AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಆರ್​​ಪಿಎನ್ ಸಿಂಗ್

ಸಿಂಗ್ ಅವರು ಇತ್ತೀಚೆಗೆ ಬಿಜೆಪಿ ತೊರೆದ ಸ್ವಾಮಿ ಪ್ರಸಾದ್ ಮೌರ್ಯ ಅವರ ವಿರುದ್ಧ ಅವರ ಭದ್ರಕೋಟೆಯಾದ ಪದ್ರೌನಾದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆಯಿದೆ. ಸಿಂಗ್ ಅವರು ಈ ಪ್ರದೇಶದಲ್ಲಿ ಪ್ರಮುಖ ನಾಯಕರಾಗಿದ್ದಾರೆ.

ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಆರ್​​ಪಿಎನ್ ಸಿಂಗ್
ಬಿಜೆಪಿ ಸೇರಿದ ಆರ್‌ಪಿಎನ್ ಸಿಂಗ್
TV9 Web
| Edited By: |

Updated on:Jan 25, 2022 | 3:16 PM

Share

ದೆಹಲಿ: ಮಾಜಿ ಕೇಂದ್ರ ಸಚಿವ ಆರ್‌ಪಿಎನ್ ಸಿಂಗ್ (RPN Singh) ಅವರು ಮಂಗಳವಾರ ಕಾಂಗ್ರೆಸ್ (Congress) ತೊರೆದು ಬಿಜೆಪಿ ಸೇರಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ಉತ್ತರ ಪ್ರದೇಶ ಚುನಾವಣೆಯಲ್ಲಿ(Uttar Pradesh Election) ಸ್ಟಾರ್ ಪ್ರಚಾರಕರಾಗಿ ಸಿಂಗ್ ಅವರನ್ನು ಹೆಸರಿಸಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಪೂರ್ವ ಉತ್ತರ ಪ್ರದೇಶದದ ಖುಷಿನಗರದಿಂದ ಬಂದಿರುವ ಆರ್‌ಪಿಎನ್ ಸಿಂಗ್, ರಾಜ್ಯದಲ್ಲಿ ಕಾಂಗ್ರೆಸ್‌ನ ದೊಡ್ಡ ನಾಯಕರಲ್ಲಿ ಒಬ್ಬರಾಗಿದ್ದಾರೆ. ಸೋನಿಯಾ ಗಾಂಧಿ  ಅವರಿಗೆ ಬರೆದಿರುವ ರಾಜೀನಾಮೆ ಪತ್ರವನ್ನು ಟ್ವಿಟರ್‌ನಲ್ಲಿ ಟ್ವೀಟ್ ಮಾಡಿದ ಸಿಂಗ್ ಇಂದು ನಾವು ನಮ್ಮ ಮಹಾನ್ ಗಣರಾಜ್ಯದ ರಚನೆಯನ್ನು ಆಚರಿಸುತ್ತಿದ್ದೇವೆ, ನನ್ನ ರಾಜಕೀಯ ಪ್ರಯಾಣದಲ್ಲಿ ನಾನು ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತೇನೆ .ಜೈ ಹಿಂದ್ ಎಂದು ಬರೆದಿದ್ದಾರೆ.  ಸಿಂಗ್ ಅವರು ಇತ್ತೀಚೆಗೆ ಬಿಜೆಪಿ ತೊರೆದ ಸ್ವಾಮಿ ಪ್ರಸಾದ್ ಮೌರ್ಯ ಅವರ ವಿರುದ್ಧ ಅವರ ಭದ್ರಕೋಟೆಯಾದ ಪದ್ರೌನಾದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆಯಿದೆ. ಸಿಂಗ್ ಅವರು ಈ ಪ್ರದೇಶದಲ್ಲಿ ಪ್ರಮುಖ ನಾಯಕರಾಗಿದ್ದಾರೆ ಮತ್ತು ಮೌರ್ಯ ಅವರು ಬಿಟ್ಟುಹೋದ ಜಾಗವನ್ನು ತುಂಬಬಹುದು ಎಂದು ಮೂಲಗಳು ಹೇಳಿರುವುದಾಗಿ ಎನ್​​ಡಿಟಿವಿ ವರದಿ ಮಾಡಿದೆ.

ಸಿಂಗ್ ಮೂರು ಅವಧಿಗೆ ಪದ್ರೌನಾದಿಂದ ಶಾಸಕರಾಗಿದ್ದಾರೆ. ಅವರು 2009 ರಲ್ಲಿ ಖುಷಿ ನಗರದಿಂದ ಸಂಸದರಾಗಿ ಆಯ್ಕೆಯಾದರು ಆದರೆ 2014 ರಲ್ಲಿ ಸೋತರು. ಸ್ವಾಮಿ ಪ್ರಸಾದ್ ಮೌರ್ಯ ಅವರು ಕಳೆದ ಎರಡು ರಾಜ್ಯಗಳ ಚುನಾವಣೆಯಲ್ಲಿ ಪದ್ರೌನಾ ಸ್ಥಾನದಿಂದ ಗೆದ್ದರು, ಮೊದಲು ಮಾಯಾವತಿಯವರ ಬಹುಜನ ಸಮಾಜ ಪಕ್ಷ (BSP) ಅಭ್ಯರ್ಥಿಯಾಗಿ ಮತ್ತು ನಂತರ ಬಿಜೆಪಿಯ ಅಭ್ಯರ್ಥಿಯಾಗಿ. 2009 ರ ಲೋಕಸಭಾ ಚುನಾವಣೆಯಲ್ಲಿ ಆರ್‌ಪಿಎನ್ ಸಿಂಗ್ ಗೆದ್ದರು, ಸ್ವಾಮಿ ಪ್ರಸಾದ್ ಮೌರ್ಯ ಎರಡನೇ ಸ್ಥಾನ ಪಡೆದರು.

ಮಂಗಳವಾರ ಸಿಂಗ್ ತಮ್ಮ ಟ್ವಿಟರ್ ಬಯೋವನ್ನು ಬದಲಾಯಿಸಿದರು ಮತ್ತು “ಕಾಂಗ್ರೆಸ್” ಎಂಬುದನ್ನು ಕೈ ಬಿಟ್ಟಾಗ ಇದು ಭಾರೀ ಊಹಾಪೋಹಗಳಿಗೆ ಉತ್ತೇಜನ ನೀಡಿತು. “ನನ್ನ ಧ್ಯೇಯವಾಕ್ಯ ಭಾರತ, ಮೊದಲು, ಯಾವಾಗಲೂ,” ಅವರ ಬಯೋದಲ್ಲಿದೆ. ಇಲ್ಲಿ ಮೊದಲು AICC (ಅಖಿಲ ಭಾರತ ಕಾಂಗ್ರೆಸ್ ಸಮಿತಿ) ಉಸ್ತುವಾರಿ ಸೇರಿದಂತೆ ಅವರ ಕಾಂಗ್ರೆಸ್ ಜವಾಬ್ದಾರಿಗಳನ್ನು ಉಲ್ಲೇಖಿಸಲಾಗಿತ್ತು.

ಉತ್ತರ ಪ್ರದೇಶದಲ್ಲಿ ಸ್ಪರ್ಧಿಸಲು ತಮ್ಮ ಸಹಚರರಿಗೆ ಟಿಕೆಟ್ ನಿರಾಕರಿಸಿದ್ದಕ್ಕಾಗಿ ಪಕ್ಷದ ನಾಯಕತ್ವದ ವಿರುದ್ಧ ಅವರು ಅಸಮಾಧಾನಗೊಂಡಿದ್ದಾರೆ ಎಂದು ಕೆಲವು ವರದಿಗಳು ಹೇಳಿವೆ.

ಕಳೆದ ವರ್ಷ ಜಿತಿನ್ ಪ್ರಸಾದ ಅವರು ರಾಜೀನಾಮೆ ನೀಡಿದ ನಂತರ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ನಿಂದ ಇದು ಎರಡನೇ ದೊಡ್ಡ ನಿರ್ಗಮನವಾಗಿದೆ. ಪ್ರಸಾದ ಅವರು ಬಿಜೆಪಿ ಸೇರಿದರು ಮತ್ತು ನಂತರ ಯೋಗಿ ಆದಿತ್ಯನಾಥ ನೇತೃತ್ವದ ಉತ್ತರ ಪ್ರದೇಶ ಸರ್ಕಾರದಲ್ಲಿ ಸಚಿವರಾದರು.

ಕಳೆದ ಎರಡು ವರ್ಷಗಳಲ್ಲಿ ಕಾಂಗ್ರೆಸ್ ಹಲವು ಪ್ರಮುಖ ನಾಯಕರನ್ನು ಕಳೆದುಕೊಂಡಿದೆ. 2020 ರಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಅವರ ಆಘಾತಕಾರಿ ನಿರ್ಗಮನವು ಪಕ್ಷದಲ್ಲಿ ದೊಡ್ಡ ಮಂಥನಕ್ಕೆ ಕಾರಣವಾಗಿತ್ತು. ಇದು 23 ನಾಯಕರು ಸೋನಿಯಾ ಗಾಂಧಿಗೆ “ಗೋಚರ ಮತ್ತು ಪೂರ್ಣ ಸಮಯದ” ನಾಯಕತ್ವ ಮತ್ತು ಸಾಮೂಹಿಕ ನಿರ್ಧಾರಗಳನ್ನು ಕೇಳಲು ಪತ್ರ ಬರೆಯಲು ಕಾರಣವಾಯಿತು.

ಸಿಂಧಿಯಾ, ಪ್ರಸಾದ ಮತ್ತು ಸಿಂಗ್ ಎಲ್ಲರೂ ರಾಹುಲ್ ಗಾಂಧಿಯ ನಿಕಟ ಸಹಾಯಕರಾಗಿದ್ದರು. ಈಗ ಖಾಲಿಯಾಗಿರುವ ಕ್ಲಬ್‌ನ ಇನ್ನೊಬ್ಬ ಸದಸ್ಯ, ಸಚಿನ್ ಪೈಲಟ್, ತಿಂಗಳುಗಳ ನಿರಾಶೆಯ ನಂತರ ಇತ್ತೀಚೆಗೆ ರಾಜಸ್ಥಾನದಲ್ಲಿ ಕ್ಯಾಬಿನೆಟ್ ಸ್ಥಾನಗಳೊಂದಿಗೆ ಸಮಾಧಾನಗೊಂಡರು. ಆದರೆ ಇದು ಅಸ್ಥಿರವಾದ ಒಪ್ಪಂದ ಎಂದು ಹಲವರು ನಂಬುತ್ತಾರೆ.

ಇದು ದುಃಖಕರ ಸಂಗತಿ. ಅನೇಕ ಉಸ್ತುವಾರಿಗಳು ಬಂದು ಹೋಗಿದ್ದಾರೆ, ಪರವಾಗಿಲ್ಲ. ಅವನು ಬಹಳ ಯೋಚಿಸಿದ ನಂತರ ನಿರ್ಧರಿಸಿರಬೇಕು. ನಾವು ಕಾಂಗ್ರೆಸ್‌ನ ನಿಜವಾದ ಸೈನಿಕರು, ನಾವು ಇಲ್ಲಿಯೇ ಬದುಕುತ್ತೇವೆ ಮತ್ತು ಸಾಯುತ್ತೇವೆ. ಅವರ ನಿರ್ಧಾರ ತಪ್ಪು ಎಂದು ನಾವು ಭಾವಿಸುತ್ತೇವೆ ಎಂದು ಜಾರ್ಖಂಡ್ ಕಾಂಗ್ರೆಸ್ ಮುಖ್ಯಸ್ಥ ರಾಜೇಶ್ ಠಾಕೂರ್ ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮತ್ತೆ ಭಾರತೀಯರ ಕೆಂಗಣ್ಣಿಗೆ ಗುರಿಯಾದ ಅಮೇಜಾನ್​; ಟ್ವಿಟರ್​ನಲ್ಲಿ ಟ್ರೆಂಡ್​ ಆಗ್ತಿದೆ Boycott Amazon ಹ್ಯಾಷ್​ಟ್ಯಾಗ್​

Published On - 2:57 pm, Tue, 25 January 22

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್