Sign In

By signing in or creating an account, you agree with Associated Broadcasting Company's Terms & Conditions and Privacy Policy.

Telangana Election 2023 Results: ತೆಲಂಗಾಣದಲ್ಲಿ ಅಧಿಕಾರ ಹಿಡಿದ ಕಾಂಗ್ರೆಸ್; ಮುಖಭಂಗ ಅನುಭವಿಸಿದ ಕೆಸಿಆರ್ ಅಂಡ್ ಟೀಮ್

Congress Wins Telangana: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ 119 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಪಕ್ಷ ಬಹುಮತಕ್ಕೆ ಬೇಕಾದ 60ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಸಫಲವಾಗಿದೆ. ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ ಮುಖಭಂಗ ಅನುಭವಿಸಿದೆ. ಸಿಎಂ ಕೆ ಚಂದ್ರಶೇಖರ್ ರಾವ್ ಒಂದು ಕ್ಷೇತ್ರದಲ್ಲಿ ಸೋಲನ್ನೂ ಅನುಭವಿಸಿದ್ದಾರೆ. ತೆಲಂಗಾಣದ ಮುಂದಿನ ಸಿಎಂ ಯಾರು ಎಂಬುದು ಪ್ರಶ್ನೆಯಾಗಿದ್ದು, ಮುಖ್ಯಮಂತ್ರಿ ರೇಸ್​ನಲ್ಲಿ ರೇವಂತ್ ರೆಡ್ಡಿ ಸೇರಿ ಮೂವರು ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ.

Telangana Election 2023 Results: ತೆಲಂಗಾಣದಲ್ಲಿ ಅಧಿಕಾರ ಹಿಡಿದ ಕಾಂಗ್ರೆಸ್; ಮುಖಭಂಗ ಅನುಭವಿಸಿದ ಕೆಸಿಆರ್ ಅಂಡ್ ಟೀಮ್
ತೆಲಂಗಾಣ ಕಾಂಗ್ರೆಸ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 03, 2023 | 6:53 PM

ಹೈದರಾಬಾದ್, ಡಿಸೆಂಬರ್ 3: ಪಂಚರಾಜ್ಯ ಚುನಾವಣೆಯಲ್ಲಿ ಐದು ರಾಜ್ಯಗಳ (Five states assembly elections 2023) ಪೈಕಿ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಂದಿದೆ. ತೆಲಂಗಾಣದಲ್ಲಿ ಅಧಿಕಾರ ಬದಲಾವಣೆ ಆಗಿದೆ. ತೆಲಂಗಾಣ ರಾಜ್ಯ ರಚನೆ ಆದಾಗಿನಿಂದ ಸತತವಾಗಿ ಅಧಿಕಾರದಲ್ಲಿರುವ ಕೆ ಚಂದ್ರಶೇಖರ್ ರಾವ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ (ಹಿಂದಿನ ಟಿಆರ್​ಎಸ್) ಕೊನೆಗೂ ಗದ್ದುಗೆಯಿಂದ ಕೆಳಗಿಳಿದಿದೆ. ಕಾಂಗ್ರೆಸ್ ಪಕ್ಷ ಮೊದಲ ಬಾರಿಗೆ ತೆಲಂಗಾಣದ (Telangana Assembly Elections) ಆಡಳಿತ ಚುಕ್ಕಾಣಿ ಹಿಡಿದಿದೆ. 119 ಕ್ಷೇತ್ರಗಳ ಪೈಕಿ ಬಹುಮತಕ್ಕೆ ಬೇಕಾದ 60 ಸ್ಥಾನಗಳನ್ನು ಕಾಂಗ್ರೆಸ್ ಪಡೆಯಲು ಸಫಲವಾಗಿದೆ. ಕಾಂಗ್ರೆಸ್ 64 ಸ್ಥಾನಗಳನ್ನು ಗೆದ್ದರೆ ಬಿಎಚ್​ಆರ್​ಎಸ್ ಪಕ್ಷ 39 ಸ್ಥಾನ ಪಡೆದಿದೆ. 20ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವ ಉಮೇದಿನಲ್ಲಿದ್ದ ಬಿಜೆಪಿಗೆ 8 ಸ್ಥಾನಗಳು ಸಿಕ್ಕಿವೆ. ಎಐಎಂಐಎಂ ಪಕ್ಷಕ್ಕೆ ಕಳೆದ ಬಾರಿಗಿಂತಲೂ ಕಡಿಮೆ ಸ್ಥಾನಗಳು ಸಿಕ್ಕಿವೆ.

ತೆಲಂಗಾಣ ರಾಜ್ಯ ವಿಧಾನಸಭೆ ಫಲಿತಾಂಶ ವಿವರ:

ಒಟ್ಟು ಕ್ಷೇತ್ರಗಳು: 119 ಬಹುಮತಕ್ಕೆ: 60

  • ಕಾಂಗ್ರೆಸ್: 64
  • ಭಾರತ್ ರಾಷ್ಟ್ರ ಸಮಿತಿ: 39
  • ಬಿಜೆಪಿ: 8
  • ಎಐಎಂಐಎಂ: 7
  • ಸಿಪಿಐ: 1

ಇದನ್ನೂ ಓದಿ: ತೆಲಂಗಾಣದಲ್ಲಿ ಕಾಂಗ್ರೆಸ್ ಸೂಪರ್ ಕಂಬ್ಯಾಕ್ ಮಾಡಲು ಪ್ರಮುಖ ಕಾರಣಗಳೇನು? ಗ್ಯಾರಂಟಿಗಳಾ, ಮುಸ್ಲಿಮ್ ವೋಟ್​ಗಳಾ?

ಈ ಚುನಾವಣೆಯಲ್ಲಿ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಸಿಎಂ ಕೆ ಚಂದ್ರಶೇಖರ್ ರಾವ್ ಒಂದರಲ್ಲಿ ಸೋಲನುಭವಿಸಿದ್ದಾರೆ. ಗಜ್ವೆಲ್ ಕ್ಷೇತ್ರದಲ್ಲಿ ಅವರು ಸುಲಭವಾಗಿ ಗೆದ್ದರೆ, ಕಾಮರೆಡ್ಡಿ ಕ್ಷೇತ್ರದಲ್ಲಿ ಹೀನಾಯ ಸೋಲನುಭವಿಸಿದ್ದಾರೆ. ಈ ಕ್ಷೇತ್ರದಲ್ಲಿ ಕೆಸಿಆರ್ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿರುವುದು ದುರಂತದ ಸಂಗತಿ. ತೆಲಂಗಾಣ ಪ್ರತ್ಯೇಕ ರಾಜ್ಯ ನಿರ್ಮಾಣದ ಸೂತ್ರದಾರನಿಗೆ ಈ ಸೋಲು ಮರ್ಮಾಘಾತವಾಗಬಹುದು.

ತೆಲಂಗಾಣಕ್ಕೆ ಮುಂದ್ಯಾರು ಮುಖ್ಯಮಂತ್ರಿ?

ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಗಳಿಸಿರುವುದು ಈಗ ಮುಂದಿನ ಸಿಎಂ ಯಾರು ಎಂಬುದು ಆ ಪಕ್ಷಕ್ಕೆ ಆಯ್ಕೆಯ ಬಿಕ್ಕಟ್ಟು ಸೃಷ್ಟಿಸಿದೆ. ಸಿಎಂ ಸ್ಥಾನಕ್ಕೆ ಕಾಂಗ್ರೆಸ್​ನಲ್ಲಿ ಹಲವರು ಆಕಾಂಕ್ಷಿಗಳಿದ್ದಾರೆ. ಮಾಜಿ ಟಿಡಿಪಿ ಮುಖಂಡ ರೇವಂತ್ ರೆಡ್ಡಿ ಈ ರೇಸ್​ನಲ್ಲಿ ಮುಂಚೂಣಿಯಲ್ಲಿದ್ದಾರೆ.

ಇದನ್ನೂ ಓದಿ: ತೆಲಂಗಾಣ: ಕೆಸಿಆರ್ ಲೋಕಸಭಾ ಚುನಾವಣಾ ಕನಸಿಗೆ ತಣ್ಣೀರೆರೆಚುತ್ತಾ ವಿಧಾನಸಭಾ ಚುನಾವಣಾ ಫಲಿತಾಂಶ?

ಕಾಂಗ್ರೆಸ್​ನೊಳಗೆ ಬಹಳ ಜನಬೆಂಬಲ ಹೊಂದಿರುವ ಹಾಗೂ ಮಲ್ಲಿಕಾರ್ಜು ಖರ್ಗೆಯ ಆಪ್ತರೆನಿಸಿರುವ ಮಲ್ಲು ಭಟ್ಟಿ ವಿಕ್ರಮಾರ್ಕ ಹೆಸರೂ ಕೇಳಿಬರುತ್ತಿದೆ. ಇವರು ದಲಿತ ಸಮುದಾಯಕ್ಕೆ ಸೇರಿದವರೂ ಹೌದು. ಹಾಗೆಯೇ, ಮಾಜಿ ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ಉತ್ತಮ್ ಕುಮಾರ್ ರೆಡ್ಡಿ ಹೆಸರೂ ರೇಸ್​ನಲ್ಲಿ ಇದೆ.

ಇನ್ನಷ್ಟು ಚುನಾವಣೆ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ