AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ ಚುನಾವಣೆಯಲ್ಲಿ ಅಯೋಧ್ಯೆಯಿಂದ ಯೋಗಿ ಆದಿತ್ಯನಾಥರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ

Yogi Adityanath ರಾಜಕೀಯವಾಗಿ ಪ್ರತಿಷ್ಠಿತ ರಾಜ್ಯವಾದ ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್ 10 ರಂದು ಮತಗಳನ್ನು ಎಣಿಕೆ ಮಾಡಲಾಗುತ್ತದೆ.

ಉತ್ತರ ಪ್ರದೇಶ ಚುನಾವಣೆಯಲ್ಲಿ ಅಯೋಧ್ಯೆಯಿಂದ ಯೋಗಿ ಆದಿತ್ಯನಾಥರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jan 12, 2022 | 7:32 PM

Share

ದೆಹಲಿ: ಉತ್ತರ ಪ್ರದೇಶದಲ್ಲಿ(Uttar Pradesh)  ಕಳೆದ ಎರಡು ದಿನಗಳಿಂದ ಆರು ನಾಯಕರ ನಿರ್ಗಮನದೊಂದಿಗೆ ಬಂಡಾಯ ಎದುರಿಸುತ್ತಿರುವ ಬಿಜೆಪಿ (BJP), ವಿಧಾನಸಭಾ ಚುನಾವಣೆಯಲ್ಲಿ ಅಯೋಧ್ಯೆಯಿಂದ (Ayodhya) ಯೋಗಿ ಆದಿತ್ಯನಾಥ (Yogi Adityanath) ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಅಂತಿಮ ನಿರ್ಧಾರ ಪ್ರಧಾನಿ ನರೇಂದ್ರ ಮೋದಿಯವರದ್ದಾಗಲಿದೆ (Narendra Modi) ಎಂದು ಮೂಲಗಳು ಹೇಳಿರುವುದಾಗಿ ಎನ್​​ಡಿಟಿವಿ ವರದಿಮಾಡಿದೆ. ರಾಜಕೀಯವಾಗಿ ಪ್ರತಿಷ್ಠಿತ ರಾಜ್ಯವಾದ ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್ 10 ರಂದು ಮತಗಳನ್ನು ಎಣಿಕೆ ಮಾಡಲಾಗುತ್ತದೆ.  ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಂಗಳವಾರ ಭಾರತೀಯ ಜನತಾ ಪಕ್ಷದ ಕೋರ್ ಕಮಿಟಿಯದ 10 ಗಂಟೆಗಳ ಮ್ಯಾರಥಾನ್ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕ್ಷೇತ್ರವಾರು ಪರಿಶೀಲನೆ ನಡೆಸಿದರು ಮತ್ತು ರಾಜ್ಯದ ನೆಲದ ವಾಸ್ತವತೆಯ ಬಗ್ಗೆ ಪ್ರಾದೇಶಿಕ ಉಸ್ತುವಾರಿಗಳಿಂದ ಪ್ರತಿಕ್ರಿಯೆ ಪಡೆದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಅಯೋಧ್ಯೆಯಿಂದ ಸ್ಪರ್ಧಿಸುವ ಸಾಧ್ಯತೆಗಳು ಸಭೆಯಲ್ಲಿ ವ್ಯಕ್ತವಾಗಿವೆ.

ಮುಖ್ಯಮಂತ್ರಿ ಆದಿತ್ಯನಾಥ ಪ್ರಸ್ತುತ ವಿಧಾನ ಪರಿಷತ್ತಿನ ಸದಸ್ಯರಾಗಿದ್ದಾರೆ. ಪಕ್ಷದ ವರಿಷ್ಠರು ಎಲ್ಲಿ ಹೇಳುತ್ತಾರೋ ಅಲ್ಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ ಎಂದು ಅವರು ಇತ್ತೀಚೆಗೆ ಹೇಳಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನೊಳಗೊಂಡ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಫೆಬ್ರವರಿ 10 ಮತ್ತು 14 ರಂದು ಮೊದಲ ಎರಡು ಹಂತಗಳಲ್ಲಿ ಚುನಾವಣೆಗೆ ಹೋಗುವವರು ಸೇರಿದಂತೆ ಹೆಚ್ಚಿನ ಸಂಖ್ಯೆಯ ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಶೀಘ್ರದಲ್ಲೇ ಸಭೆ ಸೇರುವ ಸಾಧ್ಯತೆಯಿದೆ.

ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮಮಂದಿರ ನಿರ್ಮಾಣವು ಬಿಜೆಪಿಗೆ ತನ್ನ ರಾಜಕೀಯ ಪ್ರೊಫೈಲ್ ಅನ್ನು ಹೆಚ್ಚಿಸಿದೆ ಎಂದು ಮೂಲಗಳು ತಿಳಿಸಿವೆ. ದೇವಾಲಯದ ಪಟ್ಟಣವು ಅವಧ್ ಪ್ರದೇಶದಲ್ಲಿ ಬರುತ್ತದೆ, ಅಲ್ಲಿ ಸಮಾಜವಾದಿ ಪಕ್ಷವು ಸಾಂಪ್ರದಾಯಿಕವಾಗಿ ಪ್ರಬಲವಾಗಿದೆ.  ಅಯೋಧ್ಯೆ ಕ್ಷೇತ್ರವನ್ನು ಪ್ರಸ್ತುತ ಬಿಜೆಪಿಯ ವೇದ್ ಪ್ರಕಾಶ್ ಗುಪ್ತಾ ಅವರು ವಿಧಾನಸಭೆಯಲ್ಲಿ ಪ್ರತಿನಿಧಿಸುತ್ತಿದ್ದಾರೆ.

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ