AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ಟವರ್​ ಹತ್ತಬೇಡಿ, ನೀವು ಬಿದ್ದರೆ ನನಗೆ ನೋವಾಗುತ್ತೆ, ದಯವಿಟ್ಟು ಕೆಳಗೆ ಬನ್ನಿ ಎಂದ ಪ್ರಧಾನಿ ಮೋದಿ

ಟವರ್ ಹತ್ತಬೇಡಿ ನೀವು ಬಿದ್ದರೆ ನನಗೆ ನೋವಾಗುತ್ತದೆ ದಯವಿಟ್ಟು ಕೆಳಗಿಳಿಯಿರಿ ಎಂದು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಜನರಲ್ಲಿ ಮನವಿ ಮಾಡಿದರು. ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಸ್ಟಾರ್ ಪ್ರಚಾರಕರಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ರ್ಯಾಲಿಗಳನ್ನು ನಡೆಸುತ್ತಿದ್ದಾರೆ. ಈ ಮಧ್ಯೆ, ಭಾನುವಾರ ತೆಲಂಗಾಣದ ನಿರ್ಮಲ್‌ನಲ್ಲಿ ಪ್ರಧಾನಿ ಮೋದಿಯವರ ರ್ಯಾಲಿಯಲ್ಲಿ ಕೆಲವರು ಟವರ್​ಗಳನ್ನು ಏರಿದ್ದರು. ಇದನ್ನು ಕಂಡ ಪ್ರಧಾನಿ ಕೂಡಲೇ ಕೆಳಗಿಳಿಯುವಂತೆ ಮನವಿ ಮಾಡಿದರು

ತೆಲಂಗಾಣ: ಟವರ್​ ಹತ್ತಬೇಡಿ, ನೀವು ಬಿದ್ದರೆ ನನಗೆ ನೋವಾಗುತ್ತೆ, ದಯವಿಟ್ಟು ಕೆಳಗೆ ಬನ್ನಿ ಎಂದ ಪ್ರಧಾನಿ ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on:Nov 27, 2023 | 11:34 AM

Share

ಟವರ್ ಹತ್ತಬೇಡಿ ನೀವು ಬಿದ್ದರೆ ನನಗೆ ನೋವಾಗುತ್ತದೆ ದಯವಿಟ್ಟು ಕೆಳಗಿಳಿಯಿರಿ ಎಂದು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಜನರಲ್ಲಿ ಮನವಿ ಮಾಡಿದರು. ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಸ್ಟಾರ್ ಪ್ರಚಾರಕರಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ರ್ಯಾಲಿಗಳನ್ನು ನಡೆಸುತ್ತಿದ್ದಾರೆ. ಈ ಮಧ್ಯೆ, ಭಾನುವಾರ ತೆಲಂಗಾಣದ ನಿರ್ಮಲ್‌ನಲ್ಲಿ ಪ್ರಧಾನಿ ಮೋದಿಯವರ ರ್ಯಾಲಿಯಲ್ಲಿ ಕೆಲವರು ಟವರ್​ಗಳನ್ನು ಏರಿದ್ದರು. ಇದನ್ನು ಕಂಡ ಪ್ರಧಾನಿ ಕೂಡಲೇ ಕೆಳಗಿಳಿಯುವಂತೆ ಮನವಿ ಮಾಡಿದರು.

ಈ ಮೋದಿ ಮನೆ ಬಿಟ್ಟಿರುವುದು ಸ್ವಂತ ಮನೆ ಕಟ್ಟಲು ಅಲ್ಲ, ಬಡವರಿಗೆ ಮನೆ ಕಟ್ಟಲು, ತುಂಬಾ ಜನಸಂದಣಿ ಇದೆ ಎಂದರೆ ನೀವು ನನ್ನನ್ನು ನೋಡಲು ಸಾಧ್ಯವಾಗುವುದಿಲ್ಲ ಎಂದು ನನಗೆ ತಿಳಿದಿದೆ, ಆದರೆ ಯಾರಾದರೂ ಬಿದ್ದರೆ ನನಗೆ ತುಂಬಾ ದುಃಖವಾಗುತ್ತದೆ, ದಯವಿಟ್ಟು ಕೆಳಗೆ ಬನ್ನಿ ಸ್ನೇಹಿತರೇ, ನಿಮ್ಮ ಪ್ರೀತಿ ನನ್ನ ಕಣ್ಣುಗಳಲ್ಲಿದೆ.

ನೀವು ನನ್ನನ್ನು ನೋಡಲು ಸಾಧ್ಯವಾಗದಿರಬಹುದು, ಇದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ ಎಂದರು. ರ್ಯಾಲಿಯ ಸಂದರ್ಭದಲ್ಲಿ ಬಾಲಕಿಯೊಬ್ಬಳು ಭಾರತದ ಭಾವುಟವನ್ನು ಬೀಸುತ್ತಿದ್ದಳು, ಅದನ್ನು ನೋಡಿದ ಪ್ರಧಾನಿ ಮೋದಿ ಭಾರತಾಂಬೆಯೇ ಇಲ್ಲಿಗೆ ಬಂದಿದ್ದಾಳೆ ಎಂದರು.ಈ ಬಾಲಕಿ ಪ್ರತಿಯೊಬ್ಬ ಯುವಕರಿಗೂ ಸ್ಫೂರ್ತಿ ಎಂದರು.

ಮತ್ತಷ್ಟು ಓದಿ: PM Modi in Tirumala: ಎಲ್ಲರ ಸುಖ, ಶಾಂತಿ, ಆರೋಗ್ಯ ಮತ್ತು ದೇಶದ ಪ್ರಗತಿ ಕೋರಿ ತಿರುಪತಿ ತಿಮ್ಮಪ್ಪನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ

ಬಿಆರ್‌ಎಸ್ ನಿಮಗೆ ದ್ರೋಹವನ್ನು ಬಿಟ್ಟರೆ ಬೇರೇನೂ ನೀಡಿಲ್ಲ. ಇಂದು ತೆಲಂಗಾಣ ಸಾವಿರಾರು ಕೋಟಿ ಸಾಲದಲ್ಲಿ ಮುಳುಗಿದೆ. ನಮ್ಮ ತೆಲಂಗಾಣದಲ್ಲಿ ಬಡವರ ಬಗ್ಗೆ ಕಾಳಜಿಯಿಲ್ಲದ ಸರ್ಕಾರವಿದೆ ಎಂದರು. ತೆಲಂಗಾಣದಲ್ಲಿ ನವೆಂಬರ್ 30ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು ಡಿಸೆಂಬರ್ 3 ರಂದು ಫಲಿತಾಂಶ ಹೊರಬರಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:33 am, Mon, 27 November 23

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ