AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ಕಾಂಗ್ರೆಸ್​​​ನಿಂದ ವಧುವಿಗೆ 10 ಗ್ರಾಂ ಚಿನ್ನ, ವಿದ್ಯಾರ್ಥಿಗಳಿಗೆ ಉಚಿತ ಇಂಟರ್ನೆಟ್ ಯೋಜನೆ ಭರವಸೆ ಸಾಧ್ಯತೆ

Congress manifestos in Telangana: ಮುಖ್ಯಮಂತ್ರಿ ಕೆಸಿಆರ್ ಭಾನುವಾರ ಬಿಆರ್‌ಎಸ್ ಪ್ರಣಾಳಿಕೆಯಲ್ಲಿ 400 ರೂ.ಗೆ ಎಲ್‌ಪಿಜಿ ಸಿಲಿಂಡರ್ ಮತ್ತು ಪಿಂಚಣಿ ಹೆಚ್ಚಳದ ಭರವಸೆ ನೀಡಿದ್ದಾರೆ. ಇತ್ತ ಕಾಂಗ್ರೆಸ್ ಪಕ್ಷ ಚುನಾವಣೆಗೆ ಆರು ಭರವಸೆಗಳನ್ನು ಘೋಷಿಸಿದೆ. ಅಂದಹಾಗೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಈ ವಾರ ತೆಲಂಗಾಣಕ್ಕೆ ಭೇಟಿ ನೀಡಲಿದ್ದಾರೆ.

ತೆಲಂಗಾಣ: ಕಾಂಗ್ರೆಸ್​​​ನಿಂದ ವಧುವಿಗೆ 10 ಗ್ರಾಂ ಚಿನ್ನ, ವಿದ್ಯಾರ್ಥಿಗಳಿಗೆ ಉಚಿತ ಇಂಟರ್ನೆಟ್ ಯೋಜನೆ ಭರವಸೆ ಸಾಧ್ಯತೆ
ರಾಹುಲ್ ಗಾಂಧಿ- ಪ್ರಿಯಾಂಕಾ ಗಾಂಧಿ
Follow us
ರಶ್ಮಿ ಕಲ್ಲಕಟ್ಟ
|

Updated on:Oct 16, 2023 | 2:15 PM

ಹೈದರಾಬಾದ್ ಅಕ್ಟೋಬರ್ 16: ತೆಲಂಗಾಣ (Telangana) ಕಾಂಗ್ರೆಸ್ (Congress) ತನ್ನ ಪ್ರಣಾಳಿಕೆಯಲ್ಲಿ(manifesto) ವಿವಾಹದ ಸಮಯದಲ್ಲಿ ಅರ್ಹ ವಧುಗಳಿಗೆ ಹತ್ತು ಗ್ರಾಂ ಚಿನ್ನ ಮತ್ತು ವಿದ್ಯಾರ್ಥಿಗಳಿಗೆ 1 ಲಕ್ಷ ರೂಪಾಯಿ ನಗದು ಮತ್ತು ವಿದ್ಯಾರ್ಥಿಗಳಿಗೆ ಉಚಿತ ಇಂಟರ್ನೆಟ್ ನೀಡುವುದಾಗಿ ಭರವಸೆ ನೀಡುವ ಸಾಧ್ಯತೆ ಇದೆ ಎಂದು ನ್ಯೂಸ್ 9 ವರದಿ ಮಾಡಿದೆ. ಮಹಾಲಕ್ಷ್ಮಿ ಯೋಜನೆಗೆ 10 ಗ್ರಾಂ ಚಿನ್ನ ಸೇರ್ಪಡೆಯಾಗಿದೆ ಎಂದು ಟಿಪಿಸಿಸಿ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಿ ಶ್ರೀಧರ್ ಬಾಬು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಒಂದು ತೊಲ ಚಿನ್ನವನ್ನು ನೀಡಲಾಗುವುದು, ಇದರ ಮೌಲ್ಯ ಸುಮಾರು 50,000 ರಿಂದ 55,000 ರೂ ಎಂದು ಅವರು ಹೇಳಿದ್ದಾರೆ. ಪಕ್ಷ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿಗಳಿಗೆ ಉಚಿತ ಇಂಟರ್ನೆಟ್ ಒದಗಿಸಲಿದೆ ಎಂದು ಪ್ರಣಾಳಿಕೆ ಸಮಿತಿಯ ಮತ್ತೊಬ್ಬ ಸದಸ್ಯ ಪಿಟಿಐಗೆ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಬಿಆರ್‌ಎಸ್‌ ವಕ್ತಾರ ದಾಸೋಜು ಶ್ರವಣ್‌, ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ನೀಡಿದ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗಿಲ್ಲ ಮತ್ತು ತನ್ನ ಪ್ರಣಾಳಿಕೆಯಲ್ಲಿ ಏನು ಬೇಕಾದರೂ ಭರವಸೆ ನೀಡಬಹುದು ಎಂದು ಹೇಳಿದ್ದಾರೆ.

ಏತನ್ಮಧ್ಯೆ, ಮುಖ್ಯಮಂತ್ರಿ ಕೆಸಿಆರ್ ಭಾನುವಾರ ಬಿಆರ್‌ಎಸ್ ಪ್ರಣಾಳಿಕೆಯಲ್ಲಿ 400 ರೂ.ಗೆ ಎಲ್‌ಪಿಜಿ ಸಿಲಿಂಡರ್ ಮತ್ತು ಪಿಂಚಣಿ ಹೆಚ್ಚಳದ ಭರವಸೆ ನೀಡಿದ್ದಾರೆ. ಇತ್ತ ಕಾಂಗ್ರೆಸ್ ಪಕ್ಷ ಚುನಾವಣೆಗೆ ಆರು ಭರವಸೆಗಳನ್ನು ಘೋಷಿಸಿದೆ. ಅಂದಹಾಗೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಈ ವಾರ ತೆಲಂಗಾಣಕ್ಕೆ ಭೇಟಿ ನೀಡಲಿದ್ದಾರೆ.

ರಾಜ್ಯದಲ್ಲಿ ಚುನಾವಣಾ ಪ್ರಚಾರವು ವೇಗ ಪಡೆಯುತ್ತಿದ್ದಂತೆ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅಕ್ಟೋಬರ್ 18 ರಂದು ತೆಲಂಗಾಣಕ್ಕೆ ಭೇಟಿ ನೀಡಿ ವಿವಿಧ ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.

ಅಕ್ಟೋಬರ್ 18 ರಂದು ಮುಳುಗೂರಿನ ರಾಮಪ್ಪ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಅವರು ಬಸ್ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಮಹಿಳಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ನಂತರ ಪ್ರಿಯಾಂಕಾ ದೆಹಲಿಗೆ ಹಿಂತಿರುಗಲಿದ್ದಾರೆ. ರಾಹುಲ್ ಗಾಂಧಿ ರಾಜ್ಯದಲ್ಲಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದನ್ನು ಮುಂದುವರಿಸುತ್ತಾರೆ.

ಇದನ್ನೂ ಓದಿ: ಇಂದಿನಿಂದ ನಿಜವಾದ ತೆಲಂಗಾಣ ರಾಜಕೀಯ ದಂಗಲ್ ಆರಂಭ

ಸಿಂಗರೇಣಿ ಕಾಲಿಯರೀಸ್‌ನ ಕಾರ್ಯಕರ್ತರನ್ನು ಭೇಟಿ ಮಾಡಿ ನಂತರ ಅಕ್ಟೋಬರ್ 19 ರಂದು ಪೆದ್ದಪಲ್ಲಿ ಮತ್ತು ಕರೀಂನಗರದಲ್ಲಿ ರ‍್ಯಾಲಿಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಅಕ್ಟೋಬರ್ 20 ರಂದು ಜಗ್ತಿಯಾಲ್‌ನಲ್ಲಿ ರಾಹುಲ್ ಗಾಂಧಿ ರೈತರನ್ನು ಭೇಟಿ ಮಾಡಲಿದ್ದಾರೆ. ನಂತರ ನಿಜಾಮಾಬಾದ್ ಮತ್ತು ಆರ್ಮೂರ್‌ನಲ್ಲಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ತೆಲಂಗಾಣ ಚುನಾವಣೆ ನವೆಂಬರ್ 30 ರಂದು ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:08 pm, Mon, 16 October 23

ಅವಧಿಗೂ ಮುನ್ನವೇ ತುಂಬುತ್ತಿದೆ ಕೆಆರ್​​ಎಸ್ ಡ್ಯಾಂ: 9 ಅಡಿ ಅಷ್ಟೇ ಬಾಕಿ
ಅವಧಿಗೂ ಮುನ್ನವೇ ತುಂಬುತ್ತಿದೆ ಕೆಆರ್​​ಎಸ್ ಡ್ಯಾಂ: 9 ಅಡಿ ಅಷ್ಟೇ ಬಾಕಿ
ಸ್ಕೂಲ್ ವ್ಯಾನ್ ಡಿಕ್ಕಿ: ಬೈಕ್ ಸವಾರ ಜಸ್ಟ್ ಬಚಾವಾಗಿದ್ಹೇಗೆ ನೋಡಿ
ಸ್ಕೂಲ್ ವ್ಯಾನ್ ಡಿಕ್ಕಿ: ಬೈಕ್ ಸವಾರ ಜಸ್ಟ್ ಬಚಾವಾಗಿದ್ಹೇಗೆ ನೋಡಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ