್ರವರಿ 16ರಂದು ಗುರು ರವಿದಾಸ ಜಯಂತಿ ಇರುವ ಹಿನ್ನೆಲೆಯಲ್ಲಿ ಫೆಬ್ರವರಿ 14ರಂದು ಚುನಾವಣೆ ನಡೆಸಬಾರದು.  ಯಾಕೆಂದರೆ ಪಂಜಾಬ್​ನಿಂದ ಅನೇಕ ಭಕ್ತರು ಉತ್ತರಪ್ರದೇಶಕ್ಕೆ ಹೋಗಬೇಕಾಗುತ್ತದೆ. ಸಿಖ್​ ಸಮುದಾಯದ ಭಕ್ತರು ಫೆ.10ರಿಂದಲೇ ವಾರಾಣಸಿಗೆ ಹೋಗಲು ಶುರು ಮಾಡುತ್ತಾರೆ ಎಂದು ಪಂಜಾಬ್​ ಮುಖ್ಯಮಂತ್ರಿ ಚರಣಜಿತ್​ ಸಿಂಗ್​ ಛನ್ನಿ, ಬಿಜೆಪಿ ನಾಯಕರು ಚುನಾವಣಾ ಆಯೋಗಕ್ಕೆ ಮನವರಿಕೆ ಮಾಡಿಕೊಟ್ಟಿದ್ದರು. ಈ ಬಗ್ಗೆ ಚರ್ಚಿಸಲು ಇಂದು ಚುನಾವಣಾ ಆಯೋಗ ಸಭೆ ನಡೆಸಿತ್ತು. 

ಜನವರಿ 8ರಂದು ಸುದ್ದಿಗೋಷ್ಠಿ ನಡೆಸಿದ್ದ ಚುನಾವಣಾ ಆಯೋಗದ ಅಧಿಕಾರಿಗಳು, ಗೋವಾ, ಪಂಜಾಬ್​, ಉತ್ತರಾಖಂಡ್​, ಉತ್ತರಪ್ರದೇಶ, ಮಣಿಪುರ ರಾಜ್ಯಗಳ ದಿನಾಂಕ ಘೋಷಣೆ ಮಾಡಿದ್ದರು. ಅದರಲ್ಲಿ ಪಂಜಾಬ್​, ಗೋವಾ, ಉತ್ತರಾಖಂಡ್​ಗಳಲ್ಲಿ ಫೆ.14ರಂದು ಮತದಾನ ನಡೆಯಲಿದೆ ಎಂದು ಹೇಳಿದ್ದರು. ಆದರೆ ಪಂಜಾಬ್​​ ಮುಖ್ಯಮಂತ್ರಿ ಚರಣಜಿತ್​ ಸಿಂಗ್​ ಛನ್ನಿ ಮುಖ್ಯ ಚುನಾವಣಾ ಆಯುಕ್ತ ಸುಶೀಲ್​ ಚಂದ್ರರಿಗೆ ಪತ್ರ ಬರೆದು, ಫೆ.16ರಂದು ಗುರು ರವಿದಾಸರ ಜನ್ಮ ದಿನ ಹಿನ್ನೆಲೆಯಲ್ಲಿ ಚುನಾವಣೆಯನ್ನು ಆರು ದಿನಗಳಿಗೆ ಮುಂದೂಡಬೇಕು ಎಂದು ಮನವಿ ಮಾಡಿದ್ದರು.  ಫೆ. 16ರಂದು ಗುರು ರವಿದಾಸ ಜಯಂತಿ ಹಿನ್ನೆಲೆಯಲ್ಲಿ ಪಂಜಾಬ್​ನ ಎಸ್​ಸಿ ಸಮುದಾಯ ಸುಮಾರು 20 ಲಕ್ಷ ಭಕ್ತರು ಉತ್ತರಪ್ರದೇಶದ ಬನಾರಸ್​ಗೆ ಭೇಟಿ ಕೊಡುತ್ತಾರೆ. ಬಹುತೇಕವಾಗಿ ಫೆ.10ರಿಂದಲೇ ಅಲ್ಲಿಗೆ ಹೋಗಲು ಶುರು ಮಾಡುತ್ತಾರೆ. ಹೀಗಾಗಿ ಫೆ.14ರಂದು ಚುನಾವಣೆ ನಡೆದರೆ ಅನೇಕರಿಗೆ ಮತದಾನ ಮಾಡಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದರು. ಇದಕ್ಕೆ ಬಿಜೆಪಿ ಕೂಡ ಸಾಥ್​ ನೀಡಿತ್ತು.

ಗುರು ರವಿದಾಸರು 15-16ನೇ ಶತಮಾನದ ಸಂತರು. ಅತಿ ಮುಖ್ಯವಾಗಿ ಭಕ್ತಿ ಚಳವಳಿಯಲ್ಲಿ ಗುರುತಿಸಿಕೊಂಡಿದ್ದವರು. ಈ ಬಾರಿ ಫೆಬ್ರವರಿ 16ರಂದು ಅವರ 645ನೇ ಜನ್ಮ ವಾರ್ಷಿಕೋತ್ಸವ ನಡೆಯಲಿದೆ. ಇವರು ಬರೆದ ಸುಮಾರು 40 ಪದ್ಯಗಳು, ಸಿಖ್ಖರ ಪವಿತ್ರ ಧರ್ಮಗ್ರಂಥ ಆದಿ ಗ್ರಂಥದಲ್ಲಿ ಸೇರಿಸಲ್ಪಟ್ಟಿವೆ. ಜಾತೀಯತೆ, ತಾರತಮ್ಯವನ್ನು ಹೋಗಲಾಡಿಸಲು ಅವರು ತುಂಬ ಹೋರಾಡಿದ್ದರು ಎಂದು ಹೇಳಲಾಗುತ್ತದೆ. ಅವರ ಜಯಂತಿಯಂದು ಭಕ್ತರು ಪವಿತ್ರ ನದಿಗಳಲ್ಲಿ ಪುಣ್ಯಸ್ನಾನವನ್ನೂ ಮಾಡುತ್ತಾರೆ.

ಇದನ್ನೂ ಓದಿ: Lata Mangeshkar: ಲತಾ ಮಂಗೇಶ್ಕರ್ ಆರೋಗ್ಯ ಸುಧಾರಣೆಗೆ ಕುಟುಂಬವರಿಂದ ವಿಶೇಷ ಪೂಜೆ; ಸಹೋದರಿ ಆಶಾ ಬೋಸ್ಲೆ ಮಾಹಿತಿ

Published On - 2:37 pm, Mon, 17 January 22

ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ