AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ಸರ್ಕಾರ ರಚನೆಯಾದರೆ ನಾವು ಶೇ 4 ಮುಸ್ಲಿಂ ಮೀಸಲಾತಿಯನ್ನು ತೆಗೆದುಹಾಕುತ್ತೇವೆ: ಅಮಿತ್ ಶಾ

ನಮ್ಮ ಸರ್ಕಾರ ರಚನೆಯಾದ ತಕ್ಷಣ ನಾವು 4% ಮುಸ್ಲಿಂ ಮೀಸಲಾತಿಯನ್ನು ತೆಗೆದುಹಾಕುತ್ತೇವೆ ಮತ್ತು ಅದನ್ನು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗೆ ಹಂಚುತ್ತೇವೆ ಎಂದು ನಾವು ನಿರ್ಧರಿಸಿದ್ದೇವೆ. ಕೆಸಿಆರ್ ಓವೈಸಿಗೆ ಹೆದರಿ ಹೈದರಾಬಾದ್ ವಿಮೋಚನಾ ದಿನವನ್ನು ಆಚರಿಸುವುದಿಲ್ಲ. ಆದರೆ ನಾವು ಓವೈಸಿಗೆ ಹೆದರುವುದಿಲ್ಲ. ಹೈದರಾಬಾದ್ ವಿಮೋಚನಾ ದಿನವನ್ನು ರಾಜ್ಯ ದಿನವನ್ನಾಗಿ ಆಚರಿಸುತ್ತೇವೆ

ತೆಲಂಗಾಣ: ಸರ್ಕಾರ ರಚನೆಯಾದರೆ ನಾವು ಶೇ 4 ಮುಸ್ಲಿಂ ಮೀಸಲಾತಿಯನ್ನು ತೆಗೆದುಹಾಕುತ್ತೇವೆ: ಅಮಿತ್ ಶಾ
ಅಮಿತ್ ಶಾ
Follow us
ರಶ್ಮಿ ಕಲ್ಲಕಟ್ಟ
|

Updated on: Nov 20, 2023 | 10:11 PM

ಜಗ್ತಿಯಾಲ್‌ ನವೆಂಬರ್ 20: ತೆಲಂಗಾಣದ (Telangana) ಜಗ್ತಿಯಾಲ್‌ನಲ್ಲಿ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ನಾಯಕ ಅಮಿತ್ ಶಾ (Amit Shah), ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ (Asaduddin Owaisi) ಮತ್ತು ಬಿಆರ್‌ಎಸ್ ಮುಖ್ಯಸ್ಥ ಕೆ ಚಂದ್ರಶೇಖರ ರಾವ್ ಅವರು ತಮ್ಮ ಪಕ್ಷವು “ಕುಟುಂಬ ರಾಜಕೀಯ”ತೊಡಗಿದ್ದಾರೆ ಎಂದು ಹೇಳಿದ್ದಾರೆ. ಅದೇ ವೇಳೆ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಶಾ,  ಮಾಜಿ ಪ್ರಧಾನಿ (ದಿವಂಗತ) ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿ ಅವರ ಹೆಸರನ್ನೂ ಇಲ್ಲಿ ಹೇಳಿದ್ದಾರೆ.

ಬಿಆರ್ ಎಸ್, ಮಜ್ಲಿಸ್ ಮತ್ತು ಕಾಂಗ್ರೆಸ್ 2G, 3G ಮತ್ತು 4G ಪಕ್ಷಗಳು. 2ಜಿ ಎಂದರೆ ಕೆಸಿಆರ್ ಮತ್ತು ಕೆಟಿಆರ್. 3ಜಿ ಎಂದರೆ ಓವೈಸಿಯ ಅಜ್ಜ, ತಂದೆ ಮತ್ತು ಓವೈಸಿ. 4ಜಿ ಎಂದರೆ ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಮತ್ತು ರಾಹುಲ್. ಅದರಲ್ಲಿ ನಿಮ್ಮ ಸ್ಥಾನ ಎಲ್ಲಿದೆ?’’ ಎಂದು ಅಮಿತ್ ಶಾ ಹೇಳಿರುವುದಾಗಿ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

ಓವೈಸಿ ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಶಾ, ತೆಲಂಗಾಣದಲ್ಲಿ ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಂ ಸಮುದಾಯಕ್ಕೆ 4 ಪ್ರತಿಶತ ಮೀಸಲಾತಿಯನ್ನು ತಮ್ಮ ಪಕ್ಷ ತೆಗೆದುಹಾಕುತ್ತದೆ ಎಂದು ಪ್ರತಿಜ್ಞೆ ಮಾಡಿದರು.

ಕೆಸಿಆರ್ ಓವೈಸಿಗೆ ಹೆದರುತ್ತಿದ್ದರು. ಆದರೆ ಬಿಜೆಪಿ ಹೆದರುವುದಿಲ್ಲ . ಎಐಎಂಐಎಂ ನಾಯಕ ಕೆಸಿಆರ್ ಪಕ್ಷದ “ಸ್ಟೀರಿಂಗ್” ಹೊಂದಿದ್ದರು ಎಂದು ಅವರು ಹೇಳಿದರು.

“ನಮ್ಮ ಸರ್ಕಾರ ರಚನೆಯಾದ ತಕ್ಷಣ ನಾವು 4% ಮುಸ್ಲಿಂ ಮೀಸಲಾತಿಯನ್ನು ತೆಗೆದುಹಾಕುತ್ತೇವೆ ಮತ್ತು ಅದನ್ನು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗೆ ಹಂಚುತ್ತೇವೆ ಎಂದು ನಾವು ನಿರ್ಧರಿಸಿದ್ದೇವೆ. ಕೆಸಿಆರ್ ಓವೈಸಿಗೆ ಹೆದರಿ ಹೈದರಾಬಾದ್ ವಿಮೋಚನಾ ದಿನವನ್ನು ಆಚರಿಸುವುದಿಲ್ಲ. ಆದರೆ ನಾವು ಓವೈಸಿಗೆ ಹೆದರುವುದಿಲ್ಲ. ಹೈದರಾಬಾದ್ ವಿಮೋಚನಾ ದಿನವನ್ನು ರಾಜ್ಯ ದಿನವನ್ನಾಗಿ ಆಚರಿಸುತ್ತೇವೆ.ಓವೈಸಿ ತುಷ್ಟೀಕರಣದ ರಾಜಕಾರಣ ಮಾಡುತ್ತಾರೆ ಅವರ (ಕೆಸಿಆರ್) ಚುನಾವಣಾ ಚಿಹ್ನೆ ಕಾರು, ಆದರೆ ಕೆಸಿಆರ್, ಕೆಟಿಆರ್ ಮತ್ತು ಕವಿತಾ ಅವರ ಬಳಿ ಕಾರ್ ಸ್ಟೀರಿಂಗ್ ಇಲ್ಲ, ಓವೈಸಿ ಜೊತೆ ತೆಲಂಗಾಣವನ್ನು ಕುಟುಂಬ ರಾಜಕಾರಣದಿಂದ ಮುಕ್ತಗೊಳಿಸುತ್ತೇವೆ

ಕೆಸಿಆರ್ ಓವೈಸಿಗೆ ಹೆದರುತ್ತಿದ್ದಾರೆ, ಅದಕ್ಕಾಗಿಯೇ ತೆಲಂಗಾಣದಲ್ಲಿ ಹೈದರಾಬಾದ್ ವಿಮೋಚನಾ ದಿನವನ್ನು ಆಚರಿಸುವುದಿಲ್ಲ.

“ರಝಾಕರರಿಂದದ ನಮ್ಮ ವಿಮೋಚನೆಯನ್ನು ನೆನಪಿಸಿಕೊಳ್ಳಲು ನಾವು ಹೈದರಾಬಾದ್ ವಿಮೋಚನಾ ದಿನವನ್ನು ಆಚರಿಸಬೇಕಲ್ಲವೇ? ಓವೈಸಿಗೆ ಹೆದರಿ, ಕೆಸಿಆರ್ ಹೈದರಾಬಾದ್ ವಿಮೋಚನಾ ದಿನವನ್ನು ಆಚರಿಸುವುದಿಲ್ಲ. ಆದರೆ ನಾವು ಓವೈಸಿಗೆ ಹೆದರುವುದಿಲ್ಲ. ನಾವು ಇಲ್ಲಿ ಸರ್ಕಾರ ರಚಿಸಿದರೆ ತೆಲಂಗಾಣದಲ್ಲಿ ಹೈದರಾಬಾದ್ ವಿಮೋಚನಾ ದಿನವನ್ನು ರಾಜ್ಯ ದಿನವನ್ನಾಗಿ ಆಚರಿಸುತ್ತೇವೆ ಎಂದು ಕೇಂದ್ರ ಗೃಹ ಸಚಿವರು ಹೇಳಿದ್ದಾರೆ.

ಇದನ್ನೂ ಓದಿ:ತೆಲಂಗಾಣ ಚುನಾವಣೆ: ನಿಜಾಮಾಬಾದ್​ನ ಸ್ವತಂತ್ರ ಅಭ್ಯರ್ಥಿ ಆತ್ಮಹತ್ಯೆ

ಏತನ್ಮಧ್ಯೆ, ತೆಲಂಗಾಣ ಪ್ರಣಾಳಿಕೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಭರವಸೆ ನೀಡಿದ್ದಕ್ಕಾಗಿ ಓವೈಸಿ ಸೋಮವಾರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು. ಯುಸಿಸಿಗೆ ಸಂಬಂಧಿಸಿದಂತೆ, ಅಮಿತ್ ಶಾ ಅವರು ಆದಿಲಾಬಾದ್, ಖಮ್ಮಮ್ ಮತ್ತು ವಾರಂಗಲ್‌ಗೆ ಹೋಗಿ ಎಲ್ಲಾ ಆದಿವಾಸಿಗಳ ಮಧ್ಯದಲ್ಲಿ ನಿಂತು ಯುಸಿಸಿ ಅನುಷ್ಠಾನದ ಬಗ್ಗೆ ಹೇಳಬೇಕೆಂದು ನಾನು ಬಯಸುತ್ತೇನೆ” ಎಂದು ಓವೈಸಿ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಆದಿವಾಸಿಗಳು ಬಿಜೆಪಿಯನ್ನು ತಿರಸ್ಕರಿಸುತ್ತಾರೆ ಎಂಬ ಕಾರಣಕ್ಕೆ ಈ ವಿಷಯವನ್ನು ಹೇಳಲು ಅವರಿಗೆ ಬೌದ್ಧಿಕ ಧೈರ್ಯವಿಲ್ಲ ಎಂದು ಅವರು ಹೇಳಿದರು. ತೆಲಂಗಾಣದಲ್ಲಿ ನವೆಂಬರ್ 30 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ