AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಸಿಆರ್ ಬಿಜೆಪಿ ಜೊತೆ ಸ್ನೇಹ ಬೆಳೆಸಲು ಪ್ರಯತ್ನ ನಡೆಸುತ್ತಿದ್ದರು: ತೆಲಂಗಾಣದಲ್ಲಿ ಪ್ರಧಾನಿ ಮೋದಿ

ಎನ್‌ಡಿಎ ಸೇರಲು ನಾನು ಬಿಡದ ಕಾರಣ ಕೆಸಿಆರ್ ನನ್ನನ್ನು ನಿಂದಿಸಿದ್ದಾರೆ. ಬಿಆರ್​​​ಎಸ್ ಹತ್ತಿರ ಬರಲು ಬಿಜೆಪಿ ಎಂದಿಗೂ ಬಿಡುವುದಿಲ್ಲ. ತೆಲಂಗಾಣ ಜನತೆಯ ಆಶಯಕ್ಕೆ ವಿರುದ್ಧವಾಗಿ ಬಿಜೆಪಿ ಎಂದಿಗೂ ಕೆಲಸ ಮಾಡುವುದಿಲ್ಲ ಎಂದು ತೆಲಂಗಾಣದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ಹೇಳಿದ್ದಾರೆ.

ಕೆಸಿಆರ್ ಬಿಜೆಪಿ ಜೊತೆ ಸ್ನೇಹ ಬೆಳೆಸಲು ಪ್ರಯತ್ನ ನಡೆಸುತ್ತಿದ್ದರು: ತೆಲಂಗಾಣದಲ್ಲಿ ಪ್ರಧಾನಿ ಮೋದಿ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
|

Updated on: Nov 27, 2023 | 6:07 PM

Share

ಮಹಬೂಬಾಬಾದ್‌ ನವೆಂಬರ್ 27: ತೆಲಂಗಾಣ (Telangana) ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ (KCR) ವಿರುದ್ಧ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸೋಮವಾರ ವಾಗ್ದಾಳಿ ನಡೆಸಿದ್ದು, ಭಾರತ್ ರಾಷ್ಟ್ರ ಸಮಿತಿ (BRS), ಬಿಜೆಪಿಯೊಂದಿಗೆ ಸ್ನೇಹ ಬೆಳೆಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ. ಬಿಜೆಪಿಯ ಹೆಚ್ಚುತ್ತಿರುವ ಶಕ್ತಿಯನ್ನು ಕೆಸಿಆರ್ ಬಹಳ ಹಿಂದೆಯೇ ಅರಿತುಕೊಂಡಿದ್ದರು. ಬಹಳ ದಿನಗಳಿಂದ ಬಿಜೆಪಿಯೊಂದೆ ಗೆಳೆತನ ಮಾಡಲು ಪ್ರಯತ್ನ ನಡೆಸುತ್ತಿದ್ದರು. ಒಮ್ಮೆ ದೆಹಲಿಗೆ ಬಂದಾಗ ಕೆಸಿಆರ್ ನನ್ನನ್ನು ಭೇಟಿಯಾಗಿ ಇದೇ ಮನವಿ ಮಾಡಿದ್ದರು. ಆದರೆ ತೆಲಂಗಾಣ ಜನತೆಯ ಆಶಯಕ್ಕೆ ವಿರುದ್ಧವಾಗಿ ಬಿಜೆಪಿ ಎಂದಿಗೂ ಕೆಲಸ ಮಾಡಲಾರದು ಎಂದು ಮಹಬೂಬಾಬಾದ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಹೇಳಿದರು.

“ಬಿಜೆಪಿ ಕೆಸಿಆರ್ ಅನ್ನು ತಿರಸ್ಕರಿಸಿದಾಗಿನಿಂದ, ಬಿಆರ್‌ಎಸ್ ಗೊಂದಲಕ್ಕೊಳಗಾಗಿದೆ. ನನ್ನನ್ನು ನಿಂದಿಸುವ ಯಾವುದೇ ಅವಕಾಶವನ್ನು ಪಕ್ಷ ಕಳೆದುಕೊಳ್ಳುವುದಿಲ್ಲ. ಮೋದಿ ಬಿಜೆಪಿಯ ಹತ್ತಿರಬಿಡುವುದಿಲ್ಲ ಎಂಬುದು ಬಿಆರ್‌ಎಸ್‌ಗೆ ತಿಳಿದಿದೆ. ಇದು ಮೋದಿಯವರ ಗ್ಯಾರಂಟಿ,” ಎಂದಿದ್ದಾರೆ ಮೋದಿ.

ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಕೆಸಿಆರ್ ಪ್ರಯತ್ನಿಸುತ್ತಿರುವ ಬಗ್ಗೆ ಪ್ರಧಾನಿಯವರು ಇದೇ ರೀತಿಯ ಹೇಳಿಕೆ ನೀಡಿರುವುದು ಇದೇ ಮೊದಲಲ್ಲ. ಕಳೆದ ತಿಂಗಳು, ನಿಜಾಮಾಬಾದ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಮೋದಿ ಅವರು ಕೆಸಿಆರ್ ಅವರನ್ನು ದೆಹಲಿಗೆ ಭೇಟಿ ಮಾಡಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸೇರುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು ಎಂದು ಹೇಳಿದ್ದರು. ಹೈದರಾಬಾದ್ ಮುನ್ಸಿಪಲ್ ಚುನಾವಣೆಯಲ್ಲಿ ಬಿಜೆಪಿ 48 ಸ್ಥಾನಗಳನ್ನು ಗೆದ್ದ ಹಿನ್ನೆಲೆಯಲ್ಲಿ ಪ್ರಧಾನಿಯವರ ಪ್ರಕಾರ ಈ ಸಭೆ ನಡೆದಿದೆ.

“ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯ ನಂತರ, ಕೆಸಿಆರ್ ನನ್ನನ್ನು ಭೇಟಿ ಮಾಡಲು ದೆಹಲಿಗೆ ಬಂದರು ಮತ್ತು ಎನ್​​ ಡಿಎ ಸೇರಲು ಬಯಸುವುದಾಗಿ ಹೇಳಿದರು. ಅವರಿಗೆ ಬೆಂಬಲ ನೀಡುವಂತೆಯೂ ಕೇಳಿಕೊಂಡರು. ಅವರ ಕಾರ್ಯಗಳಿಂದಾಗಿ ಮೋದಿ ಅವರೊಂದಿಗೆ ಸಂಬಂಧ ಹೊಂದಲು ಸಾಧ್ಯವಿಲ್ಲ ಎಂದು ನಾನು ಅವರಿಗೆ (ಕೆಸಿಆರ್) ಹೇಳಿದ್ದೇನೆ ಎಂದು ಮೋದಿ ಹೇಳಿದರು.

ಇದನ್ನೂ ಓದಿ: ಪ್ರಧಾನಿ ಮೋದಿಯಿಂದ ಶ್ಲಾಘನೆಗೊಳಗಾದ ಬಾಲಾಜಿ ಶ್ರೀನಿವಾಸನ್ ಯಾರು?

ಇಂದು(ಸೋಮವಾರ) ನಡೆದ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ ಅವರು ಕಾಂಗ್ರೆಸ್ ಮತ್ತು ಕೆಸಿಆರ್ ಇಬ್ಬರನ್ನೂ ‘ಸಮಾನ ಪಾಪಿಗಳು’ ಎಂದು ಕರೆದರು. “”ತೆಲಂಗಾಣವನ್ನು ನಾಶ ಮಾಡುವಲ್ಲಿ ಕಾಂಗ್ರೆಸ್ ಮತ್ತು ಕೆಸಿಆರ್ ಇಬ್ಬರೂ ಸಮಾನ ಪಾಪಿಗಳು. ಹಾಗಾಗಿ, ತೆಲಂಗಾಣ ಜನರು ಒಬ್ಬರನ್ನು ಹೊರಹಾಕಿದ ನಂತರ ಮತ್ತೊಂದು ರೋಗವನ್ನು ಬಿಡಲು ಸಾಧ್ಯವಿಲ್ಲ. ನಾನು ಇದನ್ನು ರಾಜ್ಯದ ಎಲ್ಲೆಡೆ ನೋಡಿದ್ದೇನೆ. ತೆಲಂಗಾಣದ ನಂಬಿಕೆ ಬಿಜೆಪಿ ಮೇಲಿದೆ. ತೆಲಂಗಾಣದ ಮುಂದಿನ ಸಿಎಂ ಬಿಜೆಪಿಯಿಂದಲೇ ಎಂದು ನಿರ್ಧರಿಸಿದ್ದೀರಿ. ತೆಲಂಗಾಣದಲ್ಲಿ ಮೊದಲ ಬಿಜೆಪಿ ಸಿಎಂ ಒಬಿಸಿ ಸಮುದಾಯದಿಂದ (ಹಿಂದುಳಿದ ವರ್ಗ) ಎಂದು ಬಿಜೆಪಿ ನಿಮಗೆ ಭರವಸೆ ನೀಡಿದೆ” ಎಂದು ಅವರು ಹೇಳಿದರು.

ತೆಲಂಗಾಣದಲ್ಲಿ ನವೆಂಬರ್ 30 ರಂದು ಒಂದೇ ಹಂತದ ಚುನಾವಣೆ ನಡೆಯಲಿದೆ. ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ