ಪ್ರಧಾನಿ ಮೋದಿಯಿಂದಾಗಿ ಕೊವಿಡ್ ಸಂಕಷ್ಟದಲ್ಲೂ ಎಲ್ಲರ ಮನೆಗೆ ಲಕ್ಷ್ಮಿ ಪ್ರವೇಶವಾಗಿದೆ; ಅಮಿತ್ ಶಾ

Uttar Pradesh Assembly Elections 2022: ಕಳೆದ ಎರಡು ವರ್ಷಗಳ ಕೊವಿಡ್‌ನಲ್ಲಿ ಲಕ್ಷ್ಮಿ ದೇವಿಯು ಕಮಲದ ಮೇಲೆ ಕುಳಿತು ಪ್ರತಿ ಮನೆಗೆ ಬಂದಳು. ಇದಕ್ಕೆ ಪ್ರಧಾನಿ ಮೋದಿಯವರೇ ಕಾರಣ ಎಂದು ಅಮಿತ್ ಶಾ ಬಣ್ಣಿಸಿದ್ದಾರೆ.

ಪ್ರಧಾನಿ ಮೋದಿಯಿಂದಾಗಿ ಕೊವಿಡ್ ಸಂಕಷ್ಟದಲ್ಲೂ ಎಲ್ಲರ ಮನೆಗೆ ಲಕ್ಷ್ಮಿ ಪ್ರವೇಶವಾಗಿದೆ; ಅಮಿತ್ ಶಾ
ಗೋವಾದಲ್ಲಿ ಅಮಿತ್ ಶಾ
Follow us
| Updated By: ಸುಷ್ಮಾ ಚಕ್ರೆ

Updated on:Feb 02, 2022 | 5:08 PM

ಲಕ್ನೋ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ (Narendra Modi) ಪ್ರಯತ್ನದಿಂದಾಗಿ ಕೊವಿಡ್ ಸಾಂಕ್ರಾಮಿಕದ ಎರಡು ವರ್ಷಗಳ ಅವಧಿಯಲ್ಲಿಯೂ ಪ್ರತಿ ಮನೆಯ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ. ಉತ್ತರ ಪ್ರದೇಶದ ಅಟ್ರೌಲಿಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, “ಕಳೆದ ಎರಡು ವರ್ಷಗಳ ಕೊವಿಡ್‌ನಲ್ಲಿ ಲಕ್ಷ್ಮಿ ದೇವಿಯು ಕಮಲದ ಮೇಲೆ ಕುಳಿತು ಪ್ರತಿ ಮನೆಗೆ ಬಂದಳು. ಇದಕ್ಕೆ ಪ್ರಧಾನಿ ಮೋದಿಯವರೇ ಕಾರಣ” ಎಂದು ಅಮಿತ್ ಶಾ ಬಣ್ಣಿಸಿದ್ದಾರೆ.

ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷದವರು ಎಂದಿಗೂ ಬಡವರ ಬಗ್ಗೆ ಯೋಚಿಸುವುದಿಲ್ಲ ಮತ್ತು ಅಭಿವೃದ್ಧಿಗೆ ಏನನ್ನೂ ಮಾಡುವುದಿಲ್ಲ. ಕೇವಲ ನಮ್ಮ ಸರ್ಕಾರವನ್ನು ಟೀಕಿಸುವುದರಲ್ಲೇ ಆ ಪಕ್ಷಗಳ ನಾಯಕರು ಕಾಲ ಕಳೆಯುತ್ತಿದ್ದಾರೆ. ಈ ಬುವಾ-ಭಟಿಜಾ ಏನು ಮಾಡಿದ್ದಾರೆ? ಎಂದು ನಾನು ನಿಮ್ಮನ್ನು ಕೇಳುತ್ತೇನೆ. ಗ್ಯಾಸ್, ಶೌಚಾಲಯ, ವಿದ್ಯುತ್, ಮನೆ ಇದನ್ನೆಲ್ಲ ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.

ನೀವೆಲ್ಲ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದೀಯಾ ಅಲ್ವಾ? ಅಖಿಲೇಶ್ ಯಾದವ್ ಇದು ಬಿಜೆಪಿಯ ಲಸಿಕೆ ಎಂದು ಹೇಳುತ್ತಿದ್ದರು. ಕೊನೆಗೆ ಅವರು ಕೂಡ ಕೊವಿಡ್ ಲಸಿಕೆ ಹಾಕಿಸಿಕೊಂಡರು ಎಂದು ಅಮಿತ್ ಶಾ ಲೇವಡಿ ಮಾಡಿದ್ದಾರೆ.

ಇಂದು ಉತ್ತರಪ್ರದೇಶದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಗೃಹ ಸಚಿವ ಅಮಿತ್ ಶಾ ಕಾಂಗ್ರೆಸ್ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿರುದ್ಧವೂ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ 10 ವರ್ಷಗಳ ಕಾಲ ಅಧಿಕಾರದಲ್ಲಿದ್ದಾಗ ಪಾಕಿಸ್ತಾನವು ನಮ್ಮ ದೇಶದ ಮೇಲೆ ದಾಳಿ ಮಾಡಿ ನಮ್ಮ ಜವಾನರ ಶಿರಚ್ಛೇದ ಮಾಡಿತು. ಆಗ ಪ್ರಧಾನಿ ಮನಮೋಹನ್ ಸಿಂಗ್ ಏನನ್ನೂ ಮಾಡಲಿಲ್ಲ. ಆದರೆ, ಉರಿ ಮತ್ತು ಪುಲ್ವಾಮಾ ದಾಳಿಯ ನಂತರ ಪ್ರಧಾನಿ ನರೇಂದ್ರ ಮೋದಿ 10 ದಿನಗಳಲ್ಲಿ ಸರ್ಜಿಕಲ್ ಸ್ಟ್ರೈಕ್ ಮೂಲಕ ಪಾಕಿಸ್ತಾನದಲ್ಲಿ ಭಯೋತ್ಪಾದಕರನ್ನು ಹೊಡೆದುರುಳಿಸಿದರು ಎಂದು ಅಮಿತ್ ಶಾ ಹೇಳಿದ್ದಾರೆ.

ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27, ಮಾರ್ಚ್ 3 ಮತ್ತು 7ರಂದು ಮತದಾನ ನಡೆಯಲಿದೆ. ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: UP Assembly Election: ಉತ್ತರ ಪ್ರದೇಶದ ದೇವಬಂದ್​​ನಲ್ಲಿ ಅಮಿತ್​ ಶಾ ನಡೆಸಬೇಕಿದ್ದ ಚುನಾವಣಾ ಪ್ರಚಾರ ಮೊಟಕು; ಅಂಥದ್ದೇನಾಯ್ತು?

ಅಮರಿಂದರ್ ಸಿಂಗ್ ರಾಜೀನಾಮೆ ಬಳಿಕ ನಾನೇ ಸಿಎಂ ಆಗಬೇಕೆಂಬುದು ಶಾಸಕರ ಆಯ್ಕೆಯಾಗಿತ್ತು; ಸುನಿಲ್ ಜಖಾರ್

Published On - 4:46 pm, Wed, 2 February 22

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ