AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UP Assembly Polls: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ; 5ನೇ ಹಂತದ ಮತದಾನ ಮುಕ್ತಾಯ

ಲ್ಪಮಟ್ಟಿಗೆ ಕಾಂಗ್ರೆಸ್​ ಪ್ರಾಬಲ್ಯ ಇರುವ ಅಮೇಠಿ, ರಾಯ್​ಬರೇಲಿಯಲ್ಲಿ ಶೇ.52.77 ಮತ್ತು 56.06ರಷ್ಟು ಮತಚಲಾವಣೆಯಾಗಿದೆ.  ಇನ್ನುಳಿದಂತೆ ಸುಲ್ತಾನ್​​ಪುರದಲ್ಲಿ ಶೇ.54.88, ಗೊಂಡಾದಲ್ಲಿ ಶೇ.54.31 ಮತ ಚಲಾವಣೆ ಆಗಿದೆ.

UP Assembly Polls: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ; 5ನೇ ಹಂತದ ಮತದಾನ ಮುಕ್ತಾಯ
ಅಯೋಧ್ಯೆಯಲ್ಲಿ ಮತದಾನ (ಪಿಟಿಐ ಚಿತ್ರ)
TV9 Web
| Edited By: |

Updated on: Feb 27, 2022 | 7:35 PM

Share

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ (Uttar Pradesh Assembly Election) 5ನೇ ಹಂತದ ಮತದಾನ ಇಂದು ಶಾಂತಿಯುತವಾಗಿ ನಡೆದಿದ್ದು, ಸಂಜೆ 5ಗಂಟೆವರೆಗೆ 53.93ರಷ್ಟು  ಮತದಾನ ಆಗಿದೆ. ಇಂದು ಒಟ್ಟಾರೆ 12 ಜಿಲ್ಲೆಗಳ 61 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆದಿತ್ತು. 693 ಅಭ್ಯರ್ಥಿಗಳು ಕಣದಲ್ಲಿ ಇದ್ದರು. ಮುಂಜಾನೆ 7ಗಂಟೆಗೆ ಶುರುವಾದ ಮತದಾನ ಸಂಜೆ 6ಗಂಟೆಗೆ ಮುಕ್ತಾಯಗೊಂಡಿದೆ. 5 ಗಂಟೆವರೆಗೆ ಅತಿ ಹೆಚ್ಚು ಮತದಾನವಾಗಿದ್ದು ಚಿತ್ರಕೂಟ್​ನಲ್ಲಿ. ಅಲ್ಲಿ ಶೇ. 59.64ರಷ್ಟು ಮತ ಚಲಾವಣೆಯಾಗಿದೆ. ಅದು ಬಿಟ್ಟರೆ, ಅಯೋಧ್ಯೆಯಲ್ಲಿ ಶೇ.58.01, ಶ್ರವಸ್ಟಿಯಲ್ಲಿ ಶೇ.57.24, ಕೌಶಂಬಿಯಲ್ಲಿ ಶೇ. 57.01 ಮತದಾನವಾಗಿದ್ದರೆ, ಅತ್ಯಂತ ಕಡಿಮೆ ಅಂದರೆ ಶೇ.50.25ರಷ್ಟು ಮತದಾನ ಪ್ರತಾಪ್​ಗಢ್​​ನಲ್ಲಿ ಆಗಿದೆ.

ಇನ್ನು ಸ್ವಲ್ಪಮಟ್ಟಿಗೆ ಕಾಂಗ್ರೆಸ್​ ಪ್ರಾಬಲ್ಯ ಇರುವ ಅಮೇಠಿ, ರಾಯ್​ಬರೇಲಿಯಲ್ಲಿ ಶೇ.52.77 ಮತ್ತು 56.06ರಷ್ಟು ಮತಚಲಾವಣೆಯಾಗಿದೆ.  ಇನ್ನುಳಿದಂತೆ ಸುಲ್ತಾನ್​​ಪುರದಲ್ಲಿ ಶೇ.54.88, ಗೊಂಡಾದಲ್ಲಿ ಶೇ.54.31, ಬಾರಾಬಂಕಿ ಶೇ.54.65, ಬಹ್ರೈಚ್​​ನಲ್ಲಿ ಶೇ.55  ರಷ್ಟು ಮತದಾನವಾಗಿದೆ. ಉತ್ತರಪ್ರದೇಶದಲ್ಲಿ ಇಲ್ಲಿಯವರೆಗೆ ಒಟ್ಟು 5ಹಂತಗಳು ಮುಕ್ತಾಯವಾಗಿದ್ದು, ಇನ್ನು ಎರಡು ಹಂತಗಳಲ್ಲಿ ಮತದಾನ ಬಾಕಿಯಿದೆ. ಮಾರ್ಚ್​ 10ರಂದು ಮತ ಎಣಿಕೆ ನಡೆಯಲಿದೆ.  ಈ ಹಂತ ಬಿಜೆಪಿ ಪಾಲಿಗೆ ತುಂಬ ನಿರ್ಣಾಯಕ ಎನ್ನಿಸಿತ್ತು. ಯಾಕೆಂದ್ರೆ 2017ರಲ್ಲಿ ಇಲ್ಲಿನ 61 ಕ್ಷೇತ್ರಗಳಲ್ಲಿ 50ನ್ನು ಬಿಜೆಪಿ ಗೆದ್ದುಕೊಂಡಿತ್ತು. ಈ ಬಾರಿ ಸಮಾಜವಾದಿ ಪಕ್ಷದ ಪೈಪೋಟಿಯೂ ಹೆಚ್ಚಾಗಿದೆ.

ಇಂದು ಅವಧ್​ ಪ್ರದೇಶದ ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಅದರಲ್ಲೂ ಅಯೋಧ್ಯೆ ಅತ್ಯಂತ ಹೆಚ್ಚು ಕುತೂಹಲಕ್ಕೆ ಕಾರಣವಾದ ಕ್ಷೇತ್ರ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸುಪ್ರೀಂಕೋರ್ಟ್ ಅಸ್ತು ಅಂದ ಮೇಲೆ ಅಲ್ಲಿ ಉತ್ತರ ಪ್ರದೇಶ ಬಿಜೆಪಿ ಸರ್ಕಾರ ಭರ್ಜರಿ ಅಭಿವೃದ್ಧಿ ಮಾಡುತ್ತಿದೆ. ಇಲ್ಲಿ ಬಿಜೆಪಿಯಿಂದ ವಿ.ಪಿ.ಗುಪ್ತಾ, ಸಮಾಜವಾದಿ ಪಕ್ಷದಿಂದ ಪವನ್​ ಪಾಂಡೆ ಸ್ಪರ್ಧಿಸುತ್ತಿದ್ದಾರೆ. 2012ರಲ್ಲಿ ಈ ಕ್ಷೇತ್ರವನ್ನು ಪವನ್​ ಪಾಂಡೆ ಗೆದ್ದುಕೊಂಡಿದ್ದರು. ಅದರಲ್ಲೂ ಕೂಡ ಐದು ಬಾರಿ ಇಲ್ಲಿಂದ ಗೆದ್ದಿದ್ದ ಬಿಜೆಪಿ ನಾಯಕ ವೇದ್​ ಪ್ರಕಾಶ್​ ಗುಪ್ತಾರನ್ನು ಸೋಲಿಸಿ, ಜಯ ಸಾಧಿಸಿದ್ದರು.  ಆದರೆ 2017ರಲ್ಲಿ ಮತ್ತೆ ಸೋಲನುಭವಿಸಿದ್ದರು.

ಇದನ್ನೂ ಓದಿ: ಶಿಶು ವಿಹಾರಗಳು, ಶಾಲೆಗಳ ಮೇಲೆ ಕೂಡ ರಷ್ಯಾ ಸೇನೆಯಿಂದ ದಾಳಿ; ಉಕ್ರೇನಿಯನ್​ ಅಧ್ಯಕ್ಷರಿಂದ ಮಾಹಿತಿ

ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಮೋಸ
ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಮೋಸ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ