AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​​ಗೆ ಅದರ ದಾರಿ, ನಾವು ನಮ್ಮ ದಾರಿಯಲ್ಲಿ ಹೋಗುತ್ತೇವೆ: ಮಮತಾ ಬ್ಯಾನರ್ಜಿ

Mamata Banerjee ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಯಾವುದೇ ಸ್ಥಾನದಲ್ಲಿ ದುರ್ಬಲರಾಗುವುದನ್ನು ನಾನು ಬಯಸದ ಕಾರಣ ಟಿಎಂಸಿ ಯುಪಿಯಲ್ಲಿ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಲಿಲ್ಲ. ಮೊದಲ ಹಂತದಲ್ಲಿ, ಅಖಿಲೇಶ್ ಅವರ ಪಕ್ಷವು 57 ಸ್ಥಾನಗಳಲ್ಲಿ 37 ಸ್ಥಾನಗಳನ್ನು...

ಕಾಂಗ್ರೆಸ್​​ಗೆ ಅದರ ದಾರಿ, ನಾವು ನಮ್ಮ ದಾರಿಯಲ್ಲಿ ಹೋಗುತ್ತೇವೆ: ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
TV9 Web
| Edited By: |

Updated on: Feb 14, 2022 | 2:49 PM

Share

ಕೊಲ್ಕತ್ತಾ: ಫೆಬ್ರವರಿ 12 ರಂದು ಚುನಾವಣೆ ನಡೆದ ನಾಲ್ಕು ಮುನ್ಸಿಪಲ್ ಕಾರ್ಪೊರೇಶನ್‌ಗಳಲ್ಲಿ(municipal corporations) ದೊಡ್ಡ ಗೆಲುವು ದಾಖಲಿಸಲು ಸಿದ್ಧವಾಗಿರುವ ತೃಣಮೂಲ ಕಾಂಗ್ರೆಸ್ (TMC) ಪರವಾಗಿ ಮತ ಚಲಾಯಿಸಿದ್ದಕ್ಕಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಸೋಮವಾರ ಜನರಿಗೆ ಧನ್ಯವಾದ ಅರ್ಪಿಸಿದ್ದಾರೆ. ರಾಜ್ಯ ಚುನಾವಣಾ ಆಯೋಗದ ಪ್ರಕಾರ, ಪಶ್ಚಿಮ ಬಂಗಾಳದ ಅಸನ್ಸೋಲ್, ಬಿಧಾನಗರ್, ಸಿಲಿಗುರಿ ಮತ್ತು ಚಂದನಗರ್ – ಎಲ್ಲಾ ನಾಲ್ಕು ಮುನ್ಸಿಪಲ್ ಕಾರ್ಪೊರೇಶನ್‌ಗಳಲ್ಲಿ ಟಿಎಂಸಿ ಮುಂದಿದೆ. ಜನರಿಗೆ ಧನ್ಯವಾದ ಅರ್ಪಿಸಿ ಮಾತನಾಡಿದ ಅವರು  ರಾಜ್ಯ ಆಡಳಿತವು ಸಾಮಾನ್ಯ ಜನರ ಉದ್ದೇಶಕ್ಕಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತದೆ ಎಂದು ಅವರು ಹೇಳಿದ್ದಾರೆ. ಸಮಾಜವಾದಿ ಪಕ್ಷದ (ಎಸ್‌ಪಿ) ಪ್ರಚಾರಕ್ಕಾಗಿ ಕಳೆದ ವಾರ ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ್ದ ತೃಣಮೂಲ ಕಾಂಗ್ರೆಸ್ ನಾಯಕಿ ಹೆಚ್ಚಿನವರ ಹಿತಾಸಕ್ತಿಯಿಂದ  ಆ ರಾಜ್ಯದಲ್ಲಿ ಚುನಾವಣೆಗೆ ಸ್ಪರ್ಧಿಸದಿರಲು ತೀರ್ಮಾನಿಸಿದೆ ಎಂದಿದ್ದಾರೆ.  ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಯಾವುದೇ ಸ್ಥಾನದಲ್ಲಿ ದುರ್ಬಲರಾಗುವುದನ್ನು ನಾನು ಬಯಸದ ಕಾರಣ ಟಿಎಂಸಿ ಯುಪಿಯಲ್ಲಿ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಲಿಲ್ಲ. ಮೊದಲ ಹಂತದಲ್ಲಿ, ಅಖಿಲೇಶ್ ಅವರ ಪಕ್ಷವು 57 ಸ್ಥಾನಗಳಲ್ಲಿ 37 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ವಾರಣಾಸಿಯಲ್ಲಿ ರ್ಯಾಲಿ ನಡೆಸಲು ಮಾರ್ಚ್ 3 ರಂದು ಮತ್ತೊಮ್ಮೆ ಉತ್ತರ ಪ್ರದೇಶಕ್ಕೆ ಭೇಟಿ ನೀಡುವುದಾಗಿ ಮಮತಾ ಹೇಳಿದ್ದಾರೆ.  ತೃಣಮೂಲ ಪಕ್ಷವು ಇತ್ತೀಚಿನ ದಿನಗಳಲ್ಲಿ ಸೌಹಾರ್ದ ಸಂಬಂಧ ಹೊಂದಿಲ್ಲದಿರುವ ಕಾಂಗ್ರೆಸ್ ಅನ್ನು ಟೀಕಿಸಿದ ಬ್ಯಾನರ್ಜಿ, ಯಾವುದೇ ಪ್ರಾದೇಶಿಕ ಸಂಘಟನೆಯು ಹಳೆಯ ಪಕ್ಷದೊಂದಿಗೆ ಸೌಹಾರ್ದ ಸಂಬಂಧವನ್ನು ಹಂಚಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಅದರದ್ದೇ  ದಾರಿಯಲ್ಲಿ ಹೋಗಬಹುದು, ನಾವು ನಮ್ಮ ದಾರಿಯಲ್ಲಿ ಹೋಗುತ್ತೇವೆ ಎಂದು ಮಮತಾ ಹೇಳಿದರು.

ಬಿಜೆಪಿ ನೇತೃತ್ವದ ಕೇಂದ್ರವು ದೇಶದ ಸಂವಿಧಾನವನ್ನು ಕೆಡವಿದೆ ಎಂದು ಆರೋಪಿಸಿರುವ ತೃಣಮೂಲ ಮುಖ್ಯಸ್ಥರು, ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಮತ್ತು ತೆಲಂಗಾಣ ಸಿಎಂ ಕೆಸಿಆರ್ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ನಾವು ಒಕ್ಕೂಟ ರಚನೆಯನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದರು. ಕಾಂಗ್ರೆಸ್ ಮತ್ತು ಸಿಪಿಐ(ಎಂ) ಕೂಡ ಹೆಚ್ಚಿನ ಆಸಕ್ತಿಯಿಂದ ಕೈಜೋಡಿಸುವಂತೆ ಕೇಳಿದ್ದೆ, ಆದರೆ ಅವರು ಕೇಳದಿದ್ದರೆ ನಾನೇನೂ ಮಾಡಲು ಸಾಧ್ಯವಿಲ್ಲ. ನನಗೆ ಯಾರ ವಿರುದ್ಧವೂ ವೈಯಕ್ತಿಕ ದ್ವೇಷವಿಲ್ಲ ಎಂದಿದ್ದಾರೆ ಮಮತಾ.

 ಇದನ್ನೂ ಓದಿ: Unnao Murder: ಕೊಲೆಗೂ ಮೊದಲು ಅತ್ಯಾಚಾರದ ಶಂಕೆ; ಉನ್ನಾವೋ ಯುವತಿಯ ಪೋಷಕರಿಂದ ಸಿಎಂ ಯೋಗಿ ಆದಿತ್ಯನಾಥ್ ಭೇಟಿಗೆ ಪಟ್ಟು

Follow Us
Web contact
Web contact

TV9 Kannada

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ