AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನ ಕಾಂಗ್ರೆಸ್ ಅಭ್ಯರ್ಥಿ ಮಾಧವ ರಾವ್ ಕೊವಿಡ್​ನಿಂದ ಸಾವು; ಅಭ್ಯರ್ಥಿ ಗೆದ್ದರೆ ಉಪ ಚುನಾವಣೆ

Tamil Nadu Assembly Elections 2021: ಕಳೆದ ತಿಂಗಳು ಕೊರೊನಾವೈರಸ್ ಸೋಂಕು ತಗುಲಿದ್ದ ಮಾಧವ ರಾವ್ ಅವರು ಆಸ್ಪತ್ರೆ ದಾಖಲಾಗಿದ್ದು, ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಚುನಾವಣೆ ಮುಗಿದ ನಂತರ ಅವರು ಸಾವಿಗೀಡಾಗಿರುವುದರಿಂದ ಮರು ಮತದಾನ ನಡೆಯುವುದಿಲ್ಲ.

ತಮಿಳುನಾಡಿನ ಕಾಂಗ್ರೆಸ್ ಅಭ್ಯರ್ಥಿ ಮಾಧವ ರಾವ್ ಕೊವಿಡ್​ನಿಂದ ಸಾವು; ಅಭ್ಯರ್ಥಿ ಗೆದ್ದರೆ ಉಪ ಚುನಾವಣೆ
ಮಾಧವ ರಾವ್
ರಶ್ಮಿ ಕಲ್ಲಕಟ್ಟ
|

Updated on:Apr 11, 2021 | 5:55 PM

Share

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಶ್ರೀವಿಲ್ಲಿಪುತೂರ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಪಿಎಸ್​ಡಬ್ಲ್ಯು ಮಾಧವ ರಾವ್ ಭಾನುವಾರ ಮೃತಪಟ್ಟಿದ್ದಾರೆ. ಕಳೆದ ತಿಂಗಳು ಕೊರೊನಾವೈರಸ್ ಸೋಂಕು ತಗುಲಿದ್ದ ರಾವ್ ಎರಡು ವಾರಗಳ ಹಿಂದೆ ಆಸ್ಪತ್ರೆ ದಾಖಲಾಗಿದ್ದು, ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಚುನಾವಣೆ ಮುಗಿದ ನಂತರ ಅವರು ಸಾವಿಗೀಡಾಗಿರುವುದರಿಂದ ಮರು ಮತದಾನ ನಡೆಯುವುದಿಲ್ಲ. ಒಂದು ವೇಳೆ ಅವರು ವಿರುಧುನಗರ್ ಜಿಲ್ಲೆಯ ಶ್ರೀವಿಲ್ಲಿಪುತೂರ್ ವಿಧಾನಸಭಾ ಕ್ಷೇತ್ರದಲ್ಲಿ ಮಾಧವ ರಾವ್ ಗೆದ್ದರೆ ಅಲ್ಲಿ ಉಪ ಚುನಾವಣೆ ನಡೆಯಲಿದೆ ಎಂದು ಮೂಲಗಳು ಹೇಳಿವೆ.

ಈ ಬಗ್ಗೆ ಟ್ವೀಟ್ ಮಾಡಿದ ತಮಿಳುನಾಡು ಮತ್ತು ಪುದುಚೇರಿ ಎಐಸಿಸಿಸಿ ಉಸ್ತುವಾರಿ ವಹಿಸಿರುವ ಕಾರ್ಯದರ್ಶಿ ಸಂಜಯ್ ದತ್, ತಮಿಳುನಾಡಿನ ಕಾಂಗ್ರೆಸ್ ನಾಯಕ, ಶ್ರೀವಿಲ್ಲಿಪುತೂರ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಮಾಧವರಾವ್ ಅವರು ಕೋವಿಡ್ ನಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಅತೀವ ದುಃಖವಾಹಿದೆ ಎಂದಿದೆ. ಅವರ ಕುಟುಂಬಕ್ಕೆ ಸಂತಾಪಗಳು. ನಾವು ಅವರ ದುಃಖದಲ್ಲಿ ಭಾಗಿಯಾಗುತ್ತೇವೆ. ರಾವ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕಾರ್ಯದರ್ಶಿ ಟ್ವೀಟ್ ಮಾಡಿದ್ದಾರೆ.

ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ತಮಿಳುನಾಡಿನ ಕೃಷಿ ಸಚಿವ ದೊರೈಕಣ್ಣು ಕೊವಿಡ್ ನಿಂದ ಮೃತಪಟ್ಟಿದ್ದರು. ಅವರಿಗೆ 72 ವರ್ಷ ವಯಸ್ಸಾಗಿತ್ತು.ಇದಕ್ಕಿಂತ ಮುಂಚೆ ಡಿಎಂಕೆ ಶಾಸಕ ಜೆ.ಅನ್ಬಳಗನ್ ಮತ್ತು ಕಾಂಗ್ರೆಸ್ ಸಂಸದ ಎಚ್. ವಸಂತ ಕುಮಾರ್ ಕೊವಿಡ್ ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದರು.

ಕೊರೊನಾ ಎರಡನೇ ಅಲೆ ಪರಿಣಾಮ ತಮಿಳುನಾಡಿನಲ್ಲಿ 6,000 ಹೊಸ ಕೊವಿಡ್ ಪ್ರಕರಣಗಳು ವರದಿಯಾಗಿದೆ. ಶನಿವಾರ 23 ಮಂದಿ ಸಾವಿಗೀಡಾಗಿದ್ದಾರೆ. ಸಕ್ರಿಯ ಪ್ರಕರಣಳ ಸಂಖ್ಯೆ 37,673 ಆಗಿದ್ದು 1,952 ಮಂದಿ ಚೇತರಿಸಿದ್ದಾರೆ . ಚೆನ್ನೈನಲ್ಲಿ 1,977 ಹೊಸ ಪ್ರಕರಣಗಳು ವರದಿ ಆಗಿದ್ದು ಇಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 14,382ಕ್ಕೇರಿದೆ. ಚೆಂಗಲ್​ಪೇಟ್​ನಲ್ಲಿ 615ಹೊಸ ಪ್ರಕರಣಗಳು ವರದಿ ಆಗಿದ್ದು ತಿರುವಲ್ಲೂರ್​ನಲ್ಲಿ 212 ಹೊಸ ಕೊವಿಡ್ ಪ್ರಕರಣ ಪತ್ತೆಯಾಗಿದೆ.

ತಮಿಳುನಾಡಿನ 234ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 6 ರಂದು ಚುನಾವಣೆ ನಡೆದಿದ್ದು, ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: Coronavirus India Update: ಭಾರತದಲ್ಲಿ ಹೊಸ ಕೊವಿಡ್ ಪ್ರಕರಣಗಳ ಸಂಖ್ಯೆ 1.52ಲಕ್ಷ, ಇಂದಿನಿಂದ ಲಸಿಕೆ ಉತ್ಸವ

( Tamil Nadu Srivilliputhur constituency Congress Candidate Madhava Rao Dies Of Covid 19)

Published On - 5:35 pm, Sun, 11 April 21

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ