Sign In

By signing in or creating an account, you agree with Associated Broadcasting Company's Terms & Conditions and Privacy Policy.

19 ಹೊಸ ಜಿಲ್ಲೆಗಳನ್ನು ಘೋಷಿಸಿದ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್; ಇದು ರಾಜಕೀಯ ನಡೆ ಎಂದ ಬಿಜೆಪಿ

ಚುನಾವಣಾ ವರ್ಷದಲ್ಲಿ ಅಶೋಕ್ ಗೆಹ್ಲೋಟ್ ಸರ್ಕಾರದ ನಡೆಯನ್ನು ಬಿಜೆಪಿ ಟೀಕಿಸಿದ್ದು , ನಿರ್ಧಾರದ ಹಿಂದಿನ ನಿಜವಾದ ಉದ್ದೇಶವು ವೈಯಕ್ತಿಕ ರಾಜಕೀಯ ಉದ್ದೇಶಗಳನ್ನು ಪೂರೈಸುವುದಾಗಿದೆ ಎಂದು ಆರೋಪಿಸಿದೆ.

19 ಹೊಸ ಜಿಲ್ಲೆಗಳನ್ನು ಘೋಷಿಸಿದ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್; ಇದು ರಾಜಕೀಯ ನಡೆ ಎಂದ ಬಿಜೆಪಿ
ಅಶೋಕ್ ಗೆಹ್ಲೋಟ್
Follow us
ರಶ್ಮಿ ಕಲ್ಲಕಟ್ಟ
|

Updated on:Mar 18, 2023 | 9:12 AM

ಜೈಪುರ: ವಿಭಾಗೀಯ ಕೇಂದ್ರ ಕಚೇರಿಯಿಂದ ದೂರದಲ್ಲಿ ವಾಸಿಸುವ ಜನರ ಅಗತ್ಯತೆಗಳನ್ನು ಪೂರೈಸಲು 19 ಹೊಸ ಜಿಲ್ಲೆಗಳು ಮತ್ತು ಇನ್ನೂ ಮೂರು ವಿಭಾಗೀಯ ಕೇಂದ್ರಗಳನ್ನು ರಚಿಸುವುದಾಗಿ ರಾಜಸ್ಥಾನ ಸರ್ಕಾರ ಶುಕ್ರವಾರ ಘೋಷಿಸಿದೆ.ಚುನಾವಣಾ ವರ್ಷದಲ್ಲಿ ಅಶೋಕ್ ಗೆಹ್ಲೋಟ್ (Ashok Gehlot) ನೇತೃತ್ವದ ಕಾಂಗ್ರೆಸ್ (Congress) ಸರ್ಕಾರದ ನಡೆಯನ್ನು ಬಿಜೆಪಿ (BJP) ಟೀಕಿಸಿದ್ದು , ನಿರ್ಧಾರದ ಹಿಂದಿನ ನಿಜವಾದ ಉದ್ದೇಶವು ವೈಯಕ್ತಿಕ ರಾಜಕೀಯ ಉದ್ದೇಶಗಳನ್ನು ಪೂರೈಸುವುದಾಗಿದೆ ಎಂದು ಆರೋಪಿಸಿದೆ. ರಾಜ್ಯದಲ್ಲಿ ಕೆಲವು ಹೊಸ ಜಿಲ್ಲೆಗಳ ರಚನೆಗೆ ಬೇಡಿಕೆಗಳನ್ನು ಸ್ವೀಕರಿಸಿದ್ದೇವೆ. ಈ ಪ್ರಸ್ತಾವನೆಗಳನ್ನು ಪರಿಶೀಲಿಸಲು ನಾವು ಉನ್ನತ ಮಟ್ಟದ ಸಮಿತಿಯನ್ನು ರಚಿಸಿದ್ದು ನಾವು ಅಂತಿಮ ವರದಿಯನ್ನು ಸ್ವೀಕರಿಸಿದ್ದೇವೆ. ನಾನು ಈಗ ರಾಜ್ಯದಲ್ಲಿ ಹೊಸ ಜಿಲ್ಲೆಗಳ ರಚನೆಯನ್ನು ಘೋಷಿಸುತ್ತೇನೆ ಎಂದು ವಿಧಾನಸಭೆಯಲ್ಲಿ ರಾಜಸ್ಥಾನ ಸಿಎಂ ಹೇಳಿದ್ದಾರೆ.

ರಾಜಸ್ಥಾನವು ಭೌಗೋಳಿಕ ವಿಸ್ತೀರ್ಣದಲ್ಲಿ ದೇಶದ ಅತಿದೊಡ್ಡ ರಾಜ್ಯವಾಗಿದೆ. ಕೆಲವು ಜಿಲ್ಲಾ ಕೇಂದ್ರಕ್ಕೆ 100 ಕಿ.ಮೀ.ಗಿಂತ ಹೆಚ್ಚು ದೂರವಿದೆ. ಜನರು ಸುಲಭವಾಗಿ ಜಿಲ್ಲಾ ಕೇಂದ್ರವನ್ನು ತಲುಪಲು ಸಾಧ್ಯವಾಗುತ್ತಿಲ್ಲ ಮತ್ತು ಆಡಳಿತ ಕೂಡಾ ಪ್ರತಿಯೊಂದು ಕುಟುಂಬವನ್ನು ತಲುಪಲು ಸಾಧ್ಯವಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಗೆಹ್ಲೋಟ್ ಹೇಳಿದ್ದಾರೆ.

ರಾಜಸ್ಥಾನವು ಪ್ರಸ್ತುತ 33 ಜಿಲ್ಲೆಗಳನ್ನು ಹೊಂದಿದೆ. ಪಾಲಿ, ಸಿಕರ್ ಮತ್ತು ಬನ್ಸ್ವಾರಾ ಇಲ್ಲಿನ ಮೂರು ಹೊಸ ವಿಭಾಗೀಯ ಕೇಂದ್ರಗಳಾಗಿವೆ. ಜಿಲ್ಲೆಗಳು ಚಿಕ್ಕದಾಗಿದ್ದರೆ, ಅದು ಪರಿಣಾಮಕಾರಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ಉತ್ತಮ ಆಡಳಿತವನ್ನು ಒದಗಿಸಬಹುದು ಎಂದಿದ್ದಾರೆ ಗೆಹ್ಲೋಟ್.

ಗೆಹ್ಲೋಟ್ ರಾಜಕೀಯ ಉದ್ದೇಶಗಳನ್ನು ಪೂರೈಸಲು ಹೊಸ ಜಿಲ್ಲೆಗಳನ್ನು ರಚಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕಿ ವಸುಂಧರಾ ರಾಜೆ ಹೇಳಿದ್ದಾರೆ. ಹೊಸ ಜಿಲ್ಲೆಗಳನ್ನು ಘೋಷಿಸಿದ ವಿಧಾನವು (ರಾಜ್ಯ) ಬಜೆಟ್ ಮತ್ತು ಆರ್ಥಿಕ ರಚನೆಯನ್ನು ಅಪಾಯಕ್ಕೆ ಸಿಲುಕಿಸಿದೆ. ಹೊಸ ಜಿಲ್ಲೆಗಳನ್ನು ಘೋಷಿಸುವಲ್ಲಿ ಅನೇಕ ಪ್ರಮುಖ ಸಮಸ್ಯೆಗಳನ್ನು ಕಡೆಗಣಿಸಲಾಗಿದೆ. ಈ ಕ್ರಮವು ಹೆಚ್ಚಿನ ಆಡಳಿತಾತ್ಮಕ ಸವಾಲುಗಳನ್ನು ಉಂಟುಮಾಡುತ್ತದೆ ಎಂದಿದ್ದಾರೆ ರಾಜೆ.

ಇದನ್ನೂ ಓದಿ:Cross-border Oil Pipeline: ಭಾರತ-ಬಾಂಗ್ಲಾದೇಶ ಫ್ರೆಂಡ್​​ಶಿಪ್ ಪೈಪ್‌ಲೈನ್ ಇಂದು ಉದ್ಘಾಟನೆ; ಗಡಿಯಾಚೆಗಿನ ತೈಲ ಪೈಪ್​​ಲೈನ್​​ನ ವಿಶೇಷತೆ ಏನು?

ಹೊಸ ಜಿಲ್ಲೆಗಳನ್ನು ರಚಿಸುವ ಮೊದಲ ಹಂತದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಮತ್ತು ಮಾನವ ಸಂಪನ್ಮೂಲಕ್ಕಾಗಿ ₹ 2,000 ಕೋಟಿ ಬಜೆಟ್​​ನ್ನು ಗೆಹ್ಲೋಟ್ ಘೋಷಿಸಿದ್ದರು. ಹದಿನೈದು ವರ್ಷಗಳ ಹಿಂದೆ, ರಾಜೆ ಅವರು ಮುಖ್ಯಮಂತ್ರಿಯಾಗಿದ್ದಾಗ ಪ್ರತಾಪಗಢವನ್ನು ಜಿಲ್ಲೆಯಾಗಿ ರಚಿಸಿದ್ದರು.

ಗಂಗಾನಗರದ ಭಾಗವಾಗಿದ್ದ ಅನೂಪ್‌ಗಢ್, ಬಲೋತ್ರಾ (ಬಾರ್ಮೇರ್), ಬೇವಾರ್ (ಅಜ್ಮೀರ್), ಕೇಕ್ರಿ (ಅಜ್ಮೀರ್), ದೀಗ್ (ಭರತ್‌ಪುರ), ದೀದ್ವಾನಾ-ಕುಚಮನ್ (ನಾಗೌರ್), ದುಡು (ಜೈಪುರ), ಗಂಗಾಪುರ ನಗರ (ಸವಾಯಿ ಮಾಧೋಪುರ್), ಜೈಪುರ ಉತ್ತರ, ಜೈಪುರ ದಕ್ಷಿಣ, ಜೋಧ್‌ಪುರ ಪೂರ್ವ, ಜೋಧ್‌ಪುರ ಪಶ್ಚಿಮ , ಕೊಟ್‌ಪುತಲಿ-ಬೆಹ್ರೋರ್ (ಜೈಪುರ್-ಅಲ್ವಾರ್), ಖೇರ್ತಾಲ್ (ಅಲ್ವಾರ್), ನೀಮ್ ಕಾ ಥಾನಾ (ಸಿಕರ್), ಫಲೋಡಿ (ಜೋಧ್‌ಪುರ), ಸಲೂಂಬರ್ (ಉದೈಪುರ), ಸಂಚೋರ್ (ಜಾಲೋರ್) ಮತ್ತು ಶಾಹ್ಪುರ (ಭಿಲ್ವಾರಾ)- ಇವು ಹೊಸ ಜಿಲ್ಲೆಗಳು.

ಈ ವರ್ಷಾಂತ್ಯದಲ್ಲಿ ನಡೆಯಲಿರುವ ಚುನಾವಣೆಗೆ ಮುನ್ನ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ಈಗಾಗಲೇ ಪ್ರಚಾರವನ್ನು ಆರಂಭಿಸಿವೆ. ಎರಡೂ ಪಕ್ಷಗಳು ಕಳೆದ ತಿಂಗಳು ಗುಜ್ಜರ್ ಸಮುದಾಯವನ್ನು ಭೇಟಿ ಮಾಡಿದ್ದವು. ರಾಜ್ಯದ ಜನಸಂಖ್ಯೆಯ ಸುಮಾರು ಶೇ 9 ರಿಂದ 1 ರಷ್ಟಿರುವ ಮತ್ತು ಪೂರ್ವ ರಾಜಸ್ಥಾನದಲ್ಲಿ 40 ರಿಂದ 50 ವಿಧಾನಸಭಾ ಸ್ಥಾನಗಳಲ್ಲಿ ಗಮನಾರ್ಹವಾಗಿರುವ ಗುಜ್ಜರ್‌ಗಳು ಕಾಂಗ್ರೆಸ್ ಮತ್ತು ಬಿಜೆಪಿ ಎರಡಕ್ಕೂ ನಿರ್ಣಾಯಕ ಮತ ಬ್ಯಾಂಕ್ ಆಗಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:21 am, Sat, 18 March 23

ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ