AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಗೆ ಸೇರಿದ್ದರೂ ನಾನು ಮುಲಾಯಂ ಸಿಂಗ್ ಯಾದವ್ ಸೊಸೆಯಾಗಿಯೇ ಉಳಿಯುತ್ತೇನೆ: ಅಪರ್ಣಾ ಯಾದವ್

Aparna Yadav: ‘ನನಗೆ ಸಾಕಷ್ಟು ರಾಜಕೀಯ ಜ್ಞಾನ ನೀಡಿದ್ದಕ್ಕೆ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಮುಲಾಯಂ ಸಿಂಗ್ ಯಾದವ್’ ಅವರ ಸೊಸೆ ಅಪರ್ಣಾ ಯಾದವ್ ಹೇಳಿದ್ದಾರೆ.

ಬಿಜೆಪಿಗೆ ಸೇರಿದ್ದರೂ ನಾನು ಮುಲಾಯಂ ಸಿಂಗ್ ಯಾದವ್ ಸೊಸೆಯಾಗಿಯೇ ಉಳಿಯುತ್ತೇನೆ: ಅಪರ್ಣಾ ಯಾದವ್
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಅಪರ್ಣಾ ಯಾದವ್
TV9 Web
| Edited By: |

Updated on: Jan 23, 2022 | 8:56 PM

Share

ಲಖನೌ: ಭಾರತೀಯ ಜನತಾ ಪಕ್ಷಕ್ಕೆ (Bharatiya Janata Party – BJP) ಇತ್ತೀಚೆಗೆ ಸೇರ್ಪಡೆಯಾದ ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಅವರ ಸೊಸೆ ಅಪರ್ಣಾ ಯಾದವ್ (Aparna Yadav) ಭಾನುವಾರ ಮಾವನನ್ನು ಭೇಟಿಯಾಗಿ ಅವರ ಆಶೀರ್ವಾದ ಕೋರಿದರು. ನಾನು ಯಾವಾಗಲೂ ಮುಲಾಯಂ ಕುಟುಂಬದ ಸೊಸೆಯಾಗಿಯೇ ಉಳಿಯುತ್ತೇನೆ. ‘ನನಗೆ ಸಾಕಷ್ಟು ರಾಜಕೀಯ ಜ್ಞಾನ ನೀಡಿದ್ದಕ್ಕೆ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ನಾನು ಆ ಕುಟುಂಬದ ಸೊಸೆಯಾಗಿದ್ದೆ, ಮುಂದೆಯೂ ಆ ಕುಟುಂಬದ ಸೊಸೆಯಾಗಿಯೇ ಉಳಿಯುತ್ತೇನೆ’ ಎಂದು ಹೇಳಿದರು. ಲಖನೌ ನಗರದಲ್ಲಿ ನಡೆದ ಮನೆಮನೆ ಪ್ರಚಾರದಲ್ಲಿ ಪಾಲ್ಗೊಂಡ ಅವರು, ಬಿಜೆಪಿಗೆ ಮತ ನೀಡಬೇಕೆಂದು ಜನರಿಗೆ ಮನವಿ ಮಾಡಿದರು.

‘ಉತ್ತರ ಪ್ರದೇಶದ ಎಲ್ಲ ತಾಯಂದಿರು, ಸೋದರಿಯರು ಬಿಜೆಪಿ ಆಡಳಿತದಲ್ಲಿ ನೆಮ್ಮದಿ ಅನುಭವಿಸಿದರು. ಹೀಗಾಗಿಯೇ ಮತ್ತೊಮ್ಮೆ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲು ನಾವೆಲ್ಲರೂ ಶ್ರಮಿಸಬೇಕಿದೆ. ‘ಏಕ್ ಬಾರ್ ಫಿರ್​ಸೆ ಬಿಜೆಪಿ ಸರ್ಕಾರ್​ ಬನಿಯೇ’ ಎಂದು ಕರೆ ನೀಡಿದರು. ಕಳೆದ ಬುಧವಾರ ಅಪರ್ಣಾ ಯಾದವ್ ದೆಹಲಿಯಲ್ಲಿ ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಮತ್ತು ಬಿಜೆಪಿ ಉತ್ತರ ಪ್ರದೇಶ ಘಟಕದ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.

ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಏಳು ಹಂತಗಳಲ್ಲಿ ಫೆಬ್ರುವರಿ 10ರಿಂದ ಚುನಾವಣೆ ನಡೆಯಲಿದೆ. ಉತ್ತರ ಪ್ರದೇಶದಲ್ಲಿ ಫೆಬ್ರುವರಿ 10, 14, 20, 23, 27, ಮಾರ್ಚ್ 3 ಮತ್ತು 7ರಂದು ಮತದಾನ ನಡೆಯಲಿದೆ.

ಇದನ್ನೂ ಓದಿ: ಅಪರ್ಣಾ ಯಾದವ್ ನಮ್ಮ ಸಿದ್ಧಾಂತವನ್ನು ಬಿಜೆಪಿಗೆ ಕೊಂಡೊಯ್ಯುತ್ತಾರೆ ಎಂದು ಆಶಿಸುವೆ : ಅಖಿಲೇಶ್ ಯಾದವ್ ಇದನ್ನೂ ಓದಿ: ಬಿಜೆಪಿ ಸೇರಿದ ಮುಲಾಯಂ ಸಿಂಗ್ ಕಿರಿಯ ಸೊಸೆ ಅಪರ್ಣಾ ಯಾದವ್​; ಯಾರೀಕೆ? ಇಲ್ಲಿದೆ ಮಾಹಿತಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?