AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಗೆ ಸೇರಿದ್ದರೂ ನಾನು ಮುಲಾಯಂ ಸಿಂಗ್ ಯಾದವ್ ಸೊಸೆಯಾಗಿಯೇ ಉಳಿಯುತ್ತೇನೆ: ಅಪರ್ಣಾ ಯಾದವ್

Aparna Yadav: ‘ನನಗೆ ಸಾಕಷ್ಟು ರಾಜಕೀಯ ಜ್ಞಾನ ನೀಡಿದ್ದಕ್ಕೆ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಮುಲಾಯಂ ಸಿಂಗ್ ಯಾದವ್’ ಅವರ ಸೊಸೆ ಅಪರ್ಣಾ ಯಾದವ್ ಹೇಳಿದ್ದಾರೆ.

ಬಿಜೆಪಿಗೆ ಸೇರಿದ್ದರೂ ನಾನು ಮುಲಾಯಂ ಸಿಂಗ್ ಯಾದವ್ ಸೊಸೆಯಾಗಿಯೇ ಉಳಿಯುತ್ತೇನೆ: ಅಪರ್ಣಾ ಯಾದವ್
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಅಪರ್ಣಾ ಯಾದವ್
TV9 Web
| Edited By: |

Updated on: Jan 23, 2022 | 8:56 PM

Share

ಲಖನೌ: ಭಾರತೀಯ ಜನತಾ ಪಕ್ಷಕ್ಕೆ (Bharatiya Janata Party – BJP) ಇತ್ತೀಚೆಗೆ ಸೇರ್ಪಡೆಯಾದ ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಅವರ ಸೊಸೆ ಅಪರ್ಣಾ ಯಾದವ್ (Aparna Yadav) ಭಾನುವಾರ ಮಾವನನ್ನು ಭೇಟಿಯಾಗಿ ಅವರ ಆಶೀರ್ವಾದ ಕೋರಿದರು. ನಾನು ಯಾವಾಗಲೂ ಮುಲಾಯಂ ಕುಟುಂಬದ ಸೊಸೆಯಾಗಿಯೇ ಉಳಿಯುತ್ತೇನೆ. ‘ನನಗೆ ಸಾಕಷ್ಟು ರಾಜಕೀಯ ಜ್ಞಾನ ನೀಡಿದ್ದಕ್ಕೆ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ನಾನು ಆ ಕುಟುಂಬದ ಸೊಸೆಯಾಗಿದ್ದೆ, ಮುಂದೆಯೂ ಆ ಕುಟುಂಬದ ಸೊಸೆಯಾಗಿಯೇ ಉಳಿಯುತ್ತೇನೆ’ ಎಂದು ಹೇಳಿದರು. ಲಖನೌ ನಗರದಲ್ಲಿ ನಡೆದ ಮನೆಮನೆ ಪ್ರಚಾರದಲ್ಲಿ ಪಾಲ್ಗೊಂಡ ಅವರು, ಬಿಜೆಪಿಗೆ ಮತ ನೀಡಬೇಕೆಂದು ಜನರಿಗೆ ಮನವಿ ಮಾಡಿದರು.

‘ಉತ್ತರ ಪ್ರದೇಶದ ಎಲ್ಲ ತಾಯಂದಿರು, ಸೋದರಿಯರು ಬಿಜೆಪಿ ಆಡಳಿತದಲ್ಲಿ ನೆಮ್ಮದಿ ಅನುಭವಿಸಿದರು. ಹೀಗಾಗಿಯೇ ಮತ್ತೊಮ್ಮೆ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲು ನಾವೆಲ್ಲರೂ ಶ್ರಮಿಸಬೇಕಿದೆ. ‘ಏಕ್ ಬಾರ್ ಫಿರ್​ಸೆ ಬಿಜೆಪಿ ಸರ್ಕಾರ್​ ಬನಿಯೇ’ ಎಂದು ಕರೆ ನೀಡಿದರು. ಕಳೆದ ಬುಧವಾರ ಅಪರ್ಣಾ ಯಾದವ್ ದೆಹಲಿಯಲ್ಲಿ ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಮತ್ತು ಬಿಜೆಪಿ ಉತ್ತರ ಪ್ರದೇಶ ಘಟಕದ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.

ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಏಳು ಹಂತಗಳಲ್ಲಿ ಫೆಬ್ರುವರಿ 10ರಿಂದ ಚುನಾವಣೆ ನಡೆಯಲಿದೆ. ಉತ್ತರ ಪ್ರದೇಶದಲ್ಲಿ ಫೆಬ್ರುವರಿ 10, 14, 20, 23, 27, ಮಾರ್ಚ್ 3 ಮತ್ತು 7ರಂದು ಮತದಾನ ನಡೆಯಲಿದೆ.

ಇದನ್ನೂ ಓದಿ: ಅಪರ್ಣಾ ಯಾದವ್ ನಮ್ಮ ಸಿದ್ಧಾಂತವನ್ನು ಬಿಜೆಪಿಗೆ ಕೊಂಡೊಯ್ಯುತ್ತಾರೆ ಎಂದು ಆಶಿಸುವೆ : ಅಖಿಲೇಶ್ ಯಾದವ್ ಇದನ್ನೂ ಓದಿ: ಬಿಜೆಪಿ ಸೇರಿದ ಮುಲಾಯಂ ಸಿಂಗ್ ಕಿರಿಯ ಸೊಸೆ ಅಪರ್ಣಾ ಯಾದವ್​; ಯಾರೀಕೆ? ಇಲ್ಲಿದೆ ಮಾಹಿತಿ

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ