AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​​ಗೆ ಅದರ ದಾರಿ, ನಾವು ನಮ್ಮ ದಾರಿಯಲ್ಲಿ ಹೋಗುತ್ತೇವೆ: ಮಮತಾ ಬ್ಯಾನರ್ಜಿ

Mamata Banerjee ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಯಾವುದೇ ಸ್ಥಾನದಲ್ಲಿ ದುರ್ಬಲರಾಗುವುದನ್ನು ನಾನು ಬಯಸದ ಕಾರಣ ಟಿಎಂಸಿ ಯುಪಿಯಲ್ಲಿ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಲಿಲ್ಲ. ಮೊದಲ ಹಂತದಲ್ಲಿ, ಅಖಿಲೇಶ್ ಅವರ ಪಕ್ಷವು 57 ಸ್ಥಾನಗಳಲ್ಲಿ 37 ಸ್ಥಾನಗಳನ್ನು...

ಕಾಂಗ್ರೆಸ್​​ಗೆ ಅದರ ದಾರಿ, ನಾವು ನಮ್ಮ ದಾರಿಯಲ್ಲಿ ಹೋಗುತ್ತೇವೆ: ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
TV9 Web
| Edited By: |

Updated on: Feb 14, 2022 | 2:49 PM

Share

ಕೊಲ್ಕತ್ತಾ: ಫೆಬ್ರವರಿ 12 ರಂದು ಚುನಾವಣೆ ನಡೆದ ನಾಲ್ಕು ಮುನ್ಸಿಪಲ್ ಕಾರ್ಪೊರೇಶನ್‌ಗಳಲ್ಲಿ(municipal corporations) ದೊಡ್ಡ ಗೆಲುವು ದಾಖಲಿಸಲು ಸಿದ್ಧವಾಗಿರುವ ತೃಣಮೂಲ ಕಾಂಗ್ರೆಸ್ (TMC) ಪರವಾಗಿ ಮತ ಚಲಾಯಿಸಿದ್ದಕ್ಕಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಸೋಮವಾರ ಜನರಿಗೆ ಧನ್ಯವಾದ ಅರ್ಪಿಸಿದ್ದಾರೆ. ರಾಜ್ಯ ಚುನಾವಣಾ ಆಯೋಗದ ಪ್ರಕಾರ, ಪಶ್ಚಿಮ ಬಂಗಾಳದ ಅಸನ್ಸೋಲ್, ಬಿಧಾನಗರ್, ಸಿಲಿಗುರಿ ಮತ್ತು ಚಂದನಗರ್ – ಎಲ್ಲಾ ನಾಲ್ಕು ಮುನ್ಸಿಪಲ್ ಕಾರ್ಪೊರೇಶನ್‌ಗಳಲ್ಲಿ ಟಿಎಂಸಿ ಮುಂದಿದೆ. ಜನರಿಗೆ ಧನ್ಯವಾದ ಅರ್ಪಿಸಿ ಮಾತನಾಡಿದ ಅವರು  ರಾಜ್ಯ ಆಡಳಿತವು ಸಾಮಾನ್ಯ ಜನರ ಉದ್ದೇಶಕ್ಕಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತದೆ ಎಂದು ಅವರು ಹೇಳಿದ್ದಾರೆ. ಸಮಾಜವಾದಿ ಪಕ್ಷದ (ಎಸ್‌ಪಿ) ಪ್ರಚಾರಕ್ಕಾಗಿ ಕಳೆದ ವಾರ ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ್ದ ತೃಣಮೂಲ ಕಾಂಗ್ರೆಸ್ ನಾಯಕಿ ಹೆಚ್ಚಿನವರ ಹಿತಾಸಕ್ತಿಯಿಂದ  ಆ ರಾಜ್ಯದಲ್ಲಿ ಚುನಾವಣೆಗೆ ಸ್ಪರ್ಧಿಸದಿರಲು ತೀರ್ಮಾನಿಸಿದೆ ಎಂದಿದ್ದಾರೆ.  ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಯಾವುದೇ ಸ್ಥಾನದಲ್ಲಿ ದುರ್ಬಲರಾಗುವುದನ್ನು ನಾನು ಬಯಸದ ಕಾರಣ ಟಿಎಂಸಿ ಯುಪಿಯಲ್ಲಿ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಲಿಲ್ಲ. ಮೊದಲ ಹಂತದಲ್ಲಿ, ಅಖಿಲೇಶ್ ಅವರ ಪಕ್ಷವು 57 ಸ್ಥಾನಗಳಲ್ಲಿ 37 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ವಾರಣಾಸಿಯಲ್ಲಿ ರ್ಯಾಲಿ ನಡೆಸಲು ಮಾರ್ಚ್ 3 ರಂದು ಮತ್ತೊಮ್ಮೆ ಉತ್ತರ ಪ್ರದೇಶಕ್ಕೆ ಭೇಟಿ ನೀಡುವುದಾಗಿ ಮಮತಾ ಹೇಳಿದ್ದಾರೆ.  ತೃಣಮೂಲ ಪಕ್ಷವು ಇತ್ತೀಚಿನ ದಿನಗಳಲ್ಲಿ ಸೌಹಾರ್ದ ಸಂಬಂಧ ಹೊಂದಿಲ್ಲದಿರುವ ಕಾಂಗ್ರೆಸ್ ಅನ್ನು ಟೀಕಿಸಿದ ಬ್ಯಾನರ್ಜಿ, ಯಾವುದೇ ಪ್ರಾದೇಶಿಕ ಸಂಘಟನೆಯು ಹಳೆಯ ಪಕ್ಷದೊಂದಿಗೆ ಸೌಹಾರ್ದ ಸಂಬಂಧವನ್ನು ಹಂಚಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಅದರದ್ದೇ  ದಾರಿಯಲ್ಲಿ ಹೋಗಬಹುದು, ನಾವು ನಮ್ಮ ದಾರಿಯಲ್ಲಿ ಹೋಗುತ್ತೇವೆ ಎಂದು ಮಮತಾ ಹೇಳಿದರು.

ಬಿಜೆಪಿ ನೇತೃತ್ವದ ಕೇಂದ್ರವು ದೇಶದ ಸಂವಿಧಾನವನ್ನು ಕೆಡವಿದೆ ಎಂದು ಆರೋಪಿಸಿರುವ ತೃಣಮೂಲ ಮುಖ್ಯಸ್ಥರು, ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಮತ್ತು ತೆಲಂಗಾಣ ಸಿಎಂ ಕೆಸಿಆರ್ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ನಾವು ಒಕ್ಕೂಟ ರಚನೆಯನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದರು. ಕಾಂಗ್ರೆಸ್ ಮತ್ತು ಸಿಪಿಐ(ಎಂ) ಕೂಡ ಹೆಚ್ಚಿನ ಆಸಕ್ತಿಯಿಂದ ಕೈಜೋಡಿಸುವಂತೆ ಕೇಳಿದ್ದೆ, ಆದರೆ ಅವರು ಕೇಳದಿದ್ದರೆ ನಾನೇನೂ ಮಾಡಲು ಸಾಧ್ಯವಿಲ್ಲ. ನನಗೆ ಯಾರ ವಿರುದ್ಧವೂ ವೈಯಕ್ತಿಕ ದ್ವೇಷವಿಲ್ಲ ಎಂದಿದ್ದಾರೆ ಮಮತಾ.

 ಇದನ್ನೂ ಓದಿ: Unnao Murder: ಕೊಲೆಗೂ ಮೊದಲು ಅತ್ಯಾಚಾರದ ಶಂಕೆ; ಉನ್ನಾವೋ ಯುವತಿಯ ಪೋಷಕರಿಂದ ಸಿಎಂ ಯೋಗಿ ಆದಿತ್ಯನಾಥ್ ಭೇಟಿಗೆ ಪಟ್ಟು

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ