AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ ಚುನಾವಣೆ: 14 ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಭಾರತೀಯ ಜನತಾ ಪಕ್ಷ (ಬಿಜೆಪಿ) ಶುಕ್ರವಾರ ತೆಲಂಗಾಣದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಐದನೇ ಪಟ್ಟಿಯಲ್ಲಿ 14 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ. ಬಿಜೆಪಿ ತನ್ನ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ನವೆಂಬರ್ 7 ರಂದು ಬಿಡುಗಡೆ ಮಾಡಿತ್ತು, ಅದರಲ್ಲಿ 12 ಹೆಸರುಗಳಿತ್ತು, ಅದಕ್ಕೂ ಮೊದಲು ನವೆಂಬರ್ 2 ರಂದು ತೆಲಂಗಾಣ ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿತ್ತು.

ತೆಲಂಗಾಣ ಚುನಾವಣೆ: 14 ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ
ನರೇಂದ್ರ ಮೋದಿ Image Credit source: India TV
ನಯನಾ ರಾಜೀವ್
|

Updated on: Nov 10, 2023 | 12:46 PM

Share

ಭಾರತೀಯ ಜನತಾ ಪಕ್ಷ (ಬಿಜೆಪಿ) ಶುಕ್ರವಾರ ತೆಲಂಗಾಣದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಐದನೇ ಪಟ್ಟಿಯಲ್ಲಿ 14 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ. ಬಿಜೆಪಿ ತನ್ನ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ನವೆಂಬರ್ 7 ರಂದು ಬಿಡುಗಡೆ ಮಾಡಿತ್ತು, ಅದರಲ್ಲಿ 12 ಹೆಸರುಗಳಿತ್ತು, ಅದಕ್ಕೂ ಮೊದಲು ನವೆಂಬರ್ 2 ರಂದು ತೆಲಂಗಾಣ ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿತ್ತು.

ಇದರಲ್ಲಿ 35 ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ. ಇದಕ್ಕೂ ಮೊದಲು ಅಕ್ಟೋಬರ್ 22 ರಂದು ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು, ಇದರಲ್ಲಿ 52 ಅಭ್ಯರ್ಥಿಗಳ ಹೆಸರುಗಳಿವೆ, ಅಕ್ಟೋಬರ್ 27 ರಂದು ಬಿಜೆಪಿ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿತು, ಅದರಲ್ಲಿ ಒಬ್ಬ ಅಭ್ಯರ್ಥಿ ಎಪಿ ಮಿಥುನ್ ಕುಮಾರ್ ರೆಡ್ಡಿ ಹೆಸರಿತ್ತು.

ಮಲ್ಕಾಜ್‌ಗಿರಿಯಿಂದ ರಾಮಚಂದರ್ ರಾವ್ ಅವರನ್ನು ಕಣಕ್ಕಿಳಿಸಿದೆ,ಬಿಜೆಪಿಯ 52 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ತೆಲಂಗಾಣದ ಮಾಜಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಸೇರಿದಂತೆ ಮೂವರು ಲೋಕಸಭಾ ಸಂಸದರು ಕಾಣಿಸಿಕೊಂಡಿದ್ದಾರೆ. ತನ್ನ ಮೊದಲ ಪಟ್ಟಿಯಲ್ಲಿ, ಬಿಜೆಪಿಯು ತನ್ನ ಫೈರ್‌ಬ್ರಾಂಡ್ ಹಿಂದುತ್ವದ ನಾಯಕ ಟಿ ರಾಜಾ ಸಿಂಗ್ ಅವರ ಅಮಾನತು ರದ್ದುಗೊಳಿಸಿದ ನಂತರ ಅವರ ಗೋಶಾಮಹಲ್ ಕ್ಷೇತ್ರದಿಂದ ಟಿಕೆಟ್ ನೀಡಿದೆ.

ಈ ಹೆಸರುಗಳನ್ನು ಐದನೇ ಪಟ್ಟಿಯಲ್ಲಿ ಸೇರಿಸಲಾಗಿದೆ ಬಿಜೆಪಿಯ ಐದನೇ ಪಟ್ಟಿಯ ಪ್ರಕಾರ, ಬೆಳ್ಳಂಪಲ್ಲಿ (ಎಸ್‌ಸಿ) ಕ್ಷೇತ್ರದಿಂದ ಕೊಯ್ಲಾ ಇಮಾಜಿ, ಪೆದ್ದಪಲ್ಲಿಯಿಂದ ದುಗ್ಯಾಲ ಪ್ರದೀಪ್, ಸಂಗಾರೆಡ್ಡಿ ಕ್ಷೇತ್ರದಿಂದ ದೇಶಪಾಂಡೆ ರಾಜೇಶ್ವರ್ ರಾವ್, ಮೇಡ್ಚಲ್ ಕ್ಷೇತ್ರದಿಂದ ಯೆನುಗು ಸುದರ್ಶನ್ ರೆಡ್ಡಿ, ಎನ್. ರಾಮಚಂದ್ರರಾವ್, ಸೆರಿಲಿಂಗಂಪಲ್ಲಿ ಕ್ಷೇತ್ರದಿಂದ ರವಿಕುಮಾರ್ ಯಾದವ್, ನಾಂಪಲ್ಲಿ ಕ್ಷೇತ್ರದಿಂದ ರಾಹುಲ್ ಚಂದ್ರ, ಚಂದ್ರಾಯನಗುಟ್ಟದಿಂದ ಕೆ. ಮಹೇಂದ್ರ, ಸಿಕಂದರಾಬಾದ್ ಕಂಟೋನ್ಮೆಂಟ್ (ಎಸ್‌ಸಿ) ಸ್ಥಾನದಿಂದ ಗಣೇಶ್ ನಾರಾಯಣ್, ದೇವರಕಾಡದಿಂದ ಕೊಂಡ ಪ್ರಶಾಂತ್ ರೆಡ್ಡಿ, ವನಪರ್ತಿಯಿಂದ ಅನುಗ್ನಾ ರೆಡ್ಡಿ, ಆಲಂಪುರ (ಎಸ್‌ಸಿ) ಕ್ಷೇತ್ರದಿಂದ ಮಾರಮ್ಮ, ಕೆ. ಪುಲ್ಲಾರಾವ್ ಅವರಿಗೆ ಟಿಕೆಟ್ ನೀಡಲಾಗಿದ್ದು, ಮಧಿರಾ (ಎಸ್‌ಸಿ) ಕ್ಷೇತ್ರದಿಂದ ಪೆರುಮಾರಪಳ್ಳಿ ವಿಜಯರಾಜು ಅವರಿಗೆ ಟಿಕೆಟ್ ನೀಡಲಾಗಿದೆ.

ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ

ತೆಲಂಗಾಣದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ನವೆಂಬರ್ 30 ರಂದು ಮತದಾನ ನಡೆಯಲಿದೆ. ಈ ಹಿಂದೆ ಮತದಾನಕ್ಕೆ ಹೊರಡಿಸಿದ್ದ ಅಧಿಸೂಚನೆ ಪ್ರಕಾರ ಇಂದು (ನ.10) ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಇನ್ನೂ ನಾಮಪತ್ರ ಸಲ್ಲಿಸಲು ಸಾಧ್ಯವಾಗದ ಅಭ್ಯರ್ಥಿಗಳು ಇಂದು ಸಂಜೆಯೊಳಗೆ ಸಂಬಂಧಪಟ್ಟ ಚುನಾವಣಾ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಬಹುದು. ಚುನಾವಣಾ ಆಯೋಗ ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಈಗ ಅಭ್ಯರ್ಥಿಗಳು ಸಲ್ಲಿಸಿರುವ ನಾಮಪತ್ರಗಳ ಪರಿಶೀಲನೆಯು ನವೆಂಬರ್ 13 ರವರೆಗೆ ನಡೆಯಲಿದೆ. ಇದರ ನಂತರ, ಯಾವುದೇ ಅಭ್ಯರ್ಥಿಯು ತನ್ನ ನಾಮಪತ್ರ ಹಿಂಪಡೆಯಲು ಬಯಸಿದರೆ ಅವರು ನವೆಂಬರ್ 15 ರವರೆಗೆ ಹಿಂಪಡೆಯಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್