AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ ಕಾಂಗ್ರೆಸ್ ನಾಯಕರು ಅರೆಮನಸ್ಸಿನಿಂದ ಜತೆಯಾಗಿದ್ದಾರೆ: ಮೋದಿ

"ಇಲ್ಲಿಯೂ ಅದೇ ಕಥೆ ನಡೆಯುತ್ತಿದೆ, ದೆಹಲಿಯಿಂದ ದೊಡ್ಡ ನಾಯಕರು ಬಂದಾಗ ಅವರು (ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್) ಕ್ಯಾಮೆರಾಗಳ ಮುಂದೆ ಕೈಕುಲುಕಿದ 100 ಸಂದರ್ಭಗಳಿವೆ, ಆದರೆ ಯಾವುದೇ ಒಗ್ಗಟ್ಟು ಇರಲಿಲ್ಲ. ಹೃದಯದಲ್ಲಿ ಕಹಿ. ಅವರು ಕೇವಲ ನಕಲಿ ಒಗ್ಗಟ್ಟು ಪ್ರದರ್ಶಿಸುತ್ತಿದ್ದಾರೆ ಎಂದು ಪಿಎಂ ಮೋದಿ ಅವರು ಗೆಹ್ಲೋಟ್ ಮತ್ತು ಪೈಲಟ್‌ರ ಹೆಸರನ್ನು ಉಲ್ಲೇಖಿಸದೆ ಹೇಳಿದ್ದಾರೆ.

ರಾಜಸ್ಥಾನದಲ್ಲಿ ಕಾಂಗ್ರೆಸ್ ನಾಯಕರು ಅರೆಮನಸ್ಸಿನಿಂದ ಜತೆಯಾಗಿದ್ದಾರೆ: ಮೋದಿ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
|

Updated on:Nov 18, 2023 | 7:54 PM

Share

ನಾಗೌರ್‌ ನವೆಂಬರ್ 18: ‘ದೆಹಲಿ ದರ್ಬಾರ್’ ತನ್ನ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿರುವ ಕಾರಣ ರಾಜಸ್ಥಾನ (Rajasthan) ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್​​ಗೆ (Ashok Gehlot) ರಾಜ್ಯವನ್ನು ನಿಭಾಯಿಸಲು ಸಾಧ್ಯವಾಗುತ್ತಿಲ್ಲ  ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಶನಿವಾರ ಹೇಳಿದ್ದಾರೆ. ರಾಜಸ್ಥಾನದ ನಾಗೌರ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ರಾಜಸ್ಥಾನದ ಜನರು ತಮ್ಮಷ್ಟಕ್ಕೆ ಉಳಿದಿರುವಾಗ ಸಿಎಂ ದೆಹಲಿ ದರ್ಬಾರ್ ಅನ್ನು ನಿಭಾಯಿಸುವಲ್ಲಿ ನಿರತರಾಗಿದ್ದರು. ಈಗ ಚುನಾವಣೆಗಳು ಬರುತ್ತಿದ್ದಂತೆ ಅವರು ಅರೆಮನಸ್ಸಿನಿಂದ ಜತೆಯಾಗಿದ್ದಾರೆ ಎಂದು ಹೇಳಿದ್ದಾರೆ.

‘ಶತಮಾನದ’ ಕಾರ್ಯಕ್ರಮಕ್ಕೆ ಕಾರ್ಡ್‌ಗಳ ಮೂಲಕ ಎಲ್ಲರನ್ನೂ ಮನೆಗೆ ಆಹ್ವಾನಿಸಿದ ಮಹಿಳೆಯ ಕತೆಯನ್ನು ಹಂಚಿಕೊಂಡ ಪ್ರಧಾನಿ ಮೋದಿ, “ಈ ಶತಮಾನದ ಕಾರ್ಯಕ್ರಮ ಏನೆಂದು ಎಲ್ಲರೂ ಆಶ್ಚರ್ಯಚಕಿತರಾದರು. ಮಹಿಳೆ ತನ್ನ ಪತಿ 100 ನೇ ಬಾರಿ ಧೂಮಪಾನವನ್ನು ತ್ಯಜಿಸುತ್ತಾರೆ ಎಂದು ಹೇಳಿದರು. ಆ ದಿನ ಅವರ ಪತಿ 99 ನೇ ಬಾರಿಗೆ ಧೂಮಪಾನವನ್ನು ತ್ಯಜಿಸಿದ್ದರು.”

“ಇಲ್ಲಿಯೂ ಅದೇ ಕಥೆ ನಡೆಯುತ್ತಿದೆ, ದೆಹಲಿಯಿಂದ ದೊಡ್ಡ ನಾಯಕರು ಬಂದಾಗ ಅವರು (ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್) ಕ್ಯಾಮೆರಾಗಳ ಮುಂದೆ ಕೈಕುಲುಕಿದ 100 ಸಂದರ್ಭಗಳಿವೆ, ಆದರೆ ಯಾವುದೇ ಒಗ್ಗಟ್ಟು ಇರಲಿಲ್ಲ. ಹೃದಯದಲ್ಲಿ ಕಹಿ. ಅವರು ಕೇವಲ ನಕಲಿ ಒಗ್ಗಟ್ಟು ಪ್ರದರ್ಶಿಸುತ್ತಿದ್ದಾರೆ ಎಂದು ಪಿಎಂ ಮೋದಿ ಅವರು ಗೆಹ್ಲೋಟ್ ಮತ್ತು ಪೈಲಟ್‌ರ ಹೆಸರನ್ನು ಉಲ್ಲೇಖಿಸದೆ ಹೇಳಿದ್ದಾರೆ. ಏತನ್ಮಧ್ಯೆ, ಸಚಿನ್ ಪೈಲಟ್‌ರನ್ನು ‘ಬೇಚಾರಾ’ (ಪಾಪದವ) ‘ಕಾಯುತ್ತಿರುವ ಮುಖ್ಯಮಂತ್ರಿ’ ಎಂದು ಉಲ್ಲೇಖಿಸಿದ್ದಾರೆ.

ಗಾಂಧಿಯವರ ಪ್ರಚಾರದ ವೇಳೆ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಇಬ್ಬರೂ ರಾಹುಲ್ ಗಾಂಧಿಯೊಂದಿಗೆ ಕಾಣಿಸಿಕೊಂಡಿದ್ದರಿಂದ ದಾಳಿ ನಡೆದಿದೆ. ರಾಜಸ್ಥಾನ ಕಾಂಗ್ರೆಸ್ ಒಗ್ಗಟ್ಟಿನಿಂದ ನಿಂತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. “ನಾವು ಒಟ್ಟಿಗೆ ಕಾಣಿಸಿಕೊಳ್ಳುವುದಲ್ಲ, ನಾವು ಒಟ್ಟಿಗೆ ಇದ್ದೇವೆ.  ಕಾಂಗ್ರೆಸ್ ರಾಜಸ್ಥಾನದಲ್ಲಿ ಗೆಲ್ಲುತ್ತದೆ ಎಂದು ರಾಹುಲ್ ಗಾಂಧಿ ಹೇಳಿದರು.

ಇದನ್ನೂ ಓದಿರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ: ವಿದ್ಯಾಧರ್ ನಗರ ಅಭ್ಯರ್ಥಿ ದಿಯಾ ಕುಮಾರಿ

ಸಚಿನ್ ಪೈಲಟ್ ಗೆಹ್ಲೋಟ್ ವಿರುದ್ಧ ಬಂಡಾಯವೆದ್ದ ನಂತರ ಮತ್ತು ಗೆಹ್ಲೋಟ್ ಅವರು ಪೈಲಟ್ ನ್ನು ‘ದ್ರೋಹಿ’, ‘ದೇಶದ್ರೋಹಿ’ ಎಂದು ಕರೆದಿದ್ದರು. ಈ ವರ್ಷದ ಆರಂಭದಲ್ಲಿ, ಸಚಿನ್ ಪೈಲಟ್ ಭ್ರಷ್ಟಾಚಾರದ ಬಗ್ಗೆ ತಮ್ಮದೇ ಸರ್ಕಾರವನ್ನು ಪ್ರಶ್ನಿಸಿ ಯಾತ್ರೆ ಕೈಗೊಂಡರು. ಆದರೆ, ಈಗ ಪ್ರಚಾರದ ವೇಳೆ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಅಶೋಕ್ ಗೆಹ್ಲೋಟ್ ಇತ್ತೀಚೆಗೆ ಪಕ್ಷದ ಸಭೆಯ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ ಸಚಿನ್ ಪೈಲಟ್ ಕೂಡ ಕಾಣಿಸಿಕೊಂಡಿದ್ದಾರೆ. “ಒಟ್ಟಿಗೆ ಗೆಲ್ಲುತ್ತೇವೆ, ಮತ್ತೊಮ್ಮೆ” ಎಂದು ಗೆಹ್ಲೋಟ್ ಬರೆದಿದ್ದಾರೆ.

ಈ ಬಾರಿ ಕಾಂಗ್ರೆಸ್ ಸರ್ಕಾರ ರಚಿಸುವುದಿಲ್ಲ ಎಂದು ಗೆಹ್ಲೋಟ್ ಅವರ ಪುತ್ರ ವೈಭವ್ ಗೆಹ್ಲೋಟ್ ಹೇಳಿಕೊಂಡಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು. “ಏನಾಯಿತು ಗೆಹ್ಲೋಟ್ ಜಿ? ನಿಮ್ಮ ಮ್ಯಾಜಿಕ್ ನಿಮ್ಮ ಮಗನ ಮೇಲೂ ಕೆಲಸ ಮಾಡುತ್ತಿಲ್ಲವೇ? ಸಿಎಂ ಮಗನ ಕನಸನ್ನು ನೀವು ಈಡೇರಿಸುವುದಿಲ್ಲವೇ” ಎಂದು ಮೋದಿ ಕೇಳಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:50 pm, Sat, 18 November 23

ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?
ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ