AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ ಚುನಾವಣೆ: ಬಂಡಾಯ ಅಭ್ಯರ್ಥಿಗಳನ್ನು ಚುನಾವಣಾ ಅಖಾಡದಿಂದ ದೂರವಿಟ್ಟ ಕಾಂಗ್ರೆಸ್​

ತೆಲಂಗಾಣ ವಿಧಾನಸಭಾ ಚುನಾವಣೆ(Telangana Assembly Election) ಸನ್ನಿಹಿತವಾಗಿದೆ, ಇದೀಗ ಪಕ್ಷ  ಪಕ್ಷದೊಳಗೊಳಗೆ ಅಸಮಾಧಾನ ಶುರುವಾಗಿದೆ. ಈ ನಡುವೆ ರಾಜ್ಯಾದ್ಯಂತ ಹಲವು ಕ್ಷೇತ್ರಗಳಲ್ಲಿ ಕಣದಲ್ಲಿದ್ದ ಬಂಡಾಯ ಅಭ್ಯರ್ಥಿಗಳನ್ನು ಚುನಾವಣಾ ಅಖಾಡದಿಂದ ದೂರವಿಡುವಲ್ಲಿ ಕಾಂಗ್ರೆಸ್​ ಯಶಸ್ವಿಯಾಗಿದೆ. ನಾಮಪತ್ರ ಹಿಂಪಡೆಯಲು ನವೆಂಬರ್ 15 ಕೊನೆಯ ದಿನವಾಗಿದ್ದರಿಂದ ಕಾಂಗ್ರೆಸ್​ ನಾಯಕರು ರಾಜತಾಂತ್ರಿಕವಾಗಿ ಕೆಲ ಬಂಡಾಯಗಾರರನ್ನು ಕಣದಿಂದ ಹಿಂಪಡೆದರು, ಮುಂದೆ ನೇಮಕ ಮಾಡಲಾಗುವುದು ಎಂದು ಭರವಸೆ ನೀಡಿ ಮುನ್ನಡೆದಿದ್ದಾರೆ. ಇದರಿಂದ ಕಣದಲ್ಲಿ ನಿಂತಿದ್ದ ಅಭ್ಯರ್ಥಿಗಳಿಗೆ ಕೊಂಚ ನೆಮ್ಮದಿ ಸಿಕ್ಕಂತಾಗಿದೆ, ಮತಗಳ ವಿಭಜನೆ ಹಾಗೂ ಫಲಿತಾಂಶವನ್ನು ದುರ್ಬಳಕೆ ಮಾಡುವ ಭಯ ದೂರವಾದಂತಾಗಿದೆ.

ತೆಲಂಗಾಣ ಚುನಾವಣೆ: ಬಂಡಾಯ ಅಭ್ಯರ್ಥಿಗಳನ್ನು ಚುನಾವಣಾ ಅಖಾಡದಿಂದ ದೂರವಿಟ್ಟ ಕಾಂಗ್ರೆಸ್​
ಕಾಂಗ್ರೆಸ್​Image Credit source: Moneycontrol
ನಯನಾ ರಾಜೀವ್
|

Updated on:Nov 16, 2023 | 8:00 AM

Share

ತೆಲಂಗಾಣ ವಿಧಾನಸಭಾ ಚುನಾವಣೆ(Telangana Assembly Election) ಸನ್ನಿಹಿತವಾಗಿದೆ, ಇದೀಗ ಪಕ್ಷ  ಪಕ್ಷದೊಳಗೊಳಗೆ ಅಸಮಾಧಾನ ಶುರುವಾಗಿದೆ. ಈ ನಡುವೆ ರಾಜ್ಯಾದ್ಯಂತ ಹಲವು ಕ್ಷೇತ್ರಗಳಲ್ಲಿ ಕಣದಲ್ಲಿದ್ದ ಬಂಡಾಯ ಅಭ್ಯರ್ಥಿಗಳನ್ನು ಚುನಾವಣಾ ಅಖಾಡದಿಂದ ದೂರವಿಡುವಲ್ಲಿ ಕಾಂಗ್ರೆಸ್​ ಯಶಸ್ವಿಯಾಗಿದೆ. ನಾಮಪತ್ರ ಹಿಂಪಡೆಯಲು ನವೆಂಬರ್ 15 ಕೊನೆಯ ದಿನವಾಗಿದ್ದರಿಂದ ಕಾಂಗ್ರೆಸ್​ ನಾಯಕರು ರಾಜತಾಂತ್ರಿಕವಾಗಿ ಕೆಲ ಬಂಡಾಯಗಾರರನ್ನು ಕಣದಿಂದ ಹಿಂಪಡೆದರು, ಮುಂದೆ ನೇಮಕ ಮಾಡಲಾಗುವುದು ಎಂದು ಭರವಸೆ ನೀಡಿ ಮುನ್ನಡೆದಿದ್ದಾರೆ. ಇದರಿಂದ ಕಣದಲ್ಲಿ ನಿಂತಿದ್ದ ಅಭ್ಯರ್ಥಿಗಳಿಗೆ ಕೊಂಚ ನೆಮ್ಮದಿ ಸಿಕ್ಕಂತಾಗಿದೆ, ಮತಗಳ ವಿಭಜನೆ ಹಾಗೂ ಫಲಿತಾಂಶವನ್ನು ದುರ್ಬಳಕೆ ಮಾಡುವ ಭಯ ದೂರವಾದಂತಾಗಿದೆ.

ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ತಲೆನೋವಾಗಿ ಪರಿಣಮಿಸಿರುವ ಬಂಡಾಯಗಾರರನ್ನು ಸಮಾಧಾನಪಡಿಸಲು ಎಲ್ಲಾ ಪಕ್ಷಗಳು ಪ್ರಯತ್ನಿಸುತ್ತಿವೆ, ಹಲವು ಸ್ಥಾನಗಳಲ್ಲಿ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ಬಹುತೇಕ ಎಲ್ಲರೂ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್​ನಿಂದ ಟಿಕೆಟ್ ನಿರೀಕ್ಷಿಸಿ ನಿರಾಸೆಗೊಂಡಿದ್ದವರೆಲ್ಲಾ ಬೇರೆ ಪಕ್ಷಗಳಿಂದ ಹಾಗೂ ಪಕ್ಷೇತರರಾಗಿ ಕಣಕ್ಕೆ ಇಳಿದಿದ್ದಾರೆ.

ಕಾಂಗ್ರೆಸ್​ ನಾಲ್ಕು ಹಂತಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿತ್ತು, ಆದರೆ ಆ ಪಟ್ಟಿಯಲ್ಲಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್​ ಅಭ್ಯರ್ಥಿಗಳು ಕಾಂಗ್ರೆಸ್​ ನಾಯಕತ್ವವನ್ನು ಬಹಿರಂಗವಾಗಿ ಟೀಕಿಸಿದ್ದಾರೆ. ಗಾಂಧಿ ಭವನಕ್ಕೆ ತೆರಳಿ ಟಿಪಿಸಿಸಿ ಅಧ್ಯಕ್ಷ ರೇವಂತ್ ರೆಡ್ಡಿ ವಿರುದ್ಧ ಪ್ರತಿಭಟನೆ ನಡೆಸಿದರು.

ಮತ್ತಷ್ಟು ಓದಿ: ತೆಲಂಗಾಣ ವಿಧಾನಸಭೆ ಚುನಾವಣೆ: ಈ ಬಾರಿ ಕದನ ಕುತೂಹಲ ಸೃಷ್ಟಿಸಿರುವ ಹೈ ಪ್ರೊಫೈಲ್ ನಾಯಕರುಗಳಿವರು

ಟಿಕೆಟ್ ನೀಡದಿದ್ದರೆ ಕಾಂಗ್ರೆಸ್​ ವಿರುದ್ಧ ಬಂಡಾಯವೆದ್ದು ಚುನಾವಣಾ ಕಣಕ್ಕೆ ಇಳಿಯುತ್ತೇವೆ ಎಂದು ಸವಾಲು ಹಾಕಿದರು. ಆದಾಗ್ಯೂ ಬಂಡಾಯ ಅಭ್ಯರ್ಥಿಗಳನ್ನು ಚುನಾವಣಾ ರೇಸ್​ನಿಂದ ದೂರವಿಡುವಲ್ಲಿ ಕಾಂಗ್ರೆಸ್​ ಯಶಸ್ವಿಯಾಗಿದೆ. ಜುಕ್ಕಲ್​ನಲ್ಲಿ ಕಾಂಗ್ರೆಸ್​ ಬಂಡಾಯ ಗಂಗಾರಾಮ್ ಮತ್ತು ಬನ್​ಸುವಾಡದಲ್ಲಿ ಬಾಲರಾಜು ನಾಮಪತ್ರ ಹಿಂಪಡೆದಿದ್ದಾರೆ.

ಮುಂಬರುವ ತೆಲಂಗಾಣ ಅಸೆಂಬ್ಲಿ ಚುನಾವಣೆಗಳು ಈ ಬಾರಿ ಬಹಳ ಕುತೂಹಲಕಾರಿಯಾಗಿವೆ. ಈ ಬಾರಿ ಕಾಂಗ್ರೆಸ್ ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಮುಂಬರುವ ತೆಲಂಗಾಣ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಇನ್ನೂ ಘೋಷಿಸಿಲ್ಲ. ತೆಲಂಗಾಣದಲ್ಲಿ ನವೆಂಬರ್ 30ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಹೊರಬೀಳಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:58 am, Thu, 16 November 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ