AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ ಚುನಾವಣೆ: ಇಬ್ರಾಹಿಂಪಟ್ಟಣಂ ಕ್ಷೇತ್ರದಲ್ಲಿ ಕಾಂಗ್ರೆಸ್- ಬಿಆರ್‌ಎಸ್ ಕಾರ್ಯಕರ್ತರ ಘರ್ಷಣೆ, ಕಲ್ಲು ತೂರಾಟ

ಬಿಆರ್‌ಎಸ್ ಅಭ್ಯರ್ಥಿ ಮಂಚಿರೆಡ್ಡಿ ಕಿಶನ್ ರೆಡ್ಡಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಮಲ್ಲಾರೆಡ್ಡಿ ರಂಗಾ ರೆಡ್ಡಿ ಅವರು ಏಕಕಾಲದಲ್ಲಿ ರ್ಯಾಲಿ ನಡೆಸಿದ್ದು ಬೆಂಬಲಿಗರು ನಾಮಪತ್ರ ಕೇಂದ್ರದಲ್ಲಿ ಪರಸ್ಪರ ಮುಖಾಮುಖಿಯಾದಾಗ ಪರಸ್ಪರ ಕಲ್ಲು ತೂರಾಟ ನಡೆಸಿದರು. ಘರ್ಷಣೆಯಲ್ಲಿ ಒಬ್ಬ ಮಹಿಳೆ ಸೇರಿದಂತೆ ಕನಿಷ್ಠ ಇಬ್ಬರು ಗಾಯಗೊಂಡಿದ್ದಾರೆ.

ತೆಲಂಗಾಣ ಚುನಾವಣೆ: ಇಬ್ರಾಹಿಂಪಟ್ಟಣಂ ಕ್ಷೇತ್ರದಲ್ಲಿ ಕಾಂಗ್ರೆಸ್- ಬಿಆರ್‌ಎಸ್ ಕಾರ್ಯಕರ್ತರ ಘರ್ಷಣೆ, ಕಲ್ಲು ತೂರಾಟ
ಇಬ್ರಾಹಿಂಪಟ್ಟಣಂ ಕ್ಷೇತ್ರದಲ್ಲಿ ಘರ್ಷಣೆ
ರಶ್ಮಿ ಕಲ್ಲಕಟ್ಟ
|

Updated on: Nov 09, 2023 | 5:43 PM

Share

ಹೈದರಾಬಾದ್ ನವೆಂಬರ್ 09: ಇಬ್ರಾಹಿಂಪಟ್ಟಣಂ ವಿಧಾನಸಭಾ ಕ್ಷೇತ್ರದಲ್ಲಿ ಗುರುವಾರ ನಾಮಪತ್ರ ಸಲ್ಲಿಕೆ ವೇಳೆ ಭಾರತ್ ರಾಷ್ಟ್ರ ಸಮಿತಿ (BRS) ಮತ್ತು ತೆಲಂಗಾಣ ಕಾಂಗ್ರೆಸ್ (Telangana Congress)ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಎರಡೂ ಕಡೆಯ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿರುವ ಘಟನೆಯೂ ಇಲ್ಲಿ ನಡೆದಿದೆ. ಈ ಘಟನೆಯಲ್ಲಿ ಎರಡೂ ಕಡೆಯ ಬೆಂಬಲಿಗರು ಮತ್ತು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ಟಿವಿ 9 ತೆಲುಗು ವರದಿ ಮಾಡಿದೆ.

ಬಿಆರ್‌ಎಸ್ ಅಭ್ಯರ್ಥಿ ಮಂಚಿರೆಡ್ಡಿ ಕಿಶನ್ ರೆಡ್ಡಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಮಲ್ಲಾರೆಡ್ಡಿ ರಂಗಾ ರೆಡ್ಡಿ ಅವರು ಏಕಕಾಲದಲ್ಲಿ ರ್ಯಾಲಿ ನಡೆಸಿದ್ದು ಬೆಂಬಲಿಗರು ನಾಮಪತ್ರ ಕೇಂದ್ರದಲ್ಲಿ ಪರಸ್ಪರ ಮುಖಾಮುಖಿಯಾದಾಗ ಪರಸ್ಪರ ಕಲ್ಲು ತೂರಾಟ ನಡೆಸಿದರು. ಘರ್ಷಣೆಯಲ್ಲಿ ಒಬ್ಬ ಮಹಿಳೆ ಸೇರಿದಂತೆ ಕನಿಷ್ಠ ಇಬ್ಬರು ಗಾಯಗೊಂಡಿದ್ದಾರೆ.

ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಯಿತು.

ಇದನ್ನೂ ಓದಿ:  ಭಯಾನಕ, ಆತಂಕಕಾರಿ: ಚುನಾವಣಾ ಸಭೆಗೆ ತೆರಳುತ್ತಿದ್ದ ಸಚಿವ ಕೆಟಿಆರ್, ವಾಹನದ ಮೇಲಿಂದ ಮುಗ್ಗರಿಸಿಬಿದ್ದರು! ವಿಡಿಯೋ ನೋಡಿ ​

ಇಬ್ರಾಹಿಂಪಟ್ಟಣಂ ವಿಧಾನಸಭಾ ಕ್ಷೇತ್ರವು ರಂಗಾರೆಡ್ಡಿ ಜಿಲ್ಲೆಯ ಹೈದರಾಬಾದ್‌ನ ಉಪನಗರವಾಗಿದೆ. ರಂಗಾರೆಡ್ಡಿಯ 14 ಕ್ಷೇತ್ರಗಳಲ್ಲಿ ಇದೂ ಒಂದು. ಬಿಆರ್‌ಎಸ್ ಅಭ್ಯರ್ಥಿ ಎಂ.ಕಿಶನ್ ರೆಡ್ಡಿ ಹಾಲಿ ಶಾಸಕ. ನವೆಂಬರ್ 10 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ತೆಲಂಗಾಣದಲ್ಲಿ ನವೆಂಬರ್ 30 ರಂದು ಚುನಾವಣೆ ನಡೆಯಲಿದೆ, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ