AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ಸುಮ್ಮನೆ ಕುಳಿತುಕೊಳ್ಳಿ, ಇಲ್ಲವಾದರೆ ಹೊರನಡೆಯಿರಿ, ಸಭೆಯಲ್ಲಿ ತಾಳ್ಮೆ ಕಳೆದುಕೊಂಡ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಸುಮ್ಮನೆ ಕುಳಿತುಕೊಳ್ಳಿ, ಇಲ್ಲವಾದರೆ ಹೊರ ನಡೆಯಿರಿ, ತೆಲಂಗಾಣದ ಚುನಾವಣಾ ಪ್ರಚಾರದ ಸಮಯದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ತಾಳ್ಮೆ ಕಳೆದುಕೊಂಡು ರೇಗಾಡಿರುವ ಘಟನೆ ನಡೆದಿದೆ. ಪ್ರಚಾರ ಸಭೆಯಲ್ಲಿ ಕಂಡುಬಂದ ಅಶಿಸ್ತಿನಿಂದಾಗಿ ಮಲ್ಲಿಕಾರ್ಜುನ ಖರ್ಗೆ ಕೋಪಗೊಂಡರು. ಕಾಂಗ್ರೆಸ್ ಮುಖ್ಯಸ್ಥರು ತಮ್ಮ ಪಕ್ಷದ ಚುನಾವಣಾ ಭರವಸೆಗಳನ್ನು ಪಟ್ಟಿ ಮಾಡುತ್ತಿದ್ದಾಗ ಸಾರ್ವಜನಿಕರು ಗಲಾಟೆ ಮಾಡಲು ಪ್ರಾರಂಭಿಸಿದರು. ಇದರಿಂದ ಅಸಮಾಧಾನಗೊಂಡ ಖರ್ಗೆ ಸಭಿಕರನ್ನು ತರಾಟೆಗೆ ತೆಗೆದುಕೊಂಡರು.

ತೆಲಂಗಾಣ: ಸುಮ್ಮನೆ ಕುಳಿತುಕೊಳ್ಳಿ, ಇಲ್ಲವಾದರೆ ಹೊರನಡೆಯಿರಿ, ಸಭೆಯಲ್ಲಿ ತಾಳ್ಮೆ ಕಳೆದುಕೊಂಡ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆImage Credit source: ABP Live
ನಯನಾ ರಾಜೀವ್
|

Updated on: Nov 27, 2023 | 10:59 AM

Share

ಸುಮ್ಮನೆ ಕುಳಿತುಕೊಳ್ಳಿ, ಇಲ್ಲವಾದರೆ ಹೊರ ನಡೆಯಿರಿ, ತೆಲಂಗಾಣದ ಚುನಾವಣಾ ಪ್ರಚಾರದ ಸಮಯದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ತಾಳ್ಮೆ ಕಳೆದುಕೊಂಡು ರೇಗಾಡಿರುವ ಘಟನೆ ನಡೆದಿದೆ. ಪ್ರಚಾರ ಸಭೆಯಲ್ಲಿ ಕಂಡುಬಂದ ಅಶಿಸ್ತಿನಿಂದಾಗಿ ಮಲ್ಲಿಕಾರ್ಜುನ ಖರ್ಗೆ ಕೋಪಗೊಂಡರು. ಕಾಂಗ್ರೆಸ್ ಮುಖ್ಯಸ್ಥರು ತಮ್ಮ ಪಕ್ಷದ ಚುನಾವಣಾ ಭರವಸೆಗಳನ್ನು ಪಟ್ಟಿ ಮಾಡುತ್ತಿದ್ದಾಗ ಸಾರ್ವಜನಿಕರು ಗಲಾಟೆ ಮಾಡಲು ಪ್ರಾರಂಭಿಸಿದರು. ಇದರಿಂದ ಅಸಮಾಧಾನಗೊಂಡ ಖರ್ಗೆ ಸಭಿಕರನ್ನು ತರಾಟೆಗೆ ತೆಗೆದುಕೊಂಡರು.

ಸುಮ್ಮನಿರಿ, ಕೇಳಬೇಕೆನಿಸಿದರೆ ಕೇಳಿ, ಇಲ್ಲವಾದಲ್ಲಿ ಹೊರಗೆ ಹೋಗಿ ಎಂದು ರೇಗಾಡಿದ್ದಾರೆ. ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ 29.8 ನಿಮಿಷಗಳ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಕಾಂಗ್ರೆಸ್​ ಅಧ್ಯಕ್ಷರು ತಮ್ಮ ತಾಳ್ಮೆಯನ್ನು ಕಳೆದುಕೊಳ್ಳುತ್ತಿದ್ದಾರೆ. ಪಕ್ಷದ ಮುಖ್ಯಸ್ಥರಾಗಿದ್ದರೂ ಕಾಂಗ್ರೆಸ್ ಕಾರ್ಯಕರ್ತರು ಅವರಿಗೆ ಸಲ್ಲಬೇಕಾದ ಗೌರವನ್ನು ನೀಡುತ್ತಿಲ್ಲ ಖರ್ಗೆ ಅವರಿಗೆ ಸಾವ್ಝನಿಕ ಸಭೆಯಲ್ಲಿ ಅವಮಾನವಾಗಿ ಎಂದು ಬರೆದುಕೊಂಡಿದ್ದಾರೆ.

ರಾಜಸ್ಥಾನದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಚಾರ ಮಾಡಿರುವ ಫೋಟೊಗಳು ಕಣ್ಮರೆಯಾಗಿವೆ, ರಾಹುಲ್ ಗಾಂಧಿ ಹಾಗೂ ಗೆಹ್ಲೋಟ್​ ಅವರು ಚಿತ್ರಗಳನ್ನು ಹೆಚ್ಚಾಗಿ ಪೋಸ್ಟ್ ಮಾಡಲಾಗಿದೆ. ದಲಿತ ಎಂಬ ಕಾರಣಕ್ಕೆ ಖರ್ಗೆ ಅವರನ್ನು ಕಾಂಗ್ರೆಸ್​ ನಿಂದಿಸುತ್ತಿದೆಯೇ ಎಂದು ಮಾಳವೀಯ ಪ್ರಶ್ನೆ ಮಾಡಿದ್ದಾರೆ.

ಮತ್ತಷ್ಟು ಓದಿ: ದೊಡ್ಡ ವಿಷಯವಲ್ಲ: ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್ ಬಗ್ಗೆ ಮಲ್ಲಿಕಾರ್ಜುನ ಖರ್ಗೆ

ತೆಲಂಗಾಣದ ಕಲ್ವುರ್ತಿಯಲ್ಲಿ ಘಟನೆ ನಡೆದಿದೆ, ತೆಲಂಗಾಣ ವಿಧಾನಸಭೆಗೆ ಚುನಾವಣೆಯು ನವೆಂಬರ್ 30ರಂದು ಮತದಾನ ನಡೆಯಲಿದೆ. ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ. ಈ ಹಿಂದೆ ಪ್ರಧಾನಿ ಮೋದಿ ಕೂಡ ಬೆಳಗಾವಿಯಲ್ಲಿನ ನಡೆದ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್​ ಖರ್ಗೆಯನ್ನು ಅಮಾನಿಸುತ್ತಿದೆ ಎಂದು ಆರೋಪಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ