AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಲ್ಲಿ ಯೋಗಿ ಸರ್ಕಾರದ ಒಬ್ಬ ಸಚಿವ ರಾಜೀನಾಮೆ; ಬಿಜೆಪಿ ಬಿಡುತ್ತಿದ್ದಂತೆ ಅಖಿಲೇಶ್​ ಯಾದವ್​ ಪಕ್ಷಕ್ಕೆ ಸೇರ್ಪಡೆ

ಸ್ವಾಮಿ ಪ್ರಸಾದ್ ಮೌರ್ಯ ಅವರೊಂದಿಗೆ ಆಯುಷ್​ ಇಲಾಖೆ ಸಚಿವ ಧರ್ಮ ಸಿಂಗ್​ ಸೈನಿ ಸೇರಿ ಒಟ್ಟು ನಾಲ್ವರು ಶಾಸಕರು ಬಿಜೆಪಿ ತೊರೆದು, ಸಮಾಜವಾದಿ ಪಕ್ಷ ಸೇರಲಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.

ಉತ್ತರ ಪ್ರದೇಶದಲ್ಲಿ ಯೋಗಿ ಸರ್ಕಾರದ ಒಬ್ಬ ಸಚಿವ ರಾಜೀನಾಮೆ; ಬಿಜೆಪಿ ಬಿಡುತ್ತಿದ್ದಂತೆ ಅಖಿಲೇಶ್​ ಯಾದವ್​ ಪಕ್ಷಕ್ಕೆ ಸೇರ್ಪಡೆ
ಎಸ್​ಪಿ ಸೇರಿದ ಬಿಜೆಪಿ ಮಾಜಿ ಸಚಿವ ಸ್ವಾಮಿ ಪ್ರಸಾದ್​ ಮೌರ್ಯ
Follow us
TV9 Web
| Updated By: Lakshmi Hegde

Updated on:Jan 11, 2022 | 3:11 PM

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ (Uttar Pradesh Assembly Election 2022) ಇನ್ನೊಂದೇ ತಿಂಗಳು ಬಾಕಿ ಇರುವಾಗ ಬಿಜೆಪಿ ಸರ್ಕಾರಕ್ಕೆ ಸಣ್ಣಮಟ್ಟದ ಹಿನ್ನಡೆಯಾಗಿದೆ. ಯೋಗಿ ಸರ್ಕಾರದ (Yogi Adityanath Government) ಸಂಪುಟದ ಕಾರ್ಮಿಕ ಇಲಾಖೆ ಸಚಿವ ಸ್ವಾಮಿ ಪ್ರಸಾದ್​ ಮೌರ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸ್ವಾಮಿ ಪ್ರಸಾದ್  ಸಮಾಜವಾದಿ ಪಕ್ಷ ಸೇರ್ಪಡೆಯಾಗಿದ್ದಾರೆ.  2017ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಪದ್ರೌನಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಈ ಕ್ಷೇತ್ರದಿಂದ ಸತತ ಮೂರನೇ ಅವಧಿಗೆ ಶಾಸಕರಾದ ಅವರಿಗೆ ಸಂಪುಟದಲ್ಲಿ ಸಚಿವ ಸ್ಥಾನವೂ ದಕ್ಕಿತ್ತು. ಇವರೊಟ್ಟಿಗೆ ಆಯುಷ್​ ಇಲಾಖೆ ಸಚಿವ ಧರ್ಮ ಸಿಂಗ್​ ಸೈನಿ ಸೇರಿ ಒಟ್ಟು ನಾಲ್ವರು ಶಾಸಕರು ಬಿಜೆಪಿ ತೊರೆದು, ಸಮಾಜವಾದಿ ಪಕ್ಷ ಸೇರಲಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.

ಸ್ವಾಮಿ ಪ್ರಸಾದ್ ಮೌರ್ಯ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾದ ಬೆನ್ನಲ್ಲೇ ಅಖಿಲೇಶ್​ ಯಾದವ್​ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ.  ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ಹೋರಾಡಿದ ಜನಪ್ರಿಯ ನಾಯಕ ಸ್ವಾಮಿ ಪ್ರಸಾದ್ ಇಂದು ನಮ್ಮ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾದರು. ಅವರಿಗೆ ಹೃತ್ಪೂರ್ವಕ ಸ್ವಾಗತ. ಹಾಗೇ, ನಮ್ಮ ಪಕ್ಷಕ್ಕೆ ಬರುವ ಇನ್ಯಾವುದೇ ಪಕ್ಷಗಳ ನಾಯಕರು, ಮುಖಂಡರು, ಕಾರ್ಯಕರ್ತರಿಗೆ ಸ್ವಾಗತ ಎಂದಿದ್ದಾರೆ.

ರಾಜೀನಾಮೆ ಪತ್ರದಲ್ಲಿ ಏನಿದೆ? : ಸ್ವಾಮಿ ಪ್ರಸಾದ್ ಮೌರ್ಯ ಅವರು ತಾವೇಕೆ ಪಕ್ಷಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದಾರೆ ಎಂಬುದನ್ನು ರಾಜ್ಯಪಾಲೆ ಆನಂದಿಬೆನ್​​ರಿಗೆ ಕಳುಹಿಸಿದ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ನಾನು ಕಾರ್ಮಿಕ ಮತ್ತು ಉದ್ಯೋಗ ಮತ್ತು ಸಮನ್ವಯ ಸಚಿವನಾಗಿ, ಸಿದ್ಧಾಂತ ಹಾಗೂ ಪ್ರತಿಕೂಲತೆಗಳಡಿ ಕೆಲಸ ಮಾಡಿದ್ದೇನೆ. ಆದರೆ ಎಲ್ಲಿಯೂ ನನ್ನ ಜವಾಬ್ದಾರಿ ಬಿಟ್ಟಿಲ್ಲ. ಆದರೂ ಸರ್ಕಾರ ದಲಿತರು, ಹಿಂದುಳಿದ ರೈತರು, ನಿರುದ್ಯೋಗಿ ಯುವಕರು ಮತ್ತು ಸಣ್ಣ ಮತ್ತು ಮಧ್ಯಮ ಪ್ರಮಾಣದ ವ್ಯಾಪಾರಿಗಳ ಬಗೆಗೆ ನಿರ್ಲಕ್ಷ್ಯ ತೋರುವುದನ್ನು ನನಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಪಕ್ಷ ತೊರೆಯುತ್ತಿದ್ದೇನೆ ಎಂದು ಹೇಳಿದ್ದಾರೆ.

ಚರ್ಚೆ ನಡೆಯುತ್ತಿತ್ತು !: ಸ್ವಾಮಿ ಪ್ರಸಾದ್ ಮೌರ್ಯ ಅಖಿಲೇಶ್​ ಯಾದವ್​ ಜತೆ ನೇರವಾಗಿ ಸಂಪರ್ಕದಲ್ಲಿದ್ದಾರೆ. ಅವರು ಶೀಘ್ರದಲ್ಲೇ ಬಿಜೆಪಿ ಸರ್ಕಾರ ತೊರೆಯಲಿದ್ದಾರೆ ಎಂಬ ಮಾತುಗಳು ಹಲವು ದಿನಗಳಿಂದಲೂ ಕೇಳಿಬರುತ್ತಿತ್ತು. ಈ ಬಗ್ಗೆ ಚರ್ಚೆಯೂ ನಡೆಯುತ್ತಿತ್ತು. ಆದರೆ ವಿಧಾನಸಭೆ ಚುನಾವಣೆಗೂ ಮುನ್ನ ಪ್ರಭಾವಿ ಸಚಿವರೊಬ್ಬರು ಸಮಾಜವಾದಿ ಪಕ್ಷಕ್ಕೆ ಸೇರಿದ್ದು, ಬಿಜೆಪಿಗೆ ಬಹುದೊಡ್ಡ ಹಿನ್ನಡೆ ಎಂಬ ಅಭಿಪ್ರಾಯ ರಾಜಕೀಯ ವಲಯದಿಂದ ಕೇಳಿಬರುತ್ತಿದೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಫೆ.10ರಿಂದ ಏಳು ಹಂತಗಳಲ್ಲಿ ನಡೆಯಲಿದೆ. 403 ಕ್ಷೇತ್ರಗಳ ದೊಡ್ಡ ರಾಜ್ಯ ಇದಾಗಿದ್ದು, ಇಲ್ಲಿ ಬಿಜೆಪಿಗೆ ಎರಡನೇ ಅವಧಿಗೆ ಅಧಿಕಾರ ಹಿಡಿಯುವ ಕಾತರವಾದರೆ, ಅಖಿಲೇಶ್​ ಯಾದವ್​ಗೆ ಇನ್ನೊಮ್ಮೆ ಗೆದ್ದು ತಾವು ಮುಖ್ಯಮಂತ್ರಿಯಾಗುವ ತವಕ.

ಇದನ್ನೂ ಓದಿ:  ಶೀಘ್ರವೇ ಸಿಂಬು-ನಿಧಿ ಅಗರ್​ವಾಲ್​ ಮದುವೆ? ಹೊರ ಬಿತ್ತು ಹೊಸ ಸುದ್ದಿ

Published On - 3:00 pm, Tue, 11 January 22

ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ