AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ ವಿಧಾನಸಭೆ ಚುನಾವಣೆ: ಕಾಂಗ್ರೆಸ್​​ನ 2ನೇ ಪಟ್ಟಿ ಬಿಡುಗಡೆ; ಜುಬಿಲಿ ಹಿಲ್ಸ್‌ನಿಂದ ಮೊಹಮ್ಮದ್ ಅಜರುದ್ದೀನ್ ಸ್ಪರ್ಧೆ

ಜುಬಿಲಿ ಹಿಲ್ಸ್ ವಿಧಾನಸಭಾ ಕ್ಷೇತ್ರದಿಂದ ಮೊಹಮ್ಮದ್ ಅಜರುದ್ದೀನ್ (Mohammed Azharuddin), ಎಲ್ ಬಿ ನಗರ ಕ್ಷೇತ್ರದಿಂದ ಮಧು ಯಾಶ್ಕಿ, ಪಾಲೇರು ಕ್ಷೇತ್ರದಿಂದ ಪೊಂಗುಲೇಟಿ ಶ್ರೀನಿವಾಸ ರೆಡ್ಡಿ, ಖಮ್ಮಂ ವಿಧಾನಸಭಾ ಕ್ಷೇತ್ರದಿಂದ ತುಮ್ಮಲ ನಾಗೇಶ್ವರ ರಾವ್, ಖೈರತಾಬಾದ್ ಕ್ಷೇತ್ರದಿಂದ ಪಿ ವಿಜಯ ರೆಡ್ಡಿ, ಹುಸ್ನಾಬಾದ್‌ನಿಂದ ಪೊನ್ನಂ ಪ್ರಭಾಕರ್ ಮತ್ತು ಮುನುಗೋಡು ಕ್ಷೇತ್ರದಿಂದ ಕೋಮಟಿರೆಡ್ಡಿ ರಾಜ್ ಗೋಪಾಲ್ ರೆಡ್ಡಿ ಸ್ಪರ್ಧಿಸಲಿದ್ದಾರೆ.

ತೆಲಂಗಾಣ ವಿಧಾನಸಭೆ ಚುನಾವಣೆ: ಕಾಂಗ್ರೆಸ್​​ನ 2ನೇ ಪಟ್ಟಿ ಬಿಡುಗಡೆ; ಜುಬಿಲಿ ಹಿಲ್ಸ್‌ನಿಂದ ಮೊಹಮ್ಮದ್ ಅಜರುದ್ದೀನ್ ಸ್ಪರ್ಧೆ
ಮೊಹಮ್ಮದ್ ಅಜರುದ್ದೀನ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Oct 27, 2023 | 9:50 PM

Share

ಹೈದರಾಬಾದ್ ಅಕ್ಟೋಬರ್ 27: ತೆಲಂಗಾಣ ಕಾಂಗ್ರೆಸ್ (congress) ನವೆಂಬರ್ 30 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ (Telangana Assembly elections) 45 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಶುಕ್ರವಾರ ಸಂಜೆ ಬಿಡುಗಡೆ ಮಾಡಿದೆ ಎಂದು ಟಿವಿ9 ತೆಲುಗು ವರದಿ ಮಾಡಿದೆ. ಜುಬಿಲಿ ಹಿಲ್ಸ್ ವಿಧಾನಸಭಾ ಕ್ಷೇತ್ರದಿಂದ ಮೊಹಮ್ಮದ್ ಅಜರುದ್ದೀನ್ (Mohammed Azharuddin), ಎಲ್ ಬಿ ನಗರ ಕ್ಷೇತ್ರದಿಂದ ಮಧು ಯಾಶ್ಕಿ, ಪಾಲೇರು ಕ್ಷೇತ್ರದಿಂದ ಪೊಂಗುಲೇಟಿ ಶ್ರೀನಿವಾಸ ರೆಡ್ಡಿ, ಖಮ್ಮಂ ವಿಧಾನಸಭಾ ಕ್ಷೇತ್ರದಿಂದ ತುಮ್ಮಲ ನಾಗೇಶ್ವರ ರಾವ್, ಖೈರತಾಬಾದ್ ಕ್ಷೇತ್ರದಿಂದ ಪಿ ವಿಜಯ ರೆಡ್ಡಿ, ಹುಸ್ನಾಬಾದ್‌ನಿಂದ ಪೊನ್ನಂ ಪ್ರಭಾಕರ್ ಮತ್ತು ಮುನುಗೋಡು ಕ್ಷೇತ್ರದಿಂದ ಕೋಮಟಿರೆಡ್ಡಿ ರಾಜ್ ಗೋಪಾಲ್ ರೆಡ್ಡಿ ಸ್ಪರ್ಧಿಸಲಿದ್ದಾರೆ.

ಅಜರುದ್ದೀನ್ ಈ ಹಿಂದೆ ಉತ್ತರ ಪ್ರದೇಶದ ಮೊರಾದಾಬಾದ್ ಕ್ಷೇತ್ರದಿಂದ ಲೋಕಸಭಾ ಸಂಸದರಾಗಿದ್ದರು.ಹಿಂದಿನ ದಿನ ನಡೆದ ಸಭೆಯಲ್ಲಿ ಕಾಂಗ್ರೆಸ್ ನಾಯಕತ್ವವು ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ಚರ್ಚಿಸಿತು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ, ಟಿಪಿಸಿಸಿ ಅಧ್ಯಕ್ಷ ರೇವಂತ್ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು. ಬುಧವಾರ ತೆಲಂಗಾಣ ಸಿಇಸಿ ಸಭೆಯನ್ನೂ ಕಾಂಗ್ರೆಸ್ ನಡೆಸಿತ್ತು. ಅಕ್ಟೋಬರ್ 15 ರಂದು ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಸುಮಾರು 55 ಅಭ್ಯರ್ಥಿಗಳನ್ನು ಹೆಸರಿಸಿತ್ತು, ರೇವಂತ್ ರೆಡ್ಡಿ ಕೊಡಂಗಲ್ ಕ್ಷೇತ್ರದಿಂದ ಮತ್ತು ಭಟ್ಟಿ ವಿಕ್ರಮಾರ್ಕ ಮಲ್ಲು ಮಧಿರಾ (ಎಸ್‌ಸಿ) ಕ್ಷೇತ್ರದಿಂದ ಸ್ಪರ್ಧಿಸಿದ್ದರು. ರೇವಂತ್ ರೆಡ್ಡಿ ಅವರು ಮಲ್ಕಾಜ್‌ಗಿರಿ ಕ್ಷೇತ್ರದ ಹಾಲಿ ಲೋಕಸಭಾ ಸಂಸದರಾಗಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ಉಚಿತ ಲ್ಯಾಪ್‌ಟಾಪ್‌, ಎಲ್‌ಪಿಜಿ ಸಬ್ಸಿಡಿ ಸೇರಿದಂತೆ 7 ಗ್ಯಾರಂಟಿ ಭರವಸೆ ಘೋಷಿಸಿದ ಕಾಂಗ್ರೆಸ್

ರಾಜ್ಯದಲ್ಲಿ ಆಡಳಿತಾರೂಢ ಬಿಆರ್‌ಎಸ್ ಪಕ್ಷವನ್ನು ಕಿತ್ತೊಗೆಯಲು ಕಾಂಗ್ರೆಸ್ ಆಶಿಸಿದ್ದು, ಕಳೆದ ಕೆಲವು ದಿನಗಳಿಂದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಅವರಂತಹ ರಾಷ್ಟ್ರೀಯ ನಾಯಕರು ಪ್ರಚಾರ ನಡೆಸುತ್ತಿದ್ದಾರೆ.

ತೆಲಂಗಾಣದಲ್ಲಿ ನವೆಂಬರ್ 30 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ