AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿಯವರ ಪ್ರಮಾಣ ವಚನ ಸ್ವೀಕಾರದ ನಂತರ ಉದ್ಧವ್ ಠಾಕ್ರೆ ನರೇಂದ್ರ ಮೋದಿ ಜತೆ ಕೈ ಜೋಡಿಸಲಿದ್ದಾರೆ: ರವಿ ರಾಣಾ

ಪ್ರಧಾನಿಯವರು ದೇಶಕ್ಕಾಗಿ ದುಡಿದ ರೀತಿಗೆ ಜನ ಸಾಮಾನ್ಯರಿಂದ ಅಪಾರ ಬೆಂಬಲ ಸಿಕ್ಕಿದೆ. ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ದೇಶಕ್ಕೆ ಪ್ರಧಾನಿ ಮೋದಿಯವ ಅಗತ್ಯವಿದೆ. ಬಾಳಾಸಾಹೇಬ್ ಠಾಕ್ರೆಯವರ ಉದ್ದೇಶ ಮತ್ತು ಆಲೋಚನೆಗಳನ್ನು ಮುಂದಕ್ಕೆ ಕೊಂಡೊಯ್ಯುತ್ತಿರುವವರು ಪ್ರಧಾನಿ ಮೋದಿ ಮಾತ್ರ ಎಂದು ರವಿ ರಾಣಾ ಹೇಳಿದ್ದಾರೆ.

ಪ್ರಧಾನಿಯವರ ಪ್ರಮಾಣ ವಚನ ಸ್ವೀಕಾರದ ನಂತರ ಉದ್ಧವ್ ಠಾಕ್ರೆ ನರೇಂದ್ರ ಮೋದಿ ಜತೆ ಕೈ ಜೋಡಿಸಲಿದ್ದಾರೆ: ರವಿ ರಾಣಾ
ರವಿ ರಾಣಾ
ರಶ್ಮಿ ಕಲ್ಲಕಟ್ಟ
|

Updated on: Jun 03, 2024 | 6:14 PM

Share

ಅಮರಾವತಿ ಜೂನ್ 03: ನರೇಂದ್ರ ಮೋದಿ (Narendra Modi) ಅವರು ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ 20 ದಿನಗಳ ನಂತರ, ಶಿವಸೇನಾ ನಾಯಕ ಉದ್ಧವ್ ಠಾಕ್ರೆ (Uddhav Thackeray) ಅವರು ಪ್ರಧಾನಿ ಮೋದಿ ಅವರೊಂದಿಗೆ ಕೈಜೋಡಿಸಲಿದ್ದಾರೆ ಎಂದು ಪಕ್ಷೇತಕ ಶಾಸಕ ಮತ್ತು ಸಂಸದೆ ನವನೀತ್ ರಾಣಾ ಅವರ ಪತಿ ರವಿ ರಾಣಾ (Ravi Rana) ಹೇಳಿದ್ದಾರೆ. “ನರೇಂದ್ರ ಮೋದಿ ಅವರು ಬಾಳಾಸಾಹೇಬ್ ಠಾಕ್ರೆಯವರ ವಿಚಾರಗಳನ್ನು ಮುಂದಕ್ಕೆ ಕೊಂಡೊಯ್ಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ 20 ದಿನಗಳ ನಂತರ ಉದ್ಧವ್ ಠಾಕ್ರೆ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕೈಜೋಡಿಸಲಿದ್ದಾರೆ ಎಂದು ಶಾಸಕ ರವಿ ರಾಣಾ ಹೇಳಿದ್ದಾರೆ.

ಪ್ರಧಾನಿಯವರು ದೇಶಕ್ಕಾಗಿ ದುಡಿದ ರೀತಿಗೆ ಜನ ಸಾಮಾನ್ಯರಿಂದ ಅಪಾರ ಬೆಂಬಲ ಸಿಕ್ಕಿದೆ. ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ದೇಶಕ್ಕೆ ಪ್ರಧಾನಿ ಮೋದಿಯವ ಅಗತ್ಯವಿದೆ. ಬಾಳಾಸಾಹೇಬ್ ಠಾಕ್ರೆಯವರ ಉದ್ದೇಶ ಮತ್ತು ಆಲೋಚನೆಗಳನ್ನು ಮುಂದಕ್ಕೆ ಕೊಂಡೊಯ್ಯುತ್ತಿರುವವರು ಪ್ರಧಾನಿ ಮೋದಿ ಮಾತ್ರ.

ರಾಣಾ ಹೇಳಿದ್ದೇನು?

ಉದ್ಧವ್ ಠಾಕ್ರೆಗಾಗಿ ತಮ್ಮ ಒಂದು ಕಿಟಕಿ ಯಾವಾಗಲೂ ತೆರೆದಿರುತ್ತದೆ ಎಂದು ಪ್ರಧಾನಿ ಮೋದಿ ಒಮ್ಮೆ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ 20 ದಿನಗಳ ನಂತರ, ಶಿವಸೇನಾ ನಾಯಕ ಉದ್ಧವ್ ಠಾಕ್ರೆ ಆ ಒಂದು ಕಿಟಕಿಯ ಮೂಲಕ ಅವರೊಂದಿಗೆ ಕೈಜೋಡಿಸಲಿದ್ದಾರೆ ಎಂದು ರವಿ ರಾಣಾ ಹೇಳಿದ್ದಾರೆ.

ಇದನ್ನೂ ಓದಿ: ಐತಿಹಾಸಿಕ ದಾಖಲೆ ಬರೆದ ಭಾರತದ ಲೋಕಸಭಾ ಚುನಾವಣೆ, 64 ಕೋಟಿ ಮಂದಿಯಿಂದ ಮತದಾನ

ಮಿತ್ರಪಕ್ಷಗಳ ನಡುವಿನ 2019 ರ ಅಧಿಕಾರ ಹಂಚಿಕೆ ಜಗಳದ ನಂತರ ಶಿವಸೇನಾ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಂಡಿತ್ತು. ನಂತರ, ಶಿವಸೇನಾ ಎರಡು ಬಣಗಳಾಗಿ ಒಡೆಯಿತು. ಒಂದು ಪ್ರಸ್ತುತ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರದ್ದು ಮತ್ತು ಇನ್ನೊಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ. ಬಿಜೆಪಿಯೊಂದಿಗೆ ಮೈತ್ರಿ ಮುರಿದ ನಂತರ, ಉದ್ಧವ್ ಠಾಕ್ರೆ, ಶರದ್ ಪವಾರ್ ಅವರ ಎನ್‌ಸಿಪಿ ಮತ್ತು ಕಾಂಗ್ರೆಸ್‌ನಿಂದ ಮಹಾ ವಿಕಾಸ್ ಅಘಾಡಿ ಎಂಬ ಮಹಾಮೈತ್ರಿಕೂಟವನ್ನು ರಚಿಸಲಾಯಿತು. MVA ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ರಚಿಸಿತು. ನಂತರ ಅದು ಪತನವಾಯಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್