AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಿದ್ದೇಕೆ ಮತದಾರ? ಇಲ್ಲಿದೆ ಕಾರಣ

Rajasthan assembly election result 2023: ಸಿಎಂ ಅಶೋಕ್ ಗೆಹ್ಲೋಟ್ ಅವರ ಅವರ ಜನಪ್ರಿಯ ಭರವಸೆಗಳನ್ನು ನಿರ್ಲಕ್ಷಿಸಿ, ರಾಜಸ್ಥಾನದ ಜನರು ಬಿಜೆಪಿ ಪರ ಮತ ಹಾಕಿದ್ದಾರೆ ಮತ್ತು ಕೇಸರಿ ಪಡೆಯನ್ನು ಗೆಲ್ಲಿಸಿದ್ದಾರೆ. ಅಷ್ಟಕ್ಕೂ ಕಾಂಗ್ರೆಸ್ ಹೀನಾಯ ಸೋಲಿಗೆ ಕಾರಣವೇನು ಎಂಬ ಪ್ರಶ್ನೆಗೆ ರಾಜಕೀಯ ವಿಶ್ಲೇಷಕರು ಹಲವು ಉತ್ತರಗಳನ್ನು ನೀಡಿದ್ದಾರೆ.

ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಿದ್ದೇಕೆ ಮತದಾರ? ಇಲ್ಲಿದೆ ಕಾರಣ
ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಿದ್ದೇಕೆ ಮತದಾರ? ಇಲ್ಲಿದೆ ಕಾರಣ
ಗಣಪತಿ ಶರ್ಮಾ
|

Updated on: Dec 03, 2023 | 3:22 PM

Share

ನವದೆಹಲಿ, ಡಿಸೆಂಬರ್ 3: ರಾಜಸ್ಥಾನ ವಿಧಾನಸಭೆ ಚುನಾವಣೆಯ (Rajasthan assembly election result 2023) ಮತ ಎಣಿಕೆ ಪ್ರಗತಿಯಲ್ಲಿದ್ದು, ಬಿಜೆಪಿ (BJP) ಬಹುಮತ ಗಳಿಸುವುದು ಬಹುತೇಕ ದೃಢಪಟ್ಟಿದೆ. ಆಡಳಿತಾರೂಢ ಕಾಂಗ್ರೆಸ್ (Congress) ಸುಮಾರು 70 ಸ್ಥಾನಗಳಲ್ಲಷ್ಟೇ ಮುನ್ನಡೆ ಕಾಯ್ದುಕೊಂಡಿದೆ. ಈ ಮೂಲಕ ಅಶೋಕ್ ಗೆಹ್ಲೋಟ್ (Ashok Gehlot) ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಜನ ಅಧಿಕಾರದಿಂದ ಕೆಳಗಳಿಸಿದ್ದಾರೆ. ಇದರೊಂದಿಗೆ, ರಾಜ್ಯದಲ್ಲಿ ಕಳೆದ 25 ವರ್ಷಗಳಿಂದ ನಡೆದುಕೊಂಡು ಬಂದ ಸಂಪ್ರದಾಯ ಮತ್ತೊಮ್ಮೆ ಮುಂದುವರೆದಿದೆ ಮತ್ತು ಕಾಂಗ್ರೆಸ್ ನಂತರ ಬಿಜೆಪಿ ಸರ್ಕಾರ ರಚನೆಯಾಗಲಿದೆ. ಆದರೆ ಈ ಬಾರಿ ಕಾಂಗ್ರೆಸ್ ತೀರಾ ಹಿಂದುಳಿದಿದೆ. ಸಿಎಂ ಅಶೋಕ್ ಗೆಹ್ಲೋಟ್ ಅವರ ಅವರ ಜನಪ್ರಿಯ ಭರವಸೆಗಳನ್ನು ನಿರ್ಲಕ್ಷಿಸಿ, ರಾಜಸ್ಥಾನದ ಜನರು ಬಿಜೆಪಿ ಪರ ಮತ ಹಾಕಿದ್ದಾರೆ ಮತ್ತು ಕೇಸರಿ ಪಡೆಯನ್ನು ಗೆಲ್ಲಿಸಿದ್ದಾರೆ. ಅಷ್ಟಕ್ಕೂ ಕಾಂಗ್ರೆಸ್ ಹೀನಾಯ ಸೋಲಿಗೆ ಕಾರಣವೇನು ಎಂಬ ಪ್ರಶ್ನೆಗೆ ರಾಜಕೀಯ ವಿಶ್ಲೇಷಕರು ಹಲವು ಉತ್ತರಗಳನ್ನು ನೀಡಿದ್ದಾರೆ.

ಕಾಂಗ್ರೆಸ್ ಆಂತರಿಕ ಕಲಹಗಳು

ರಾಜಸ್ಥಾನದಲ್ಲಿ ಕಾಂಗ್ರೆಸ್ ಸೋಲಿಗೆ ಪ್ರಮುಖ ಕಾರಣ ಪಕ್ಷದೊಳಗಿನ ಕಚ್ಚಾಟ. ಅನೇಕ ನಾಯಕರು ಬಂಡೆದ್ದಾಗ, ಭಿನ್ನಮತ ಪ್ರದರ್ಶಿಸಿದಾಗ ಗೆಹ್ಲೋಟ್ ಅವರನ್ನು ಸರಿಯಾಗಿ ನಿಭಾಯಿಸಲಿಲ್ಲ. ಪಕ್ಷದೊಳಗಿನ ಗುಂಪುಗಾರಿಕೆ ಮತ್ತು ಅನೇಕ ಬಂಡಾಯ ನಾಯಕರು ಪಕ್ಷದ ವರ್ಚಸ್ಸನ್ನು ಹಾಳು ಮಾಡಿದರು.

ಸಚಿನ್ ಪೈಲಟ್ ಮತ್ತು ಗೆಹ್ಲೋಟ್ ನಡುವಿನ ಕದನ

ಸಚಿನ್ ಪೈಲಟ್ ಮತ್ತು ಅಶೋಕ್ ಗೆಹ್ಲೋಟ್ ನಡುವಿನ ರಾಜಕೀಯ ಸಂಘರ್ಷವು ಇಡೀ ದೇಶದಲ್ಲಿ ಚರ್ಚೆಯ ವಿಷಯವಾಗಿತ್ತು. ಇಬ್ಬರೂ ನಾಯಕರು ಜವಾಬ್ದಾರಿ ಮರೆತು ಪರಸ್ಪರ ಹೋರಾಟದತ್ತ ಹೆಚ್ಚು ಗಮನಹರಿಸುತ್ತಿರುವುದು ಕಂಡುಬಂದಿತ್ತು. ಸರ್ಕಾರ ರಚನೆಯಾದ ತಕ್ಷಣ ಇಬ್ಬರ ನಡುವಿನ ಜಟಾಪಟಿ ಶುರುವಾಗಿದ್ದು ಮುಗಿಯುವ ಲಕ್ಷಣ ಕಾಣಿಸಲೇ ಇಲ್ಲ. ಹಲವು ಬಾರಿ ಹೈಕಮಾಂಡ್ ಇಬ್ಬರ ಮನವೊಲಿಸಲು ಪ್ರಯತ್ನಿಸಿದರೂ, ಸ್ವತಃ ರಾಹುಲ್ ಗಾಂಧಿ ಕೂಡ ಚುನಾವಣಾ ಪ್ರಚಾರದ ವೇಳೆ ಇಬ್ಬರನ್ನೂ ಒಟ್ಟಿಗೆ ಕರೆತಂದು ಪಕ್ಷದಲ್ಲಿ ಎಲ್ಲವೂ ಚೆನ್ನಾಗಿದೆ ಎಂಬ ಸಂದೇಶ ರವಾನಿಸಲು ಯತ್ನಿಸಿದರೂ ಅವರ ಮನಸು ಒಂದಾಗಲಿಲ್ಲ. ಇದು ಜನರಲ್ಲಿ ಪಕ್ಷದ ಬಗ್ಗೆ ಭರವಸೆ ಹೊರಟುಹೋಗಲು ಕಾರಣವಾಯಿತು.

ಅಶೋಕ್ ಗೆಹ್ಲೋಟ್ ಅಹಂಕಾರ

ರಾಜಸ್ಥಾನದಲ್ಲಿ ಕಾಂಗ್ರೆಸ್ ಸೋಲಿಗೆ ಸಿಎಂ ಅಶೋಕ್ ಗೆಹ್ಲೋಟ್ ಅವರ ದುರಹಂಕಾರವೂ ಕಾರಣ ಎನ್ನಲಾಗುತ್ತಿದೆ. ಅವರ ಅತಿಯಾದ ಆತ್ಮವಿಶ್ವಾಸ ಮತ್ತು ದುರಹಂಕಾರ ಅವರನ್ನು ಅಧಿಕಾರದಿಂದ ಕೆಳಗಿಳಿಸಿತು ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಗೆಹ್ಲೋಟ್ ಅವರ ಸಹೋದ್ಯೋಗಿಗಳೇ ಅವರನ್ನು ದುರಹಂಕಾರಿ ಎಂದು ಆರೋಪಿಸಿದ್ದರು. ಕಳೆದ ವರ್ಷ ಸರ್ಕಾರ ರಚನೆಯಾದಾಗಿನಿಂದ ಕಾಂಗ್ರೆಸ್​ನ ಅನೇಕ ಶಾಸಕರು ತಮ್ಮ ಅಭಿಪ್ರಾಯಗಳನ್ನು ಸಿಎಂ ಕೇಳುತ್ತಿಲ್ಲ ಎಂದು ಆರೋಪಿಸಿದ್ದರು.

ಮಹಿಳೆಯರ ಮೇಲಿನ ದೌರ್ಜನ್ಯಗಳು

ರಾಜಸ್ಥಾನ ಚುನಾವಣೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕೂಡ ಪ್ರಮುಖ ವಿಷಯವಾಗಿತ್ತು. ಮಹಿಳೆಯರ ಮೇಲಿನ ಅನೇಕ ಅಪರಾಧಗಳ ಘಟನೆಗಳು ಚರ್ಚೆಗೆ ಬಂದವು. ಇದರಿಂದಾಗಿ ಕಾಂಗ್ರೆಸ್ ಪಕ್ಷವನ್ನು ಬಿಜೆಪಿ ಮೂಲೆಗುಂಪು ಮಾಡಿತು. ಗೆಹ್ಲೋಟ್ ಸರ್ಕಾರದಲ್ಲಿ ಮಹಿಳೆಯರ ಮೇಲಿನ ಅಪರಾಧಗಳಲ್ಲಿ ರಾಜ್ಯ ಮೊದಲ ಸ್ಥಾನದಲ್ಲಿದೆ ಎಂದು ಬಿಜೆಪಿ ಬಿಂಬಿಸಿತು. ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಕೂಡ ಕೆಲವು ಘಟನೆಗಳ ಬಗ್ಗೆ ಹೇಳಿಕೆ ನೀಡದ ಕಾರಣಕ್ಕೆ ಟೀಕೆಗೆ ಗುರಿಯಾಗಿದ್ದರು.

ಇದನ್ನೂ ಓದಿ: ರಾಜಸ್ಥಾನದಲ್ಲಿ ಬಹುಮತದತ್ತ ಬಿಜೆಪಿ; ಯಾರಾಗ್ತಾರೆ ಸಿಎಂ? ಅತಂತ್ರವಾದರೆ ವಸುಂಧರಾ, ಬಹುಮತ ಬಂದರೆ ಬಾಲಕನಾಥ್ ಸಿಎಂ?

ಪ್ರಶ್ನೆ ಪತ್ರಿಕೆ ಸೋರಿಕೆ

ರಾಜಸ್ಥಾನದಲ್ಲಿ ನೇಮಕಾತಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯವು ಗೆಹ್ಲೋಟ್ ಸರ್ಕಾರದ ಮೇಲೆ ಪರಿಣಾಮ ಬೀರಿತು. ಚುನಾವಣೆಯ ಸಮಯದಲ್ಲಿ ಬಿಜೆಪಿ ಈ ವಿಷಯವನ್ನು ಪ್ರಸ್ತಾಪಿಸಿ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿತು. ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರದಲ್ಲಿ ಯುವಕರ ಕೋಪಕ್ಕೆ ಗೆಹ್ಲೋಟ್ ಗುರಿಯಾಗಬೇಕಾಯಿತು. ಗೆಹ್ಲೋಟ್ ಅವರ ಅಧಿಕಾರಾವಧಿಯಲ್ಲಿ ಕಳೆದ ಐದು ವರ್ಷಗಳ ಅವಧಿಯಲ್ಲಿ, ಹಲವು ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳು ಬೆಳಕಿಗೆ ಬಂದವು. ಬಿಜೆಪಿ ಕೂಡ ಗೆಹ್ಲೋಟ್ ಕ್ರಮ ಕೈಗೊಂಡಿಲ್ಲ ಎಂದು ಪರಿಣಾಮಕಾರಿಯಾಗಿ ಆರೋಪ ಮಾಡಿತು. ಇದು ಕೂಡ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆ ಉಂಟುಮಾಡಿತು.

ಇನ್ನಷ್ಟು ಚುನಾವಣೆ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ