Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ ಚುನಾವಣೆ: ಬಂಡಾಯ ಅಭ್ಯರ್ಥಿಗಳನ್ನು ಚುನಾವಣಾ ಅಖಾಡದಿಂದ ದೂರವಿಟ್ಟ ಕಾಂಗ್ರೆಸ್​

ತೆಲಂಗಾಣ ವಿಧಾನಸಭಾ ಚುನಾವಣೆ(Telangana Assembly Election) ಸನ್ನಿಹಿತವಾಗಿದೆ, ಇದೀಗ ಪಕ್ಷ  ಪಕ್ಷದೊಳಗೊಳಗೆ ಅಸಮಾಧಾನ ಶುರುವಾಗಿದೆ. ಈ ನಡುವೆ ರಾಜ್ಯಾದ್ಯಂತ ಹಲವು ಕ್ಷೇತ್ರಗಳಲ್ಲಿ ಕಣದಲ್ಲಿದ್ದ ಬಂಡಾಯ ಅಭ್ಯರ್ಥಿಗಳನ್ನು ಚುನಾವಣಾ ಅಖಾಡದಿಂದ ದೂರವಿಡುವಲ್ಲಿ ಕಾಂಗ್ರೆಸ್​ ಯಶಸ್ವಿಯಾಗಿದೆ. ನಾಮಪತ್ರ ಹಿಂಪಡೆಯಲು ನವೆಂಬರ್ 15 ಕೊನೆಯ ದಿನವಾಗಿದ್ದರಿಂದ ಕಾಂಗ್ರೆಸ್​ ನಾಯಕರು ರಾಜತಾಂತ್ರಿಕವಾಗಿ ಕೆಲ ಬಂಡಾಯಗಾರರನ್ನು ಕಣದಿಂದ ಹಿಂಪಡೆದರು, ಮುಂದೆ ನೇಮಕ ಮಾಡಲಾಗುವುದು ಎಂದು ಭರವಸೆ ನೀಡಿ ಮುನ್ನಡೆದಿದ್ದಾರೆ. ಇದರಿಂದ ಕಣದಲ್ಲಿ ನಿಂತಿದ್ದ ಅಭ್ಯರ್ಥಿಗಳಿಗೆ ಕೊಂಚ ನೆಮ್ಮದಿ ಸಿಕ್ಕಂತಾಗಿದೆ, ಮತಗಳ ವಿಭಜನೆ ಹಾಗೂ ಫಲಿತಾಂಶವನ್ನು ದುರ್ಬಳಕೆ ಮಾಡುವ ಭಯ ದೂರವಾದಂತಾಗಿದೆ.

ತೆಲಂಗಾಣ ಚುನಾವಣೆ: ಬಂಡಾಯ ಅಭ್ಯರ್ಥಿಗಳನ್ನು ಚುನಾವಣಾ ಅಖಾಡದಿಂದ ದೂರವಿಟ್ಟ ಕಾಂಗ್ರೆಸ್​
ಕಾಂಗ್ರೆಸ್​Image Credit source: Moneycontrol
Follow us
ನಯನಾ ರಾಜೀವ್
|

Updated on:Nov 16, 2023 | 8:00 AM

ತೆಲಂಗಾಣ ವಿಧಾನಸಭಾ ಚುನಾವಣೆ(Telangana Assembly Election) ಸನ್ನಿಹಿತವಾಗಿದೆ, ಇದೀಗ ಪಕ್ಷ  ಪಕ್ಷದೊಳಗೊಳಗೆ ಅಸಮಾಧಾನ ಶುರುವಾಗಿದೆ. ಈ ನಡುವೆ ರಾಜ್ಯಾದ್ಯಂತ ಹಲವು ಕ್ಷೇತ್ರಗಳಲ್ಲಿ ಕಣದಲ್ಲಿದ್ದ ಬಂಡಾಯ ಅಭ್ಯರ್ಥಿಗಳನ್ನು ಚುನಾವಣಾ ಅಖಾಡದಿಂದ ದೂರವಿಡುವಲ್ಲಿ ಕಾಂಗ್ರೆಸ್​ ಯಶಸ್ವಿಯಾಗಿದೆ. ನಾಮಪತ್ರ ಹಿಂಪಡೆಯಲು ನವೆಂಬರ್ 15 ಕೊನೆಯ ದಿನವಾಗಿದ್ದರಿಂದ ಕಾಂಗ್ರೆಸ್​ ನಾಯಕರು ರಾಜತಾಂತ್ರಿಕವಾಗಿ ಕೆಲ ಬಂಡಾಯಗಾರರನ್ನು ಕಣದಿಂದ ಹಿಂಪಡೆದರು, ಮುಂದೆ ನೇಮಕ ಮಾಡಲಾಗುವುದು ಎಂದು ಭರವಸೆ ನೀಡಿ ಮುನ್ನಡೆದಿದ್ದಾರೆ. ಇದರಿಂದ ಕಣದಲ್ಲಿ ನಿಂತಿದ್ದ ಅಭ್ಯರ್ಥಿಗಳಿಗೆ ಕೊಂಚ ನೆಮ್ಮದಿ ಸಿಕ್ಕಂತಾಗಿದೆ, ಮತಗಳ ವಿಭಜನೆ ಹಾಗೂ ಫಲಿತಾಂಶವನ್ನು ದುರ್ಬಳಕೆ ಮಾಡುವ ಭಯ ದೂರವಾದಂತಾಗಿದೆ.

ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ತಲೆನೋವಾಗಿ ಪರಿಣಮಿಸಿರುವ ಬಂಡಾಯಗಾರರನ್ನು ಸಮಾಧಾನಪಡಿಸಲು ಎಲ್ಲಾ ಪಕ್ಷಗಳು ಪ್ರಯತ್ನಿಸುತ್ತಿವೆ, ಹಲವು ಸ್ಥಾನಗಳಲ್ಲಿ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ಬಹುತೇಕ ಎಲ್ಲರೂ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್​ನಿಂದ ಟಿಕೆಟ್ ನಿರೀಕ್ಷಿಸಿ ನಿರಾಸೆಗೊಂಡಿದ್ದವರೆಲ್ಲಾ ಬೇರೆ ಪಕ್ಷಗಳಿಂದ ಹಾಗೂ ಪಕ್ಷೇತರರಾಗಿ ಕಣಕ್ಕೆ ಇಳಿದಿದ್ದಾರೆ.

ಕಾಂಗ್ರೆಸ್​ ನಾಲ್ಕು ಹಂತಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿತ್ತು, ಆದರೆ ಆ ಪಟ್ಟಿಯಲ್ಲಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್​ ಅಭ್ಯರ್ಥಿಗಳು ಕಾಂಗ್ರೆಸ್​ ನಾಯಕತ್ವವನ್ನು ಬಹಿರಂಗವಾಗಿ ಟೀಕಿಸಿದ್ದಾರೆ. ಗಾಂಧಿ ಭವನಕ್ಕೆ ತೆರಳಿ ಟಿಪಿಸಿಸಿ ಅಧ್ಯಕ್ಷ ರೇವಂತ್ ರೆಡ್ಡಿ ವಿರುದ್ಧ ಪ್ರತಿಭಟನೆ ನಡೆಸಿದರು.

ಮತ್ತಷ್ಟು ಓದಿ: ತೆಲಂಗಾಣ ವಿಧಾನಸಭೆ ಚುನಾವಣೆ: ಈ ಬಾರಿ ಕದನ ಕುತೂಹಲ ಸೃಷ್ಟಿಸಿರುವ ಹೈ ಪ್ರೊಫೈಲ್ ನಾಯಕರುಗಳಿವರು

ಟಿಕೆಟ್ ನೀಡದಿದ್ದರೆ ಕಾಂಗ್ರೆಸ್​ ವಿರುದ್ಧ ಬಂಡಾಯವೆದ್ದು ಚುನಾವಣಾ ಕಣಕ್ಕೆ ಇಳಿಯುತ್ತೇವೆ ಎಂದು ಸವಾಲು ಹಾಕಿದರು. ಆದಾಗ್ಯೂ ಬಂಡಾಯ ಅಭ್ಯರ್ಥಿಗಳನ್ನು ಚುನಾವಣಾ ರೇಸ್​ನಿಂದ ದೂರವಿಡುವಲ್ಲಿ ಕಾಂಗ್ರೆಸ್​ ಯಶಸ್ವಿಯಾಗಿದೆ. ಜುಕ್ಕಲ್​ನಲ್ಲಿ ಕಾಂಗ್ರೆಸ್​ ಬಂಡಾಯ ಗಂಗಾರಾಮ್ ಮತ್ತು ಬನ್​ಸುವಾಡದಲ್ಲಿ ಬಾಲರಾಜು ನಾಮಪತ್ರ ಹಿಂಪಡೆದಿದ್ದಾರೆ.

ಮುಂಬರುವ ತೆಲಂಗಾಣ ಅಸೆಂಬ್ಲಿ ಚುನಾವಣೆಗಳು ಈ ಬಾರಿ ಬಹಳ ಕುತೂಹಲಕಾರಿಯಾಗಿವೆ. ಈ ಬಾರಿ ಕಾಂಗ್ರೆಸ್ ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಮುಂಬರುವ ತೆಲಂಗಾಣ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಇನ್ನೂ ಘೋಷಿಸಿಲ್ಲ. ತೆಲಂಗಾಣದಲ್ಲಿ ನವೆಂಬರ್ 30ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಹೊರಬೀಳಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:58 am, Thu, 16 November 23

ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಸತೀಶ್ ಜಾರಕಿಹೊಳಿ ದೆಹಲಿಗೆ ಯಾಕೆ ಹೋಗಿದ್ದು ಅಂತ ಗೊತ್ತಿಲ್ಲ: ರಾಜಣ್ಣ
ಸತೀಶ್ ಜಾರಕಿಹೊಳಿ ದೆಹಲಿಗೆ ಯಾಕೆ ಹೋಗಿದ್ದು ಅಂತ ಗೊತ್ತಿಲ್ಲ: ರಾಜಣ್ಣ
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!