AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿ ಯೋಜನೆ ಮರುಪರಿಶೀಲನೆ ಹೇಳಿಕೆಯಿಂದ ಕೆರಳಿದ 3 ಕ್ಷೇತ್ರದ ಮಹಿಳೆಯರು: ಕಾಂಗ್ರೆಸ್​​ಗೆ ಡ್ಯಾಮೇಜ್

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರಿಂದ ಶುರುವಾದ ಗ್ಯಾರಂಟಿ ಕದನ ಪ್ರಧಾನಿ ಮೋದಿಯವರೆಗೆ ಹೋಗಿ ನಿಂತಿದೆ. ಮಹರಾಷ್ಟ್ರ ಮತ್ತು ರಾಜ್ಯದ ಮೂರು ಕ್ಷೇತ್ರಗಳ ಚುನಾವಣೆ ಹೊತ್ತಲ್ಲೇ ಶುರುವಾದ ಯುದ್ಧ ವಿಪಕ್ಷ ಮತ್ತು ಆಡಳಿತ ಪಕ್ಷಗಳ ನಡುವೆ ವಾಗ್ಯುದ್ಧಕ್ಕೆ ಕಾರಣವಾಗಿದೆ. ಡಿಕೆ ಶಿವಕುಮಾರ್​ ಅವರ ಹೇಳಿಕೆ ಮೂರು ವಿಧಾನಸಭಾ ಕ್ಷೇತ್ರದಲ್ಲಿ ಮಹಿಳಾ ಮತದಾರರನ್ನು ಕೆರಳಿಸಿದೆ.

ಶಕ್ತಿ ಯೋಜನೆ ಮರುಪರಿಶೀಲನೆ ಹೇಳಿಕೆಯಿಂದ ಕೆರಳಿದ 3 ಕ್ಷೇತ್ರದ ಮಹಿಳೆಯರು: ಕಾಂಗ್ರೆಸ್​​ಗೆ ಡ್ಯಾಮೇಜ್
ಶಕ್ತಿ ಯೋಜನೆ
ಪ್ರಸನ್ನ ಗಾಂವ್ಕರ್​
| Updated By: ವಿವೇಕ ಬಿರಾದಾರ|

Updated on:Nov 02, 2024 | 1:11 PM

Share

ಬೆಂಗಳೂರು, ನವೆಂಬರ್​ 02: ಶಕ್ತಿ ಯೋಜನೆಯ (Shakti Yojana) ಮರುಶೀಲನೆ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ (DK Shivakumar) ಅವರು ಕೊಟ್ಟ ಹೇಳಿಕೆ ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾಡಿದ್ದ ಪಾಠವಂತೂ ಬಿಜೆಪಿ ನಾಯಕರಿಗೆ ಬ್ರಹ್ಮಾಸ್ತ್ರವನ್ನೇ ತಂದುಕೊಟ್ಟಿದೆ. ಗ್ಯಾರಂಟಿಯಿಂದ ದಿವಾಳಿ ಎನ್ನುವ ಶಬ್ಧ ಯಾವಾಗ ಮಲ್ಲಿಕಾರ್ಜುನ್​ ಖರ್ಗೆ ಅವರ ಬಾಯಲ್ಲಿ ಯಾವಾಗ ಬಂತೋ ಪ್ರಧಾನಿ ಮೋದಿ ಅವರು ಅಖಾಡಕ್ಕೆ ಧುಮುಕಿದ್ದರು. ಅವಾಸ್ತವಿಕ ಭರವಸೆಗಳನ್ನು ನೀಡಿ ಅದನ್ನ ಪೂರೈಸುವುದು ಅಸಾಧ್ಯ ಮತ್ತು ಕಠಿಣ ಎನ್ನುವುದನ್ನ ಕಾಂಗ್ರೆಸ್ ಈಗ ಅರಿತುಕೊಳ್ಳುತ್ತಿದೆ ಎಂದು ಟ್ವೀಟ್ ಮಾಡಿ ಲೇವಡಿ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು ಗರಂ ಆಗಿದ್ದಾರೆ. ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿಯವರು ರಾಜಕೀಯ ಪುಡಾರಿ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಐದು ಯೋಜನೆಗಳ ಪೈಕಿ ಗೊಂದಲವಿಲ್ಲದೆ, ಸರಾಗವಾಗಿ ನಡೆಯುತ್ತಿರುವುದೇ ಶಕ್ತಿ ಯೋಜನೆ ಮಾತ್ರ. ಈ ಯೋಜನೆ ಮರುಪರಿಶೀಲನೆ ನಡೆಸುತ್ತೇವೆ ಎಂಬ ಮಾತುಗಳು, ಕಾಂಗ್ರೆಸ್​ಗೆ ಮುಜುಗರ ತಂದಿದೆ. ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಮಹಿಳಾ ಮತದಾರರು ನಿರ್ಣಾಯಕರಾಗಿದ್ದಾರೆ. ಉತ್ತರ ಕರ್ನಾಟಕ ಭಾಗದ ಮಹಿಳೆಯರಿಗೆ ಶಕ್ತಿ ಯೋಜನೆ ಹೆಚ್ಚು ಅನುಕೂಲವಾಗಿದೆ. ತೀರ್ಥ ಕ್ಷೇತ್ರಗಳಿಗೆ ಹೆಚ್ಚೆಚ್ಚು ಮಹಿಳೆಯರು ಹರಿದು ಬರಲು ಕಾರಣವಾಗಿದೆ.

ಇದನ್ನೂ ಓದಿ: ಖರ್ಗೆ ಖಡಕ್ ಸೂಚನೆ ನಂತರವೂ ಶಕ್ತಿ ಯೋಜನೆ ನಡೆಸೋದು ಸ್ವಲ್ಪ ಕಷ್ಟವಾಗ್ತಿದೆ ಎಂದ ರಾಮಲಿಂಗಾ ರೆಡ್ಡಿ

ಆದರೆ, ಡಿಸಿಎಂ ಡಿಕೆ ಶಿವಕುಮಾರ್​ ಅವರ ಹೇಳಿಕೆಯಿಂದ ಶಕ್ತಿ ಯೋಜನೆ ಮುಂದುವರೆಯುವ ಬಗ್ಗೆ ಮಹಿಳೆಯರಲ್ಲಿ ಅನುಮಾನ ಹುಟ್ಟಿದೆ. ಇದು ಕಾಂಗ್ರೆಸ್​ಗೆ ಬರುವ ಮತಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ. ಡಿಕೆ ಶಿವಕುಮಾರ್ ಅವರ ಹೇಳಿಕೆಗೆ ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಮಹಿಳೆಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಗೆ ಚುನಾವಣೆ ಯಲ್ಲಿ ಗ್ಯಾರಂಟಿ ಬಿಟ್ಟು ಬೇರೆ ಅಸ್ತ್ರವೇ ಇಲ್ಲದಂತಾಗಿತ್ತು. ಇದೀಗ ಕಾಂಗ್ರೆಸ್ ಅದೇ ವಿಚಾರದಲ್ಲಿ ಎಡವಟ್ಟು ಮಾಡಿಕೊಂಡಿದೆ. ನೆರೆ ರಾಜ್ಯದ ಚುನಾವಣೆ ಮೇಲೂ ಗ್ಯಾರಂಟಿ ಮರುಪರಿಶೀಲನೆ ಹೇಳಿಕೆ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ.

ಚುನಾವಣೆ ಹೊತ್ತಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೇಳಿಕೆ ಪಕ್ಷಕ್ಕೆ ಸಾಕಷ್ಟು ಹಾನಿಯಂತು ಉಂಟು ಮಾಡಲಿದೆ ಎಂದು ಹೇಳಲಾಗುತ್ತಿದೆ. ಈ ಹಾನಿಯನ್ನು ತಪ್ಪಿಸಲು ರಾಜ್ಯ ಕಾಂಗ್ರೆಸ್​ ನಾಯಕರು ಮೂರು ಕ್ಷೇತ್ರದಲ್ಲಿ ಸಾಕಷ್ಟು ಹರಸಾಹಸ ಪಡುತ್ತಿದ್ದಾರೆ. ಆದರೆ ಎಷ್ಟರ ಮಟ್ಟಿಗೆ ವರ್ಕ್​​ಔಟ್​ ಆಗುತ್ತೆ ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:08 pm, Sat, 2 November 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ