Uttar Pradesh: ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ಸದ್ದು ಮಾಡಿದ ಇವಿಎಂ ವಿವಾದ: ಯೋಗಿ, ಅಖಿಲೇಶ್ ನಡುವೆ ವಾಗ್ವಾದ

Uttar Pradesh Election Result 2022: ವಾರಾಣಸಿ ಕ್ಷೇತ್ರದ ಓರ್ವ ನೋಡೆಲ್ ಅಧಿಕಾರಿ, ಸೌಭದ್ರ ಜಿಲ್ಲೆಯ ಓರ್ವ ರಿಟರ್ನಿಂಗ್ ಆಫೀಸರ್ ಮತ್ತು ಬರೇಲಿ ಜಿಲ್ಲೆಯ ಓರ್ವ ಹೆಚ್ಚುವರಿ ಚುನಾವಣಾ ಅಧಿಕಾರಿಯನ್ನು ಮತಎಣಿಕೆಗೆ ಒಂದು ದಿನ ಮೊದಲು ಚುನಾವಣಾ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ

Uttar Pradesh: ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ಸದ್ದು ಮಾಡಿದ ಇವಿಎಂ ವಿವಾದ: ಯೋಗಿ, ಅಖಿಲೇಶ್ ನಡುವೆ ವಾಗ್ವಾದ
ಸಮಾಜವಾದಿ ಪಕ್ಷ ಮತ್ತು ಬಿಜೆಪಿ ನಡುವೆ ಜಿದ್ದಾಜಿದ್ದಿ ಪೈಪೋಟಿ ಇದೆ
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Mar 10, 2022 | 8:12 AM

ಲಖನೌ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಮತ್ತು ಸಮಾಜವಾದಿ ಪಕ್ಷಗಳ ನಡುವೆ ಜಿದ್ದಾಜಿದ್ದಿ ಪೈಪೋಟಿ ನಡೆದಿದೆ. ಬಹುತೇಕ ಮತಗಟ್ಟೆ ಸಮೀಪಕ್ಷೆಗಳು ಬಿಜೆಪಿಗೆ ಮುನ್ನಡೆ ಸಿಗಲಿದೆ ಎಂದು ಹೇಳಿದ್ದರೂ ಸಮಾಜವಾದಿ ಪಕ್ಷವೂ ಸಾಕಷ್ಟು ಸ್ಥಾನಗಳನ್ನು ಗೆಲ್ಲಬಹುದು ಎಂದಿವೆ. ವಿದ್ಯುನ್ಮಾನ ಮತಯಂತ್ರಗಳ (Electronic Voting Machine – EVM) ಬಗ್ಗೆಯೇ ಎರಡೂ ಪಕ್ಷಗಳು ವಾಗ್ವಾದಕ್ಕೆ ಇಳಿದಿವೆ. ಇವಿಎಂಗಳನ್ನು ಆಕ್ಷೇಪಾರ್ಹ ರೀತಿಯಲ್ಲಿ ಸ್ಥಳಾಂತರಿಸಿದ ಆರೋಪದ ಮೇಲೆ ಮೂವರು ಅಧಿಕಾರಿಗಳನ್ನು ಬುಧವಾರ ಚುನಾವಣಾ ಕರ್ತವ್ಯದಿಂದ ಬಿಡುಗಡೆ ಮಾಡಲಾಯಿತು. ವಾರಾಣಸಿ ಕ್ಷೇತ್ರದ ಓರ್ವ ನೋಡೆಲ್ ಅಧಿಕಾರಿ, ಸೌಭದ್ರ ಜಿಲ್ಲೆಯ ಓರ್ವ ರಿಟರ್ನಿಂಗ್ ಆಫೀಸರ್ ಮತ್ತು ಬರೇಲಿ ಜಿಲ್ಲೆಯ ಓರ್ವ ಹೆಚ್ಚುವರಿ ಚುನಾವಣಾ ಅಧಿಕಾರಿಯನ್ನು ಮತಎಣಿಕೆಗೆ ಒಂದು ದಿನ ಮೊದಲು ಚುನಾವಣಾ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ. ಚುನಾವಣಾ ಕಾರ್ಯದಲ್ಲಿ ಸಮಾಜಘಾತುಕ ಶಕ್ತಿಗಳನ್ನು ತೊಡಗಿಸಲು ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಪ್ರಯತ್ನಿಸುತ್ತಿದ್ದಾರೆ. ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿತ್ತು.

ಮೈತ್ರಿಕೂಟಗಳು

ಉತ್ತರ ಪ್ರದೇಶ ರಾಜಕಾರಣದಲಲ್ಲಿ ಬಿಜೆಪಿ, ಎಸ್​ಪಿ, ಕಾಂಗ್ರೆಸ್ ಮತ್ತು ಬಿಎಸ್​ಪಿ ಮುಖ್ಯ ಭೂಮಿಕೆಯಲ್ಲಿವೆ. ಅನುಪ್ರಿಯಾ ಪಟೇಲರ ಅಪತ್ನಾ ದಳ್ (ಎಸ್) ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು 18 ಸ್ಥಾನಗಳಲ್ಲಿ ಸ್ಪರ್ಧಿಸಿದೆ. ಸಂಜಯ್ ನಿಶಾದ್​ರ ನಿಶಾದ್​ ಪಕ್ಷವೂ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ರಾಷ್ಟ್ರೀಯ ಲೋಕದಳ (ಆರ್​ಎಲ್​ಡಿ) ಮತ್ತು ಸುಹೇಲ್​ದೇವ್ ಭಾರತೀಯ ಸಮಾಜವಾದಿ ಪಕ್ಷಗಳೊಂದಿಗೆ (ಎಸ್​ಬಿಎಸ್​ಪಿ) ಮೈತ್ರಿ ಮಾಡಿಕೊಂಡಿದ್ದಾರೆ.

2017ರಲ್ಲಿ ಏನಾಗಿತ್ತು?

403 ಸದಸ್ಯ ಬಲದ ಉತ್ತರ ಪ್ರದೇಶದಲ್ಲಿ 2017ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಬಿಜೆಪಿ 325 ಸ್ಥಾನಗಳನ್ನು ಗೆದ್ದಿತ್ತು. ಆಗ ಅಪ್ನಾದಳ್ ಮತ್ತು ಎಸ್​ಬಿಎಸ್​ಪಿ ಪಕ್ಷಗಳು ಬಿಜೆಪಿಯ ಮೈತ್ರಿಯಲ್ಲಿದ್ದವು. ಬಿಜೆಪಿ ಏಕಾಂಗಿಯಾಗಿ 312 ಸ್ಥಾನಗಳಲ್ಲಿ ಜಯಗಳಿಸಿತ್ತು. ಅಪ್ನಾದಳ್ 9, ಎಸ್​ಬಿಎಸ್​ಪಿ 4 ಸ್ಥಾನಗಳಲ್ಲಿ ಜಯಗಳಿಸಿದ್ದವು. ಸಮಾಜವಾದಿ ಪಕ್ಷ 47 ಮತ್ತು ಅದರೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ ಕೇವಲ 7 ಸ್ಥಾನಗಳಲ್ಲಿ ಜಯಗಳಿಸಿತ್ತು. ಬಿಎಸ್​ಪಿ ಕೇವಲ 19 ಸ್ಥಾನ ಪಡೆದಿದ್ದರೆ, ಆರ್​ಎಲ್​ಡಿ ಒಂದೇ ಒಂದು ಸ್ಥಾನದಲ್ಲಿ ಜಯಗಳಿಸಿತ್ತು.

ಎಕ್ಸಿಟ್ ಪೋಲ್​ ಭವಿಷ್ಯವೇನು?

ಚುನಾವಣೋತ್ತರ ಸಮೀಕ್ಷೆಗಳು ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಸ್ಪಷ್ಟ ಗೆಲುವು ಮತ್ತು ಸಮಾಜವಾದಿ ಪಕ್ಷಕ್ಕೆ ಕೆಲವು ಕ್ಷೇತ್ರಗಳಲ್ಲಿ ಹೆಚ್ಚಿನ ಲಾಭ ಪಡೆಯಲಿದೆ ಎಂದು ಭವಿಷ್ಯ ನುಡಿದಿವೆ. 403 ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಒಟ್ಟು 4,441 ಅಭ್ಯರ್ಥಿಗಳ ಭವಿಷ್ಯವನ್ನು ಇಂದಿನ ಫಲಿತಾಂಶ ನಿರ್ಧರಿಸುತ್ತದೆ.

ಇದನ್ನೂ ಓದಿ: Uttar Pradesh: ಉತ್ತರ ಪ್ರದೇಶದಲ್ಲಿ ಇವಿಎಂ ಪ್ರೋಟೋಕಾಲ್​ನಲ್ಲಿ ಲೋಪವಾಗಿದೆ ಎಂದು ಒಪ್ಪಿಕೊಂಡ ವಿಡಿಯೋ ವೈರಲ್; ಶೀಘ್ರ ತನಿಖೆಗೆ ಎಸ್​ಪಿ ಒತ್ತಾಯ

ಇದನ್ನೂ ಓದಿ: 5 State Election Results 2022 Live: ಗದ್ದುಗೆ ಯಾರಿಗೆ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶದ ಕ್ಷಣಕ್ಷಣದ ಮಾಹಿತಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ