Telangana Assembly Elections: ಕಡಿಮೆ ಅಂತರದಿಂದ ಬಿಆರ್​ಎಸ್ ಗೆದ್ದಿದ್ದ 34 ವಿಧಾನಸಭಾ ಕ್ಷೇತ್ರಗಳ ಮೇಲೆ ಕಣ್ಣಿಟ್ಟ ಕೆಸಿಆರ್

ವರ್ಷದ ಅಂತ್ಯದಲ್ಲಿ ಚುನಾವಣೆ ಎದುರಿಸಲಿರುವ ತೆಲಂಗಾಣದಲ್ಲಿ ಈ ಬಾರಿ ಆಡಳಿತಾರೂಢ ಬಿಆರ್​ಎಸ್​ಗೆ ಬಿಜೆಪಿಯು ಟಕ್ಕರ್ ನೀಡುವ ಉತ್ಸಾಹದಲ್ಲಿದೆ.

Telangana Assembly Elections: ಕಡಿಮೆ ಅಂತರದಿಂದ ಬಿಆರ್​ಎಸ್ ಗೆದ್ದಿದ್ದ 34 ವಿಧಾನಸಭಾ ಕ್ಷೇತ್ರಗಳ ಮೇಲೆ ಕಣ್ಣಿಟ್ಟ ಕೆಸಿಆರ್
ಕೆ ಚಂದ್ರಶೇಖರ್ ರಾವ್Image Credit source: The print
Follow us
|

Updated on:Mar 31, 2023 | 1:32 PM

ವರ್ಷದ ಅಂತ್ಯದಲ್ಲಿ ಚುನಾವಣೆ ಎದುರಿಸಲಿರುವ ತೆಲಂಗಾಣದಲ್ಲಿ ಈ ಬಾರಿ ಆಡಳಿತಾರೂಢ ಬಿಆರ್​ಎಸ್​ಗೆ ಬಿಜೆಪಿಯು ಟಕ್ಕರ್ ನೀಡುವ ಉತ್ಸಾಹದಲ್ಲಿದೆ. ಹೀಗಾಗಿ ಈ ಬಾರಿ ವಿಧಾನಸಭಾ ಚುನಾವಣೆಯನ್ನು ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಗಂಭೀರವಾಗಿ ಪರಿಗಣಿಸಿದ್ದಾರೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಆರ್​ಎಸ್ ಅಭ್ಯರ್ಥಿಗಳು ಕಡಿಮೆ ಅಂತರದಲ್ಲಿ ಗೆದ್ದಿದ್ದ 34 ಕ್ಷೇತ್ರಗಳ ಮೇಲೆ ಹೆಚ್ಚುವರಿ ನಿಗಾ ನೀಡುವಂತೆ ಪಕ್ಷಕ್ಕೆ ಕೆಸಿಆರ್ ಸೂಚನೆ ನೀಡಿದ್ದಾರೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಕೆಸಿಆರ್ ಅಭ್ಯರ್ಥಿಗಳು 5 ರಿಂದ 10 ಸಾವಿರ ಮತಗಳ ಅಂತರದಿಂದ ಗೆದ್ದವರಿದ್ದಾರೆ. ಆದರೆ 34 ಕ್ಷೇತ್ರಗಳಲ್ಲಿನ ಗೆಲುವಿನ ಅಂತರವು ಕೆಲ 100ಗಳಲ್ಲಿದೆ, ಇಂತಹ ಸಾಕಷ್ಟು ಕ್ಷೇತ್ರಗಳಲ್ಲಿನ ಕಾಂಗ್ರೆಸ್ ಅಭ್ಯರ್ಥಿಗಳು ಈಗಾಗಲೇ ಬಿಆರ್​ಎಸ್​ ಅನ್ನು ಕೂಡ ಸೇರಿದ್ದಾರೆ, ಆದಾಗ್ಯೂ ಅಧಿಕಾರವನ್ನು ಉಳಿಸಿಕೊಳ್ಳಲು ಈ ಕ್ಷೇತ್ರಗಳಲ್ಲಿ ಗೆಲುವು ಅನಿವಾರ್ಯ ಎನ್ನುವುದನ್ನು ಕೆ ಚಂದ್ರಶೇಖರ್ ರಾವ್ ಮನಗಂಡಿದ್ದಾರೆ.

ಸಚಿವ ಜಿ ಜಗದೀಶ್ ರೆಡ್ಡಿ ಸುಮಾರು 5,967 ಮತಗಳ ಬಹುಮತದಿಂದ ಜಯಗಳಿಸಿದ್ದರೆ, ಇಂದ್ರ ಕಿರಣ್ ರೆಡ್ಡಿ 9,271 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಸಚಿವ ಕೊಪ್ಪುಳ ಈಶ್ವರ್ ಅವರು ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಕೇವಲ 446 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಶಾಸಕರಾದ ಗಂಪ ಗೋವರ್ಧನ್, ಎನ್.ದಿವಾಕರ್ ರಾವ್ ಅವರು ಕ್ರಮವಾಗಿ 4,557 ಮತಗಳು ಮತ್ತು 4,838 ಮತಗಳಿಂದ ಜಯಗಳಿಸಿದ್ದರು. ಅನೇಕರು ಕಾಂಗ್ರೆಸ್‌ನಿಂದ ಚುನಾವಣೆಯಲ್ಲಿ ಸ್ಪರ್ಧಿಸಿದರು ಮತ್ತು ಕಡಿಮೆ ಅಂತರದಲ್ಲಿ ಗೆದ್ದರು ನಂತರ BRS ಗೆ ಸೇರ್ಪಡೆಗೊಂಡರು.

ಮತ್ತಷ್ಟು ಓದಿ: Karnataka Assembly Election 2023: ಇಂದು ಒಂದೇ ದಿನ ಇಬ್ಬರು ಬಿಜೆಪಿ, ಜೆಡಿಎಸ್​ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸರದಿಯಲ್ಲಿ ಮತ್ತೋರ್ವ ಶಾಸಕ

ಈಗಾಗಲೇ ಈ ಕ್ಷೇತ್ರಗಳ ಬಗ್ಗೆ ಪ್ರತ್ಯೇಕ ಸಮೀಕ್ಷೆ ನಡೆಸಿ ಗೆಲುವಿನ ಸಾಧ್ಯಾಸಾಧ್ಯತೆ ಹಾಗೂ ಹಾಲಿ ಅಭ್ಯರ್ಥಿಗಳ ಪ್ರಭಾವವನ್ನು ಅಂದಾಜಿಸಲಾಗಿದೆ. ಈ ಸಮೀಕ್ಷೆ ಆಧರಿಸಿ ಟಿಕೆಟ್ ನೀಡಲು ಕೆಸಿಆರ್ ನಿರ್ಧರಿಸಿದ್ದಾರೆ, ಎಲ್ಲಾ ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗುವುದು ಎಂದು ಕೆಸಿಆರ್ ಹೇಳಿದ್ದರೂ, ಈ ಸಮೀಕ್ಷಾ ವರದಿ ಆಧರಿಸಿ ಟಿಕೆಟ್ ನೀಡಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಿಎಂ ಕೆಸಿಆರ್ ನಡೆಸಿದ ಸಮೀಕ್ಷೆ ಪ್ರಕಾರ ಸುಮಾರು 19 ಹಾಲಿ ಶಾಸಕರು ತಮ್ಮ ಕ್ಷೇತ್ರದಲ್ಲಿ ಸಕ್ರಿಯರಾಗಿಲ್ಲ ಎಂಬುದು ತಿಳಿದುಬಂದಿದೆ. ಹಾಗೆಯೇ ಇನ್ನೂ ಕೆಲವು ಶಾಸಕರು ಪಕ್ಷ ಹಾಗೂ ಕ್ಷೇತ್ರದ ಬದಲಾಗಿ ವೈಯಕ್ತಿಕ ವ್ಯವಹಾರದ ವಿಸ್ತರಣೆಯಲ್ಲಿ ತೊಡಗಿದ್ದಾರೆ, ಇಂಥವರಿಗೂ ಟಿಕೆಟ್ ನೀಡದಿರಲು ಕೆಸಿಆರ್ ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಮೂಲ ವರದಿ: Pavitra Bhashyam

ಸುದ್ದಿಯನ್ನು ಇಂಗ್ಲಿಷ್​ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ಇತರೆ ಚುನಾವಣಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:31 pm, Fri, 31 March 23

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ