ತೆಲಂಗಾಣ ಚುನಾವಣೆ: ನಿಜಾಮಾಬಾದ್​ನ ಸ್ವತಂತ್ರ ಅಭ್ಯರ್ಥಿ ಆತ್ಮಹತ್ಯೆ

ತೆಲಂಗಾಣ ವಿಧಾನಸಭಾ ಚುನಾವಣೆ ಸನ್ನಿಹಿತವಾಗುತ್ತಿದೆ, ನಿಜಾಮಾಬಾದ್​ನಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕನ್ನಯ್ಯಗೌಡ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ನಿಜಾಮಾಬಾದ್ ನಗರದಲ್ಲಿ ಭಾರೀ ಸಂಚಲನ ಮೂಡಿಸಿದೆ. ಗಾಯತ್ರಿ ನಗರದಲ್ಲಿ ವಾಸವಿರುವ ಕನ್ನಯ್ಯ  ಗೌಡ ನಿಜಾಮಾಬಾದ್ ನಗರದಿಂದ ಪಕ್ಷೇತರರಾಗಿ ಶಾಸಕರಾಗಿ ಸ್ಪರ್ಧಿಸಿದ್ದರು. ಆದರೆ  ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತೆಲಂಗಾಣ ಚುನಾವಣೆ: ನಿಜಾಮಾಬಾದ್​ನ ಸ್ವತಂತ್ರ ಅಭ್ಯರ್ಥಿ ಆತ್ಮಹತ್ಯೆ
ಸಾವು
Follow us
|

Updated on: Nov 20, 2023 | 9:41 AM

ತೆಲಂಗಾಣ ವಿಧಾನಸಭಾ ಚುನಾವಣೆ ಸನ್ನಿಹಿತವಾಗುತ್ತಿದೆ, ನಿಜಾಮಾಬಾದ್​ನಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕನ್ನಯ್ಯಗೌಡ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ನಿಜಾಮಾಬಾದ್ ನಗರದಲ್ಲಿ ಭಾರೀ ಸಂಚಲನ ಮೂಡಿಸಿದೆ. ಗಾಯತ್ರಿ ನಗರದಲ್ಲಿ ವಾಸವಿರುವ ಕನ್ನಯ್ಯ  ಗೌಡ ನಿಜಾಮಾಬಾದ್ ನಗರದಿಂದ ಪಕ್ಷೇತರರಾಗಿ ಶಾಸಕರಾಗಿ ಸ್ಪರ್ಧಿಸಿದ್ದರು. ಆದರೆ  ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗಮನಿಸಿದ ಕುಟುಂಬಸ್ಥರು ಸರ್ಕಾರಿ ಆಸ್ಪತ್ರೆಗೆ ದೌಡಾಯಿಸಿದ್ದು, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಕನ್ನಯ್ಯ  ಗೌಡ ಅವರ ಫೋನ್ ಅನ್ನು ಸೈಬರ್ ಅಪರಾಧಿಗಳು ಹ್ಯಾಕ್ ಮಾಡಿದ್ದಾರೆ ಎಂದು ಕುಟುಂಬ ಸದಸ್ಯರು ಹೇಳುತ್ತಾರೆ. ಸೈಬರ್ ಅಪರಾಧಿಗಳ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ.

ಫೋನ್ ಹ್ಯಾಕ್ ಮಾಡಿರುವ ಸೈಬರ್ ಕ್ರಿಮಿನಲ್ ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರು ಪೊಲೀಸರಿಗೆ ಮನವಿ ಮಾಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗುವುದು.

ಮತ್ತಷ್ಟು ಓದಿ: ಅಪಾರ್ಟ್​ಮೆಂಟ್​ನಲ್ಲಿ ದಂಪತಿ ಹಾಗೂ ಇಬ್ಬರು ಮಕ್ಕಳ ಮೃತ ದೇಹಗಳು ಕೊಳೆತ ಸ್ಥಿತಿಯಲ್ಲಿ ಪತ್ತೆ

ಪೊಲೀಸರ ಪ್ರಕಾರ, ಸೈಬರ್ ವಂಚನೆಯಲ್ಲಿ ತೊಡಗಿರುವ ವ್ಯಕ್ತಿಗಳು 30 ವರ್ಷದ ವ್ಯಕ್ತಿಯಿಂದ 10 ಲಕ್ಷ ರೂಪಾಯಿಗೆ ಬೇಡಿಕೆಯಿಟ್ಟರು, ಮಹಿಳೆಯೊಂದಿಗೆ ವೀಡಿಯೊ ಕರೆ ಮಾಡುವಾಗ ತೆಗೆದ ವೀಡಿಯೊವನ್ನು ಅವರ ನಾಮಪತ್ರದೊಂದಿಗೆ ಸಾಮಾಜಿಕವಾಗಿ ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದರು.

ಏತನ್ಮಧ್ಯೆ, ಕ್ಷೇತ್ರದ ಚುನಾವಣೆಯನ್ನು ಮುಂದೂಡುವುದಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ. ನಿಜಾಮಾಬಾದ್ ನಗರ ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ, ಬಿಆರ್‌ಎಸ್ ಅಭ್ಯರ್ಥಿ ಬಿಗಾಲ ಗಣೇಶ್ ಗುಪ್ತಾ, ಕಾಂಗ್ರೆಸ್ ಅಭ್ಯರ್ಥಿ ಮೊಹಮ್ಮದ್ ಅಲಿ ಶಬ್ಬೀರ್ ಮತ್ತು ಬಿಜೆಪಿ ಅಭ್ಯರ್ಥಿ ಧನಪಾಲ್ ಸೂರ್ಯನಾರಾಯಣ ಗುಪ್ತಾ ಕಣದಲ್ಲಿದ್ದಾರೆ.

ತೆಲಂಗಾಣದಲ್ಲಿ ನವೆಂಬರ್ 30 ರಂದು ವಿಧಾನಸಭೆ ಚುನಾವಣೆ ನಡೆಯಲಿದೆ.  ಮತ ಎಣಿಕೆಯು ಡಿಸೆಂಬರ್ 3 ರಂದು ನಡೆಯಲಿದೆ. 2018 ರ ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ, ಈ ಹಿಂದೆ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಎಂದು ಕರೆಯಲ್ಪಡುವ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) 119 ಸ್ಥಾನಗಳಲ್ಲಿ 88 ಸ್ಥಾನಗಳನ್ನು ಗೆದ್ದು, ಒಟ್ಟು ಮತ ಹಂಚಿಕೆಯ ಶೇಕಡಾ 47.4 ರಷ್ಟು ಗಳಿಸಿತು. ಕಾಂಗ್ರೆಸ್ ಕೇವಲ 19 ಸ್ಥಾನಗಳೊಂದಿಗೆ ಎರಡನೇ ಸ್ಥಾನದಲ್ಲಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ