AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UP Assembly Polls: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ; 5ನೇ ಹಂತದ ಮತದಾನ ಮುಕ್ತಾಯ

ಲ್ಪಮಟ್ಟಿಗೆ ಕಾಂಗ್ರೆಸ್​ ಪ್ರಾಬಲ್ಯ ಇರುವ ಅಮೇಠಿ, ರಾಯ್​ಬರೇಲಿಯಲ್ಲಿ ಶೇ.52.77 ಮತ್ತು 56.06ರಷ್ಟು ಮತಚಲಾವಣೆಯಾಗಿದೆ.  ಇನ್ನುಳಿದಂತೆ ಸುಲ್ತಾನ್​​ಪುರದಲ್ಲಿ ಶೇ.54.88, ಗೊಂಡಾದಲ್ಲಿ ಶೇ.54.31 ಮತ ಚಲಾವಣೆ ಆಗಿದೆ.

UP Assembly Polls: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ; 5ನೇ ಹಂತದ ಮತದಾನ ಮುಕ್ತಾಯ
ಅಯೋಧ್ಯೆಯಲ್ಲಿ ಮತದಾನ (ಪಿಟಿಐ ಚಿತ್ರ)
TV9 Web
| Edited By: |

Updated on: Feb 27, 2022 | 7:35 PM

Share

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ (Uttar Pradesh Assembly Election) 5ನೇ ಹಂತದ ಮತದಾನ ಇಂದು ಶಾಂತಿಯುತವಾಗಿ ನಡೆದಿದ್ದು, ಸಂಜೆ 5ಗಂಟೆವರೆಗೆ 53.93ರಷ್ಟು  ಮತದಾನ ಆಗಿದೆ. ಇಂದು ಒಟ್ಟಾರೆ 12 ಜಿಲ್ಲೆಗಳ 61 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆದಿತ್ತು. 693 ಅಭ್ಯರ್ಥಿಗಳು ಕಣದಲ್ಲಿ ಇದ್ದರು. ಮುಂಜಾನೆ 7ಗಂಟೆಗೆ ಶುರುವಾದ ಮತದಾನ ಸಂಜೆ 6ಗಂಟೆಗೆ ಮುಕ್ತಾಯಗೊಂಡಿದೆ. 5 ಗಂಟೆವರೆಗೆ ಅತಿ ಹೆಚ್ಚು ಮತದಾನವಾಗಿದ್ದು ಚಿತ್ರಕೂಟ್​ನಲ್ಲಿ. ಅಲ್ಲಿ ಶೇ. 59.64ರಷ್ಟು ಮತ ಚಲಾವಣೆಯಾಗಿದೆ. ಅದು ಬಿಟ್ಟರೆ, ಅಯೋಧ್ಯೆಯಲ್ಲಿ ಶೇ.58.01, ಶ್ರವಸ್ಟಿಯಲ್ಲಿ ಶೇ.57.24, ಕೌಶಂಬಿಯಲ್ಲಿ ಶೇ. 57.01 ಮತದಾನವಾಗಿದ್ದರೆ, ಅತ್ಯಂತ ಕಡಿಮೆ ಅಂದರೆ ಶೇ.50.25ರಷ್ಟು ಮತದಾನ ಪ್ರತಾಪ್​ಗಢ್​​ನಲ್ಲಿ ಆಗಿದೆ.

ಇನ್ನು ಸ್ವಲ್ಪಮಟ್ಟಿಗೆ ಕಾಂಗ್ರೆಸ್​ ಪ್ರಾಬಲ್ಯ ಇರುವ ಅಮೇಠಿ, ರಾಯ್​ಬರೇಲಿಯಲ್ಲಿ ಶೇ.52.77 ಮತ್ತು 56.06ರಷ್ಟು ಮತಚಲಾವಣೆಯಾಗಿದೆ.  ಇನ್ನುಳಿದಂತೆ ಸುಲ್ತಾನ್​​ಪುರದಲ್ಲಿ ಶೇ.54.88, ಗೊಂಡಾದಲ್ಲಿ ಶೇ.54.31, ಬಾರಾಬಂಕಿ ಶೇ.54.65, ಬಹ್ರೈಚ್​​ನಲ್ಲಿ ಶೇ.55  ರಷ್ಟು ಮತದಾನವಾಗಿದೆ. ಉತ್ತರಪ್ರದೇಶದಲ್ಲಿ ಇಲ್ಲಿಯವರೆಗೆ ಒಟ್ಟು 5ಹಂತಗಳು ಮುಕ್ತಾಯವಾಗಿದ್ದು, ಇನ್ನು ಎರಡು ಹಂತಗಳಲ್ಲಿ ಮತದಾನ ಬಾಕಿಯಿದೆ. ಮಾರ್ಚ್​ 10ರಂದು ಮತ ಎಣಿಕೆ ನಡೆಯಲಿದೆ.  ಈ ಹಂತ ಬಿಜೆಪಿ ಪಾಲಿಗೆ ತುಂಬ ನಿರ್ಣಾಯಕ ಎನ್ನಿಸಿತ್ತು. ಯಾಕೆಂದ್ರೆ 2017ರಲ್ಲಿ ಇಲ್ಲಿನ 61 ಕ್ಷೇತ್ರಗಳಲ್ಲಿ 50ನ್ನು ಬಿಜೆಪಿ ಗೆದ್ದುಕೊಂಡಿತ್ತು. ಈ ಬಾರಿ ಸಮಾಜವಾದಿ ಪಕ್ಷದ ಪೈಪೋಟಿಯೂ ಹೆಚ್ಚಾಗಿದೆ.

ಇಂದು ಅವಧ್​ ಪ್ರದೇಶದ ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಅದರಲ್ಲೂ ಅಯೋಧ್ಯೆ ಅತ್ಯಂತ ಹೆಚ್ಚು ಕುತೂಹಲಕ್ಕೆ ಕಾರಣವಾದ ಕ್ಷೇತ್ರ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸುಪ್ರೀಂಕೋರ್ಟ್ ಅಸ್ತು ಅಂದ ಮೇಲೆ ಅಲ್ಲಿ ಉತ್ತರ ಪ್ರದೇಶ ಬಿಜೆಪಿ ಸರ್ಕಾರ ಭರ್ಜರಿ ಅಭಿವೃದ್ಧಿ ಮಾಡುತ್ತಿದೆ. ಇಲ್ಲಿ ಬಿಜೆಪಿಯಿಂದ ವಿ.ಪಿ.ಗುಪ್ತಾ, ಸಮಾಜವಾದಿ ಪಕ್ಷದಿಂದ ಪವನ್​ ಪಾಂಡೆ ಸ್ಪರ್ಧಿಸುತ್ತಿದ್ದಾರೆ. 2012ರಲ್ಲಿ ಈ ಕ್ಷೇತ್ರವನ್ನು ಪವನ್​ ಪಾಂಡೆ ಗೆದ್ದುಕೊಂಡಿದ್ದರು. ಅದರಲ್ಲೂ ಕೂಡ ಐದು ಬಾರಿ ಇಲ್ಲಿಂದ ಗೆದ್ದಿದ್ದ ಬಿಜೆಪಿ ನಾಯಕ ವೇದ್​ ಪ್ರಕಾಶ್​ ಗುಪ್ತಾರನ್ನು ಸೋಲಿಸಿ, ಜಯ ಸಾಧಿಸಿದ್ದರು.  ಆದರೆ 2017ರಲ್ಲಿ ಮತ್ತೆ ಸೋಲನುಭವಿಸಿದ್ದರು.

ಇದನ್ನೂ ಓದಿ: ಶಿಶು ವಿಹಾರಗಳು, ಶಾಲೆಗಳ ಮೇಲೆ ಕೂಡ ರಷ್ಯಾ ಸೇನೆಯಿಂದ ದಾಳಿ; ಉಕ್ರೇನಿಯನ್​ ಅಧ್ಯಕ್ಷರಿಂದ ಮಾಹಿತಿ

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ