AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ ಚುನಾವಣೆ: ಇಬ್ರಾಹಿಂಪಟ್ಟಣಂ ಕ್ಷೇತ್ರದಲ್ಲಿ ಕಾಂಗ್ರೆಸ್- ಬಿಆರ್‌ಎಸ್ ಕಾರ್ಯಕರ್ತರ ಘರ್ಷಣೆ, ಕಲ್ಲು ತೂರಾಟ

ಬಿಆರ್‌ಎಸ್ ಅಭ್ಯರ್ಥಿ ಮಂಚಿರೆಡ್ಡಿ ಕಿಶನ್ ರೆಡ್ಡಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಮಲ್ಲಾರೆಡ್ಡಿ ರಂಗಾ ರೆಡ್ಡಿ ಅವರು ಏಕಕಾಲದಲ್ಲಿ ರ್ಯಾಲಿ ನಡೆಸಿದ್ದು ಬೆಂಬಲಿಗರು ನಾಮಪತ್ರ ಕೇಂದ್ರದಲ್ಲಿ ಪರಸ್ಪರ ಮುಖಾಮುಖಿಯಾದಾಗ ಪರಸ್ಪರ ಕಲ್ಲು ತೂರಾಟ ನಡೆಸಿದರು. ಘರ್ಷಣೆಯಲ್ಲಿ ಒಬ್ಬ ಮಹಿಳೆ ಸೇರಿದಂತೆ ಕನಿಷ್ಠ ಇಬ್ಬರು ಗಾಯಗೊಂಡಿದ್ದಾರೆ.

ತೆಲಂಗಾಣ ಚುನಾವಣೆ: ಇಬ್ರಾಹಿಂಪಟ್ಟಣಂ ಕ್ಷೇತ್ರದಲ್ಲಿ ಕಾಂಗ್ರೆಸ್- ಬಿಆರ್‌ಎಸ್ ಕಾರ್ಯಕರ್ತರ ಘರ್ಷಣೆ, ಕಲ್ಲು ತೂರಾಟ
ಇಬ್ರಾಹಿಂಪಟ್ಟಣಂ ಕ್ಷೇತ್ರದಲ್ಲಿ ಘರ್ಷಣೆ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Nov 09, 2023 | 5:43 PM

Share

ಹೈದರಾಬಾದ್ ನವೆಂಬರ್ 09: ಇಬ್ರಾಹಿಂಪಟ್ಟಣಂ ವಿಧಾನಸಭಾ ಕ್ಷೇತ್ರದಲ್ಲಿ ಗುರುವಾರ ನಾಮಪತ್ರ ಸಲ್ಲಿಕೆ ವೇಳೆ ಭಾರತ್ ರಾಷ್ಟ್ರ ಸಮಿತಿ (BRS) ಮತ್ತು ತೆಲಂಗಾಣ ಕಾಂಗ್ರೆಸ್ (Telangana Congress)ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಎರಡೂ ಕಡೆಯ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿರುವ ಘಟನೆಯೂ ಇಲ್ಲಿ ನಡೆದಿದೆ. ಈ ಘಟನೆಯಲ್ಲಿ ಎರಡೂ ಕಡೆಯ ಬೆಂಬಲಿಗರು ಮತ್ತು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ಟಿವಿ 9 ತೆಲುಗು ವರದಿ ಮಾಡಿದೆ.

ಬಿಆರ್‌ಎಸ್ ಅಭ್ಯರ್ಥಿ ಮಂಚಿರೆಡ್ಡಿ ಕಿಶನ್ ರೆಡ್ಡಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಮಲ್ಲಾರೆಡ್ಡಿ ರಂಗಾ ರೆಡ್ಡಿ ಅವರು ಏಕಕಾಲದಲ್ಲಿ ರ್ಯಾಲಿ ನಡೆಸಿದ್ದು ಬೆಂಬಲಿಗರು ನಾಮಪತ್ರ ಕೇಂದ್ರದಲ್ಲಿ ಪರಸ್ಪರ ಮುಖಾಮುಖಿಯಾದಾಗ ಪರಸ್ಪರ ಕಲ್ಲು ತೂರಾಟ ನಡೆಸಿದರು. ಘರ್ಷಣೆಯಲ್ಲಿ ಒಬ್ಬ ಮಹಿಳೆ ಸೇರಿದಂತೆ ಕನಿಷ್ಠ ಇಬ್ಬರು ಗಾಯಗೊಂಡಿದ್ದಾರೆ.

ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಯಿತು.

ಇದನ್ನೂ ಓದಿ:  ಭಯಾನಕ, ಆತಂಕಕಾರಿ: ಚುನಾವಣಾ ಸಭೆಗೆ ತೆರಳುತ್ತಿದ್ದ ಸಚಿವ ಕೆಟಿಆರ್, ವಾಹನದ ಮೇಲಿಂದ ಮುಗ್ಗರಿಸಿಬಿದ್ದರು! ವಿಡಿಯೋ ನೋಡಿ ​

ಇಬ್ರಾಹಿಂಪಟ್ಟಣಂ ವಿಧಾನಸಭಾ ಕ್ಷೇತ್ರವು ರಂಗಾರೆಡ್ಡಿ ಜಿಲ್ಲೆಯ ಹೈದರಾಬಾದ್‌ನ ಉಪನಗರವಾಗಿದೆ. ರಂಗಾರೆಡ್ಡಿಯ 14 ಕ್ಷೇತ್ರಗಳಲ್ಲಿ ಇದೂ ಒಂದು. ಬಿಆರ್‌ಎಸ್ ಅಭ್ಯರ್ಥಿ ಎಂ.ಕಿಶನ್ ರೆಡ್ಡಿ ಹಾಲಿ ಶಾಸಕ. ನವೆಂಬರ್ 10 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ತೆಲಂಗಾಣದಲ್ಲಿ ನವೆಂಬರ್ 30 ರಂದು ಚುನಾವಣೆ ನಡೆಯಲಿದೆ, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ