AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ವಿಧಾನಸಭಾ ಚುನಾವಣೆ: ಎಐಎಡಿಎಂಕೆ ಮೊದಲ ಪಟ್ಟಿ ಪ್ರಕಟ, ಸಿಎಂ ಪಳನಿಸ್ವಾಮಿ ಎಡಪ್ಪಾಡಿಯಿಂದ ಸ್ಪರ್ಧೆ

Tamilnadu Elections: ಸೇಲಂ ಜಿಲ್ಲೆಯ ಎಡಪ್ಪಾಡಿ ಕ್ಷೇತ್ರದಿಂದ ಮುಖ್ಯಮಂತ್ರಿ ಪಳನಿಸ್ವಾಮಿ, ತೇನಿ ಜಿಲ್ಲೆಯ ಬೋಡಿನಯಾಕ್ಕನೂರ್ ಕ್ಷೇತ್ರದಿಂದ ಉಪಮುಖ್ಯಮಂತ್ರಿ ಓ.ಪನ್ನೀರ್​ಸೆಲ್ವಂ ಮತ್ತು ರಾಯಪುರಮ್ ಕ್ಷೇತ್ರದಿಂದ ಸಚಿವ ಜಯಕುಮಾರ್ ಸ್ಪರ್ಧಿಸಲಿದ್ದಾರೆ.

ತಮಿಳುನಾಡು ವಿಧಾನಸಭಾ ಚುನಾವಣೆ: ಎಐಎಡಿಎಂಕೆ ಮೊದಲ ಪಟ್ಟಿ ಪ್ರಕಟ, ಸಿಎಂ ಪಳನಿಸ್ವಾಮಿ ಎಡಪ್ಪಾಡಿಯಿಂದ ಸ್ಪರ್ಧೆ
ತಮಿಳುನಾಡಲ್ಲಿ ಮತ್ತೆ ಅಧಿಕಾರಕ್ಕೇರಲಿದೆಯೇ ಎಐಎಡಿಎಂಕೆ
Ghanashyam D M | ಡಿ.ಎಂ.ಘನಶ್ಯಾಮ
|

Updated on:Mar 05, 2021 | 3:17 PM

Share

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಎಐಎಡಿಎಂಕೆ ಪಕ್ಷದ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ ಆರು ಪ್ರಭಾವಿ ನಾಯಕರ ಕ್ಷೇತ್ರಗಳನ್ನು ಅಂತಿಮಗೊಳಿಸಲಾಗಿದೆ. ಶಶಿಕಲಾ ರಾಜಕೀಯ ನಿವೃತ್ತಿ ಘೋಷಣೆಯ ನಂತರ ತಮಿಳುನಾಡು ರಾಜಕಾರಣ ದೇಶದ ಗಮನ ಸೆಳೆದಿತ್ತು. ಶಶಿಕಲಾ ನಿರ್ಧಾರ ಎಐಎಡಿಎಂಕೆ-ಬಿಜೆಪಿ ಮೈತ್ರಿಕೂಟದ ಹಿತಕ್ಕೆ ಪೂರಕವಾಗಬಹುದು ಎಂಬ ವಿಶ್ಲೇಷಣೆಗಳು ಚಾಲ್ತಿಗೆ ಬಂದಿದ್ದವು.

ಸೇಲಂ ಜಿಲ್ಲೆಯ ಎಡಪ್ಪಾಡಿ ಕ್ಷೇತ್ರದಿಂದ ಮುಖ್ಯಮಂತ್ರಿ ಪಳನಿಸ್ವಾಮಿ, ತೇನಿ ಜಿಲ್ಲೆಯ ಬೋಡಿನಯಾಕ್ಕನೂರ್ ಕ್ಷೇತ್ರದಿಂದ ಉಪಮುಖ್ಯಮಂತ್ರಿ ಓ.ಪನ್ನೀರ್​ಸೆಲ್ವಂ ಸ್ಪರ್ಧಿಸಲಿದ್ದಾರೆ.

ಮೀನುಗಾರಿಕೆ ಸಚಿವ ಡಿ.ಜಯಕುಮಾರ್ ರಾಯಪುರಂ ಕ್ಷೇತ್ರದಿಂದ ಮತ್ತು ಮತ್ತು ಕಾನೂನು ಸಚಿವ ಸಿ.ವಿ.ಷಣ್ಮುಗಂ ಉತ್ತರ ತಮಿಳುನಾಡಿನ ವಿಲ್ಲುಪುರಂ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಶಾಸಕರಾದ ಎಸ್​.ಪಿ.ಷಣ್ಮುಗನಾಥನ್ ಮತ್ತು ಎಸ್.ತೆನ್​ಮೊಳಿ ಅವರಿಗೆ ಕ್ರಮವಾಗಿ ಶ್ರೀವೈಕುಂಠಂ ಮತ್ತು ನಿಲಕ್ಕೋಟಿ (ಮೀಸಲು) ಕ್ಷೇತ್ರಗಳನ್ನು ಘೋಷಿಸಲಾಗಿದೆ.

ತಮಿಳುನಾಡಿನಲ್ಲಿ ಏಪ್ರಿಲ್ 6ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ.

ಶಶಿಕಲಾ ರಾಜಕೀಯ ನಿವೃತ್ತಿ ಘೋಷಣೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಅತ್ಯಾಪ್ತ ಗೆಳತಿಯಾಗಿದ್ದ ವಿ.ಕೆ.ಶಶಿಕಲಾ ಬುಧವಾರ (ಮಾರ್ಚ್ 3) ಸಕ್ರಿಯ ರಾಜಕಾರಣದಿಂದ ನಿವೃತ್ತರಾಗುವುದಾಗಿ ಘೋಷಿಸಿದ್ದರು. ತಮಿಳುನಾಡು ವಿಧಾನಸಭೆ ಚುನಾವಣೆಗೆ ಸುಮಾರು 30 ದಿನ ಬಾಕಿಯಿರುವಾಗ ಈ ಘೋಷಣೆ ಹೊರಬಿದ್ದಿರುವುದು ಆಡಳಿತಾರೂಢ ಎಐಎಡಿಎಂಕೆಯ ಕೆಲ ನಾಯಕರಿಗೆ ನೆಮ್ಮದಿ ತಂದಿತ್ತು. ಆದರೆ ಶಶಿಕಲಾ ಬೆಂಬಲಿಗರಲ್ಲಿ ‘ಚಿನ್ನಮ್ಮ’ನ ಈ ಹಠಾತ್ ನಿರ್ಧಾರ ಅಚ್ಚರಿ ಮೂಡಿಸಿತ್ತು.

ರಾಜಕೀಯ ನಿವೃತ್ತಿಯ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದ ಶಶಿಕಲಾ ‘ನಾನು ಅಧಿಕಾರ ಅಥವಾ ಹುದ್ದೆಗಾಗಿ ಎಂದೂ ಹಾತೊರೆಯಲಿಲ್ಲ. ಎಐಎಡಿಎಂಕೆ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಿ, ಡಿಎಂಕೆಯನ್ನು ಅಧಿಕಾರದಿಂದ ದೂರ ಇಡಬೇಕು. ಅಮ್ಮನ (ಜಯಲಲಿತಾ) ಸುವರ್ಣ ಆಡಳಿತವನ್ನು ಮರುಸ್ಥಾಪಿಸಬೇಕು’ ಎಂದು ಶಶಿಕಲಾ ಪತ್ರದಲ್ಲಿ ಕರೆನೀಡಿದ್ದರು.

ಇದನ್ನೂ ಓದಿ: ಸಕ್ರಿಯ ರಾಜಕಾರಣಕ್ಕೆ ಶಶಿಕಲಾ ನಟರಾಜನ್ ಗುಡ್​ ಬೈ: ತಮಿಳುನಾಡು ರಾಜಕಾರಣದಲ್ಲಿ ಅಚ್ಚರಿಯ ಬೆಳವಣಿಗೆ

ಇದನ್ನೂ ಓದಿ: Sasikala ವ್ಯಕ್ತಿ-ವ್ಯಕ್ತಿತ್ವ | ಮುಖ್ಯಮಂತ್ರಿ ಗಾದಿ ಸನಿಹದಲ್ಲಿದ್ದಾಗ ಸೆರೆಮನೆಗೆ ಬಂದ ಶಶಿಕಲಾ ಸವೆಸಿದ ಹಾದಿ ಕಲ್ಲುಮುಳ್ಳಿನದು

Published On - 3:00 pm, Fri, 5 March 21

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ