AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WWE ಮಾಜಿ ಕುಸ್ತಿಪಟು ದಿ ಗ್ರೇಟ್ ಖಲಿ ಬಿಜೆಪಿಗೆ ಸೇರ್ಪಡೆ; ಕೃಷಿ ಕಾಯ್ದೆಗಳನ್ನು ವಿರೋಧಿಸಿದ್ದರು, ಆಮ್​ ಆದ್ಮಿ ಪಾರ್ಟಿ​ ಪರ ಪ್ರಚಾರ ನಡೆಸಿದ್ದರು !

2017ರಲ್ಲಿ ಪಂಜಾಬ್​ ವಿಧಾನಸಭೆ ಚುನಾವಣೆ ನಡೆದ ಸಂದರ್ಭದಲ್ಲಿ ದಿ ಗ್ರೇಟ್​ ಖಲಿ ಅರವಿಂದ್ ಕೇಜ್ರಿವಾಲ್​ ಅವರ ಆಮ್​ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಆ ಚುನಾವಣೆಯಲ್ಲಿ ಆಪ್​ ಪರ ಪ್ರಚಾರವನ್ನೂ ನಡೆಸಿದ್ದರು.

WWE ಮಾಜಿ ಕುಸ್ತಿಪಟು ದಿ ಗ್ರೇಟ್ ಖಲಿ ಬಿಜೆಪಿಗೆ ಸೇರ್ಪಡೆ; ಕೃಷಿ ಕಾಯ್ದೆಗಳನ್ನು ವಿರೋಧಿಸಿದ್ದರು, ಆಮ್​ ಆದ್ಮಿ ಪಾರ್ಟಿ​ ಪರ ಪ್ರಚಾರ ನಡೆಸಿದ್ದರು !
ದಿ ಗ್ರೇಟ್ ಖಲಿ
TV9 Web
| Edited By: |

Updated on:Feb 10, 2022 | 6:03 PM

Share

ವೃತ್ತಿಪರ ಕುಸ್ತಿಪಟು ಮತ್ತು ಮಾಜಿ ವರ್ಲ್ಡ್ ವ್ರೆಸ್ಲಿಂಗ್ ಎಂಟರ್‌ಟೈನ್‌ಮೆಂಟ್ (WWE) ಸ್ಟಾರ್​, ದಿ ಗ್ರೇಟ್ ಖಲಿ (The Great Khali) ಎಂದೇ ಖ್ಯಾತರಾಗಿದ್ದ ದಲೀಪ್ ಸಿಂಗ್​ ರಾಣಾ(Wrestler Dalip Singh Rana) ಅವರು ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ದಲೀಪ್​ ಸಿಂಗ್ ಅವರು ಇಂದು ದೆಹಲಿಯಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಮಧ್ಯಾಹ್ನ 1ಗಂಟೆ ಹೊತ್ತಿಗೆ ಕಮಲ ಪಾಳೆಯ ಸೇರಿದ್ದಾರೆ. ಈ ವೇಳೆ ಉಪಸ್ಥಿತರಿದ್ದ ಬಿಜೆಪಿ ಮುಖಂಡ ಮತ್ತು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಾತನಾಡಿ, ದಿ ಗ್ರೇಟ್ ಖಲಿಯವರು ಈ ದೇಶದ ಯುವಕರು ಮತ್ತು ಜನರಿಗೆ ಸ್ಫೂರ್ತಿಯಾಗಿದ್ದಾರೆ. ಈ ದೇಶವನ್ನು ಅಭಿವೃದ್ಧಿಯೆಡೆಗೆ ಕೊಂಡೊಯ್ಯುವ ಪ್ರಧಾನಿ ಮೋದಿಯವರ ಪ್ರಯಾಣಕ್ಕೆ ಅವರೂ ಜೊತೆಯಾಗಿದ್ದಕ್ಕೆ ನಾನು ಖಲಿಯವರಿಗೆ ಧನ್ಯವಾದ ಸಲ್ಲಿಸುತ್ತೇನೆ. ದೇಶದ ಎಲ್ಲ ಕ್ಷೇತ್ರಗಳ ಜನರೂ ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದು ಖುಷಿ ಸಂಗತಿ ಎಂದರು. ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್​ ಸಿಂಗ್​, ಎಂಪಿ ಸುನಿತಾ ದುಗ್ಗಲ್​ ಇತರರು ಇದ್ದರು. 

ಬಿಜೆಪಿ ಸೇರಿದ ಬಳಿಕ ಮಾತನಾಡಿದ ಖಲಿ, ರಾಷ್ಟ್ರದ ಏಳ್ಗೆಗೆ ಆದ್ಯತೆ ನೀಡುವ ಬಿಜೆಪಿಯ ನೀತಿ-ನಿಯಮಗಳಿಂದ ಸ್ಫೂರ್ತಿ ಪಡೆದು, ಪ್ರಭಾವಿತನಾಗಿ ಈ ಪಕ್ಷಕ್ಕೆ ಸೇರಿದ್ದೇನೆ. ದೇಶಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ ಕೆಲಸಗಳು ನನಗೆ ತುಂಬ ಇಷ್ಟವಾಗಿವೆ. ಅದನ್ನೆಲ್ಲ ನೋಡಿದ ಮೇಲೆ, ಈ ರಾಷ್ಟ್ರದ ಅಭಿವೃದ್ಧಿಯಲ್ಲಿ ನಾನೂ ಕೈಜೋಡಿಸಬೇಕು ಎಂಬ ಬಯಕೆ ಹೆಚ್ಚಾಯಿತು. ಪಕ್ಷದಲ್ಲಿ ನನಗೆ ಯಾವ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಹೇಳಿದ್ದಾರೆ.  7 ಅಡಿ ಎತ್ತರವಿರುವ, ದೃಢಾಕಾಯ ಹೊಂದಿರುವ ದಿ ಗ್ರೇಟ್ ಖಲಿಗೆ 49 ವರ್ಷ. ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯ ಧಿರೈನಾ ಎಂಬ ಸಣ್ಣ ಪಟ್ಟಣದವರು.WWE ಯಿಂದ ನಿವೃತ್ತರಾದ ಬಳಿಕ ಭಾರತೀಯ ವೃತ್ತಿಪರ ಕುಸ್ತಿ ಪ್ರಚಾರ ಮತ್ತು ತರಬೇತಿ ಸಂಸ್ಥೆಯಾದ ಕಾಂಟಿನೆಂಟಲ್ ವ್ರೆಸ್ಲಿಂಗ್ ಎಂಟರ್ಟೈನ್ಮೆಂಟ್​ನ್ನು ಸ್ಥಾಪಿಸಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಕೃಷಿ ಕಾಯ್ದೆಗಳನ್ನು ವಿರೋಧಿಸಿದ್ದವರಲ್ಲಿ ದಿ ಗ್ರೇಟ್ ಖಲಿ ಕೂಡ ಒಬ್ಬರಾಗಿದ್ದರು. 2020ರಲ್ಲಿ ಮೂರು ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಪಂಜಾಬ್​, ಹರ್ಯಾಣ ರೈತರಿಗೆ ಬೆಂಬಲ ಸೂಚಿಸಿ ಮಾತನಾಡಿದ್ದ ಅವರು, ಈ ಕೃಷಿ ಕಾಯ್ದೆಗಳಿಂದ ರೈತರು ಸಂಕಷ್ಟಕ್ಕೀಡಾಗುತ್ತಾರೆ. ಕೂಡಲೇ ಕೇಂದ್ರ ಸರ್ಕಾರ ರೈತರ ಬೇಡಿಕೆಯನ್ನು ಈಡೇರಿಸಬೇಕು ಎಂದು ಹೇಳಿದ್ದರು.

2017ರಲ್ಲಿ ಪಂಜಾಬ್​ ವಿಧಾನಸಭೆ ಚುನಾವಣೆ ನಡೆದ ಸಂದರ್ಭದಲ್ಲಿ ದಿ ಗ್ರೇಟ್​ ಖಲಿ ಅರವಿಂದ್ ಕೇಜ್ರಿವಾಲ್​ ಅವರ ಆಮ್​ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಆ ಚುನಾವಣೆಯಲ್ಲಿ ಆಪ್​ ಪರ ಪ್ರಚಾರವನ್ನೂ ನಡೆಸಿದ್ದರು. ಹಾಗೇ, ಈ ಬಾರಿಯ ಪಂಜಾಬ್ ವಿಧಾನಸಭೆ ಚುನಾವಣೆಗೂ ಪೂರ್ವ ದಲೀಪ್ ಸಿಂಗ್ ರಾಣಾ ಮೊದಲು ಭೇಟಿಯಾಗಿದ್ದು ಅರವಿಂದ್ ಕೇಜ್ರಿವಾಲ್​ರನ್ನು. 2021ರ ನವೆಂಬರ್​​ 18ರಂದು ಅರವಿಂದ್ ಕೇಜ್ರಿವಾಲ್​ರನ್ನು ಭೇಟಿಯಾಗಿ ತಾವು, ದೆಹಲಿಯಲ್ಲಿ ಆಪ್​ ಸರ್ಕಾರ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿಕೊಂಡಿದ್ದೇನೆ. ಪಂಜಾಬ್​ನಲ್ಲಿ ನಾನು ಆಪ್​ಗೆ ಸಹಕಾರ ನೀಡುತ್ತೇನೆ ಎಂದಿದ್ದರು.

ಇದನ್ನೂ ಓದಿ: ಕಾಂಗ್ರೆಸ್ ಬಿಸಿರಕ್ತದ ಅವಶ್ಯಕತೆಯಿದೆ, ಪಕ್ಷಕ್ಕೆ ಯುವಕರನ್ನು ಕರೆತನ್ನಿ ಎಂದು ಕಾಂಗ್ರೆಸ್ ಯುವ ಮೋರ್ಚಾಗೆ ಹೇಳಿದರು ಡಿಕೆ ಶಿವಕುಮಾರ

Published On - 5:49 pm, Thu, 10 February 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್