AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ನಿಜವಾದ ತೆಲಂಗಾಣ ರಾಜಕೀಯ ದಂಗಲ್ ಆರಂಭ

Telangana Assembly Elections: ಇಂದು ಬಿಆರ್ ಎಸ್ ಪಕ್ಷದ ಅಧ್ಯಕ್ಷ, ಗುಲಾಬಿ ಪಕ್ಷದ ಬಾಸ್, ಸಿಎಂ ಕೆಸಿಆರ್ ತಮ್ಮ ಪಕ್ಷದ ಶಾಸಕ ಅಭ್ಯರ್ಥಿಗಳೊಂದಿಗೆ ಸಮಾವೇಶ ನಡೆಸಿ, ನಿರ್ದೇಶನ ನೀಡಲಿದ್ದಾರೆ. ಮಧ್ಯಾಹ್ನ 12:15ಕ್ಕೆ ಪಕ್ಷದ ಪ್ರಣಾಳಿಕೆ ಬಿಡುಗಡೆಯಾಗಲಿದ್ದು, ಬಿಆರ್‌ಎಸ್ ತನ್ನ ಅಭ್ಯರ್ಥಿಗಳಿಗೆ ಬಿ ಫಾರಂ ನೀಡಲಿದೆ.

ಇಂದಿನಿಂದ ನಿಜವಾದ ತೆಲಂಗಾಣ ರಾಜಕೀಯ ದಂಗಲ್ ಆರಂಭ
ಇಂದಿನಿಂದ ನಿಜವಾದ ತೆಲಂಗಾಣ ರಾಜಕೀಯ ದಂಗಲ್ ಆರಂಭ
ಸಾಧು ಶ್ರೀನಾಥ್​
|

Updated on: Oct 15, 2023 | 11:02 AM

Share

ತೆಲಂಗಾಣ ಜನತೆಗೆ ಅದರಲ್ಲೂ ಮತದಾರ ಪ್ರಭುವಿಗೆ ಒಳ್ಳೆ ದಿನಗಳು ಬಂದಿವೆ. ಪ್ರಣಾಳಿಕೆ, ಬಿ ಫಾರಂ ನೀಡಲು ಪಕ್ಷಗಳು ತಯಾರಾಗುತ್ತಿವೆ. ಪ್ರಮುಖ ಪಕ್ಷಗಳು ಚುನಾವಣಾ ಕಣಕ್ಕೆ ಧುಮುಕುತ್ತಿವೆ. ತೆಲಂಗಾಣದಲ್ಲಿ ಚುನಾವಣಾ ವೇಳಾಪಟ್ಟಿ (Telangana Assembly Elections) ಬಿಡುಗಡೆಯಾಗಿದ್ದರೂ ಮೂಢನಂಬಿಕೆಗಳಿಂದಾಗಿ ಪ್ರಮುಖ ಪಕ್ಷಗಳು ಒಳ್ಳೆಯ ದಿನಗಳಿಗಾಗಿ ಕಾಯುತ್ತಿವೆ. ಬಹಳ ದಿನಗಳ ಹಿಂದೆಯೇ ಪಟ್ಟಿ ಪ್ರಕಟಿಸುವ ಮೂಲಕ ಬಿಆರ್ ಎಸ್ ಎಲ್ಲ ಪಕ್ಷಗಳಿಗಿಂತ ಮುಂದಿದೆ.

ನಿಜವಾದ ಯುದ್ಧಕ್ಕೆ ಹೋಗುವುದು. ಇಂದು ಬಿಆರ್ ಎಸ್ ಪಕ್ಷದ ಅಧ್ಯಕ್ಷ, ಗುಲಾಬಿ ಪಕ್ಷದ ಬಾಸ್, ಸಿಎಂ ಕೆಸಿಆರ್ ತಮ್ಮ ಪಕ್ಷದ ಶಾಸಕ ಅಭ್ಯರ್ಥಿಗಳೊಂದಿಗೆ ಸಮಾವೇಶ ನಡೆಸಿ, ನಿರ್ದೇಶನ ನೀಡಲಿದ್ದಾರೆ. ಮಧ್ಯಾಹ್ನ 12:15ಕ್ಕೆ ಪಕ್ಷದ ಪ್ರಣಾಳಿಕೆ ಬಿಡುಗಡೆಯಾಗಲಿದ್ದು, ಬಿಆರ್‌ಎಸ್ ತನ್ನ ಅಭ್ಯರ್ಥಿಗಳಿಗೆ ಬಿ ಫಾರಂ ನೀಡಲಿದೆ. ಬಳಿಕ ಚುನಾವಣಾ ಪ್ರಚಾರ ಆರಂಭಿಸಲಿರುವ ಸಿಎಂ ಕೆಸಿಆರ್ ಇಂದು 4 ಗಂಟೆಗೆ ಹುಸ್ನಾಬಾದ್ ನಲ್ಲಿ ಬಹಿರಂಗ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ತೆಲಂಗಾಣ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಬಿಡುಗಡೆ:

ಮತ್ತೊಂದೆಡೆ ಕಾಂಗ್ರೆಸ್ ಪಕ್ಷವೂ ಇಂದು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ದೆಹಲಿಯ ಹಿರಿಯರು ಮತ್ತು ಸಾಕಷ್ಟು ಅಳೆದೂಸುರಿದು ಒಟ್ಟಾಗಿ ಕೆಲಸ ಮಾಡಿದ ಟೀ ಕಾಂಗ್ರೆಸ್ ನಾಯಕರು 55 ಅಭ್ಯರ್ಥಿಗಳ ಹೆಸರುಗಳಿರುವ ಪಟ್ಟಿಯನ್ನು ಎಐಸಿಸಿ ಬಿಡುಗಡೆ ಮಾಡಿದೆ. ಇನ್ನೆರಡು ದಿನಗಳಲ್ಲಿ ಇತರೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗುವುದು. ಎಡಪಕ್ಷಗಳ ಜೊತೆಗಿನ ಮೈತ್ರಿ ಬಗ್ಗೆ ಇಂದೇ ಸ್ಪಷ್ಟತೆ ಸಿಗುವ ಸಾಧ್ಯತೆ ಇದೆ. ಕಾಂಗ್ರೆಸ್ ಸಿಪಿಐಗೆ ಎರಡು ಸ್ಥಾನಗಳನ್ನು ನೀಡಿದೆ. ಇದರಲ್ಲಿ ಕಾಂಗ್ರೆಸ್ ಪಕ್ಷವು ಚೆನ್ನೂರು ಮತ್ತು ಕೊತ್ತಗುಡೆಂ ಸ್ಥಾನಗಳನ್ನು ಅಂತಿಮಗೊಳಿಸಿದೆ.

ಸೋಮವಾರ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ

ತೆಲಂಗಾಣ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ

ಸೋಮವಾರ ಬಿಜೆಪಿ ಮೊದಲ ಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆ

ಕೇಂದ್ರ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಮುಶಿರಾಬಾದ್ ಭೇಟಿ

ರಾಜನಾಥ್ ಸಿಂಗ್ ಸೋಮವಾರ ಜಮ್ಮುಕುಂಟಾ ಮತ್ತು ಬಡಂಗ್‌ಪೇಟೆ ವಿಧಾನಸಭೆ ಕ್ಷೇತ್ರಗಳಲ್ಲಿ ನಡೆಯುವ ಸಭೆಗಳಲ್ಲಿ ಭಾಗವಹಿಸಲಿದ್ದಾರೆ

ಸೋಮವಾರ ಕಡತಾಳ್, ಕಲ್ವಕುರ್ತಿ ಸಭೆಯಲ್ಲಿ ಕೇಂದ್ರ ಸಚಿವ ಪುರುಷೋತ್ತಮ್ ಕಾಣಿಸಿಕೊಳ್ಳಲಿದ್ದಾರೆ

ಇದನ್ನೂ ಓದಿ: ತೆಲಂಗಾಣ ಅಸೆಂಬ್ಲಿ ಚುನಾವಣೆ: ನಾಮಪತ್ರ ಸಲ್ಲಿಕೆಗೆ 4 ಶುಭ ದಿನ! ಅಭ್ಯರ್ಥಿಗಳು ಕೈಯಲ್ಲಿ ತಮ್ಮ ಜಾತಕ ಹಿಡಿದು ಜ್ಯೋತಿಷಿಗಳ ಮನೆ ಎಡತಾಕುತ್ತಿದ್ದಾರೆ!

ಇನ್ನು ಆರಂಭದಿಂದಲೂ ಒಳ್ಳೆಯ ದಿನಗಳಿಗಾಗಿ ಕಾಯುತ್ತಿರುವ ಬಿಜೆಪಿ ಕೂಡ ಸೋಮವಾರ ಮೊದಲ ಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆ ಇದೆ. ಸೋಮವಾರ ಬಿಜೆಪಿ ಕೇಂದ್ರ ಚುನಾವಣೆ ಸಮಿತಿ ಸಭೆ ನಡೆಸಿ ತೆಲಂಗಾಣ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚಿಸಿ ಪಟ್ಟಿಯನ್ನು ಅಂತಿಮಗೊಳಿಸಲಿದೆ. ಹಾಗೂ ಇಂದಿನಿಂದ ಕಮಲ ಪಕ್ಷದ ರಾಷ್ಟ್ರೀಯ ನಾಯಕರು ಚುನಾವಣಾ ಯುದ್ಧಭೂಮಿಯನ್ನು ಪ್ರವೇಶಿಸಲಿದ್ದಾರೆ. ಕೇಂದ್ರ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಮುಶಿರಾಬಾದ್ ಗೆ ಭೇಟಿ ನೀಡಲಿದ್ದಾರೆ.

ಕೇಂದ್ರ ಸಚಿವ ರಾಜನಾಥ್ ಸಿಂಗ್ ಸೋಮವಾರ ಹುಜೂರಾಬಾದ್ ಕ್ಷೇತ್ರಕ್ಕೆ ತೆರಳುತ್ತಿದ್ದಾರೆ. ಜಮ್ಮಿಕುಂಟಾ ಹಾಗೂ ಬದಂಗಪೇಟೆಯಲ್ಲಿ ನಡೆಯುವ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಕಡತಾಳ್ ಮತ್ತು ಕಲ್ವಕುರ್ತಿಯಲ್ಲಿ ನಡೆಯುವ ಸಭೆಯಲ್ಲಿ ಕೇಂದ್ರ ಸಚಿವ ಪುರುಷೋತ್ತಮ ರೂಪಾ ಭಾಗವಹಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ರಾಜಕೀಯ ಕಸರತ್ತಿನ ಸಮ್ಮುಖದಲ್ಲಿ ನಿಜವಾದ ತೆಲಂಗಾಣ ದಂಗಲ್ ಇಂದಿನಿಂದ ಆರಂಭವಾಗಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ