Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ಮಗನ ಮಾತು ಕೇಳದೆ ಚುನಾವಣೆಯಲ್ಲಿ ಸೋಲು ತಂದುಕೊಂಡ್ರಾ ಕೆಸಿಆರ್​

ಪ್ರತ್ಯೇಕ ತೆಲಂಗಾಣ ಚಳವಳಿಯನ್ನು ಮುನ್ನಡೆಸಿ ಬಳಿಕ 2014ರಿಂದ ಪಕ್ಷವನ್ನು ವಿಜಯದತ್ತ ಮುನ್ನಡೆಸಿದ ಕೆ ಚಂದ್ರಶೇಖರ್ ರಾವ್(K Chandrasekhar Rao)​ ಇನ್ನೇನು ಹ್ಯಾಟ್ರಿಕ್​ ಗೆಲುವು ಸಾಧಿಸಬೇಕೆನ್ನುವಷ್ಟರಲ್ಲಿ ಜನರ ವಿಶ್ವಾಸ ಕಳೆದುಕೊಂಡಿದ್ದಾರೆ. ಕೆಸಿಆರ್​ ತಮ್ಮ ಮಗ ಕೆಟಿ ರಾಮರಾವ್ ಅವರ ಮಾತು ಕೇಳಿದ್ದರೆ, ಚುನಾವಣೆಯಲ್ಲಿ ಗೆಲ್ಲುತ್ತಿದ್ದರೇನೋ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ತೆಲಂಗಾಣ: ಮಗನ ಮಾತು ಕೇಳದೆ ಚುನಾವಣೆಯಲ್ಲಿ ಸೋಲು ತಂದುಕೊಂಡ್ರಾ ಕೆಸಿಆರ್​
ಕೆಸಿಆರ್​-ಕೆಟಿಆರ್​Image Credit source: The Times India
Follow us
ನಯನಾ ರಾಜೀವ್
|

Updated on: Dec 05, 2023 | 11:10 AM

ಪ್ರತ್ಯೇಕ ತೆಲಂಗಾಣ ಚಳವಳಿಯನ್ನು ಮುನ್ನಡೆಸಿ ಬಳಿಕ 2014ರಿಂದ ಪಕ್ಷವನ್ನು ವಿಜಯದತ್ತ ಮುನ್ನಡೆಸಿದ ಕೆ ಚಂದ್ರಶೇಖರ್ ರಾವ್(K Chandrasekhar Rao)​ ಇನ್ನೇನು ಹ್ಯಾಟ್ರಿಕ್​ ಗೆಲುವು ಸಾಧಿಸಬೇಕೆನ್ನುವಷ್ಟರಲ್ಲಿ ಜನರ ವಿಶ್ವಾಸ ಕಳೆದುಕೊಂಡಿದ್ದಾರೆ. ಕೆಸಿಆರ್​ ತಮ್ಮ ಮಗ ಕೆಟಿ ರಾಮರಾವ್ ಅವರ ಮಾತು ಕೇಳಿದ್ದರೆ, ಚುನಾವಣೆಯಲ್ಲಿ ಗೆಲ್ಲುತ್ತಿದ್ದರೇನೋ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಚುನಾವಣೆಗೆ ಮುನ್ನ, ಹೊಸ ಮುಖಗಳನ್ನು ಕರೆತಂದು ಸುಮಾರು 30 ಶಾಸಕರಿಗೆ ಟಿಕೆಟ್ ನೀಡಬೇಡಿ ಎಂದು ಕೆಟಿಆರ್ ಮುಖ್ಯಮಂತ್ರಿಗೆ ಸಲಹೆ ನೀಡಿದ್ದರು, ಆದರೆ ಕೆಸಿಆರ್​ ಇದಕ್ಕೆ ಒಪ್ಪಿರಲಿಲ್ಲ. ಇದೀಗ ಈ ಪೈಕಿ ಬಹುತೇಕ ಸ್ಥಾನಗಳು ಕಾಂಗ್ರೆಸ್​ ಪಾಲಾಗಿವೆ. ಮೊದಲ ಬಾರಿಗೆ ಬಿಆರ್‌ಎಸ್ ಪ್ರತಿನಿಧಿಸಿದ್ದ 10 ನಾಯಕರ ಪೈಕಿ 9 ಮಂದಿ ವಿಜಯಶಾಲಿಯಾಗಿದ್ದಾರೆ.

2014ರಲ್ಲಿ ಭಾರತ್​ ರಾಷ್ಟ್ರ ಸಮಿತಿ ಹುಟ್ಟಿತ್ತು, ಇದೀಗ ಮೊದಲ ಸೋಲನ್ನು ಪಕ್ಷ ಕಂಡಿದೆ. 119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಯಲ್ಲಿ ಕಾಂಗ್ರೆಸ್ 64 ಸ್ಥಾನಗಳನ್ನು ಗೆದ್ದಿದ್ದರೆ, ಬಿಆರ್‌ಎಸ್ ಕೇವಲ 39 ಸ್ಥಾನಗಳನ್ನು ಪಡೆದುಕೊಳ್ಳುವಲ್ಲಿ ಸಫಲವಾಗಿದೆ.

ಪ್ರಚಾರದ ಸಂದರ್ಭದಲ್ಲಿ ಪಕ್ಷವು ಬಡವರಿಗಾಗಿ ತನ್ನ ಎಲ್ಲಾ ಕಲ್ಯಾಣ ಯೋಜನೆಗಳನ್ನು ಹೇಳಲು ಪ್ರಯತ್ನಿಸಿತ್ತು. ಹಾಗೆಯೇ ಯೋಜನೆಯ ಅನುಷ್ಠಾನಕ್ಕೆ ಹಣ ಹಂಚಿಕೆಯ ಬಗ್ಗೆ ನಿರ್ಧರಿಸಲು ಶಾಸಕರಿಗೆ ಅಧಿಕಾರವನ್ನು ಕೂಡ ನೀಡಲಾಗಿತ್ತು. ಇದು ತಾರತ್ಮಯ ಹಾಗೂ ಭ್ರಷ್ಟಾಚಾರದ ಆರೋಪಗಳಿಗೆ ಕಾರಣವಾಯಿತು.

ಕೆಸಿಆರ್ ಅವರ ಪುತ್ರ ಮತ್ತು ಐಟಿ ಸಚಿವ ಕೆಟಿ ರಾಮರಾವ್ ಅವರು ತೆಲಂಗಾಣದಲ್ಲಿ ಉದ್ಯೋಗ ಸೃಷ್ಟಿ ಮತ್ತು ಜಿಡಿಪಿ ಬೆಳವಣಿಗೆಯು ದೇಶದಲ್ಲೇ ಅತ್ಯಧಿಕವಾಗಿದೆ ಎಂದು ಹೇಳಿದ್ದರು, ಆದರೆ ಅನೇಕ ವರ್ಗಗಳು ಉದ್ಯೋಗವನ್ನು ಪಡೆಯುವುದು ಸಮಸ್ಯೆಯಾಗಿದೆ ಎಂದು ದೂರಿವೆ.

ಚುನಾವಣೆಗೆ ಮುನ್ನ, ಹೊಸ ಮುಖಗಳನ್ನು ಕರೆತಂದು ಸುಮಾರು 30 ಶಾಸಕರಿಗೆ ಟಿಕೆಟ್ ನೀಡಬೇಡಿ ಎಂದು ಕೆಟಿಆರ್ ಮುಖ್ಯಮಂತ್ರಿಗೆ ಸಲಹೆ ನೀಡಿದ್ದರು, ಆದರೆ ಕೆಸಿಆರ್​ ಇದಕ್ಕೆ ಒಪ್ಪಿರಲಿಲ್ಲ. ಇದೀಗ ಈ ಪೈಕಿ ಬಹುತೇಕ ಸ್ಥಾನಗಳು ಕಾಂಗ್ರೆಸ್​ ಪಾಲಾಗಿವೆ.

ಮತ್ತಷ್ಟು ಓದಿ: ತೆಲಂಗಾಣ: ಮುಂದಿನ ಮುಖ್ಯಮಂತ್ರಿ ರೇವಂತ್ ರೆಡ್ಡಿ? ಇಂದು ರಾತ್ರಿ ನೂತನ ಸಿಎಂ ಪ್ರಮಾಣವಚನ ಸ್ವೀಕಾರ

ಮೊದಲ ಬಾರಿಗೆ ಬಿಆರ್‌ಎಸ್ ಪ್ರತಿನಿಧಿಸಿದ್ದ 10 ನಾಯಕರ ಪೈಕಿ 9 ಮಂದಿ ವಿಜಯಶಾಲಿಯಾಗಿದ್ದಾರೆ. ಕಾಂಗ್ರೆಸ್ ಪಕ್ಷವು ಹಲವು ಬಣಗಳನ್ನು ಹೊಂದಿದೆ ಮತ್ತು ಸ್ಪಷ್ಟ ಬಹುಮತವನ್ನು ಗೆದ್ದರೂ ಹತಾಶವಾಗಿದೆ. ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಸೋತ ಮತ್ತು ಮಧ್ಯಪ್ರದೇಶದಿಂದಲೂ ಬಿಜೆಪಿಯನ್ನು ಕಿತ್ತೊಗೆಯಲು ವಿಫಲವಾದ ಕಾಂಗ್ರೆಸ್‌ಗೆ ತೆಲಂಗಾಣ ಗೆಲುವಿನ ರೇಖೆಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ