ಪಂಜಾಬ್​ ವಿಧಾನಸಭಾ ಚುನಾವಣೆಯನ್ನು ಫೆ.20ಕ್ಕೆ ಮುಂದೂಡಿದ ಚುನಾವಣಾ ಆಯೋಗ; ಸಿಎಂ ಛನ್ನಿ, ಬಿಜೆಪಿ ನಾಯಕರ ಮನವಿಗೆ ಸ್ಪಂದನೆ

Punjab Assembly Election 2022: ಪಂಜಾಬ್​​ ಮುಖ್ಯಮಂತ್ರಿ ಚರಣಜಿತ್​ ಸಿಂಗ್​ ಛನ್ನಿ ಮುಖ್ಯ ಚುನಾವಣಾ ಆಯುಕ್ತ ಸುಶೀಲ್​ ಚಂದ್ರರಿಗೆ ಪತ್ರ ಬರೆದು, ಫೆ.16ರಂದು ಗುರು ರವಿದಾಸರ ಜನ್ಮ ದಿನ ಹಿನ್ನೆಲೆಯಲ್ಲಿ ಚುನಾವಣೆಯನ್ನು ಆರು ದಿನಗಳಿಗೆ ಮುಂದೂಡಬೇಕು ಎಂದು ಮನವಿ ಮಾಡಿದ್ದರು. 

ಪಂಜಾಬ್​ ವಿಧಾನಸಭಾ ಚುನಾವಣೆಯನ್ನು ಫೆ.20ಕ್ಕೆ ಮುಂದೂಡಿದ ಚುನಾವಣಾ ಆಯೋಗ; ಸಿಎಂ ಛನ್ನಿ, ಬಿಜೆಪಿ ನಾಯಕರ ಮನವಿಗೆ ಸ್ಪಂದನೆ
ಪ್ರಾತಿನಿಧಿಕ ಚಿತ್ರ
Follow us
| Updated By: Lakshmi Hegde

Updated on:Jan 17, 2022 | 2:55 PM

ಫೆಬ್ರವರಿ 14ಕ್ಕೆ ನಡೆಯಬೇಕಿದ್ದ ಪಂಜಾಬ್​ ವಿಧಾನಸಭೆ ಚುನಾವಣೆ(Punjab Assembly Election 2022)ಯನ್ನು  ಚುನಾವಣಾ ಆಯೋಗ ಫೆಬ್ರವರಿ 20ಕ್ಕೆ ಮುಂದೂಡಿದೆ. ಗುರು ರವಿದಾಸ ಜಯಂತಿ (Guru Ravidas Jayanti) ಆಚರಣೆ ಹಿನ್ನೆಲೆಯಲ್ಲಿ ಆರು ದಿನಗಳ ಕಾಲ ಮುಂದೂಡಿ ಆದೇಶ ಹೊರಡಿಸಿದೆ. ಫೆಬ್ರವರಿ 16ರಂದು ಗುರು ರವಿದಾಸ ಜಯಂತಿ ಇರುವ ಹಿನ್ನೆಲೆಯಲ್ಲಿ ಫೆಬ್ರವರಿ 14ರಂದು ಚುನಾವಣೆ ನಡೆಸಬಾರದು.  ಯಾಕೆಂದರೆ ಪಂಜಾಬ್​ನಿಂದ ಅನೇಕ ಭಕ್ತರು ಉತ್ತರಪ್ರದೇಶಕ್ಕೆ ಹೋಗಬೇಕಾಗುತ್ತದೆ. ಸಿಖ್​ ಸಮುದಾಯದ ಭಕ್ತರು ಫೆ.10ರಿಂದಲೇ ವಾರಾಣಸಿಗೆ ಹೋಗಲು ಶುರು ಮಾಡುತ್ತಾರೆ ಎಂದು ಪಂಜಾಬ್​ ಮುಖ್ಯಮಂತ್ರಿ ಚರಣಜಿತ್​ ಸಿಂಗ್​ ಛನ್ನಿ, ಬಿಜೆಪಿ ನಾಯಕರು ಚುನಾವಣಾ ಆಯೋಗಕ್ಕೆ ಮನವರಿಕೆ ಮಾಡಿಕೊಟ್ಟಿದ್ದರು. ಈ ಬಗ್ಗೆ ಚರ್ಚಿಸಲು ಇಂದು ಚುನಾವಣಾ ಆಯೋಗ ಸಭೆ ನಡೆಸಿತ್ತು. 

ಜನವರಿ 8ರಂದು ಸುದ್ದಿಗೋಷ್ಠಿ ನಡೆಸಿದ್ದ ಚುನಾವಣಾ ಆಯೋಗದ ಅಧಿಕಾರಿಗಳು, ಗೋವಾ, ಪಂಜಾಬ್​, ಉತ್ತರಾಖಂಡ್​, ಉತ್ತರಪ್ರದೇಶ, ಮಣಿಪುರ ರಾಜ್ಯಗಳ ದಿನಾಂಕ ಘೋಷಣೆ ಮಾಡಿದ್ದರು. ಅದರಲ್ಲಿ ಪಂಜಾಬ್​, ಗೋವಾ, ಉತ್ತರಾಖಂಡ್​ಗಳಲ್ಲಿ ಫೆ.14ರಂದು ಮತದಾನ ನಡೆಯಲಿದೆ ಎಂದು ಹೇಳಿದ್ದರು. ಆದರೆ ಪಂಜಾಬ್​​ ಮುಖ್ಯಮಂತ್ರಿ ಚರಣಜಿತ್​ ಸಿಂಗ್​ ಛನ್ನಿ ಮುಖ್ಯ ಚುನಾವಣಾ ಆಯುಕ್ತ ಸುಶೀಲ್​ ಚಂದ್ರರಿಗೆ ಪತ್ರ ಬರೆದು, ಫೆ.16ರಂದು ಗುರು ರವಿದಾಸರ ಜನ್ಮ ದಿನ ಹಿನ್ನೆಲೆಯಲ್ಲಿ ಚುನಾವಣೆಯನ್ನು ಆರು ದಿನಗಳಿಗೆ ಮುಂದೂಡಬೇಕು ಎಂದು ಮನವಿ ಮಾಡಿದ್ದರು.  ಫೆ. 16ರಂದು ಗುರು ರವಿದಾಸ ಜಯಂತಿ ಹಿನ್ನೆಲೆಯಲ್ಲಿ ಪಂಜಾಬ್​ನ ಎಸ್​ಸಿ ಸಮುದಾಯ ಸುಮಾರು 20 ಲಕ್ಷ ಭಕ್ತರು ಉತ್ತರಪ್ರದೇಶದ ಬನಾರಸ್​ಗೆ ಭೇಟಿ ಕೊಡುತ್ತಾರೆ. ಬಹುತೇಕವಾಗಿ ಫೆ.10ರಿಂದಲೇ ಅಲ್ಲಿಗೆ ಹೋಗಲು ಶುರು ಮಾಡುತ್ತಾರೆ. ಹೀಗಾಗಿ ಫೆ.14ರಂದು ಚುನಾವಣೆ ನಡೆದರೆ ಅನೇಕರಿಗೆ ಮತದಾನ ಮಾಡಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದರು. ಇದಕ್ಕೆ ಬಿಜೆಪಿ ಕೂಡ ಸಾಥ್​ ನೀಡಿತ್ತು.

ಗುರು ರವಿದಾಸರು 15-16ನೇ ಶತಮಾನದ ಸಂತರು. ಅತಿ ಮುಖ್ಯವಾಗಿ ಭಕ್ತಿ ಚಳವಳಿಯಲ್ಲಿ ಗುರುತಿಸಿಕೊಂಡಿದ್ದವರು. ಈ ಬಾರಿ ಫೆಬ್ರವರಿ 16ರಂದು ಅವರ 645ನೇ ಜನ್ಮ ವಾರ್ಷಿಕೋತ್ಸವ ನಡೆಯಲಿದೆ. ಇವರು ಬರೆದ ಸುಮಾರು 40 ಪದ್ಯಗಳು, ಸಿಖ್ಖರ ಪವಿತ್ರ ಧರ್ಮಗ್ರಂಥ ಆದಿ ಗ್ರಂಥದಲ್ಲಿ ಸೇರಿಸಲ್ಪಟ್ಟಿವೆ. ಜಾತೀಯತೆ, ತಾರತಮ್ಯವನ್ನು ಹೋಗಲಾಡಿಸಲು ಅವರು ತುಂಬ ಹೋರಾಡಿದ್ದರು ಎಂದು ಹೇಳಲಾಗುತ್ತದೆ. ಅವರ ಜಯಂತಿಯಂದು ಭಕ್ತರು ಪವಿತ್ರ ನದಿಗಳಲ್ಲಿ ಪುಣ್ಯಸ್ನಾನವನ್ನೂ ಮಾಡುತ್ತಾರೆ.

ಇದನ್ನೂ ಓದಿ: Lata Mangeshkar: ಲತಾ ಮಂಗೇಶ್ಕರ್ ಆರೋಗ್ಯ ಸುಧಾರಣೆಗೆ ಕುಟುಂಬವರಿಂದ ವಿಶೇಷ ಪೂಜೆ; ಸಹೋದರಿ ಆಶಾ ಬೋಸ್ಲೆ ಮಾಹಿತಿ

Published On - 2:37 pm, Mon, 17 January 22

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ