AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಜವಾದಿ ಪಕ್ಷದ ಮೇಲೆ ಕ್ರಮಕೈಗೊಳ್ಳುತ್ತೀರಿ ಆದರೆ ಬಿಜೆಪಿ ಅಭ್ಯರ್ಥಿ ವಿರುದ್ಧ ಯಾಕಿಲ್ಲ?: ಅಖಿಲೇಶ್ ಯಾದವ್ 

Akhilesh Yadav ಅಖಿಲೇಶ್ ಯಾದವ್ ಅವರು ಹಂಚಿಕೊಂಡ ವಿಡಿಯೊದಲ್ಲಿ ನೂರಾರು ಜನರು - ಹಲವಾರು ಜನರು ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ ಪ್ರಚಾರ ಮಾಡುತ್ತಿದ್ದಾರೆ.

ಸಮಾಜವಾದಿ ಪಕ್ಷದ ಮೇಲೆ ಕ್ರಮಕೈಗೊಳ್ಳುತ್ತೀರಿ ಆದರೆ ಬಿಜೆಪಿ ಅಭ್ಯರ್ಥಿ ವಿರುದ್ಧ ಯಾಕಿಲ್ಲ?: ಅಖಿಲೇಶ್ ಯಾದವ್ 
ಅಖಿಲೇಶ್ ಯಾದವ್
TV9 Web
| Edited By: |

Updated on:Jan 17, 2022 | 1:51 PM

Share

ಲಖನೌ: ಕೊವಿಡ್ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಉಲ್ಲಂಘಿಸಿದ್ದಕ್ಕಾಗಿ ಕಳೆದ ವಾರ ಸಮಾಜವಾದಿ ಪಕ್ಷಕ್ಕೆ (Samajwadi Party) ಚುನಾವಣಾ ಆಯೋಗದ ನೋಟಿಸ್ ನೀಡಿತ್ತು. ಇದಕ್ಕೆ ಪ್ರತಿಕ್ರಿಯೆ ಎಂಬಂತೆ ಅಖಿಲೇಶ್ ಯಾದವ್ (Akhilesh Yadav) ಇಂದು ಬಿಜೆಪಿ ಶಾಸಕರೊಬ್ಬರು ರೋಡ್‌ಶೋ ನಡೆಸುವ ವಿಡಿಯೊವನ್ನು ಟ್ವೀಟ್ ಮಾಡಿದ್ದಾರೆ. ಮುಂದಿನ ತಿಂಗಳ ಚುನಾವಣೆಗೆ ಮುಂಚಿತವಾಗಿ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಡೆದ ರೋಡ್ ಶೋ , ಇದು ನಿಯಮಗಳ ಉಲ್ಲಂಘನೆಯಾಗಿದೆ ಎಂದು ಅಖಿಲೇಶ್ ಟ್ವೀಟ್​​ನಲ್ಲಿ ಬರೆದಿದ್ದಾರೆ.  ಸರ್ಕಾರ ಮತ್ತು ಸ್ವತಃ ಘೋಷಿಸಿದಂತೆ ಕೊವಿಡ್ ಪ್ರೋಟೋಕಾಲ್‌ಗಳನ್ನು ಉಲ್ಲಂಘಿಸುವ ಎಲ್ಲಾ ಪಕ್ಷಗಳ ವಿರುದ್ಧ ಉನ್ನತ ಚುನಾವಣಾ ಸಂಸ್ಥೆ ಏಕರೂಪವಾಗಿ ಕಾರ್ಯನಿರ್ವಹಿಸಬೇಕೆಂದು ಅಖಿಲೇಶ್ ಒತ್ತಾಯಿಸಿದರು.  “ಸಮಾಜವಾದಿ ಪಕ್ಷದ ಕಚೇರಿ ಮತ್ತು ಕಾರ್ಯಕ್ರಮಗಳ ಮೇಲೆ ಸಂಪೂರ್ಣ ನಿಷೇಧವಿದೆ.ಆದರೆ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ ಸೋಲುತ್ತಾರೆ ಎಂದು ವ್ಯಂಗ್ಯದ ಭಾಷೆಯಲ್ಲಿ ಹೇಳಿದ ಅಖಿಲೇಶ್ ‘ಕೆಲವೇ ದಿನ ಬಾಕಿ ಇರುವ ಮುಖ್ಯಮಂತ್ರಿ’ ಮತ್ತು ಅಮ್ರೋಹಾದ ಬಿಜೆಪಿ ಅಭ್ಯರ್ಥಿ ಬಹಿರಂಗವಾಗಿ ಮಾದರಿ ಸಂಹಿತೆ ಮತ್ತು ಕೊವಿಡ್ ಮಾರ್ಗಸೂಚಿಗಳು ಲೇವಡಿ ಮಾಡುತ್ತಿದ್ದಾರೆ ಎಂದಿದ್ದಾರೆ.  ಅಖಿಲೇಶ್ ಯಾದವ್ ಅವರು ಹಂಚಿಕೊಂಡ ವಿಡಿಯೊದಲ್ಲಿ ನೂರಾರು ಜನರು – ಹಲವಾರು ಜನರು ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ ಪ್ರಚಾರ ಮಾಡುತ್ತಿದ್ದಾರೆ. ಜನವರಿ 22 ರವರೆಗೆ ರ್ಯಾಲಿಗಳು, ರೋಡ್‌ಶೋಗಳು, ನುಕ್ಕಡ್ ಸಭೆಗಳು (ರಸ್ತೆಬದಿಯ ಸಭೆಗಳು) ಅಥವಾ ಇತರ ಸಾರ್ವಜನಿಕ ಕಾರ್ಯಕ್ರಮಗಳನ್ನು ನಿಷೇಧಿಸಿರುವುದಾಗಿ ಚುನಾವಣಾ ಆಯೋಗ ಆದೇಶ ಹೊರಡಿಸಿತ್ತು.

ಬಿಜೆಪಿ ಮತ್ತು ಶಾಸಕ ಮಹೇಂದ್ರ ಖರಗವಂಶಿ ಇಬ್ಬರೂ ಇನ್ನೂ ಪ್ರತಿಕ್ರಿಯಿಸಿಲ್ಲ.

ಸಚಿವರಾದ ಸ್ವಾಮಿ ಪ್ರಸಾದ್ ಮೌರ್ಯ ಮತ್ತು ಧರಮ್ ಸಿಂಗ್ ಸೈನಿ ಸೇರಿದಂತೆ ಏಳು ಮಾಜಿ ಬಿಜೆಪಿ ಶಾಸಕರ ‘ವರ್ಚುವಲ್’ ಅಥವಾ ‘ಆನ್‌ಲೈನ್’ ಸೇರ್ಪಡೆಗಾಗಿ ಹೆಚ್ಚಿನ ಸಂಖ್ಯೆಯ ಜನರು ಜಮಾಯಿಸಿದ ನಂತರ ಶನಿವಾರ ಚುನಾವಣಾ ಆಯೋಗ ಸಮಾಜವಾದಿ ಪಕ್ಷದಿಂದ ವಿವರಣೆಯನ್ನು ಕೋರಿತು. ಸಮಾಜವಾದಿ ಪಕ್ಷದ ಕಾರ್ಯಕರ್ತರು ಎನ್ನಲಾದ 2,500 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಎಲ್ಲಾ ಕೊವಿಡ್ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸುವಂತೆ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರನ್ನು ಒತ್ತಾಯಿಸುವ ಮೂಲಕ ಅಖಿಲೇಶ್ ಯಾದವ್ ಇದಕ್ಕೆ ಪ್ರತಿಕ್ರಿಯಿಸಿದ್ದರು.

ಕೊವಿಡ್ ಪ್ರಕರಣಗಳ ಭಯಾನಕ ಉಲ್ಬಣ ಮತ್ತು ಸಾವಿರಾರು ಜನರು ಭಾಗವಹಿಸುವ ಚುನಾವಣಾ ರ್ಯಾಲಿಗಳು ಮತ್ತು ರೋಡ್‌ಶೋಗಳು ಸೂಪರ್-ಸ್ಪ್ರೆಡರ್ ಆಗಬಹುದು ಎಂಬ ಆತಂಕದ ಹೊರತಾಗಿಯೂ ಐದು ರಾಜ್ಯಗಳಾದ ಉತ್ತರ ಪ್ರದೇಶ, ಗೋವಾ, ಮಣಿಪುರ, ಉತ್ತರಾಖಂಡ ಮತ್ತು ಪಂಜಾಬ್ ನಲ್ಲಿ ಮುಂದಿನ ಎರಡು ತಿಂಗಳುಗಳಲ್ಲಿ ಚುನಾವಣೆ ನಡೆಯಲಿದೆ.

ಚುನಾವಣೆ ಮುಂದೂಡಬೇಕು ಎಂದು ಅಲಹಾಬಾದ್ ಹೈಕೋರ್ಟಿನ ಒಂದು ಮನವಿಯನ್ನು ಸಂವಿಧಾನವನ್ನು ಉಲ್ಲೇಖಿಸಿ ಚುನಾವಣಾ ಆಯೋಗವು ತಿರಸ್ಕರಿಸಿತು. ಅದೇ ವೇಳೆ ರ್ಯಾಲಿಗಳು ಮತ್ತು ರೋಡ್‌ಶೋಗಳ ನಿಷೇಧದಂತಹ ಕ್ರಮಗಳು ಸರಿಯಾಗಿ ಜಾರಿಯಾಗುವುದಿಲ್ಲ ಎಂದು ಆಯೋಗ ಹೇಳಿದೆ.  ಅಂದಿನಿಂದ ಚುನಾವಣಾ ಸಂಸ್ಥೆಯು ಕಾಂಗ್ರೆಸ್ ವಿರುದ್ಧವೂ ಗರಂ ಆಗಿದೆ. ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರನ್ನು ನಿನ್ನೆ ಉತ್ತರ ಪ್ರದೇಶದ  ನೋಯ್ಡಾದಲ್ಲಿ ಪ್ರಚಾರ ಮಾಡುವಾಗ ಪೊಲೀಸ್ ಪ್ರಕರಣದಲ್ಲಿ ದಾಖಲಾಗಿಸಲಾಗಿದೆ.

ಇದನ್ನೂ ಓದಿ: ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಹಸ್ತಿನಾಪುರ ಕದನಕ್ಕೆ ಸಿದ್ಧ ಎಂದ ಕಾಂಗ್ರೆಸ್‌ನ ಅರ್ಚನಾ ಗೌತಮ್

Published On - 1:39 pm, Mon, 17 January 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ