AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಸೂರತ್​ನ ಎಎಪಿ ಅಭ್ಯರ್ಥಿ ಕಾಂಚನ್ ಜರಿವಾಲಾ ನಾಪತ್ತೆ, ಬಿಜೆಪಿ ವಿರುದ್ಧ ಅಪಹರಣ ಆರೋಪ

ಬಿಜೆಪಿ ವಿರುದ್ಧ ಎಎಪಿಯ ಅಪಹರಣ ಆರೋಪ ಮಾಡಿದೆ. ಗುಜರಾತ್ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಗುದ್ದಾಟ ಶುರುವಾಗಿದೆ. ಎಎಪಿ ಸೂರತ್ (ಪೂರ್ವ) ಅಭ್ಯರ್ಥಿ ಕಾಂಚನ್ ಜರಿವಾಲಾ ಅವರನ್ನು ಬಿಜೆಪಿ ಅಪಹರಿಸಿದೆ, ಅವರು ಮತ್ತು ಅವರ ಕುಟುಂಬ ನಿನ್ನೆಯಿಂದ ನಾಪತ್ತೆಯಾಗಿದೆ ಎಂದು ಮನೀಶ್ ಸಿಸೋಡಿಯಾ ಆರೋಪಿಸಿದ್ದಾರೆ.

Breaking News: ಸೂರತ್​ನ ಎಎಪಿ ಅಭ್ಯರ್ಥಿ ಕಾಂಚನ್ ಜರಿವಾಲಾ ನಾಪತ್ತೆ, ಬಿಜೆಪಿ ವಿರುದ್ಧ ಅಪಹರಣ ಆರೋಪ
ಮನೀಶ್ ಸಿಸೋಡಿಯಾ
TV9 Web
| Edited By: |

Updated on:Nov 16, 2022 | 1:19 PM

Share

ಗುಜರಾತ್:  ಬಿಜೆಪಿ ವಿರುದ್ಧ ಎಎಪಿಯ ಅಪಹರಣ ಆರೋಪ ಮಾಡಿದೆ. ಗುಜರಾತ್ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಗುದ್ದಾಟ ಶುರುವಾಗಿದೆ. ಎಎಪಿ ಸೂರತ್ (ಪೂರ್ವ) ಅಭ್ಯರ್ಥಿ ಕಾಂಚನ್ ಜರಿವಾಲಾ ಅವರನ್ನು ಬಿಜೆಪಿ ಅಪಹರಿಸಿದೆ, ಅವರು ಮತ್ತು ಅವರ ಕುಟುಂಬ ನಿನ್ನೆಯಿಂದ ನಾಪತ್ತೆಯಾಗಿದೆ ಎಂದು ಮನೀಶ್ ಸಿಸೋಡಿಯಾ ಆರೋಪಿಸಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ತಮ್ಮ ಪಕ್ಷದ (ಎಎಪಿ) ಗುಜರಾತ್‌ ಅಭ್ಯರ್ಥಿ ನಿನ್ನೆಯಿಂದ ಅವರ ಕುಟುಂಬದೊಂದಿಗೆ ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಿದೆ. ಬಿಜೆಪಿ ಎಎಪಿ ಅಭ್ಯರ್ಥಿ ಕಾಂಚನ್ ಜರಿವಾಲಾ ಅವರನ್ನು ಅಪಹರಿಸಿದೆ. ಎಂದು ಮನೀಶ್ ಸಿಸೋಡಿಯಾ ಇಂದು ಹೇಳಿದ್ದಾರೆ. ಕಾಂಚನ್ ಜರಿವಾಲಾ ಅವರು ಸೂರತ್‌ನಿಂದ (ಪೂರ್ವ) ಎಎಪಿ ಅಭ್ಯರ್ಥಿಯಾಗಿದ್ದಾರೆ.

ಗುಜರಾತ್ ಚುನಾವಣೆಯಲ್ಲಿ ಸೋಲುವ ಭೀತಿಯಲ್ಲಿ ಬಿಜೆಪಿ ಇದೆ. ಅದಕ್ಕಾಗಿ ಎಎಪಿ ಅಭ್ಯರ್ಥಿಯನ್ನು ಅಪಹರಿಸಲು ಮುಂದಾಗಿದೆ ಎಂದು ಸಿಸೋಡಿಯಾ ಹೇಳಿದರು. ನಿನ್ನೆಯಿಂದ ಕಾಂಚನ್ ಹಾಗೂ ಅವರ ಕುಟುಂಬದವರು ನಾಪತ್ತೆಯಾಗಿದ್ದಾರೆ. ನಾಮಪತ್ರ ಪರಿಶೀಲನೆಗೆ ತೆರಳಿದ್ದರು. ನಾಮಪತ್ರ ಪರಿಶೀಲನೆ ಮುಗಿಸಿ ಕಚೇರಿಯಿಂದ ಹೊರ ಬಂದ ಕ್ಷಣದಲ್ಲೇ ಬಿಜೆಪಿಯ ಗೂಂಡಾಗಳು ಅವರನ್ನು ಕರೆದೊಯ್ದಿದ್ದಾರೆ. ಈಗ ಆತ ಎಲ್ಲಿದ್ದಾನೆ ಎಂಬುದು ಗೊತ್ತಾಗಿಲ್ಲ ಎಂದು ಮನೀಶ್ ಸಿಸೋಡಿಯಾ ಹೇಳಿದ್ದಾರೆ. ಇದು ಅಪಾಯಕಾರಿ, ಇದು ಕೇವಲ ಅಭ್ಯರ್ಥಿಯಲ್ಲ ಪ್ರಜಾಪ್ರಭುತ್ವದ ಅಪಹರಣವಾಗಿದೆ ಎಂದು ಅವರು ಆರೋಪಿಸಿದ್ದಾರೆ. ಹಲವು ಎಎಪಿ ನಾಯಕರು ಈ ಆರೋಪವನ್ನು ಟ್ವೀಟ್ ಮಾಡಿದ್ದಾರೆ.

ಸೂರತ್ (ಪೂರ್ವ), ಕಾಂಚನ್ ಜರಿವಾಲಾ ಮತ್ತು ಅವರ ಕುಟುಂಬ ನಿನ್ನೆಯಿಂದ ನಾಪತ್ತೆಯಾಗಿದೆ, ಮೊದಲು ಬಿಜೆಪಿ ಅವರ ನಾಮಪತ್ರವನ್ನು ತಿರಸ್ಕರಿಸಲು ಪ್ರಯತ್ನಿಸಿತು. ಆದರೆ ಅವರ ನಾಮಪತ್ರವನ್ನು ಸ್ವೀಕರಿಸಲಾಯಿತು. ನಂತರ, ಅವರು ತಮ್ಮ ನಾಮಪತ್ರವನ್ನು ಹಿಂತೆಗೆದುಕೊಳ್ಳುವಂತೆ ಒತ್ತಡ ಹೇರುತ್ತಿದ್ದರು. ಈಗ ಅವರನ್ನು ಕಿಡ್ನಾಪ್ ಮಾಡಲಾಗಿದೆಯೇ? ಎಂದು ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಎಎಪಿ ಆರೋಪಕ್ಕೆ ಬಿಜೆಪಿ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಗುಜರಾತ್‌ನಲ್ಲಿ 27 ವರ್ಷಗಳಿಂದ ಅಧಿಕಾರದಲ್ಲಿರುವ ಆಡಳಿತ ಪಕ್ಷವು ಈ ಬಾರಿ ಎಎಪಿಯಿಂದ ತುಂಬಾ ಬಲಯುತವಾದ ಪೈಪೋಟಿಯನ್ನು ನೀಡುತ್ತಿದೆ. ಇದು ರಾಜ್ಯದಲ್ಲಿ ಸಾಂಪ್ರದಾಯಿಕ ಬಿಜೆಪಿ ಮತ್ತು ಕಾಂಗ್ರೆಸ್ ಪೈಪೋಟಿಯನ್ನು ತ್ರಿಕೋನ ಸ್ಪರ್ಧೆಯಾಗಿ ಪರಿವರ್ತಿಸಿದೆ.

Published On - 12:09 pm, Wed, 16 November 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ