AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ ಚುನಾವಣೆ: ₹700 ಕೋಟಿ ಮೌಲ್ಯದ ನಗದು, ಮದ್ಯ, ಇತರ ಉಚಿತ ವಸ್ತು ವಶ

ನವೆಂಬರ್ 25ರಂದೇ ಜಾರಿ ಸಂಸ್ಥೆಗಳು ಸುಮಾರು 10 ಕೋಟಿ ರೂ ವಶ ಪಡಿಸಿಕೊಂಡಿವೆ.ಅಕ್ಟೋಬರ್ 9 ಮತ್ತು ನವೆಂಬರ್ 25 ರ ನಡುವೆ ಲೆಕ್ಕಕ್ಕೆ ಸಿಗದ ನಗದು 282.75 ಕೋಟಿ ರೂಪಾಯಿ ಮೌಲ್ಯದ್ದಾಗಿದ್ದು, ಶನಿವಾರ 39 ಕೋಟಿ ರೂಪಾಯಿ ಮೌಲ್ಯದ 5,117 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಕಳೆದ ತಿಂಗಳಲ್ಲಿ ವಶಪಡಿಸಿಕೊಂಡ ಒಟ್ಟು ಮದ್ಯದ ಮೌಲ್ಯ 117 ಕೋಟಿ ರೂ. ಆಗಿದೆ.

ತೆಲಂಗಾಣ ಚುನಾವಣೆ: ₹700 ಕೋಟಿ ಮೌಲ್ಯದ  ನಗದು, ಮದ್ಯ, ಇತರ ಉಚಿತ ವಸ್ತು ವಶ
ತೆಲಂಗಾಣದಲ್ಲಿ ವಶಪಡಿಸಿಕೊಂಡ ನಗದು
ರಶ್ಮಿ ಕಲ್ಲಕಟ್ಟ
|

Updated on: Nov 27, 2023 | 2:34 PM

Share

ಹೈದರಾಬಾದ್ ನವೆಂಬರ್ 27: ಅಕ್ಟೋಬರ್ 9 ರಂದು ಮಾದರಿ ನೀತಿ ಸಂಹಿತೆ (model code of conduct) ಜಾರಿಯಾದಾಗಿನಿಂದ ಇಲ್ಲಿಯವರೆಗೆ ತೆಲಂಗಾಣ ರಾಜ್ಯದಲ್ಲಿ (Telangana polls)  ಚುನಾವಣಾ ಸಂಬಂಧಿತ ವಶಪಡಿಸಿಕೊಂಡ ಪ್ರಕರಣಗಳಲ್ಲಿ ಕನಿಷ್ಠ 700 ಕೋಟಿ ರೂಪಾಯಿ ಮೌಲ್ಯದ ನಗದು, ಮದ್ಯ, ಚಿನ್ನ ಮತ್ತು ಇತರ ಉಚಿತ ವಸ್ತುಗಳನ್ನು(freebies) ವಶಪಡಿಸಿಕೊಳ್ಳಲಾಗಿದೆ ಎಂದು ವರದಿಗಳು ತಿಳಿಸಿವೆ.

ನವೆಂಬರ್ 25ರಂದೇ ಜಾರಿ ಸಂಸ್ಥೆಗಳು ಸುಮಾರು 10 ಕೋಟಿ ರೂ ವಶ ಪಡಿಸಿಕೊಂಡಿವೆ.ಅಕ್ಟೋಬರ್ 9 ಮತ್ತು ನವೆಂಬರ್ 25 ರ ನಡುವೆ ಲೆಕ್ಕಕ್ಕೆ ಸಿಗದ ನಗದು 282.75 ಕೋಟಿ ರೂಪಾಯಿ ಮೌಲ್ಯದ್ದಾಗಿದ್ದು, ಶನಿವಾರ 39 ಕೋಟಿ ರೂಪಾಯಿ ಮೌಲ್ಯದ 5,117 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಕಳೆದ ತಿಂಗಳಲ್ಲಿ ವಶಪಡಿಸಿಕೊಂಡ ಒಟ್ಟು ಮದ್ಯದ ಮೌಲ್ಯ 117 ಕೋಟಿ ರೂ.

ಶನಿವಾರ 1.60 ಕೋಟಿ ಮೌಲ್ಯದ 639.5 ಕೆಜಿ ಗಾಂಜಾ ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಕಳೆದ ತಿಂಗಳ ಒಟ್ಟು ಮಾದಕವಸ್ತುಗಳ ಮೌಲ್ಯ 39.48 ಕೋಟಿ ಎಂದು ಅಂದಾಜಿಸಲಾಗಿದೆ.ಅಕ್ಟೋಬರ್ 9 ರಿಂದ ಇಲ್ಲಿಯವರೆಗೆ 186 ಕೋಟಿ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ, ವಜ್ರದಂತಹ ಅಮೂಲ್ಯ ಲೋಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಇಸಿಐ ಹೇಳಿಕೆ ತಿಳಿಸಿದೆ.

ಸೀರೆ, ಅಕ್ಕಿ, ಪ್ರೆಶರ್ ಕುಕ್ಕರ್‌ಗಳು, ದ್ವಿಚಕ್ರ ವಾಹನಗಳು ಮತ್ತು ನಾಲ್ಕು ಚಕ್ರದ ವಾಹನಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಮತಕ್ಕಾಗಿ ಹಣ

ಅಂದಾಜಿನ ಪ್ರಕಾರ, ಐದು ರಾಜ್ಯಗಳ ಈ ಸುತ್ತಿನ ವಿಧಾನಸಭಾ ಚುನಾವಣೆಯಲ್ಲಿ 15,000-20,000 ಕೋಟಿ ರೂ. ಖರ್ಚು ಮಾಡಲಾಗಿದೆ. ಎಷ್ಟೇ ತಪಾಸಣೆ ನಡೆಸಿದರೂ ಮತದಾರರನ್ನು ಖರೀದಿಸಲು ಬೇಕಾದ ಹಣವು ರಾಜಕಾರಣಿಗಳ ವಿವಿಧ ಜಾಲಗಳ ಮೂಲಕ ಅವರ ಸ್ಥಳಗಳಿಗೆ ಈಗಾಗಲೇ ತಲುಪಿದೆ ಎಂದು ತಜ್ಞರು ಹೇಳುತ್ತಾರೆ.

ಇದನ್ನೂ ಓದಿ: ತೆಲಂಗಾಣ: ಟವರ್​ ಹತ್ತಬೇಡಿ, ನೀವು ಬಿದ್ದರೆ ನನಗೆ ನೋವಾಗುತ್ತೆ, ದಯವಿಟ್ಟು ಕೆಳಗೆ ಬನ್ನಿ ಎಂದ ಪ್ರಧಾನಿ ಮೋದಿ

ಚುನಾವಣೆಯಲ್ಲಿ ಹಣದ ಹೊಳೆ ತಡೆಯಬೇಕಿದ್ದ ಚುನಾವಣಾ ಆಯೋಗ ಸಂಪೂರ್ಣ ವಿಫಲವಾಗಿದೆ ಎಂದು ಫೋರಂ ಫಾರ್ ಗುಡ್ ಗವರ್ನೆನ್ಸ್ ಪ್ರತಿನಿಧಿ ಪದ್ಮನಾಭ ರೆಡ್ಡಿ ಅಭಿಪ್ರಾಯಪಟ್ಟರು. ನವೆಂಬರ್ 28 ರಂದು ಪ್ರಚಾರ ಕೊನೆಗೊಳ್ಳಲಿದ್ದು, ನವೆಂಬರ್ 30 ರಂದು ಮತದಾನ ನಡೆಯಲಿದೆ. ಐದು ರಾಜ್ಯಗಳ ಚುನಾವಣೆಯ ಫಲಿತಾಂಶಗಳು ಡಿಸೆಂಬರ್ 3 ರಂದು ಪ್ರಕಟವಾಗಲಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ