AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ ಚುನಾವಣೆ: 14 ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಭಾರತೀಯ ಜನತಾ ಪಕ್ಷ (ಬಿಜೆಪಿ) ಶುಕ್ರವಾರ ತೆಲಂಗಾಣದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಐದನೇ ಪಟ್ಟಿಯಲ್ಲಿ 14 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ. ಬಿಜೆಪಿ ತನ್ನ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ನವೆಂಬರ್ 7 ರಂದು ಬಿಡುಗಡೆ ಮಾಡಿತ್ತು, ಅದರಲ್ಲಿ 12 ಹೆಸರುಗಳಿತ್ತು, ಅದಕ್ಕೂ ಮೊದಲು ನವೆಂಬರ್ 2 ರಂದು ತೆಲಂಗಾಣ ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿತ್ತು.

ತೆಲಂಗಾಣ ಚುನಾವಣೆ: 14 ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ
ನರೇಂದ್ರ ಮೋದಿ Image Credit source: India TV
ನಯನಾ ರಾಜೀವ್
|

Updated on: Nov 10, 2023 | 12:46 PM

Share

ಭಾರತೀಯ ಜನತಾ ಪಕ್ಷ (ಬಿಜೆಪಿ) ಶುಕ್ರವಾರ ತೆಲಂಗಾಣದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಐದನೇ ಪಟ್ಟಿಯಲ್ಲಿ 14 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ. ಬಿಜೆಪಿ ತನ್ನ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ನವೆಂಬರ್ 7 ರಂದು ಬಿಡುಗಡೆ ಮಾಡಿತ್ತು, ಅದರಲ್ಲಿ 12 ಹೆಸರುಗಳಿತ್ತು, ಅದಕ್ಕೂ ಮೊದಲು ನವೆಂಬರ್ 2 ರಂದು ತೆಲಂಗಾಣ ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿತ್ತು.

ಇದರಲ್ಲಿ 35 ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ. ಇದಕ್ಕೂ ಮೊದಲು ಅಕ್ಟೋಬರ್ 22 ರಂದು ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು, ಇದರಲ್ಲಿ 52 ಅಭ್ಯರ್ಥಿಗಳ ಹೆಸರುಗಳಿವೆ, ಅಕ್ಟೋಬರ್ 27 ರಂದು ಬಿಜೆಪಿ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿತು, ಅದರಲ್ಲಿ ಒಬ್ಬ ಅಭ್ಯರ್ಥಿ ಎಪಿ ಮಿಥುನ್ ಕುಮಾರ್ ರೆಡ್ಡಿ ಹೆಸರಿತ್ತು.

ಮಲ್ಕಾಜ್‌ಗಿರಿಯಿಂದ ರಾಮಚಂದರ್ ರಾವ್ ಅವರನ್ನು ಕಣಕ್ಕಿಳಿಸಿದೆ,ಬಿಜೆಪಿಯ 52 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ತೆಲಂಗಾಣದ ಮಾಜಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಸೇರಿದಂತೆ ಮೂವರು ಲೋಕಸಭಾ ಸಂಸದರು ಕಾಣಿಸಿಕೊಂಡಿದ್ದಾರೆ. ತನ್ನ ಮೊದಲ ಪಟ್ಟಿಯಲ್ಲಿ, ಬಿಜೆಪಿಯು ತನ್ನ ಫೈರ್‌ಬ್ರಾಂಡ್ ಹಿಂದುತ್ವದ ನಾಯಕ ಟಿ ರಾಜಾ ಸಿಂಗ್ ಅವರ ಅಮಾನತು ರದ್ದುಗೊಳಿಸಿದ ನಂತರ ಅವರ ಗೋಶಾಮಹಲ್ ಕ್ಷೇತ್ರದಿಂದ ಟಿಕೆಟ್ ನೀಡಿದೆ.

ಈ ಹೆಸರುಗಳನ್ನು ಐದನೇ ಪಟ್ಟಿಯಲ್ಲಿ ಸೇರಿಸಲಾಗಿದೆ ಬಿಜೆಪಿಯ ಐದನೇ ಪಟ್ಟಿಯ ಪ್ರಕಾರ, ಬೆಳ್ಳಂಪಲ್ಲಿ (ಎಸ್‌ಸಿ) ಕ್ಷೇತ್ರದಿಂದ ಕೊಯ್ಲಾ ಇಮಾಜಿ, ಪೆದ್ದಪಲ್ಲಿಯಿಂದ ದುಗ್ಯಾಲ ಪ್ರದೀಪ್, ಸಂಗಾರೆಡ್ಡಿ ಕ್ಷೇತ್ರದಿಂದ ದೇಶಪಾಂಡೆ ರಾಜೇಶ್ವರ್ ರಾವ್, ಮೇಡ್ಚಲ್ ಕ್ಷೇತ್ರದಿಂದ ಯೆನುಗು ಸುದರ್ಶನ್ ರೆಡ್ಡಿ, ಎನ್. ರಾಮಚಂದ್ರರಾವ್, ಸೆರಿಲಿಂಗಂಪಲ್ಲಿ ಕ್ಷೇತ್ರದಿಂದ ರವಿಕುಮಾರ್ ಯಾದವ್, ನಾಂಪಲ್ಲಿ ಕ್ಷೇತ್ರದಿಂದ ರಾಹುಲ್ ಚಂದ್ರ, ಚಂದ್ರಾಯನಗುಟ್ಟದಿಂದ ಕೆ. ಮಹೇಂದ್ರ, ಸಿಕಂದರಾಬಾದ್ ಕಂಟೋನ್ಮೆಂಟ್ (ಎಸ್‌ಸಿ) ಸ್ಥಾನದಿಂದ ಗಣೇಶ್ ನಾರಾಯಣ್, ದೇವರಕಾಡದಿಂದ ಕೊಂಡ ಪ್ರಶಾಂತ್ ರೆಡ್ಡಿ, ವನಪರ್ತಿಯಿಂದ ಅನುಗ್ನಾ ರೆಡ್ಡಿ, ಆಲಂಪುರ (ಎಸ್‌ಸಿ) ಕ್ಷೇತ್ರದಿಂದ ಮಾರಮ್ಮ, ಕೆ. ಪುಲ್ಲಾರಾವ್ ಅವರಿಗೆ ಟಿಕೆಟ್ ನೀಡಲಾಗಿದ್ದು, ಮಧಿರಾ (ಎಸ್‌ಸಿ) ಕ್ಷೇತ್ರದಿಂದ ಪೆರುಮಾರಪಳ್ಳಿ ವಿಜಯರಾಜು ಅವರಿಗೆ ಟಿಕೆಟ್ ನೀಡಲಾಗಿದೆ.

ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ

ತೆಲಂಗಾಣದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ನವೆಂಬರ್ 30 ರಂದು ಮತದಾನ ನಡೆಯಲಿದೆ. ಈ ಹಿಂದೆ ಮತದಾನಕ್ಕೆ ಹೊರಡಿಸಿದ್ದ ಅಧಿಸೂಚನೆ ಪ್ರಕಾರ ಇಂದು (ನ.10) ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಇನ್ನೂ ನಾಮಪತ್ರ ಸಲ್ಲಿಸಲು ಸಾಧ್ಯವಾಗದ ಅಭ್ಯರ್ಥಿಗಳು ಇಂದು ಸಂಜೆಯೊಳಗೆ ಸಂಬಂಧಪಟ್ಟ ಚುನಾವಣಾ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಬಹುದು. ಚುನಾವಣಾ ಆಯೋಗ ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಈಗ ಅಭ್ಯರ್ಥಿಗಳು ಸಲ್ಲಿಸಿರುವ ನಾಮಪತ್ರಗಳ ಪರಿಶೀಲನೆಯು ನವೆಂಬರ್ 13 ರವರೆಗೆ ನಡೆಯಲಿದೆ. ಇದರ ನಂತರ, ಯಾವುದೇ ಅಭ್ಯರ್ಥಿಯು ತನ್ನ ನಾಮಪತ್ರ ಹಿಂಪಡೆಯಲು ಬಯಸಿದರೆ ಅವರು ನವೆಂಬರ್ 15 ರವರೆಗೆ ಹಿಂಪಡೆಯಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ