AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ಕಾಂಗ್ರೆಸ್​​​ನಿಂದ ವಧುವಿಗೆ 10 ಗ್ರಾಂ ಚಿನ್ನ, ವಿದ್ಯಾರ್ಥಿಗಳಿಗೆ ಉಚಿತ ಇಂಟರ್ನೆಟ್ ಯೋಜನೆ ಭರವಸೆ ಸಾಧ್ಯತೆ

Congress manifestos in Telangana: ಮುಖ್ಯಮಂತ್ರಿ ಕೆಸಿಆರ್ ಭಾನುವಾರ ಬಿಆರ್‌ಎಸ್ ಪ್ರಣಾಳಿಕೆಯಲ್ಲಿ 400 ರೂ.ಗೆ ಎಲ್‌ಪಿಜಿ ಸಿಲಿಂಡರ್ ಮತ್ತು ಪಿಂಚಣಿ ಹೆಚ್ಚಳದ ಭರವಸೆ ನೀಡಿದ್ದಾರೆ. ಇತ್ತ ಕಾಂಗ್ರೆಸ್ ಪಕ್ಷ ಚುನಾವಣೆಗೆ ಆರು ಭರವಸೆಗಳನ್ನು ಘೋಷಿಸಿದೆ. ಅಂದಹಾಗೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಈ ವಾರ ತೆಲಂಗಾಣಕ್ಕೆ ಭೇಟಿ ನೀಡಲಿದ್ದಾರೆ.

ತೆಲಂಗಾಣ: ಕಾಂಗ್ರೆಸ್​​​ನಿಂದ ವಧುವಿಗೆ 10 ಗ್ರಾಂ ಚಿನ್ನ, ವಿದ್ಯಾರ್ಥಿಗಳಿಗೆ ಉಚಿತ ಇಂಟರ್ನೆಟ್ ಯೋಜನೆ ಭರವಸೆ ಸಾಧ್ಯತೆ
ರಾಹುಲ್ ಗಾಂಧಿ- ಪ್ರಿಯಾಂಕಾ ಗಾಂಧಿ
ರಶ್ಮಿ ಕಲ್ಲಕಟ್ಟ
|

Updated on:Oct 16, 2023 | 2:15 PM

Share

ಹೈದರಾಬಾದ್ ಅಕ್ಟೋಬರ್ 16: ತೆಲಂಗಾಣ (Telangana) ಕಾಂಗ್ರೆಸ್ (Congress) ತನ್ನ ಪ್ರಣಾಳಿಕೆಯಲ್ಲಿ(manifesto) ವಿವಾಹದ ಸಮಯದಲ್ಲಿ ಅರ್ಹ ವಧುಗಳಿಗೆ ಹತ್ತು ಗ್ರಾಂ ಚಿನ್ನ ಮತ್ತು ವಿದ್ಯಾರ್ಥಿಗಳಿಗೆ 1 ಲಕ್ಷ ರೂಪಾಯಿ ನಗದು ಮತ್ತು ವಿದ್ಯಾರ್ಥಿಗಳಿಗೆ ಉಚಿತ ಇಂಟರ್ನೆಟ್ ನೀಡುವುದಾಗಿ ಭರವಸೆ ನೀಡುವ ಸಾಧ್ಯತೆ ಇದೆ ಎಂದು ನ್ಯೂಸ್ 9 ವರದಿ ಮಾಡಿದೆ. ಮಹಾಲಕ್ಷ್ಮಿ ಯೋಜನೆಗೆ 10 ಗ್ರಾಂ ಚಿನ್ನ ಸೇರ್ಪಡೆಯಾಗಿದೆ ಎಂದು ಟಿಪಿಸಿಸಿ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಿ ಶ್ರೀಧರ್ ಬಾಬು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಒಂದು ತೊಲ ಚಿನ್ನವನ್ನು ನೀಡಲಾಗುವುದು, ಇದರ ಮೌಲ್ಯ ಸುಮಾರು 50,000 ರಿಂದ 55,000 ರೂ ಎಂದು ಅವರು ಹೇಳಿದ್ದಾರೆ. ಪಕ್ಷ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿಗಳಿಗೆ ಉಚಿತ ಇಂಟರ್ನೆಟ್ ಒದಗಿಸಲಿದೆ ಎಂದು ಪ್ರಣಾಳಿಕೆ ಸಮಿತಿಯ ಮತ್ತೊಬ್ಬ ಸದಸ್ಯ ಪಿಟಿಐಗೆ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಬಿಆರ್‌ಎಸ್‌ ವಕ್ತಾರ ದಾಸೋಜು ಶ್ರವಣ್‌, ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ನೀಡಿದ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗಿಲ್ಲ ಮತ್ತು ತನ್ನ ಪ್ರಣಾಳಿಕೆಯಲ್ಲಿ ಏನು ಬೇಕಾದರೂ ಭರವಸೆ ನೀಡಬಹುದು ಎಂದು ಹೇಳಿದ್ದಾರೆ.

ಏತನ್ಮಧ್ಯೆ, ಮುಖ್ಯಮಂತ್ರಿ ಕೆಸಿಆರ್ ಭಾನುವಾರ ಬಿಆರ್‌ಎಸ್ ಪ್ರಣಾಳಿಕೆಯಲ್ಲಿ 400 ರೂ.ಗೆ ಎಲ್‌ಪಿಜಿ ಸಿಲಿಂಡರ್ ಮತ್ತು ಪಿಂಚಣಿ ಹೆಚ್ಚಳದ ಭರವಸೆ ನೀಡಿದ್ದಾರೆ. ಇತ್ತ ಕಾಂಗ್ರೆಸ್ ಪಕ್ಷ ಚುನಾವಣೆಗೆ ಆರು ಭರವಸೆಗಳನ್ನು ಘೋಷಿಸಿದೆ. ಅಂದಹಾಗೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಈ ವಾರ ತೆಲಂಗಾಣಕ್ಕೆ ಭೇಟಿ ನೀಡಲಿದ್ದಾರೆ.

ರಾಜ್ಯದಲ್ಲಿ ಚುನಾವಣಾ ಪ್ರಚಾರವು ವೇಗ ಪಡೆಯುತ್ತಿದ್ದಂತೆ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅಕ್ಟೋಬರ್ 18 ರಂದು ತೆಲಂಗಾಣಕ್ಕೆ ಭೇಟಿ ನೀಡಿ ವಿವಿಧ ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.

ಅಕ್ಟೋಬರ್ 18 ರಂದು ಮುಳುಗೂರಿನ ರಾಮಪ್ಪ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಅವರು ಬಸ್ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಮಹಿಳಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ನಂತರ ಪ್ರಿಯಾಂಕಾ ದೆಹಲಿಗೆ ಹಿಂತಿರುಗಲಿದ್ದಾರೆ. ರಾಹುಲ್ ಗಾಂಧಿ ರಾಜ್ಯದಲ್ಲಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದನ್ನು ಮುಂದುವರಿಸುತ್ತಾರೆ.

ಇದನ್ನೂ ಓದಿ: ಇಂದಿನಿಂದ ನಿಜವಾದ ತೆಲಂಗಾಣ ರಾಜಕೀಯ ದಂಗಲ್ ಆರಂಭ

ಸಿಂಗರೇಣಿ ಕಾಲಿಯರೀಸ್‌ನ ಕಾರ್ಯಕರ್ತರನ್ನು ಭೇಟಿ ಮಾಡಿ ನಂತರ ಅಕ್ಟೋಬರ್ 19 ರಂದು ಪೆದ್ದಪಲ್ಲಿ ಮತ್ತು ಕರೀಂನಗರದಲ್ಲಿ ರ‍್ಯಾಲಿಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಅಕ್ಟೋಬರ್ 20 ರಂದು ಜಗ್ತಿಯಾಲ್‌ನಲ್ಲಿ ರಾಹುಲ್ ಗಾಂಧಿ ರೈತರನ್ನು ಭೇಟಿ ಮಾಡಲಿದ್ದಾರೆ. ನಂತರ ನಿಜಾಮಾಬಾದ್ ಮತ್ತು ಆರ್ಮೂರ್‌ನಲ್ಲಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ತೆಲಂಗಾಣ ಚುನಾವಣೆ ನವೆಂಬರ್ 30 ರಂದು ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:08 pm, Mon, 16 October 23

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್