AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ ಚುನಾವಣೆ: 14 ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಭಾರತೀಯ ಜನತಾ ಪಕ್ಷ (ಬಿಜೆಪಿ) ಶುಕ್ರವಾರ ತೆಲಂಗಾಣದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಐದನೇ ಪಟ್ಟಿಯಲ್ಲಿ 14 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ. ಬಿಜೆಪಿ ತನ್ನ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ನವೆಂಬರ್ 7 ರಂದು ಬಿಡುಗಡೆ ಮಾಡಿತ್ತು, ಅದರಲ್ಲಿ 12 ಹೆಸರುಗಳಿತ್ತು, ಅದಕ್ಕೂ ಮೊದಲು ನವೆಂಬರ್ 2 ರಂದು ತೆಲಂಗಾಣ ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿತ್ತು.

ತೆಲಂಗಾಣ ಚುನಾವಣೆ: 14 ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ
ನರೇಂದ್ರ ಮೋದಿ Image Credit source: India TV
ನಯನಾ ರಾಜೀವ್
|

Updated on: Nov 10, 2023 | 12:46 PM

Share

ಭಾರತೀಯ ಜನತಾ ಪಕ್ಷ (ಬಿಜೆಪಿ) ಶುಕ್ರವಾರ ತೆಲಂಗಾಣದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಐದನೇ ಪಟ್ಟಿಯಲ್ಲಿ 14 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ. ಬಿಜೆಪಿ ತನ್ನ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ನವೆಂಬರ್ 7 ರಂದು ಬಿಡುಗಡೆ ಮಾಡಿತ್ತು, ಅದರಲ್ಲಿ 12 ಹೆಸರುಗಳಿತ್ತು, ಅದಕ್ಕೂ ಮೊದಲು ನವೆಂಬರ್ 2 ರಂದು ತೆಲಂಗಾಣ ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿತ್ತು.

ಇದರಲ್ಲಿ 35 ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ. ಇದಕ್ಕೂ ಮೊದಲು ಅಕ್ಟೋಬರ್ 22 ರಂದು ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು, ಇದರಲ್ಲಿ 52 ಅಭ್ಯರ್ಥಿಗಳ ಹೆಸರುಗಳಿವೆ, ಅಕ್ಟೋಬರ್ 27 ರಂದು ಬಿಜೆಪಿ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿತು, ಅದರಲ್ಲಿ ಒಬ್ಬ ಅಭ್ಯರ್ಥಿ ಎಪಿ ಮಿಥುನ್ ಕುಮಾರ್ ರೆಡ್ಡಿ ಹೆಸರಿತ್ತು.

ಮಲ್ಕಾಜ್‌ಗಿರಿಯಿಂದ ರಾಮಚಂದರ್ ರಾವ್ ಅವರನ್ನು ಕಣಕ್ಕಿಳಿಸಿದೆ,ಬಿಜೆಪಿಯ 52 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ತೆಲಂಗಾಣದ ಮಾಜಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಸೇರಿದಂತೆ ಮೂವರು ಲೋಕಸಭಾ ಸಂಸದರು ಕಾಣಿಸಿಕೊಂಡಿದ್ದಾರೆ. ತನ್ನ ಮೊದಲ ಪಟ್ಟಿಯಲ್ಲಿ, ಬಿಜೆಪಿಯು ತನ್ನ ಫೈರ್‌ಬ್ರಾಂಡ್ ಹಿಂದುತ್ವದ ನಾಯಕ ಟಿ ರಾಜಾ ಸಿಂಗ್ ಅವರ ಅಮಾನತು ರದ್ದುಗೊಳಿಸಿದ ನಂತರ ಅವರ ಗೋಶಾಮಹಲ್ ಕ್ಷೇತ್ರದಿಂದ ಟಿಕೆಟ್ ನೀಡಿದೆ.

ಈ ಹೆಸರುಗಳನ್ನು ಐದನೇ ಪಟ್ಟಿಯಲ್ಲಿ ಸೇರಿಸಲಾಗಿದೆ ಬಿಜೆಪಿಯ ಐದನೇ ಪಟ್ಟಿಯ ಪ್ರಕಾರ, ಬೆಳ್ಳಂಪಲ್ಲಿ (ಎಸ್‌ಸಿ) ಕ್ಷೇತ್ರದಿಂದ ಕೊಯ್ಲಾ ಇಮಾಜಿ, ಪೆದ್ದಪಲ್ಲಿಯಿಂದ ದುಗ್ಯಾಲ ಪ್ರದೀಪ್, ಸಂಗಾರೆಡ್ಡಿ ಕ್ಷೇತ್ರದಿಂದ ದೇಶಪಾಂಡೆ ರಾಜೇಶ್ವರ್ ರಾವ್, ಮೇಡ್ಚಲ್ ಕ್ಷೇತ್ರದಿಂದ ಯೆನುಗು ಸುದರ್ಶನ್ ರೆಡ್ಡಿ, ಎನ್. ರಾಮಚಂದ್ರರಾವ್, ಸೆರಿಲಿಂಗಂಪಲ್ಲಿ ಕ್ಷೇತ್ರದಿಂದ ರವಿಕುಮಾರ್ ಯಾದವ್, ನಾಂಪಲ್ಲಿ ಕ್ಷೇತ್ರದಿಂದ ರಾಹುಲ್ ಚಂದ್ರ, ಚಂದ್ರಾಯನಗುಟ್ಟದಿಂದ ಕೆ. ಮಹೇಂದ್ರ, ಸಿಕಂದರಾಬಾದ್ ಕಂಟೋನ್ಮೆಂಟ್ (ಎಸ್‌ಸಿ) ಸ್ಥಾನದಿಂದ ಗಣೇಶ್ ನಾರಾಯಣ್, ದೇವರಕಾಡದಿಂದ ಕೊಂಡ ಪ್ರಶಾಂತ್ ರೆಡ್ಡಿ, ವನಪರ್ತಿಯಿಂದ ಅನುಗ್ನಾ ರೆಡ್ಡಿ, ಆಲಂಪುರ (ಎಸ್‌ಸಿ) ಕ್ಷೇತ್ರದಿಂದ ಮಾರಮ್ಮ, ಕೆ. ಪುಲ್ಲಾರಾವ್ ಅವರಿಗೆ ಟಿಕೆಟ್ ನೀಡಲಾಗಿದ್ದು, ಮಧಿರಾ (ಎಸ್‌ಸಿ) ಕ್ಷೇತ್ರದಿಂದ ಪೆರುಮಾರಪಳ್ಳಿ ವಿಜಯರಾಜು ಅವರಿಗೆ ಟಿಕೆಟ್ ನೀಡಲಾಗಿದೆ.

ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ

ತೆಲಂಗಾಣದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ನವೆಂಬರ್ 30 ರಂದು ಮತದಾನ ನಡೆಯಲಿದೆ. ಈ ಹಿಂದೆ ಮತದಾನಕ್ಕೆ ಹೊರಡಿಸಿದ್ದ ಅಧಿಸೂಚನೆ ಪ್ರಕಾರ ಇಂದು (ನ.10) ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಇನ್ನೂ ನಾಮಪತ್ರ ಸಲ್ಲಿಸಲು ಸಾಧ್ಯವಾಗದ ಅಭ್ಯರ್ಥಿಗಳು ಇಂದು ಸಂಜೆಯೊಳಗೆ ಸಂಬಂಧಪಟ್ಟ ಚುನಾವಣಾ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಬಹುದು. ಚುನಾವಣಾ ಆಯೋಗ ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಈಗ ಅಭ್ಯರ್ಥಿಗಳು ಸಲ್ಲಿಸಿರುವ ನಾಮಪತ್ರಗಳ ಪರಿಶೀಲನೆಯು ನವೆಂಬರ್ 13 ರವರೆಗೆ ನಡೆಯಲಿದೆ. ಇದರ ನಂತರ, ಯಾವುದೇ ಅಭ್ಯರ್ಥಿಯು ತನ್ನ ನಾಮಪತ್ರ ಹಿಂಪಡೆಯಲು ಬಯಸಿದರೆ ಅವರು ನವೆಂಬರ್ 15 ರವರೆಗೆ ಹಿಂಪಡೆಯಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?