AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ವೇದಿಕೆಯಲ್ಲಿ ಮಾದಿಗ ನಾಯಕನಿಗೆ ಸಾಂತ್ವನ ಹೇಳಿದ ಪ್ರಧಾನಿ ಮೋದಿ

ತೆಲಂಗಾಣ ಇತಿಹಾಸದಲ್ಲಿ ನಿರ್ಣಾಯಕ ಘಟ್ಟದಲ್ಲಿದೆ. ಕಳೆದ 10 ವರ್ಷಗಳಿಂದ ಆಡಳಿತ ನಡೆಸುತ್ತಿರುವ ಸರ್ಕಾರ ಜನರ ಕನಸುಗಳನ್ನು ನನಸು ಮಾಡಲು ಸಾಧ್ಯವಾಗಿಲ್ಲ. ತೆಲಂಗಾಣ ಸರ್ಕಾರ ಮಾದಿಗ ಸಮುದಾಯಕ್ಕೆ ದ್ರೋಹ ಬಗೆದಿದೆ. ತೆಲಂಗಾಣ ರಚನೆಗೆ ಕಾಂಗ್ರೆಸ್ ಹೇಗೆ ಅಡ್ಡಗಾಲು ಹಾಕಿತು ಎಂಬುದನ್ನು ಯಾರು ಮರೆಯಲು ಸಾಧ್ಯ? ಆದರೆ ಅನೇಕ ತ್ಯಾಗಗಳ ನಂತರ ತೆಲಂಗಾಣ ರಚನೆಯಾದಾಗ, ಆ ಬಿಆರ್‌ಎಸ್ ನಾಯಕ ಕಾಂಗ್ರೆಸ್‌ಗೆ ಧನ್ಯವಾದ ಹೇಳಲು ಹೋದರು ಎಂದು ಮೋದಿ ಹೇಳಿದ್ದಾರೆ.

ತೆಲಂಗಾಣ: ವೇದಿಕೆಯಲ್ಲಿ ಮಾದಿಗ ನಾಯಕನಿಗೆ ಸಾಂತ್ವನ ಹೇಳಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Nov 11, 2023 | 8:24 PM

Share

ಸಿಕಂದರಾಬಾದ್‌ ನವೆಂಬರ್ 11: ತೆಲಂಗಾಣದಲ್ಲಿ ಅಧಿಕಾರಕ್ಕೆ ಬಂದರೆ ಒಬಿಸಿ ಮುಖ್ಯಮಂತ್ರಿಯಾಗುವ ಬಿಜೆಪಿಯ (BJP) ಭರವಸೆಗೆ ಅನುಗುಣವಾಗಿ ದಲಿತ ಸಮುದಾಯವನ್ನು ಮುಖ್ಯವಾಹಿನಿಗೆ ಕರೆತರುವ ಉದ್ದೇಶದಿಂದ ತೆಲಂಗಾಣದ (Telangana) ಸಿಕಂದರಾಬಾದ್‌ನಲ್ಲಿ ನಡೆದ ಮಾದಿಗ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಶನಿವಾರ ಭಾಗವಹಿಸಿದ್ದರು. ಮಾದಿಗ ಮೀಸಲಾತಿ ಹೋರಾಟ ಸಮಿತಿ ಮುಖಂಡ ಮಂದ ಕೃಷ್ಣ ಮಾದಿಗ ಅವರು ಪ್ರಧಾನಿ ಮೋದಿಯವರೊಂದಿಗೆ ವೇದಿಕೆ ಹಂಚಿಕೊಂಡು ಅಳಲು ತೋಡಿಕೊಂಡರು. ಯಾವುದೇ ಪ್ರಧಾನಿ ಮಾದಿಗರ ಸಮಾವೇಶದಲ್ಲಿ ಭಾಗವಹಿಸಿಲ್ಲ ಎಂದು ಮಂದ ಕೃಷ್ಣ ಮಾದಿಗ ಅವರು ಪ್ರಧಾನಿ ಮೋದಿ ಕೈಮುಗಿದು ಎದ್ದು ನಿಂತರು.

ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ನಾನು ನಿಮ್ಮಿಂದ ಏನನ್ನೂ ಕೇಳಲು ಇಲ್ಲಿಗೆ ಬಂದಿಲ್ಲ, ಸ್ವಾತಂತ್ರ್ಯದ ನಂತರ ನಿಮ್ಮನ್ನು ವಂಚಿಸಿದ ಎಲ್ಲಾ ರಾಜಕೀಯ ಪಕ್ಷಗಳ ಕ್ಷಮೆ ಕೇಳಲು ಇಲ್ಲಿಗೆ ಬಂದಿದ್ದೇನೆ” ಎಂದು ಹೇಳಿದರು.

ಮಾದಿಗ ಮೀಸಲಾತಿ ಹೋರಾಟ ಸಮಿತಿಯು ಮೂರು ದಶಕಗಳಿಂದ ಪರಿಶಿಷ್ಟ ಜಾತಿಗೆ ಮೀಸಲು ಉಪವರ್ಗೀಕರಣಕ್ಕೆ ಒತ್ತಾಯಿಸುತ್ತಿದೆ. ಮಾದಿಗರು ತೆಲಂಗಾಣದಲ್ಲಿ ಪರಿಶಿಷ್ಟ ಜಾತಿಗಳ ದೊಡ್ಡ ಘಟಕಗಳಲ್ಲಿ ಒಬ್ಬರು. ಮಾದಿಗರು ದಲಿತ ಸಮುದಾಯವಾಗಿದ್ದು, ಇವರು ಚರ್ಮದ ಕೆಲಸ ಮತ್ತು ಮಲಹೊರುವ ಕೆಲಸ ಮಾಡುತ್ತಾರೆ. “ನನ್ನ ಸಹೋದರ ಕೃಷ್ಣ, ನಿಮ್ಮ ಹೋರಾಟದಲ್ಲಿ ನಿಮಗೆ ಅನೇಕ ಸಹಾಯಕರು ಸಿಕ್ಕಿದ್ದಾರೆ. ಇಂದಿನಿಂದ ನಿಮಗೆ ಇನ್ನೂ ಒಬ್ಬರು ಇದ್ದಾರೆ” ಎಂದು ಪ್ರಧಾನಿ ಮೋದಿ ಹೇಳಿದರು.

“ನಿಮಗೆ ನೀಡಿದ ಭರವಸೆಗಳನ್ನು ಈಡೇರಸದೇ ಇದ್ದ ಎಲ್ಲಾ ರಾಜಕೀಯ ಪಕ್ಷಗಳು, ಎಲ್ಲಾ ರಾಜಕೀಯ ನಾಯಕರ ಕ್ಷಮೆ ಕೇಳಲು ನಾನು ಇಂದು ಇಲ್ಲಿದ್ದೇನೆ” ಎಂದು ಪ್ರಧಾನಿ ಮೋದಿ ಹೇಳಿದರು.

ತೆಲಂಗಾಣ ಇತಿಹಾಸದಲ್ಲಿ ನಿರ್ಣಾಯಕ ಘಟ್ಟದಲ್ಲಿದೆ. ಕಳೆದ 10 ವರ್ಷಗಳಿಂದ ಆಡಳಿತ ನಡೆಸುತ್ತಿರುವ ಸರ್ಕಾರ ಜನರ ಕನಸುಗಳನ್ನು ನನಸು ಮಾಡಲು ಸಾಧ್ಯವಾಗಿಲ್ಲ. ತೆಲಂಗಾಣ ಸರ್ಕಾರ ಮಾದಿಗ ಸಮುದಾಯಕ್ಕೆ ದ್ರೋಹ ಬಗೆದಿದೆ. ತೆಲಂಗಾಣ ರಚನೆಗೆ ಕಾಂಗ್ರೆಸ್ ಹೇಗೆ ಅಡ್ಡಗಾಲು ಹಾಕಿತು ಎಂಬುದನ್ನು ಯಾರು ಮರೆಯಲು ಸಾಧ್ಯ? ಆದರೆ ಅನೇಕ ತ್ಯಾಗಗಳ ನಂತರ ತೆಲಂಗಾಣ ರಚನೆಯಾದಾಗ, ಆ ಬಿಆರ್‌ಎಸ್ ನಾಯಕ ಕಾಂಗ್ರೆಸ್‌ಗೆ ಧನ್ಯವಾದ ಹೇಳಲು ಹೋದರು, ಜನರೇ. ತೆಲಂಗಾಣ ಚಳವಳಿಯ ಸಂದರ್ಭದಲ್ಲಿ ದಲಿತರೊಬ್ಬರು ಸಿಎಂ ಆಗುತ್ತಾರೆ ಎಂದು ಭರವಸೆ ನೀಡಿದ್ದರು. ಆದರೆ ನಂತರ ಅವರೇ ಮುಖ್ಯಮಂತ್ರಿ ಸ್ಥಾನಕ್ಕೇರಿದರುಎಂದು ಪ್ರಧಾನಿ ಮೋದಿ ಹೇಳಿದರು.

ಇದನ್ನೂ ಓದಿ: PM Narendra Modi: ಇದೇ ತಿಂಗಳ 25, 26, 27 ರಂದು ತೆಲಂಗಾಣದಲ್ಲಿ ಮೋದಿ ಚುನಾವಣಾ ಪ್ರಚಾರ

ಸರ್ಕಾರವು ತೆಲಂಗಾಣದ ಜನರಿಗೆ ನೀರಾವರಿ ಯೋಜನೆಗಳ ಬದಲಿಗೆ ನೀರಾವರಿ ಹಗರಣವನ್ನು ನೀಡಿದೆ ಎಂದು ಮೋದಿ ಟೀಕೆ ಮಾಡಿದ್ದಾರೆ

“ಕಾಂಗ್ರೆಸ್ ಮತ್ತು ಬಿಆರ್‌ಎಸ್ ಎರಡರಲ್ಲೂ ಎಚ್ಚರದಿಂದಿರಿ. ಇಬ್ಬರೂ ದಲಿತ ವಿರೋಧಿಗಳು. ಇವರು ಹೊಸ ಸಂವಿಧಾನಕ್ಕೆ ಒತ್ತಾಯಿಸಿ ಬಿಆರ್‌ಎಸ್ ಅಂಬೇಡ್ಕರ್ ಅವರನ್ನು ಅವಮಾನಿಸಿದರು. ಕಾಂಗ್ರೆಸ್ ಕೂಡ ಅಂಬೇಡ್ಕರ್ ಅವರನ್ನು ವಿರೋಧಿಸಿತು ಮತ್ತು ಎರಡು ಬಾರಿ ಚುನಾವಣೆಯಲ್ಲಿ ಗೆಲ್ಲಲು ಅವಕಾಶ ನೀಡಲಿಲ್ಲ. ಕಾಂಗ್ರೆಸ್‌ ನಿಂದಾಗಿ ಅಂಬೇಡ್ಕರ್ ಅವರಿಗೆ ಭಾರತ ರತ್ನ ಸಿಗಲಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ