ತೆಲಂಗಾಣ ಚುನಾವಣೆ: ನಿಜಾಮಾಬಾದ್​ನ ಸ್ವತಂತ್ರ ಅಭ್ಯರ್ಥಿ ಆತ್ಮಹತ್ಯೆ

ತೆಲಂಗಾಣ ವಿಧಾನಸಭಾ ಚುನಾವಣೆ ಸನ್ನಿಹಿತವಾಗುತ್ತಿದೆ, ನಿಜಾಮಾಬಾದ್​ನಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕನ್ನಯ್ಯಗೌಡ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ನಿಜಾಮಾಬಾದ್ ನಗರದಲ್ಲಿ ಭಾರೀ ಸಂಚಲನ ಮೂಡಿಸಿದೆ. ಗಾಯತ್ರಿ ನಗರದಲ್ಲಿ ವಾಸವಿರುವ ಕನ್ನಯ್ಯ  ಗೌಡ ನಿಜಾಮಾಬಾದ್ ನಗರದಿಂದ ಪಕ್ಷೇತರರಾಗಿ ಶಾಸಕರಾಗಿ ಸ್ಪರ್ಧಿಸಿದ್ದರು. ಆದರೆ  ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತೆಲಂಗಾಣ ಚುನಾವಣೆ: ನಿಜಾಮಾಬಾದ್​ನ ಸ್ವತಂತ್ರ ಅಭ್ಯರ್ಥಿ ಆತ್ಮಹತ್ಯೆ
ಸಾವು

Updated on: Nov 20, 2023 | 9:41 AM

ತೆಲಂಗಾಣ ವಿಧಾನಸಭಾ ಚುನಾವಣೆ ಸನ್ನಿಹಿತವಾಗುತ್ತಿದೆ, ನಿಜಾಮಾಬಾದ್​ನಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕನ್ನಯ್ಯಗೌಡ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ನಿಜಾಮಾಬಾದ್ ನಗರದಲ್ಲಿ ಭಾರೀ ಸಂಚಲನ ಮೂಡಿಸಿದೆ. ಗಾಯತ್ರಿ ನಗರದಲ್ಲಿ ವಾಸವಿರುವ ಕನ್ನಯ್ಯ  ಗೌಡ ನಿಜಾಮಾಬಾದ್ ನಗರದಿಂದ ಪಕ್ಷೇತರರಾಗಿ ಶಾಸಕರಾಗಿ ಸ್ಪರ್ಧಿಸಿದ್ದರು. ಆದರೆ  ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗಮನಿಸಿದ ಕುಟುಂಬಸ್ಥರು ಸರ್ಕಾರಿ ಆಸ್ಪತ್ರೆಗೆ ದೌಡಾಯಿಸಿದ್ದು, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಕನ್ನಯ್ಯ  ಗೌಡ ಅವರ ಫೋನ್ ಅನ್ನು ಸೈಬರ್ ಅಪರಾಧಿಗಳು ಹ್ಯಾಕ್ ಮಾಡಿದ್ದಾರೆ ಎಂದು ಕುಟುಂಬ ಸದಸ್ಯರು ಹೇಳುತ್ತಾರೆ. ಸೈಬರ್ ಅಪರಾಧಿಗಳ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ.

ಫೋನ್ ಹ್ಯಾಕ್ ಮಾಡಿರುವ ಸೈಬರ್ ಕ್ರಿಮಿನಲ್ ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರು ಪೊಲೀಸರಿಗೆ ಮನವಿ ಮಾಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗುವುದು.

ಮತ್ತಷ್ಟು ಓದಿ: ಅಪಾರ್ಟ್​ಮೆಂಟ್​ನಲ್ಲಿ ದಂಪತಿ ಹಾಗೂ ಇಬ್ಬರು ಮಕ್ಕಳ ಮೃತ ದೇಹಗಳು ಕೊಳೆತ ಸ್ಥಿತಿಯಲ್ಲಿ ಪತ್ತೆ

ಪೊಲೀಸರ ಪ್ರಕಾರ, ಸೈಬರ್ ವಂಚನೆಯಲ್ಲಿ ತೊಡಗಿರುವ ವ್ಯಕ್ತಿಗಳು 30 ವರ್ಷದ ವ್ಯಕ್ತಿಯಿಂದ 10 ಲಕ್ಷ ರೂಪಾಯಿಗೆ ಬೇಡಿಕೆಯಿಟ್ಟರು, ಮಹಿಳೆಯೊಂದಿಗೆ ವೀಡಿಯೊ ಕರೆ ಮಾಡುವಾಗ ತೆಗೆದ ವೀಡಿಯೊವನ್ನು ಅವರ ನಾಮಪತ್ರದೊಂದಿಗೆ ಸಾಮಾಜಿಕವಾಗಿ ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದರು.

ಏತನ್ಮಧ್ಯೆ, ಕ್ಷೇತ್ರದ ಚುನಾವಣೆಯನ್ನು ಮುಂದೂಡುವುದಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ. ನಿಜಾಮಾಬಾದ್ ನಗರ ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ, ಬಿಆರ್‌ಎಸ್ ಅಭ್ಯರ್ಥಿ ಬಿಗಾಲ ಗಣೇಶ್ ಗುಪ್ತಾ, ಕಾಂಗ್ರೆಸ್ ಅಭ್ಯರ್ಥಿ ಮೊಹಮ್ಮದ್ ಅಲಿ ಶಬ್ಬೀರ್ ಮತ್ತು ಬಿಜೆಪಿ ಅಭ್ಯರ್ಥಿ ಧನಪಾಲ್ ಸೂರ್ಯನಾರಾಯಣ ಗುಪ್ತಾ ಕಣದಲ್ಲಿದ್ದಾರೆ.

ತೆಲಂಗಾಣದಲ್ಲಿ ನವೆಂಬರ್ 30 ರಂದು ವಿಧಾನಸಭೆ ಚುನಾವಣೆ ನಡೆಯಲಿದೆ.  ಮತ ಎಣಿಕೆಯು ಡಿಸೆಂಬರ್ 3 ರಂದು ನಡೆಯಲಿದೆ. 2018 ರ ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ, ಈ ಹಿಂದೆ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಎಂದು ಕರೆಯಲ್ಪಡುವ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) 119 ಸ್ಥಾನಗಳಲ್ಲಿ 88 ಸ್ಥಾನಗಳನ್ನು ಗೆದ್ದು, ಒಟ್ಟು ಮತ ಹಂಚಿಕೆಯ ಶೇಕಡಾ 47.4 ರಷ್ಟು ಗಳಿಸಿತು. ಕಾಂಗ್ರೆಸ್ ಕೇವಲ 19 ಸ್ಥಾನಗಳೊಂದಿಗೆ ಎರಡನೇ ಸ್ಥಾನದಲ್ಲಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us