ಕಾಂಗ್ರೆಸ್ ಮತ್ತು ಬಿಆರ್‌ಎಸ್ ‘ಹಿಂದುಳಿದ ವರ್ಗದ ವಿರೋಧಿ’ ಪಕ್ಷಗಳು: ತೆಲಂಗಾಣದಲ್ಲಿ ಅಮಿತ್ ಶಾ

ರಾವ್ ಅವರ ಸರ್ಕಾರವು ಸುಳ್ಳು ಭರವಸೆಗಳನ್ನು ನೀಡುವಲ್ಲಿ "ವಿಶ್ವ ದಾಖಲೆಯನ್ನು ನಿರ್ಮಿಸಿದೆ".“ನಾವು ಬಿಆರ್‌ಎಸ್ ಗೆ, ವಿಆರ್‌ಎಸ್ (ಸ್ವಯಂ ನಿವೃತ್ತಿ ಯೋಜನೆ) ನೀಡುವ ಸಮಯ ಬಂದಿದೆ ಎಂದು ಶಾ ಹೇಳಿದರು.  ಎಎನ್‌ಐ ಪ್ರಕಾರ, ಗೃಹ ಸಚಿವರು ಕಾಂಗ್ರೆಸ್ ಮತ್ತು ಬಿಆರ್‌ಎಸ್ ಜೊತೆಗೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅನ್ನು ಗುರಿಯಾಗಿಸಿದ್ದಾರೆ.

ಕಾಂಗ್ರೆಸ್ ಮತ್ತು ಬಿಆರ್‌ಎಸ್ ಹಿಂದುಳಿದ ವರ್ಗದ ವಿರೋಧಿ ಪಕ್ಷಗಳು: ತೆಲಂಗಾಣದಲ್ಲಿ ಅಮಿತ್ ಶಾ
ಅಮಿತ್ ಶಾ
ರಶ್ಮಿ ಕಲ್ಲಕಟ್ಟ

Updated on: Nov 18, 2023 | 5:04 PM

ಗದ್ವಾಲ್ ನವೆಂಬರ್18 : ಕಾಂಗ್ರೆಸ್ ಮತ್ತು ಭಾರತ್ ರಾಷ್ಟ್ರ ಸಮಿತಿ (BRS) ‘ಹಿಂದುಳಿದ ವರ್ಗದ ವಿರೋಧಿ’ ಪಕ್ಷಗಳು ಎಂದು ಶನಿವಾರ ಆರೋಪಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ಹಿಂದುಳಿದ ವರ್ಗದವರಿಗೆ ಬಿಜೆಪಿ ಮಾತ್ರ ಒಳ್ಳೆಯದನ್ನು ಮಾಡಲು ಸಾಧ್ಯ ಎಂದು ಹೇಳಿದ್ದಾರೆ. ತೆಲಂಗಾಣದ (Telangana) ಗದ್ವಾಲ್‌ನಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಶಾ, ಬಿಜೆಪಿ ಚುನಾವಣೆಯಲ್ಲಿ ಗೆದ್ದರೆ ರಾಜ್ಯದಲ್ಲಿ ಧರ್ಮ ಆಧಾರಿತ ಮೀಸಲಾತಿಯನ್ನು ರದ್ದುಗೊಳಿಸುವುದಾಗಿ ಮತ್ತು ರಾಜ್ಯದಲ್ಲಿ ಇತರ ಹಿಂದುಳಿದ ವರ್ಗ (ಒಬಿಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ಕೋಟಾವನ್ನು ಹೆಚ್ಚಿಸುವುದಾಗಿ ಭರವಸೆ ನೀಡಿದರು.

ತೆಲಂಗಾಣದ ಮುಂದಿನ ಸಿಎಂ ಹಿಂದುಳಿದ ವರ್ಗದವರೇ ಆಗಿರುತ್ತಾರೆ ಎಂದು ಮೋದಿಜಿ ಘೋಷಿಸಿದ್ದಾರೆ, ಹಿಂದುಳಿದ ವರ್ಗಕ್ಕೆ ಸೇರಿದ ಮೊದಲ ಮುಖ್ಯಮಂತ್ರಿಯನ್ನು ನಿಮಗೆ ನೀಡುವುದಾಗಿ ಬಿಜೆಪಿ ಭರವಸೆ ನೀಡಿದೆ ಎಂದು ಶಾ ಹೇಳಿದರು.


ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ನೇತೃತ್ವದ ತೆಲಂಗಾಣ ಸರ್ಕಾರವು ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ₹ 3,300 ಕೋಟಿ ಮಂಜೂರು ಮಾಡಿತ್ತು, ಆದರೆ ಅವರು ₹ 77 ಕೋಟಿ ಮಾತ್ರ ಬಳಸಿದ್ದಾರೆ ಎಂದು ಆರೋಪಿದ ಗೃಹ ಸಚಿವರು ಇದು ಮೋಸದಾಟ ಎಂದಿದ್ದಾರ..

ರಾವ್ ಅವರ ಸರ್ಕಾರವು ಸುಳ್ಳು ಭರವಸೆಗಳನ್ನು ನೀಡುವಲ್ಲಿ “ವಿಶ್ವ ದಾಖಲೆಯನ್ನು ನಿರ್ಮಿಸಿದೆ”.“ನಾವು ಬಿಆರ್‌ಎಸ್ ಗೆ, ವಿಆರ್‌ಎಸ್ (ಸ್ವಯಂ ನಿವೃತ್ತಿ ಯೋಜನೆ) ನೀಡುವ ಸಮಯ ಬಂದಿದೆ ಎಂದು ಶಾ ಹೇಳಿದರು.  ಎಎನ್‌ಐ ಪ್ರಕಾರ, ಗೃಹ ಸಚಿವರು ಕಾಂಗ್ರೆಸ್ ಮತ್ತು ಬಿಆರ್‌ಎಸ್ ಜೊತೆಗೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅನ್ನು ಗುರಿಯಾಗಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ನರೇಂದ್ರ ಮೋದಿ, ಅಮಿತ್ ಶಾ ಕಾಂಗ್ರೆಸ್ ಶಾಸಕರನ್ನು ಖರೀದಿ ಮಾಡಿದ್ದಾರೆ: ರಾಹುಲ್ ಗಾಂಧಿ

ಎಐಎಂಐಎಂ, ಬಿಆರ್‌ಎಸ್ ಮತ್ತು ಕಾಂಗ್ರೆಸ್ 2ಜಿ, 3ಜಿ ಮತ್ತು 4ಜಿ ಪಕ್ಷಗಳು. 2ಜಿ ಎಂದರೆ ಕೆಸಿಆರ್ ಮತ್ತು ಕೆಟಿಆರ್, ಎರಡು ತಲೆಮಾರುಗಳ ಕಾಲ ಸರ್ಕಾರವನ್ನು ನಡೆಸುತ್ತಿದೆ ಎಂದು ಶಾ ಹೇಳಿದರು. “ಅಸಾದುದ್ದೀನ್ ಓವೈಸಿ ಮೂರು ಬಾರಿ ಆಡಳಿತ ನಡೆಸಿದ್ದರಿಂದ AIMIM 3G ಪಕ್ಷವಾಗಿದೆ. ಕಾಂಗ್ರೆಸ್ 4G ಪಕ್ಷವಾಗಿದೆ. ಮೊದಲು ಜವಾಹರಲಾಲ್ ನೆಹರು ನಂತರ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಮತ್ತು ಈಗ ರಾಹುಲ್ ಗಾಂಧಿ.”
ತೆಲಂಗಾಣದಲ್ಲಿ ನವೆಂಬರ್ 30 ರಂದು ಚುನಾವಣೆಗಳು ನಡೆಯಲಿದ್ದು, ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ನಿರ್ಣಾಯಕ ಕ್ಲಚ್‌ನಲ್ಲಿ ಕೊನೆಯದು, ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us