AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಗೆ ಸೇರಿದ್ದರೂ ನಾನು ಮುಲಾಯಂ ಸಿಂಗ್ ಯಾದವ್ ಸೊಸೆಯಾಗಿಯೇ ಉಳಿಯುತ್ತೇನೆ: ಅಪರ್ಣಾ ಯಾದವ್

Aparna Yadav: ‘ನನಗೆ ಸಾಕಷ್ಟು ರಾಜಕೀಯ ಜ್ಞಾನ ನೀಡಿದ್ದಕ್ಕೆ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಮುಲಾಯಂ ಸಿಂಗ್ ಯಾದವ್’ ಅವರ ಸೊಸೆ ಅಪರ್ಣಾ ಯಾದವ್ ಹೇಳಿದ್ದಾರೆ.

ಬಿಜೆಪಿಗೆ ಸೇರಿದ್ದರೂ ನಾನು ಮುಲಾಯಂ ಸಿಂಗ್ ಯಾದವ್ ಸೊಸೆಯಾಗಿಯೇ ಉಳಿಯುತ್ತೇನೆ: ಅಪರ್ಣಾ ಯಾದವ್
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಅಪರ್ಣಾ ಯಾದವ್
TV9 Web
| Edited By: |

Updated on: Jan 23, 2022 | 8:56 PM

Share

ಲಖನೌ: ಭಾರತೀಯ ಜನತಾ ಪಕ್ಷಕ್ಕೆ (Bharatiya Janata Party – BJP) ಇತ್ತೀಚೆಗೆ ಸೇರ್ಪಡೆಯಾದ ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಅವರ ಸೊಸೆ ಅಪರ್ಣಾ ಯಾದವ್ (Aparna Yadav) ಭಾನುವಾರ ಮಾವನನ್ನು ಭೇಟಿಯಾಗಿ ಅವರ ಆಶೀರ್ವಾದ ಕೋರಿದರು. ನಾನು ಯಾವಾಗಲೂ ಮುಲಾಯಂ ಕುಟುಂಬದ ಸೊಸೆಯಾಗಿಯೇ ಉಳಿಯುತ್ತೇನೆ. ‘ನನಗೆ ಸಾಕಷ್ಟು ರಾಜಕೀಯ ಜ್ಞಾನ ನೀಡಿದ್ದಕ್ಕೆ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ನಾನು ಆ ಕುಟುಂಬದ ಸೊಸೆಯಾಗಿದ್ದೆ, ಮುಂದೆಯೂ ಆ ಕುಟುಂಬದ ಸೊಸೆಯಾಗಿಯೇ ಉಳಿಯುತ್ತೇನೆ’ ಎಂದು ಹೇಳಿದರು. ಲಖನೌ ನಗರದಲ್ಲಿ ನಡೆದ ಮನೆಮನೆ ಪ್ರಚಾರದಲ್ಲಿ ಪಾಲ್ಗೊಂಡ ಅವರು, ಬಿಜೆಪಿಗೆ ಮತ ನೀಡಬೇಕೆಂದು ಜನರಿಗೆ ಮನವಿ ಮಾಡಿದರು.

‘ಉತ್ತರ ಪ್ರದೇಶದ ಎಲ್ಲ ತಾಯಂದಿರು, ಸೋದರಿಯರು ಬಿಜೆಪಿ ಆಡಳಿತದಲ್ಲಿ ನೆಮ್ಮದಿ ಅನುಭವಿಸಿದರು. ಹೀಗಾಗಿಯೇ ಮತ್ತೊಮ್ಮೆ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲು ನಾವೆಲ್ಲರೂ ಶ್ರಮಿಸಬೇಕಿದೆ. ‘ಏಕ್ ಬಾರ್ ಫಿರ್​ಸೆ ಬಿಜೆಪಿ ಸರ್ಕಾರ್​ ಬನಿಯೇ’ ಎಂದು ಕರೆ ನೀಡಿದರು. ಕಳೆದ ಬುಧವಾರ ಅಪರ್ಣಾ ಯಾದವ್ ದೆಹಲಿಯಲ್ಲಿ ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಮತ್ತು ಬಿಜೆಪಿ ಉತ್ತರ ಪ್ರದೇಶ ಘಟಕದ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.

ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಏಳು ಹಂತಗಳಲ್ಲಿ ಫೆಬ್ರುವರಿ 10ರಿಂದ ಚುನಾವಣೆ ನಡೆಯಲಿದೆ. ಉತ್ತರ ಪ್ರದೇಶದಲ್ಲಿ ಫೆಬ್ರುವರಿ 10, 14, 20, 23, 27, ಮಾರ್ಚ್ 3 ಮತ್ತು 7ರಂದು ಮತದಾನ ನಡೆಯಲಿದೆ.

ಇದನ್ನೂ ಓದಿ: ಅಪರ್ಣಾ ಯಾದವ್ ನಮ್ಮ ಸಿದ್ಧಾಂತವನ್ನು ಬಿಜೆಪಿಗೆ ಕೊಂಡೊಯ್ಯುತ್ತಾರೆ ಎಂದು ಆಶಿಸುವೆ : ಅಖಿಲೇಶ್ ಯಾದವ್ ಇದನ್ನೂ ಓದಿ: ಬಿಜೆಪಿ ಸೇರಿದ ಮುಲಾಯಂ ಸಿಂಗ್ ಕಿರಿಯ ಸೊಸೆ ಅಪರ್ಣಾ ಯಾದವ್​; ಯಾರೀಕೆ? ಇಲ್ಲಿದೆ ಮಾಹಿತಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ