AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ವರ್ಷಗಳ ಹಿಂದೆ ಮಾಡಿದ್ದ ತಪ್ಪಿನಿಂದ ಇಂದು ಅಧಿಕಾರ ಕಳೆದುಕೊಂಡ ಪಶ್ಚಾತಾಪದಲ್ಲಿ ಕೆಸಿಆರ್​

Telangana Assembly Election Result 2023: ತಮಿಳುನಾಡು ಚುನಾವಣೆ ಬಳಿಕ ಸುನಿಲ್ ಕಾನುಗೋಳು ಅವರು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್(K Chandrasekhar Rao) ಅವರನ್ನು ಭೇಟಿಯಾಗಿದ್ದರು. ಭೇಟಿ ಸಂದರ್ಭದಲ್ಲಿ ಮುಂಬರುವ ತೆಲಂಗಾಣ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಕುರಿತು ಚರ್ಚೆಯಾಗಿತ್ತು. ಈ ಸಂಬಂಧ ಸುಧೀರ್ಘ ಮಾತುಕತೆಯನ್ನೂ ನಡೆಸಿದ್ದರು. ಆದರೆ ಒಂದಷ್ಟು ಮಾತುಕತೆ ಬಳಿಕ ಸುನಿಲ್ ಅವರ ಆಫರ್​ ಅನ್ನು ಕೆಸಿಆರ್ ತಿರಸ್ಕರಿಸಿದ್ದರು ಎಂದು ಹೇಳಲಾಗುತ್ತಿದೆ.

ಎರಡು ವರ್ಷಗಳ ಹಿಂದೆ ಮಾಡಿದ್ದ ತಪ್ಪಿನಿಂದ ಇಂದು ಅಧಿಕಾರ ಕಳೆದುಕೊಂಡ ಪಶ್ಚಾತಾಪದಲ್ಲಿ ಕೆಸಿಆರ್​
ಸುನಿಲ್
ನಯನಾ ರಾಜೀವ್
|

Updated on:Dec 03, 2023 | 2:58 PM

Share

ತಮಿಳುನಾಡು ಚುನಾವಣೆ ಬಳಿಕ ಸುನಿಲ್ ಕಾನುಗೋಳು ಅವರು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್(K Chandrasekhar Rao) ಅವರನ್ನು ಭೇಟಿಯಾಗಿದ್ದರು. ಭೇಟಿ ಸಂದರ್ಭದಲ್ಲಿ ಮುಂಬರುವ ತೆಲಂಗಾಣ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಕುರಿತು ಚರ್ಚೆಯಾಗಿತ್ತು. ಈ ಸಂಬಂಧ ಸುಧೀರ್ಘ ಮಾತುಕತೆಯನ್ನೂ ನಡೆಸಿದ್ದರು. ಆದರೆ ಒಂದಷ್ಟು ಮಾತುಕತೆ ಬಳಿಕ ಸುನಿಲ್ ಅವರ ಆಫರ್​ ಅನ್ನು ಕೆಸಿಆರ್ ತಿರಸ್ಕರಿಸಿದ್ದರು ಎಂದು ಹೇಳಲಾಗುತ್ತಿದೆ.

ಅದರ ಪರಿಣಾಮವೇನೆಂದರೆ ಅದಾಗಿ ಕೆಲವೇ ತಿಂಗಳಲ್ಲಿ, ಸುನಿಲ್ ಕಾಂಗ್ರೆಸ್​ ಸೇರ್ಪಡೆಯಾಗುವುದರ ಜತೆಗೆ ಕಾಂಗ್ರೆಸ್​ನ ಚುನಾವಣಾ ಕಾರ್ಯತಂತ್ರದ ಅಧ್ಯಕ್ಷರಾಗಿಯೂ ನೇಮಕವಾಗುತ್ತಾರೆ. ಅದರ ಬೆನ್ನಲ್ಲೇ ಕರ್ನಾಟಕ ಹಾಗೂ ತೆಲಂಗಾಣ ವಿಧಾನಸಭಾ ಚುನಾವಣೆಯ ಪ್ರಚಾರ ಕಾರ್ಯತಂತ್ರದ ಉಸ್ತುವಾರಿಯನ್ನು ಸುನಿಲ್ ವಹಿಸಿಕೊಳ್ಳುತ್ತಾರೆ.

ಹಾಗೆಯೇ ಭಾರತ್ ಜೋಡೋ ಯಾತ್ರೆ ಹಿಂದಿನ ಪ್ರಮುಖ ಶಕ್ತಿ ಕೂಡ ಸುನಿಲ್ ಹೌದು, ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಅದ್ಭುತವಾಗಿ ಸಂಘಟಿಸಿ ಗೆದ್ದ ಬೆನ್ನಲ್ಲೇ ಅವೆಲ್ಲಾ ಶಕ್ತಿಯನ್ನು ತೆಲಂಗಾಣದತ್ತ ಹಾಕಿದರು, ಅದರ ಫಲಿತಾಂಶವೇ ಇಂದು ಬಂದಿದೆ.

ಮತ್ತಷ್ಟು ಓದಿ: ತೆಲಂಗಾಣ ಕಾಂಗ್ರೆಸ್​ ಅಧ್ಯಕ್ಷ ರೇವಂತ್​ರೆಡ್ಡಿ ಮನೆಗೆ ಬಿಗಿ ಭದ್ರತೆ

ಅವರ ತಂತ್ರಗಾರಿಕೆ ಮತ್ತು ಪರಿಶ್ರಮಕ್ಕೆ ಈಗ ಉತ್ತಮ ಫಲ ಸಿಕ್ಕಿದೆ. ಕಳೆದ ವರ್ಷ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್ ಗಾಂಧಿ ಅವರ ‘ಭಾರತ್ ಜೋಡೋ ಯಾತ್ರೆ’ಗೆ ಕಾರ್ಯತಂತ್ರ ರೂಪಿಸಿದ ಕೀರ್ತಿಯೂ ಕನುಗೋಳು ಅವರದ್ದು.

ಕರ್ನಾಟಕದ ಬಳ್ಳಾರಿ ಮೂಲದ ಸುನೀಲ್ ಕಾನುಗೋಳು, ಚೆನ್ನೈನಲ್ಲಿ ಹುಟ್ಟಿ ಬೆಳೆದ ಅವರು USA ಯಿಂದ ಉನ್ನತ ವ್ಯಾಸಂಗ ಮಾಡಿದರು ಮತ್ತು ಜಾಗತಿಕ ನಿರ್ವಹಣಾ ಸಲಹಾ ಸಂಸ್ಥೆಯಾದ ಮೆಕಿನ್ಸೆಯಲ್ಲಿ ಕೆಲಸ ಮಾಡಿದರು.

ಭಾರತಕ್ಕೆ ಹಿಂದಿರುಗಿದ ನಂತರ, ಕಾನುಗೋಳು ಗುಜರಾತ್‌ನಲ್ಲಿ ರಾಜಕೀಯ ಕಾರ್ಯತಂತ್ರಗಳಲ್ಲಿ ತೊಡಗಿಸಿಕೊಂಡರು ಮತ್ತು ಅಸೋಸಿಯೇಷನ್ ​​ಆಫ್ ಬಿಲಿಯನ್ ಮೈಂಡ್ಸ್ (ಎಬಿಎಂ) ಅನ್ನು ಮುನ್ನಡೆಸಿದರು. 2014ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮುಖ ಕಾರ್ಯತಂತ್ರ ರೂಪಿಸಿದವರಲ್ಲಿ ಇವರೂ ಒಬ್ಬರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:54 pm, Sun, 3 December 23

Follow Us
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ